Homeಕರೋನಾ ತಲ್ಲಣತನ್ನ ಬದಲಿಗೆ ಜಿಲ್ಲಾಧಿಕಾರಿ ನಂಬರ್ ನೀಡಿದ್ದ ಕೊರೊನಾ ಸೋಂಕಿತ ವ್ಯಕ್ತಿ!

ತನ್ನ ಬದಲಿಗೆ ಜಿಲ್ಲಾಧಿಕಾರಿ ನಂಬರ್ ನೀಡಿದ್ದ ಕೊರೊನಾ ಸೋಂಕಿತ ವ್ಯಕ್ತಿ!

ಕರೆ ಬಂದ ನಂತರ ಆಶ್ಚರ್ಯಗೊಂಡ ಶಂಕರ್ ತಾನು ಜಿಲ್ಲಾಧಿಕಾರಿ ಎಂದು ಹೇಳಿದ್ದಾರೆ. ಇದರ ಕುರಿತು ಹೆಚ್ಚಿನ ವಿವರಗಳಿಗಾಗಿ ನಿಯಂತ್ರಣ ಕೊಠಡಿ ಸಿಬ್ಬಂದಿಯನ್ನು ವಿಚಾರಿಸಿದಾಗ ಕೊರೊನಾ ಸೋಂಕಿತ ವ್ಯಕ್ತಿಯು ತಪಾಸಣೆ ವೇಳೆ ತಮ್ಮ ನಂಬರ್ ನೀಡಿದ್ದಾರೆ ಎಂದು ತಿಳಿದುಬಂದಿದೆ.

- Advertisement -
- Advertisement -

ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ಅವರಿಗೆ ಜಿಲ್ಲಾ ಕೊರೊನಾ ನಿಯಂತ್ರಣ ವಿಭಾಗದಿಂದ ಶನಿವಾರ ಕರೆ ಬಂದಿದ್ದು, ತಮಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು ಕ್ವಾರಂಟೈನ್ ನಲ್ಲಿರುವಂತೆ ಹೇಳಲಾಗಿದೆ. ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕಕ್ಕೆ ಬಂದ ವ್ಯಕ್ತಿಯೊಬ್ಬರು ಕೊರೊನಾ ಪರೀಕ್ಷೆ ವೇಳೆ ತಮ್ಮ ನಂಬರ್ ಬದಲಿಗೆ ಜಿಲ್ಲಾಧಿಕಾರಿ ನಂಬರ್ ನೀಡಿದ್ದಾರೆ ಎಂಬುದು ತದನಂತರ ತಿಳಿದುಬಂದಿದೆ.

ಕರೆ ಬಂದ ನಂತರ ಆಶ್ಚರ್ಯಗೊಂಡ ಶಂಕರ್ ತಾನು ಜಿಲ್ಲಾಧಿಕಾರಿ ಎಂದು ಹೇಳಿದ್ದಾರೆ. ಇದರ ಕುರಿತು ಹೆಚ್ಚಿನ ವಿವರಗಳಿಗಾಗಿ ನಿಯಂತ್ರಣ ಕೊಠಡಿ ಸಿಬ್ಬಂದಿಯನ್ನು ವಿಚಾರಿಸಿದಾಗ ಕೊರೊನಾ ಸೋಂಕಿತ ವ್ಯಕ್ತಿಯ ಸಂಪರ್ಕದಲ್ಲಿದ್ದಾತ ಪರೀಕ್ಷೆ ವೇಳೆ ತಮ್ಮ ನಂಬರ್ ನೀಡಿದ್ದಾನೆ ಎಂದು ತಿಳಿಸಿದ್ದಾರೆ.

ಸೋಂಕಿತ ವ್ಯಕ್ತಿಯ ಸಂಪರ್ಕಕ್ಕೆ ಬಂದ ವ್ಯಕ್ತಿಗಳು ತಪಾಸಣೆ ವೇಳೆ ತಪ್ಪು ನಂಬರ್ ನೀಡಿದ್ದಾರೆ. ಒಂದು ವೇಳೆ ಪಾಸಿಟಿವ್ ಬಂದರೆ ಕ್ವಾರಂಟೈನ್‌ಗೆ ಒಳಗಾಗಲು, ಅಥವಾ ಆಸ್ಪತ್ರೆಗೆ ದಾಖಲಾಗಲು ಹಿಂಜರಿಯುವವರು ಮಾಡಿರುವ ಕೆಲಸ ಇದು. ಈ ಕುರಿತು ಯಾವುದೇ ಕಾನೂನು ಕ್ರಮ ಜರುಗಿಸುವುದಿಲ್ಲ ಎಂದು ಅಭಿರಾಮ್ ಜಿ ಶಂಕರ್ ತಿಳಿಸಿದ್ದಾರೆ.

“ನಾವು  ಆ ವ್ಯಕ್ತಿಗೆ ಎಚ್ಚರಿಕೆ ನೀಡಿದ್ದೇವೆ. ಇದು ಮತ್ತೆ ಸಂಭವಿಸದಂತೆ ನಾವು ಜಾಗರೂಕತೆ ವಹಿಸಬೇಕು. ಜನರಿಂದ ಮಾಹಿತಿ ಸಂಗ್ರಹಿಸುವುದು ರೋಗಿಗಳಿಗೆ ತೊಂದರೆ ಅಥವಾ ಶಿಕ್ಷೆ ನೀಡುವುದಕ್ಕಲ್ಲ. ಹಾಗಾಗಿ ಜನರು ಸರಿಯಾದ ಡೇಟಾವನ್ನು ನೀಡಬೇಕು” ಎಂದು ಜಿಲ್ಲಾದಿಕಾರಿ ತಿಳಿಸಿದರು.

“ಕೆಲವೊಮ್ಮೆ ಅವರು ತಪ್ಪು ನಂಬರ್ ಗಳನ್ನು ನೀಡುತ್ತಿರುವುದರಿಂದ ಅಥವಾ ಅವರ ಫೋನ್‌ಗಳನ್ನು ರಿಸೀವ್ ಮಾಡದ ಕಾರಣ ಸೋಂಕು ದೃಡಪಟ್ಟಿರುವವರೊಂದಿಗೆ ಸಂಪರ್ಕ ಹೊಂದಿರುವವರನ್ನು ಸಹ ತಲುಪಲು ನಮಗೆ ಸಾಧ್ಯವಾಗುವುದಿಲ್ಲ. ಹೀಗೆ ತಪ್ಪಿಸಿಕೊಳ್ಳುವುದರಿಂದ ಅವರಿಗೆ ಏನು ಲಾಭ ಎಂದು ನಮಗೆ ತಿಳಿದಿಲ್ಲ. ಅವರಿಗೆ ಸೋಂಕು ತಗುಲಿದ್ದರೆ ಅದು ಅವರಿಗೆ ತಿಳಿದಿರುವುದಿಲ್ಲ” ಎಂದು ಅವರು ಹೇಳಿದರು.

ಬಹುಶಃ ಜನರು ಸಾಮಾಜಿಕವಾಗಿ ಕಳಂಕಿತರಾಗುವರೆನೋ ಎಂಬ ಭಯಕ್ಕೆ ಹೀಗೆ ಮಾಡುತ್ತಿರಬಹುದು. ಆದರೆ, ತಮ್ಮ ಬಗ್ಗೆ ಸರಿಯಾದ ಸಂಪರ್ಕ ವಿವರಗಳನ್ನು ಮತ್ತು ಇತರ ಸಂಬಂಧಿತ ಸಂಪರ್ಕವನ್ನು ಪತ್ತೆಹಚ್ಚುವ ಮಾಹಿತಿಯನ್ನು ನೀಡುವಂತೆ ಮತ್ತು ಇದು ಸೋಂಕು ಹರಡುವ ಪ್ರಮಾಣವನ್ನು ನಿಗ್ರಹಿಸಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದರು.


ಇದನ್ನೂ ಓದಿ: ಅತಿ ಹೆಚ್ಚು ಅಂಕ ಗಳಿಸಿದ 12 ನೇ ತರಗತಿ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಘೋಷಿಸಿದ ಪಂಜಾಬ್ ಸಿಎಂ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...