Homeಮುಖಪುಟಕೋವಿಡ್‌ನಿಂದ ಸ್ವಾತಂತ್ರ್ಯ: ಆಗಸ್ಟ್ 15 ರಂದು ಪಣತೊಡಲು ಮೋದಿ ಒತ್ತಾಯ

ಕೋವಿಡ್‌ನಿಂದ ಸ್ವಾತಂತ್ರ್ಯ: ಆಗಸ್ಟ್ 15 ರಂದು ಪಣತೊಡಲು ಮೋದಿ ಒತ್ತಾಯ

- Advertisement -
- Advertisement -

ಈ ವರ್ಷ ಆಗಸ್ಟ್ 15 ರಂದು ದೇಶ ಸ್ವಾತಂತ್ಯ್ರ ದಿನಾಚರಣೆಯನ್ನು ಆಚರಿಸುವ ಸಂದರ್ಭದಲ್ಲಿ ಕೊರೋನಾದಂತಹ ಸಾಂಕ್ರಾಮಿಕ ರೋಗದಿಂದ ನಾವು ಸ್ವಾತಂತ್ಯ್ರ ಪಡೆಯುವ ಪ್ರತಿಜ್ಞೆಯನ್ನು ಸ್ವೀಕರಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ಮನ್ ಕಿ ಬಾತ್‌ನಲ್ಲಿ ಮಾತನಾಡಿದ ಅವರು “ಈ ವರ್ಷದ ಆಗಸ್ಟ್ 15ರ ಸ್ವಾತಂತ್ಯ್ರ ದಿನಾಚರಣೆಯನ್ನು ನಾವು ವಿಭಿನ್ನ ಸನ್ನವೇಶದಲ್ಲಿ ಆಚರಿಸುತ್ತಿದ್ದೇವೆ. ಹೀಗಾಗಿ ಈ ಸ್ವಾತಂತ್ಯ್ರದ ದಿನದಂದು ನಾವು ಸಾಂಕ್ರಾಮಿಕ ರೋಗದಿಂದ ಸ್ವಾತಂತ್ರ್ಯದ ಪ್ರತಿಜ್ಞೆಯನ್ನು ತೆಗೆದುಕೊಳ್ಳಬೇಕೆಂದು ಯುವಕರನ್ನು ಒತ್ತಾಯಿಸುತ್ತೇನೆ” ಎಂದು ಹೇಳಿದ್ದಾರೆ.

“ಕೊರೊನಾ ಸಾಂಕ್ರಾಮಿಕ ರೋಗದಿಂದ ದೇಶ ಹೆಚ್ಚು ಹಾನಿಗೊಳಗಾಗಿದೆ. ಆದರೆ ಗುಣಮುಖರಾದವರ ಸಂಖ್ಯೆಯು ಹೆಚ್ಚಿದೆ. ನಮ್ಮ ದೇಶದ ಕೊರೊನಾ ಚೇತರಿಕೆ ಪ್ರಮಾಣವು ಇತರ ದೇಶಗಳಿಗಿಂತ ಉತ್ತಮವಾಗಿದೆ. ಸಂಕಷ್ಟದ ನಡುವೆಯೂ ನಾವು ಲಕ್ಷಾಂತರ ಜನರ ಪ್ರಾಣವನ್ನು ಉಳಿಸಲು ಸಾಧ್ಯವಾಗಿದೆ” ಎಂದು ತಿಳಿಸಿದ್ದಾರೆ.

“ಕೊರೊನಾ ವೈರಸ್ ಬೆದರಿಕೆ ಇನ್ನೂ ಮುಗಿದಿಲ್ಲ. ಈ ವೈರಸ್ ಆರಂಭಕ್ಕಿಂತಲೂ ಈಗ ಹೆಚ್ಚು ಅಪಾಯಕಾರಿಯಾಗುತ್ತಿದೆ. ಹೀಗಾಗಿ ನಾವು ಸಾಕಷ್ಟು ಜಾಗರೂಕರಾಗಿರಬೇಕು. ಜನ COVID-19 ನಿಯಮಗಳನ್ನು ಚಾಚೂ ತಪ್ಪದೆ ಪಾಲಿಸಬೇಕಾದ ಅಗತ್ಯತೆ ಇದೆ” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.


ಇದನ್ನೂ ಓದಿ: ಅಯೋಧ್ಯೆ ಕಾರ್ಯಕ್ರಮಕ್ಕೆ ರಂಜನ್ ಗೊಗೊಯ್‌ಗಿಲ್ಲ ಆಹ್ವಾನ: ಅನ್ಯಾಯವೆಂದ ಯಶ್ವಂತ್ ಸಿನ್ಹಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕರೋನ ಮುಕ್ತ ದೇಶಕ್ಕಾಗಿ ಇವರು ಮಾಡಿರುವುದಾದರೂ ಏನು.?

    ವಲಸೆ ಕಾರ್ಮಿಕರ ಗೋಳು ಹಾಗು ಸಾವು ಎಷ್ಟೆಂದು ಗೊತ್ತಾ ಇವರಿಗೆ.
    ಎಲ್ಲಾ ಕಾರ್ಮಿಕರಿಗು ಇವರ ಹಣ ತಲುಪಿದೆಯೇ.?

    ಇವರು ನೀಡಿದ 4 ರಿಂದ 5 ಸಾವಿರ ಹಣದಿಂದ 4 ತಿಂಗಳು ಜೀವನ ನಡೆಸಲಾಗುತ್ತದೆಯೇ.?

    PM-CARES ಹಣದ ಸಂಪೂರ್ಣ ಮಾಹಿತಿ ನೀಡಲು ತಯಾರಿಲ್ಲದ ಈ ಕಳ್ಳರು ಸಾವಿರಾರು ಕೋಟಿ ಕೊಳ್ಳೆ ಹೊಡೆದು ತಮ್ಮ ರಾಜಕೀಯ ಪಕ್ಷಗಳ ಕುದುರೆ ವ್ಯಾಪಾರಕ್ಕಾಗಿ ಬಳಸುತ್ತಿದ್ದಾರೆ.

    ಕರೋನ ಎಂಬ ಸೋಂಕಿನ ಸಂಸರ್ಭದಲ್ಲೂ ಅನೇಕ ರೈತ & ಕಾರ್ಮಿಕ ವಿರೋಧಿ ಕಾಯಿದೆಗಳನ್ನು ಜಾರಿ ಮಾಡುತ್ತಿದ್ದಾರೆ.

    ಸಾವಿರಾರು ಕೋಟಿ ಹಗರಣಗಳು ಈ ಕರ್ನಾಟಕ ಸರ್ಕಾರದಿಂದ ಆಗಿದೆ.

    PPE ಕಿಟ್ ಗಳು ಮಾಸ್ಕ್ ಗಳಿಲ್ಲದೆ ಇಷ್ಟು ದಿನ ಪೌರ ಕಾರ್ಮಿಕರ & ವೈದ್ಯಕೀಯ ಸಿಬ್ಬಂದಿಗಳ ನೋವು ಹೇಳತೀರದು.

    ಪ್ರತೀ ದಿನ ಜನ ಸಾಲ ಮಾಡಿಯೇ ಬದುಕುತ್ತಿದ್ದಾರೆ ಹೊರತು.
    ದುಡಿದು ಸಂಪಾದನೆ ಮಾಡಿ ಅಲ್ಲ.

    ಹಾಗಾಗಿ ಈ ಸರ್ಕಾರ ಸುಳ್ಳಿನ ಸರ್ಕಾರವಾಗಿದೆ ಹೊರತು.
    ಜನಪರ ಸರ್ಕಾರವಂತು ಅಲ್ಲ.

LEAVE A REPLY

Please enter your comment!
Please enter your name here

- Advertisment -

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...