Homeಮುಖಪುಟಹನುಮಾನ್ ಚಾಲೀಸಾ ಪಠಿಸಿ, ಕೊರೊನಾ ಓಡಿಸಿ : ಸಂಸದೆ ಪ್ರಗ್ಯಾ ಠಾಕೂರ್ ಸಲಹೆ

ಹನುಮಾನ್ ಚಾಲೀಸಾ ಪಠಿಸಿ, ಕೊರೊನಾ ಓಡಿಸಿ : ಸಂಸದೆ ಪ್ರಗ್ಯಾ ಠಾಕೂರ್ ಸಲಹೆ

ದೇಶದ ಎಲ್ಲಾ ಹಿಂದೂಗಳು ಒಂದೇ ಧ್ವನಿಯಲ್ಲಿ '' ಹನುಮಾನ್ ಚಾಲಿಸಾ '' ಪಠಿಸಿದರೆ, ಆ ಶಕ್ತಿ ಖಂಡಿತವಾಗಿಯೂ ಕೆಲಸ ಮಾಡುತ್ತದೆ ಮತ್ತು ನಾವು ಕೊರೋನಾ ವೈರಸ್‌ನಿಂದ ಮುಕ್ತರಾಗುತ್ತೇವೆ ಎಂದು ಪ್ರಗ್ಯಾ ತಿಳಿಸಿದ್ದಾರೆ.

- Advertisement -
- Advertisement -

‘ಇಂದಿನಿಂದ ಅಗಸ್ಟ್ 5 ರವರೆಗೂ ಎಲ್ಲರೂ ಪ್ರತಿ ದಿನ ಐದು ಬಾರಿ ಹನುಮಾನ್ ಚಾಲೀಸಾ ಪಠಿಸಿ, ಇದರಿಂದ ಕೋವಿಡ್ ಬಿಕ್ಕಟ್ಟು ಜಗತ್ತಿನಿಂದ ದೂರವಾಗುತ್ತದೆ’ ಎಂದು ಬಿಜೆಪಿಯ ಸಂಸದೆ ಪ್ರಗ್ಯಾ ಠಾಕೂರ್ ಹೇಳಿದ್ದಾರೆ.

‘ಅಗಸ್ಟ್ 5 ರಂದು ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ಭೂಮಿ ಪೂಜೆ ನಡೆಯಲಿದೆ. ಅಲ್ಲಿವರೆಗೂ ಪ್ರತಿದಿನ 5 ಸಲ ಹನುಮಾನ್ ಚಾಲೀಸಾ ಪಠಿಸಿ. ಅಗಸ್ಟ್ 5 ರಂದು ಭೂಮಿಪೂಜೆಯ ದಿನ ಮನೆಯಲ್ಲಿ ದೀಪ ಹಚ್ಚಿ, ಆರತಿ ಬೆಳಗಿ ರಾಮನನ್ನು ಪೂಜಿಸಿ’ ಎಂದು ಸಂಸದೆ ಸಲಹೆ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು ‘ಅಗಸ್ಟ್ 5 ಮಹತ್ವದ ದಿನವಾಗಲಿದೆ. ಅಂದು ಎಲ್ಲರೂ ಮನೆಯಲ್ಲಿ ದೀಪಾವಳಿ ಆಚರಿಸೋಣ’ ಎಂದಿದ್ದಾರೆ. ಒಂದೇ ಬಾರಿಗೆ ಎಲ್ಲರೂ ಹನುಮಾನ್ ಚಾಲೀಸಾ ಪಠಣ ಮಾಡಿದರೆ ವಿಶ್ವದ ಕೋರೊನಾ ಬಿಕ್ಕಟ್ಟು ದೂರವಾಗಲಿದೆ ಎಂದಿದ್ದಾರೆ.

“ನಾವೆಲ್ಲರೂ ಒಗ್ಗಟ್ಟಾಗಿ ಆಧ್ಯಾತ್ಮಿಕದ ಮೂಲಕ ಮಾರಣಾಂತಿಕ ಕೊರೋನಾ ವೈರಸ್ ಅನ್ನು ಜಗತ್ತಿನಿಂದ ತೊಡೆದು ಹಾಕಲು ಪ್ರಯತ್ನಿಸೋಣ. ಎಲ್ಲರಿಗೂ ಉತ್ತಮ ಆರೋಗ್ಯವನ್ನು ಬಯಸೋಣ. ಹೀಗಾಗಿ ಜುಲೈ 25 ರಿಂದ ಆಗಸ್ಟ್ 05ರವರೆಗೆ ಎಲ್ಲರೂ ತಮ್ಮ ಮನೆಗಳಲ್ಲಿ ದಿನಕ್ಕೆ ಐದು ಬಾರಿ ಹನುಮಾನ್ ಚಾಲಿಸಾ ಪಠಿಸಿ” ಎಂದು ಪ್ರಗ್ಯಾ ಟ್ವೀಟ್ ಮಾಡಿದ್ದಾರೆ.

“ದೇಶದ ಎಲ್ಲಾ ಹಿಂದೂಗಳು ಒಂದೇ ಧ್ವನಿಯಲ್ಲಿ ” ಹನುಮಾನ್ ಚಾಲಿಸಾ ” ಪಠಿಸಿದರೆ, ಆ ಶಕ್ತಿ ಖಂಡಿತವಾಗಿಯೂ ಕೆಲಸ ಮಾಡುತ್ತದೆ ಮತ್ತು ನಾವು ಕೊರೋನಾ ವೈರಸ್‌ನಿಂದ ಮುಕ್ತರಾಗುತ್ತೇವೆ. ಇದು ಭಗವಾನ್ ರಾಮನಿಗಾಗಿ ನಿಮ್ಮ ಪ್ರಾರ್ಥನೆಯಾಗಲಿದೆ. ಆಗಸ್ಟ್ 05 ರಂದು ಮನೆಯಲ್ಲೇ ದೀಪಗಳನ್ನು ಬೆಳಗಿಸಿ ರಾಮನಿಗೆ ಆರತಿ ಅರ್ಪಿಸುವ ಮೂಲಕ ನಿಮ್ಮ ಆಚರಣೆಯನ್ನು ಮುಕ್ತಾಯಗೊಳಿಸಿ” ಎಂದು ಅವರು ಕೇಳಿಕೊಂಡಿದ್ದಾರೆ.

“ಮಧ್ಯಪ್ರದೇಶದಲ್ಲಿ ಕೊರೋನಾ ಸೋಂಕನ್ನು ತಡೆಯುವ ಸಲುವಾಗಿ ಇಲ್ಲಿನ ಬಿಜೆಪಿ ಸರ್ಕಾರ ಆಗಸ್ಟ್ 04ರ ವರೆಗೆ ಲಾಕ್‌ಡೌನ್ ಘೋಷಿಸಿದೆ. ಲಾಕ್‌ಡೌನ್ 4ಕ್ಕೆ ಮುಗಿದರೂ ಹನುಮಾನ್ ಚಾಲಿಸಾ ಪಠಣ ಆಗಸ್ಟ್ 05 ರಂದು ಕೊನೆಗೊಳ್ಳಲಿದೆ. ಈ ದಿನ ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ಭೂಮಿ ಪೂಜೆ ನಡೆಯಲಿದ್ದು, ಆ ದಿನವನ್ನು ನಾವು ದೀಪಾವಳಿಯಂತೆ ಆಚರಿಸಲಿದ್ದೇವೆ” ಎಂದು ಪ್ರಜ್ಞಾ ಸಿಂಗ್ ಠಾಕೂರ್ ತಿಳಿಸಿದ್ದಾರೆ.

ಪ್ರಗ್ಯಾ ಠಾಕೂರ್ ಸಲಹೆಗೆ ಹಲವರು ವಿರೋಧ ವ್ಯಕ್ತಪಡಿಸಿ ಟೀಕಿಸಿದ್ದಾರೆ. ತಟ್ಟೆ ಜಾಗಟೆ ಬಡಿದಿದ್ದು ಆಯ್ತು, ದೀಪ ಹಚ್ಚಿದ್ದು ಆಯ್ತು, ಹೂವು ಸುರಿದಿದ್ದು ಮುಗೀತು.. ಈಗ ಹನುಮಾನ್ ಚಾಲೀಸಾ ಪಠಿಸಿದರೆ ಕೊರೊನಾ ಸಾಯುತ್ತದೆ ಎಂದು ಬಿಜೆಪಿ ಸಂಸದೆ ಹೇಳಿದ್ದಾರೆ. ಇದು ಕೆಲಸಕ್ಕೆ ಬರುವುದಿಲ್ಲ. ದೇಶದ ಆರೋಗ್ಯ ವ್ಯವಸ್ಥೆಯನ್ನು ಸುಧಾರಿಸುವುದು ಇಂದಿನ ತುರ್ತು ಎಂದು ನೆಟ್ಟಿಗರು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಕೊರೊನಾ ರೋಗಿಗಳಿಗೆ ಹೆಚ್ಚಿನ ಶುಲ್ಕ ವಿಧಿಸಿದ ಆಸ್ಪತ್ರೆ: ಲೈಸೆನ್ಸ್ ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...