Homeಮುಖಪುಟತೀವ್ರ ಒತ್ತಡ: ABVP ರಾಷ್ಟ್ರೀಯ ಅಧ್ಯಕ್ಷನ ವಿರುದ್ಧದ ದೂರು ಹಿಂಪಡೆದ ಮಹಿಳೆ!

ತೀವ್ರ ಒತ್ತಡ: ABVP ರಾಷ್ಟ್ರೀಯ ಅಧ್ಯಕ್ಷನ ವಿರುದ್ಧದ ದೂರು ಹಿಂಪಡೆದ ಮಹಿಳೆ!

- Advertisement -
- Advertisement -

ಚನ್ನೈನ ನೆರಮನೆಯ ಮಹಿಳೆಗೆ ತೊಂದರೆ ಕೊಡುವ ದೃಷ್ಟಿಯಿಂದ ಮನೆ ಮುಂದೆ ಕಸ ಬಿಡಾಡುವ, ಮೂತ್ರ ಮಾಡುವ ಮೂಲಕ ಅಸಹ್ಯಕರವಾಗಿ ಕಿರುಕುಳ ನೀಡಿದ್ದ ಪ್ರಕರಣ ಹೊಸ ತಿರುವು ಪಡೆದಿದೆ. ಆರೋಪಿ ABVP ರಾಷ್ಟ್ರೀಯ ಅಧ್ಯಕ್ಷ ಡಾ.ಎಸ್.ಸುಬ್ಬಯ್ಯ ವಿರುದ್ಧ ಚನ್ನೈ ಪೊಲೀಸರು ಪ್ರಕರಣ ದಾಖಲಿಸಿದ ಕೆಲವೇ ಗಂಟೆಗಳಲ್ಲಿ ಸಂತ್ರಸ್ತ ಮಹಿಳೆಯು ದೂರು ವಾಪಸ್ ಪಡೆದಿದ್ದಾರೆ. ಇದಕ್ಕಾಗಿ ಸಾಕಷ್ಟು ಜನರು ಒತ್ತಡ ತಂದಿದ್ದಾರೆಂಬ ಆರೋಪ ಕೇಳಿಬಂದಿದೆ.

ಶನಿವಾರ ಸಂಜೆ ಆರೋಪಿ ABVP ರಾಷ್ಟ್ರೀಯ ಅಧ್ಯಕ್ಷ ಡಾ.ಎಸ್.ಸುಬ್ಬಯ್ಯ ತನ್ನ ಕೃತ್ಯಕ್ಕಾಗಿ ಕ್ಷಮೆ ಕೇಳಿದ್ದಾರೆ. ಹಾಗಾಗಿ ಕೇಸ್ ವಾಪಸ್ ಪಡೆಯಬೇಕು, ಈ ವಿಚಾರದಲ್ಲಿ ಮುಂದುವರೆಯಬಾರದು ಎಂದು ಅಪಾರ್ಟ್‌ಮೆಂಟ್‌ನ ಹಲವು ಜನರು ಒತ್ತಡ ತಂದಿದ್ದಾರೆ ಎಂದು ಆ ಮಹಿಳೆಯ ಸಂಬಂಧಿಕರು ಆರೋಪಿಸಿದ್ದಾರೆ.

ಪ್ರಕರಣ ವಾಪಸ್ ಪಡೆದಿರುವ ಬಗ್ಗೆ ಚನ್ನೈ ಪೊಲೀಸರು ಸ್ಪಷ್ಟಪಡಿಸಿದ್ದು, ಪ್ರಕರಣ ದಾಖಲಾಗಿದ್ದರಿಂದ ತನಿಖೆ ನಡೆಸುತ್ತಿದ್ದೆವು ಎಂದು ತಿಳಿಸಿದ್ದಾರೆ. ತನ್ನ ಮನೆಯ ಮುಂದೆ ಕಸ ಬಿಸಾಡುವ, ಮೂತ್ರ ಮಾಡುವ ಮೂಲಕ ಕಿರುಕುಳ ನೀಡಿದ್ದ ಆರೋಪಿಯ ವಿರುದ್ಧ ಸಿಸಿಟಿವಿ ದೃಶ್ಯಾವಳಿಗಳ ಸಾಕ್ಷಿ ಸಮೇತ ಜುಲೈ 11 ರಂದು 62 ವರ್ಷದ ಮಹಿಳೆ ದೂರು ನೀಡಿದ್ದರು ಎನ್ನಲಾಗಿದೆ. ಆದರೆ ಪೊಲೀಸರು ಜುಲೈ 25ರಂದು ಪ್ರಕರಣ ದಾಖಲಿಸಿದ್ದರು. ತದನಂತರ ಕೆಲವೇ ಗಂಟೆಗಳಲ್ಲಿ ದೂರು ವಾಪಸ್ ಪಡೆಯಲಾಗಿದೆ.

ಅಪಾರ್ಟ್‌ಮೆಂಟ್‌ನ ಹಲವರು ದೂರು ಹಿಂಪಡೆಯಲು ಒತ್ತಾಯಿಸಿದ್ದರು. ಆತನ ಕುಕೃತ್ಯಗಳ ವಿರುದ್ಧ ಸಾಕ್ಷಿ ಸಂಗ್ರಹಿಸುವಲ್ಲಿ ಸಹಾಯ ಮಾಡಿದ್ದ ಒಬ್ಬರು ಮಾತ್ರ ಕೇಸಿನಲ್ಲಿ ಮುಂದುವರೆಯಿರಿ ಎಂದು ಹೇಳಿದ್ದರು. ಉಳಿದವರು ಸಾಕಷ್ಟು ಒತ್ತಡ ತಂದ ನಂತರ ಮತ್ತು ಆರೋಪಿಯೇ ಕ್ಷಮೆ ಕೇಳಿದ ನಂತರ ಅನಿವಾರ್ಯವಾಗಿ ದೂರನ್ನು ಹಿಂಪಡೆಯಬೇಕಾಯಿತು ಎಂದು ದೂರು ನೀಡುವಲ್ಲಿ ನೆರವಾದ ಮಹಿಳೆಯ ಸೋದರಳಿಯ ಬಾಲಾಜಿ ತಿಳಿಸಿದ್ದಾರೆ.

ಚೆನ್ನೈನ ಕಿಲ್ಪಾಕ್ ವೈದ್ಯಕೀಯ ಕಾಲೇಜಿನಲ್ಲಿ ಶಸ್ತ್ರಚಿಕಿತ್ಸಕ ಮತ್ತು ಶಸ್ತ್ರಚಿಕಿತ್ಸಾ ಆಂಕೊಲಾಜಿ ವಿಭಾಗದ ಮುಖ್ಯಸ್ಥರಾಗಿರುವ ಸುಬ್ಬಯ್ಯ ವಿರುದ್ಧ ಆಡಂಬಕ್ಕಂ ಪೊಲೀಸರು ಶನಿವಾರ ಪ್ರಕರಣ ದಾಖಲಿಸಿದ್ದರು. ಭಾರತೀಯ ದಂಡ ಸಂಹಿತೆ (ಐಪಿಸಿ) ಯ ಸೆಕ್ಷನ್ 271 (ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಆರೋಪ), ಸೆಕ್ಷನ್ 427 (ಐವತ್ತು ರೂಪಾಯಿಗೂ ಹೆಚ್ಚು ಮೊತ್ತದ ಆಸ್ತಿಗೆ ಹಾನಿ ಉಂಟುಮಾಡುವ ಕಿಡಿಗೇಡಿತನ) ಮತ್ತು ತಮಿಳುನಾಡು ಮಹಿಳಾ ಕಿರುಕುಳ ತಡೆ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಾಗಿತ್ತು.

ಮಹಿಳೆಗೆ ಸೇರಿದ್ದ ಕಾರು ಪಾರ್ಕಿಂಗ್ ಜಾಗದಲ್ಲಿ ಸುಬ್ಬಯ್ಯ ತನ್ನ ಕಾರನ್ನು ಪಾರ್ಕ್ ಮಾಡುತ್ತಿದ್ದರು. ಸ್ವಲ್ಪ ತಿಂಗಳುಗಳ ನಂತರ ಆ ಜಾಗಕ್ಕೆ ಮಾಸಿಕ 1500 ರೂ ಬಾಡಿಗೆ ವಿಧಿಸಲು ಆ ಮಹಿಳೆ ಮುಂದಾಗಿದ್ದರು. ಇದರಿಂದ ಕೋಪಗೊಂಡಿದ್ದ ಸುಬ್ಬಯ್ಯ ಆ ಜಾಗ ತನ್ನದು ಎಂದು ವಾದ ಮಾಡಿದ್ದರು ಎನ್ನಲಾಗಿದೆ.

ಜಗಳ ವಿಕೋಪಕ್ಕೆ ತಿರುಗಿದ ನಂತರ ಸುಬ್ಬಯ್ಯ ನಿತ್ಯ ಆ ಮಹಿಳೆಯ ಮನೆ ಮುಂದೆ ಮೂತ್ರ ವಿಸರ್ಜನೆ ಮಾಡುವ, ಕಸ ಎಸೆದಿರುವುದು ಸಿಸಿಟಿವಿ ದೃಶ್ಯಾವಳಿಯಲ್ಲಿ ದಾಖಲಾಗಿತ್ತು. ಆದರೆ ಆರೋಪಿ ABVP ರಾಷ್ಟ್ರೀಯ ಅಧ್ಯಕ್ಷನಾದ ಕಾರಣ ಮತ್ತು ರಾಜಕೀಲ ಬಲ ಹೊಂದಿರುವುದರಿಂದ ಆತನನ್ನು ಎದುರಿಸಲು ಸಾಧ್ಯವಾಗುತ್ತಿಲ್ಲ ಎಂದು ಆ ಮಹಿಳೆ ಜುಲೈ 13 ರಂದು ತನ್ನ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದರು.

ಈ ಕುರಿತು ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಘಟಕ ಎನ್‌ಎಸ್‌ಯುಐ ಕಾರ್ಯಕರ್ತರು ಆರೋಪಿಯ ಮೇಲೆ ಕ್ರಮಕ್ಕೆ ಆಗ್ರಹಿಸಿದ್ದರು. ಅಲ್ಲದೇ ಟ್ವಿಟ್ಟರ್‌ನಲ್ಲಿ ಸಿಸಿಟಿವಿ ವಿಡಿಯೋಗಳನ್ನು ಪೋಸ್ಟ್ ಮಾಡಿದ್ದರು. ShameOnABVP ಹ್ಯಾಸ್‌ಟ್ಯಾಗ್‌ ಟ್ರೆಂಡ್‌ ಆಗಿತ್ತು.

abvp ಅಧ್ಯಕ್ಷ ಮಹಿಳೆಗೆ ಕಿರುಕುಳ ನೀಡಿದ್ದಾನೆ. ಈ ಕೊಳಕು ಕೆಲಸವನ್ನು ಮುಚ್ಚಿಹಾಕಲು ಇಡೀ ಬಿಜೆಪಿ ಯಂತ್ರಾಂಗ ಕೆಲಸ ಮಾಡುತ್ತಿದೆ. ಈ ಹಿಂದೆಯು ಅತ್ಯಾಚಾರ ಆರೋಪಿಗಳನ್ನು ಬಿಜೆಪಿ ಸಮರ್ಥಿಸಿಕೊಂಡಿದೆ. ಈ ಕೂಡಲೇ ಅವನನ್ನು ಅಧ್ಯಕ್ಷ ಹುದ್ದೆಯಿಂದ ಕಿತ್ತೊಗೆಯಬೇಕೆಂದು ಎನ್‌ಎಸ್‌ಯುಐ ಆಗ್ರಹಿಸಿತ್ತು.

ಮಹಿಳೆಯರ ಸುರಕ್ಷತೆಯ ಬಗ್ಗೆ ಕಾಳಜಿಯಿಲ್ಲದ ಬಿಜೆಪಿ ಸರ್ಕಾರ ಮಹಿಳೆಯರಿಗೆ ಕಿರುಕುಳ ಕೊಟ್ಟವರಿಗೆ ರಕ್ಷಣೆ ನೀಡುತ್ತದೆ. ಪಕ್ಷದಲ್ಲಿ ಮೇಲಿನಿಂದ ಕೆಳಗಿನವರೆಗೆ ಇರುವವರೆಲ್ಲಾ ಮಹಿಳಾ ವಿರೋಧಿಗಳೇ ಆಗಿದ್ದಾರೆ. ಬಿಜೆಪಿ ಆಳ್ವಿಕೆಯು ಮಹಿಳಾ ಸುರಕ್ಷತೆ ಎಂಬುದನ್ನು ಅಣಕ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.


ಇದನ್ನೂ ಓದಿ: ABVP ರಾಷ್ಟ್ರೀಯ ಅಧ್ಯಕ್ಷನಿಂದ ಮಹಿಳೆಗೆ ನಿತ್ಯ ಕಿರುಕುಳ ಆರೋಪ: ShameOnABVP ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...