Homeಚಳವಳಿಜಾತಿ ವಿರೋಧಿ ಹೋರಾಟಗಾರ ಯು. ಸಾಂಬಶಿವ ರಾವ್‌ (70) ನಿಧನ

ಜಾತಿ ವಿರೋಧಿ ಹೋರಾಟಗಾರ ಯು. ಸಾಂಬಶಿವ ರಾವ್‌ (70) ನಿಧನ

ಸಹ ಹೋರಾಟಗಾರರು ಅವರನ್ನು ’ಉದ್ಯಮಾಲ ಉಪಾಧ್ಯಾಯುಡು’ (ಹೋರಾಟಗಳ ಶಿಕ್ಷಕ) ಎಂದು ಪ್ರೀತಿಯಿಂದ ಕರೆಯುತ್ತಿದ್ದರು.

- Advertisement -
- Advertisement -

ಯುಸಾ ಎಂದೇ ಜನಪ್ರಿಯವಾಗಿರುವ ಪ್ರಮುಖ ಜಾತಿ ವಿರೋಧಿ ಸಾಮಾಜಿಕ ಕಾರ್ಯಕರ್ತ ವಿಚಾರವಾದಿ ಯು. ಸಾಂಬಶಿವ ರಾವ್ (70) ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ತಮ್ಮ ಜೀವನವನ್ನೇ ಜಾತಿ ದಲಿತರ ಹಾಗೂ ಹಿಂದುಳಿದ ವರ್ಗಗಳ ಸಬಲೀಕರಣಕ್ಕಾಗಿ ಮೀಸಲಿಟ್ಟ ಅವರು ಪುತ್ರಿ ಹಿಮಾ ಬಿಂದು ಹಾಗೂ ಅಪಾರ ಬೆಂಬಲಿಗ ವರ್ಗವರನ್ನು ಅಗಲಿದ್ದಾರೆ.

ವಾರದಿಂದ ಅತಿಸಾರದಿಂದ ಬಳಲುತ್ತಿದ್ದ ಸಾಂಬಶಿವ ರಾವ್ ಹೈದರಾಬಾದ್‌ನ ಬರ್ಕತ್‌ಪುರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅತಿಸಾರಕ ಕೂಡಾ ಕೊರೊನಾ ಸೋಂಕಿನ ಲಕ್ಷಣವಾಗಿದೆ. ನಂತರ ನಡೆದ ಕೊರೊನಾ ಪರೀಕ್ಷೆಯಲ್ಲಿ ಅವರಿಗೆ ಕೊರೊನಾ ಸೋಂಕಿರುವುದು ದೃಡಪಟ್ಟಿತ್ತು.

ಸಾಂಬಶಿವ ರಾವ್ ದಲಿತ ಮಹಾ ಸಬಾ (ಕಾರಂಚೇಡು ಹತ್ಯಾಕಾಂಡದ ನಂತರ ರೂಪುಗೊಂಡ ಒಂದು ಚಳುವಳಿ), ಮಾದಿಗ ದಂಡೋರಾ ಚಳುವಳಿ (ಪರಿಶಿಷ್ಟ ಜಾತಿಯನ್ನು ವರ್ಗೀಕರಿಸುವ ಬೇಡಿಕೆ) ಮತ್ತು ರೋಹಿತ್ ವೇಮುಲಾ ಚಳವಳಿಯಂತಹ ಹಲವಾರು ಐತಿಹಾಸಿಕ ದಲಿತ ಹೋರಾಟಗಳ ಭಾಗವಾಗಿದ್ದರು.


ಓದಿ: ಮೇಲ್ಜಾತಿ ದೌರ್ಜನ್ಯವನ್ನು ರಾಷ್ಟ್ರ ಮಟ್ಟದಲ್ಲಿ ಚರ್ಚೆಗೆ ತಂದ ಕಾರಂಚೇಡು ದಲಿತರ ಹತ್ಯಾಕಾಂಡಕ್ಕೆ 35 ವರ್ಷ.


ಹೋರಾಟದ ಸಹ ಕಾರ್ಯಕರ್ತರಿಂದ ಉದಯಮಲ ಉಪಾಧ್ಯಾಡು (ಹೋರಾಟಗಳ ಶಿಕ್ಷಕ) ಎಂದು ಪ್ರೀತಿಯಿಂದ ಕರೆಯಲ್ಪಡುವ ಅವರು ಹಿಂದೆ ಯುನಿಟಿ ಸೆಂಟರ್ ಆಫ್ ಕಮ್ಯುನಿಸ್ಟ್ ರೆವಲ್ಯೂಷನರೀಸ್ ಆಫ್ ಇಂಡಿಯಾ ಮಾಕ್ಸ್‌ವಾದಿ-ಲೆನಿನಿಸ್ಟ್(ಯುಸಿಸಿಆರ್-ಎಂಎಲ್) ನ ಹಿರಿಯ ಸದಸ್ಯರಾಗಿದ್ದರು. ಯುಸಿಸಿಆರ್-ಎಂಎಲ್‌ನಲ್ಲಿದ್ದ ವರ್ಷಗಳಲ್ಲಿ ಪೂರ್ವ ಗೋದಾವರಿ ಜಿಲ್ಲೆಯ ಬುಡಕಟ್ಟು ಜಮೀನುಗಳಿಗಾಗಿ ಹೋರಾಟ ಮಾಡಿದ್ದರು.

ಅಲ್ಲದೆ ಅಲ್ಲಿ ಒಂದು ದಶಕಗಳ ಕಾಲ ಆದಿವಾಸಿಗಳೊಂದಿಗೆ ಕೆಲಸ ಮಾಡಿದರು. 1980 ರಲ್ಲಿ ತೆಲಂಗಾಣ ಬರಗಾಲದಿಂದ ಬಳಲುತ್ತಿದ್ದಾಗ ಹೈದರಾಬಾದ್‌ಗೆ ಸ್ಥಳಾಂತರಗೊಂಡು ನಲ್ಗೊಂಡದಲ್ಲಿ ಮಾಥ್‌ಕೂರ್‌ನ ರೈತರನ್ನು ಸಂಘಟಿಸಿದರು.

ಆದರೆ ಜಾತಿ ಹೋರಾಟದ ಬಗೆಗಿನ ಭಿನ್ನಾಭಿಪ್ರಾಯಕ್ಕಾಗಿ ಪಕ್ಷದಿಮದ ರಾವ್ ಅವರನ್ನು ಹೊರಹಾಕಲಾಗಿತ್ತು. 1950 ರಲ್ಲಿ ಆಂಧ್ರಪ್ರದೇಶದ ತೆನಾಲಿಯಲ್ಲಿ ಜನಿಸಿದ ಅವರು ಮಂಗಲಿ ಸಮುದಾಯಕ್ಕೆ ಸೇರಿದವರಾಗಿದ್ದರು (ಕ್ಷೌರಿಕ ಸಮುದಾಯ) ಇದನ್ನು ಅಲ್ಲಿ ಹಿಂದುಳಿದ ವರ್ಗ ಎಂದು ವರ್ಗೀಕರಿಸಲಾಗಿದೆ.

ತೆಲಂಗಾಣದ ಪ್ರತ್ಯೇಕ ರಾಜ್ಯದ ಹೋರಾಟವನ್ನು ಬೆಂಬಲಿಸಿದ ಆಂಧ್ರಪ್ರದೇಶದ ಕೆಲವೇ ಕೆಲವು ಸಾಮಾಜಿಕ ಕಾರ್ಯಕರ್ತರಲ್ಲಿ ರಾವ್ ಕೂಡ ಇದ್ದರು. ಅವರು ಮತ್ತೊಂದು ಮಾರ್ಕ್ಸ್‌ವಾದಿ-ಲೆನಿನಿಸ್ಟ್ ಗುಂಪಿನವರಾದ ದಲಿತ ಕ್ರಾಂತಿಕಾರಿ ಪೀಪಲ್ಸ್ ವಾರ್ ಗ್ರೂಪ್ನ(ಪಿಡಬ್ಲ್ಯುಜಿ) ಸಹ-ಸಂಸ್ಥಾಪಕ ಕೆ.ಜಿ.ಸತ್ಯಮೂರ್ತಿಯೊಂದಿಗೆ ಕೆಲಸ ಮಾಡಿದ್ದರು. ಜಾತಿ ಆಧಾರಿತ ತಾರತಮ್ಯ ಆರೋಪಿಸಿ ಸತ್ಯಮೂರ್ತಿ ಪಿಡಬ್ಲ್ಯುಜಿಯಿಂದ ಹೊರಬಂದರು. ರಾವ್ ಅವರು ಸತ್ಯಮೂರ್ತಿ ಸ್ಥಾಪಿಸಿದ ‘ಎಧುರೀಥ’ ಸಂಪಾದಕರಾಗಿದ್ದರು.

“1985 ರಲ್ಲಿ ಕಾರಂಚೇಡು ಚಳವಳಿಯ ಸಮಯದಲ್ಲಿ, ಪಕ್ಷದೊಂದಿಗೆ ಭಿನ್ನಾಭಿಪ್ರಾಯ ಹೊಂದಿ ದಲಿತ ಚಳವಳಿಯನ್ನು ಬೆಂಬಲಿಸಿದರು, ಅದಕ್ಕಾಗಿ ನಾನು ಮತ್ತು ಅವರು ಯುಸಿಸಿಆರ್‌ಐ-ಎಂಎಲ್ ಪಕ್ಷದಿಂದ ಹೊರಹಾಕಲ್ಪಟ್ಟೆವು.” ಎಂದು ಅವರ ಸಂಗಾತಿ ಇಲಯ್ಯ ನೆನಪಿಸಿಕೊಂಡಿದ್ದಾರೆ.

ರಾವ್‌ಗೆ ಗೌರವ ಸಲ್ಲಿಸುತ್ತಾ, “ಶ್ರೇಷ್ಠ ಗಾಯಕ, ಶ್ರೇಷ್ಠ ಬರಹಗಾರ ಮತ್ತು ಬದ್ದತೆಯ ವ್ಯಕ್ತಿ” ಎಂದು ಇಲಯ್ಯ ಬಣ್ಣಿಸಿದ್ದಾರೆ.

ಯುಸಿಸಿಆರ್ಐ-ಎಂಎಲ್ ನೊಂದಿಗೆ ಸಂಬಂಧಗಳನ್ನು ಕಡಿದುಕೊಂಡ ನಂತರ, ರಾವ್ ತಳ ಸಮುದಾಯಗಳ ಉನ್ನತಿಗಾಗಿ ವ್ಯಾಪಕವಾಗಿ ಕೆಲಸ ಮಾಡಿದರು. ದಲಿತ ಮತ್ತು ಇತರ ಹಿಂದುಳಿದ ವರ್ಗಗಳಿಗೆ ನಾಯಕರಾಗಿ ಹೊರಹೊಮ್ಮಿದರು.

“ದಲಿತರ ವಿರುದ್ಧ ಯಾವುದೇ ದೌರ್ಜನ್ಯ ನಡೆದರೂ ಅವರು ಅಲ್ಲಿಗೆ ಹೋಗುತ್ತಿದ್ದರು. 2012 ರಲ್ಲಿ ಶ್ರೀಕಾಕುಲಂನಲ್ಲಿ ಲಕ್ಷ್ಮಿಪುರಂ ಹಿಂಸಾಚಾರ ನಡೆದಾಗ. ದಲಿತರಲ್ಲಿ ವಿಶ್ವಾಸ ಮೂಡಿಸಲು ಅವರು ಅಲ್ಲೇ ಸ್ವಲ್ಪ ಕಾಲ ಇದ್ದರು. ತಮ್ಮ ಜೀವನವನ್ನು ದಲಿತರಿಗೆ ಅರ್ಪಿಸಿದ ಮಹಾನ್ ನಾಯಕನನ್ನು ದಲಿತ ಹಾಗು ಬಹುಜನರು ಕಳೆದುಕೊಂಡಿದ್ದಾರೆ” ಎಂದು ಇಲಯ್ಯ ಹೇಳಿದ್ದಾರೆ.


ಓದಿ: ನವ ಉದಾರವಾದಿ ಭಾರತದಲ್ಲಿ ದಲಿತರು: ಮೇಲ್ಚಲನೆಯೋ ಅಥವಾ ಮೂಲೆಗುಂಪೋ? – ಪುಸ್ತಕ ಸಂವಾದ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...