Homeಕರ್ನಾಟಕದಸಂಸ ಬಣಗಳು ಈಗಲಾದರೂ ಒಂದಾಗಬೇಕು. ಏಕೆಂದರೆ...

ದಸಂಸ ಬಣಗಳು ಈಗಲಾದರೂ ಒಂದಾಗಬೇಕು. ಏಕೆಂದರೆ…

ದಸಂಸ ಸಂಘಟನಾತ್ಮಕ ಗುಂಪು ಮಾತ್ರವಲ್ಲ. ನೊಂದವರ, ಅಮಾಯಕರ, ಬಡವರ, ಶೋಷಿತರ ಕಣ್ಣೀರು ಒರೆಸಿದ ಸಂಘಟನೆ. ಅನ್ಯಾಯದ ವಿರುದ್ಧ ಸಿಡಿದು ಪ್ರಭುತ್ವವನ್ನೇ ನಡುಗಿಸಿ, ಎಲ್ಲ ತರತಮಗಳ ವಿರುದ್ಧ ಬಂಡೆದ್ದ ಸಂಘಟನೆ.

- Advertisement -
- Advertisement -

ಹಿರಿಯ ಸಾಹಿತಿ ದೇವನೂರ ಮಹಾದೇವ ಅವರು ಒಟ್ಟು ಚಳವಳಿಗಳ ಕುರಿತಾಗಿ ‘ಆಯಾ ಕಾಲದ ಪ್ರತಿರೋಧವನ್ನು ಸಂದರ್ಭವೇ ಸೃಷ್ಟಿಸುತ್ತದೆ. ಹೊಸ ತಲೆಮಾರಿನ ಚಳವಳಿಯ ಸ್ವರೂಪವೇ ಬೇರೆಯಾಗಿರುತ್ತದೆ’ ಎಂಬರ್ಥದಲ್ಲಿ ಹಿಂದೊಮ್ಮೆ ಹೇಳಿದ್ದರು.

ಹಿರಿಯ ಕವಿ ಡಾ.ವಿ.ಮುನಿವೆಂಕಟಪ್ಪ ‘ದಸಂಸದ ಸ್ಥಾಪಕರೆಲ್ಲ ಗತಿಸದೇ ಹೊರತು ಬಣಗಳ ಐಕ್ಯ ಸಾಧ್ಯವಿಲ್ಲ. ವಿಘಟಿತ ಬಣಗಳು ಯಾವ ಉದ್ದೇಶವನ್ನು ಈಡೇರಿಸುವುದಿಲ್ಲ’ ಎಂದಿದ್ದರು. ಕರ್ನಾಟಕ ದಲಿತ ಸಂಘರ್ಷ ಸಮಿತಿ ಸ್ಥಾಪಕ ಪ್ರಮುಖ ಹೋರಾಟಗಾರರಾದ ಇಬ್ಬರ ಮಾತಿನಲ್ಲಿ ಸಾಮ್ಯತೆ ಇದೆ. ಆದರೆ ಕರ್ನಾಟಕದ ನೋವಿನ ನೆಲಗಳು ದಸಂಸ ಬಣಗಳು ಒಂದಾಗಬೇಕೆಂದು ಬಯಸುತ್ತಿವೆ.

ಎರಡು ದಶಕಗಳಿಂದ ಕೇಳುತ್ತಿರುವ ಒಂದೇ ಮಾತು. ದಸಂಸ ಬಣಗಳು ಒಂದಾಗಬೇಕು. ಯಾವಾಗ? ಹೇಗೆ? ಬಣಗಳ ಒಗ್ಗೂಡಿಸುವವರು ಯಾರು? ಹೀಗೆ ನಾನಾ ಪ್ರಶ್ನೆಗಳು. ಕವಿ ಸಿದ್ದಲಿಂಗಯ್ಯ ಅವರು ‘ನನ್ನ ಅಣ್ಣನಂತಿರುವ ದೇವನೂರ ಮಹಾದೇವ ಅವರು ದಸಂಸ ನೇತೃತ್ವ ವಹಿಸಿದರೆ ಅವರೊಂದಿಗೆ ಮುನ್ನಡೆಯುವುದಾಗಿ’ ಹೇಳಿದ್ದರು. ಅದು ಈಡೇರಲಿಲ್ಲ.

ಕರ್ನಾಟಕದಲ್ಲಿ ನೂರಾರು ಸಂಘಟನೆಗಳಿವೆ. ಒಂದೇ ಉದ್ದೇಶದ ಹತ್ತಾರು ಸಂಘಟನೆಗಳಿವೆ. ಇವುಗಳಲ್ಲಿಯೇ ಬೇಕಾದಷ್ಟು ಬಣಗಳಿವೆ. ಆದರೆ ದಸಂಸದ ನಾಲ್ಕು ಬಣಗಳ ಬಗ್ಗೆ ಹೆಚ್ಚು ಚರ್ಚೆ ನಡೆಯುತ್ತದೆ. ಈ ಬಣಗಳು ಮುಖ್ಯಸ್ಥರು ತಮ್ಮ ಮುನಿಸು ಬದಿಗೆ ಸರಿಸಿ ಒಂದಾಗಬೇಕೆಂದು ನಾಡಿನುದ್ದಗಲಕ್ಕೂ ಬಯಸಿದವರಿದ್ದಾರೆ.

ದಸಂಸ ಸಂಘಟನಾತ್ಮಕ ಗುಂಪು ಮಾತ್ರವಲ್ಲ. ನೊಂದವರ, ಅಮಾಯಕರ, ಬಡವರ, ಶೋಷಿತರ ಕಣ್ಣೀರು ಒರೆಸಿದ ಸಂಘಟನೆ. ಅನ್ಯಾಯದ ವಿರುದ್ಧ ಸಿಡಿದು ಪ್ರಭುತ್ವವನ್ನೇ ನಡುಗಿಸಿ, ಎಲ್ಲ ತರತಮಗಳ ವಿರುದ್ಧ ಬಂಡೆದ್ದ ಸಂಘಟನೆ.

ನೆರೆಯ ಮಹಾರಾಷ್ಟ್ರದ ದಲಿತ ಪ್ಯಾಂಥರ್ಸ್ ಪ್ರಭಾವದಿಂದ ಪ್ರೊ.ಬಿ.ಕೃಷ್ಣಪ್ಪ ಕರ್ನಾಟಕದಲ್ಲಿ ದಲಿತ ಸಂಘರ್ಷ ಸಮಿತಿ ಹುಟ್ಟಿಗೆ ಕಾರಣರಾದರು. ಅದು 1975ರ ಸಂದರ್ಭ. ತುರ್ತು ಪರಿಸ್ಥಿತಿ ಎದುರಿಸಿದ ಕರಾಳ ದಿನಗಳು ಹಸಿರಾಗಿದ್ದವು. ದೇಶಕ್ಕೆ ಸ್ವಾತಂತ್ರ್ಯ ಬಂದು 25 ವರ್ಷಗಳಾದರೂ ಸಾಮಾಜಿಕ, ಆರ್ಥಿಕ ತರತಮಗಳು ಬಡ ಜನರನ್ನು ಇನ್ನಿಲ್ಲದಂತೆ ನೋಯಿಸುತ್ತಿದ್ದವು. ಹೋರಾಟಕ್ಕೆ ಜನ ತುಡಿಯುತ್ತಿದ್ದರು. ದಸಂಸ ಅವರಿಗೆ ದಿಕ್ಕಾಯಿತು.

ಪ್ರೊ.ಬಿ.ಕೃಷ್ಣಪ್ಪ

ಶೂದ್ರರಷ್ಟೇ ಅಲ್ಲದೇ ಬಡವರ ಅಭ್ಯುದಯದ ಧ್ಯೇಯದೊಂದಿಗೆ ದಸಂಸ ಪ್ರಭುತ್ವದ ಬಂಡವಾಳಶಾಹಿಗಳ ಜಮೀನುದಾರರ ಪುರೋಹಿತಶಾಹಿ ವಿರುದ್ಧ ಕಹಳೆ ಸಾರಿತು. ಹಳ್ಳಿಯ-ದಿಲ್ಲಿಯ ಅನ್ಯಾಯದ ವಿರುದ್ಧ ಗುಡುಗಿ ದಲಿತರಲ್ಲಿ ನೈತಿಕ ಶಕ್ತಿ ತುಂಬಿತು. ಮಹಾನಾಯಕ ಅಂಬೇಡ್ಕರರು ತೋರಿದ ಬೆಳಕಲ್ಲಿ ನಡೆದ ದಸಂಸ ಚಾರಿತ್ರಿಕ ಬದಲಾವಣೆಗಳಿಗೆ ಕಾರಣವಾಯಿತು.

‘ದಲಿತರು ಬರುವರು ದಾರಿ ಬಿಡಿ, ದಲಿತರ ಕೈಗೆ ರಾಜ್ಯಕೊಡಿ’ ಎಂದು ಬೀದಿಯಲ್ಲಿ ಹಾಡುತ್ತ ಅಧಿಕಾರದ ಗದ್ದುಗೆ ಕಡೆ ನಡೆಯುವಾಗಲೇ ದಸಂಸ ತನ್ನ ಶಕ್ತಿಯನ್ನು ಕಳೆದುಕೊಂಡಿತು. ಬಣಗಳಾದವು. ಸಂಚಾಲಕರೆಲ್ಲ ರಾಜ್ಯಾಧ್ಯಕ್ಷರಾದರು. ಕೆಲವರು ರಾಜಕಾರಣಿಗಳ ಹಿಂಬಾಲಕರಾದರು. ಬಡವರ ಹಿತಾಶಕ್ತಿ ಬಲಿಕೊಟ್ಟರು.

ಇಷ್ಟಾದರೂ ಇವತ್ತಿನ ತನಕ ಬಣಗಳು ನಿಷ್ಕ್ರೀಯವಾಗದೇ ಚಾಲನೆಯಲ್ಲಿದ್ದವು ಎಂಬುದೇ ಸಮಾಧಾನದ ಸಂಗತಿ. ಒಂದೇ ಸಮಸ್ಯೆ ವಿರುದ್ಧ ಪ್ರತ್ಯೇಕ ಹೋರಾಟಕ್ಕೆ ಕರೆ ಕೊಡುತ್ತಿದ್ದವು. ಜಾಗೃತಿ ಮೂಡಿಸುತ್ತಿದ್ದವು. ನಿರೀಕ್ಷಿತ ಫಲ ಸಿಗದೇ ಹತಾಶೆಗೊಂಡಿದ್ದವು. ಈಗ ಬಣಗಳು ಒಂದುಗೂಡುವುದೊಂದೇ ಅವುಗಳಿಗಿರುವ ದಾರಿ ಎಂಬ ಅರಿವುಂಟಾಗಿದೆ. ಹಲವು ಬಾರಿ ಒಂದಾಗಿವೆ, ಮತ್ತೆ ಬೇರೆಯಾಗಿವೆ.

ಈ ದಿಸೆಯಲ್ಲಿ ಆಶಾವಾದವೊಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅರಳಿದೆ. ಕರ್ನಾಟಕ ದಲಿತ ಸಂಘರ್ಷ ಸಮಿತಿ ನಾಲ್ಕು ಬಣಗಳ ಮೈಸೂರು ಜಿಲ್ಲಾ ಸಂಚಾಲಕರು ‘ಒಂದೇ ದನಿ, ಒಂದೇ ಗುರಿ, ಒಂದೇ ಹಾದಿ’ ತತ್ವದಡಿ ಒಂದಾಗುವ ಸುದ್ದಿ ನೀಡಿದ್ದಾರೆ. ರಾಜ್ಯ ಸಂಚಾಲಕರು ಇವರ ಹಾದಿ ಹಿಡಿಯಬೇಕು. ಈ ಸಂಕಟದ ವರ್ತಮಾನಕ್ಕೆ ಮುಖಾಮುಖಿಯಾಗಬೇಕು.

ದಸಂಸ ಯಶಸ್ವಿ ಹೋರಾಟ ನೆನೆಯುವ ಸಂದರ್ಭವಿದು. ಅದು ನಾಗಸಂದ್ರದ ಭೂ ಹೋರಾಟ. ಪ್ರಭುತ್ವ ಮತ್ತು ಜಮೀನುದಾರರ ಸೊಕ್ಕಡಗಿಸಿದ ಹೋರಾಟವದು. ‘ಹೆಂಡ ಬೇಡ ಭೂಮಿ ಬೇಕು’ ಘೋಷಣೆಯಡಿ ನಾಗಸಂದ್ರದ 80ಕ್ಕೂ ಹೆಚ್ಚು ದಲಿತ ಕುಟುಂಬಗಳನ್ನು ಜೀತದಿಂದ ವಿಮುಕ್ತರಾಗಿಸಿ ಜಮೀನು ದೊರಕಿಸಿ ಚಾರಿತ್ರಿಕ ಸಾಧನೆ ಮಾಡಿದ ಹೋರಾಟ. ಅಂದದ್ದೇ ಹೋರಾಟ ಕಟ್ಟುವ ಕಾಲವಿದು.

ನಾಗಸಂದ್ರ ಭೂ ಹೋರಾಟದ ಕುರಿತ ಪುಸ್ತಕ

ಹಿಂದಿನ ಸರ್ಕಾರಗಳು ಭೂ ರಹಿತರ ಪರವಾಗಿ ಕಾಯಿದೆ ಜಾರಿಗೆ ತಂದು ಬಡವರನ್ನು ರೈತರನ್ನಾಗಿಸಿತು. ಇಂದಿನ ಸರ್ಕಾರ ರೈತರಿಂದ ಭೂಮಿ ಕಸಿಯುವ ಅಘಾತಕಾರಿ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಭೂ ಸುಧಾರಣಾ ಕಾಯಿದೆಗೆ ತಿದ್ದುಪಡಿ ತಂದು ಭೂ ಕಬಳಿಕರಿಗೆ ಕೆಂಪುಹಾಸು ಹಾಸಿದೆ.

ಕಾಲದ ಒತ್ತಡಗಳೂ ನೂರೆಂಟು. ಈಗ ದಸಂಸದ ಗುರಿ ಒಂದೇ. ಅದು ಕರ್ನಾಟಕದ ರೈತಕುಲವನ್ನು ಉಳಿಸುವುದು. ಭೂಮಿ ಉಳಿಸಲು ಹೋರಾಡುವುದು. ಆ ಮೂಲಕ ತನ್ನ ಹಿಂದಿನ ಘನತೆಯನ್ನು ಎತ್ತಿಹಿಡಿಯುವುದು.

ವಿನೋದ್ ಮಹದೇವಪುರ, ಪತ್ರಕರ್ತರು, ಯುವ ಬರಹಗಾರರು.


ಇದನ್ನೂ ಓದಿ: ಜಾತಿ ವಿರೋಧಿ ಹೋರಾಟಗಾರ ಯು. ಸಾಂಬಶಿವ ರಾವ್‌ (70) ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...