Homeಅಂಕಣಗಳುಇನ್ಮುಂದೆ ಖಾಯಂ ಕೆಲಸ ಎಂಬುದು ಕನಸು ಮಾತ್ರ: ಗುತ್ತಿಗೆ ನೌಕರರು ಏನು ಮಾಡಬೇಕು?

ಇನ್ಮುಂದೆ ಖಾಯಂ ಕೆಲಸ ಎಂಬುದು ಕನಸು ಮಾತ್ರ: ಗುತ್ತಿಗೆ ನೌಕರರು ಏನು ಮಾಡಬೇಕು?

ಕೊರೊನಾದಿಂದ ಈ ಸ್ಥಿತಿ ಬಂದೇತಿ ಅಂತ ಬಂಡವಾಳಶಾಹಿಗಳು ಹೇಳತಾರ. ಆದರ ಅವರ ಮನಸ್ಥಿತಿ ನೋಡಿದರ ಅವರು ಇದನ್ನ ಮಾಡಲಿಕ್ಕೆ ಕಾಯುತ್ತಾ ಇದ್ದರು, ಅಷ್ಟರಾಗ ಕೊರೊನಾ ಮಾಮ ಬಂದು ಅವರ ಕೆಲಸ ಹಗುರ ಮಾಡಿದ ಅಂತ ಅನ್ನಸತೇತಿ.

- Advertisement -
- Advertisement -

ಗಿಗ್ಗು ಅರ್ಥವ್ಯವಸ್ಥೆ ಅರ್ಥಾತ್ ಗಿಗ್ಗಾವಸ್ತೆ- ಡೇಟಾಮ್ಯಾಟಿಕ್ಸ್

ಹಳೇ ಕನ್ನಡ ಸಿನಿಮಾದಾಗ ಹೊಸ ಹೀರೋಗಳ ಕಡೆ ಹೊಡತ ತಿನ್ನಲಿಕ್ಕೆ ಒಬ್ಬ ಸಣ್ಣ ರೌಡಿ ಇರ್ತಾ ಇದ್ದ. ಅವನ ಹೆಸರು ಗುಗ್ಗು.

ಅವನು ಒಮ್ಮೊಮ್ಮೆ ಕಾಮೇಡಿ ಮಾಡ್ತಾ ಇದ್ದ. ಇನ್ನೊಮ್ಮೆ ರೌಡಿಗಿರಿ ಮಾಡ್ತಾ ಇದ್ದ. ಅವನ ಪಾತ್ರ ಸಣ್ಣದು. ಅವ ಹೀರೋ ಆಗಿ ಯಾವ ಪಿಚ್ಚರೂ ಮಾಡಲಿಲ್ಲ. ಮೂರು ತಾಸೀನ ಪಿಚ್ಚರಿನಾಗ ಒಂದು ಹತ್ತು ನಿಮಿಷ ಬಂದು ಹೋಗತಿದ್ದ. ಬಹಳ ಮಂದಿಗೆ ಅವ ಇದ್ದದ್ದೂ ಗೊತ್ತಾಗಲಿಲ್ಲ, ಹೋದದ್ದೂ ಗೊತ್ತಾಗಲಿಲ್ಲ.

ಈಗ ನಮ್ಮ ಜಾಗತಿಕ ಅರ್ಥವ್ಯವಸ್ಥೆ ಅನ್ನೋದು ಕೊರೊನಾದಿಂದಾಗಿ ಕೆಟ್ಟು ಕೆರ ಹಿಡದು ಹೋಗೇದ. ಇಂಥದ್ದರಾಗ ನಮ್ಮನ್ನು ಆಳುವ ಗುಗ್ಗುಗಳು ಗಿಗ್ಗು ಅರ್ಥವ್ಯವಸ್ಥೆ ಅಥವಾ ಗಿಗ್ಗಾವಸ್ತೆಯನ್ನ ಜಾರಿಗೆ ತರೋ ತಯಾರಿ ಮಾಡಾಕ ಹತ್ಯಾರ.

ಇದು ಏನಪಾ ಗಿಗ್ಗಾವಸ್ತೆ? ಹಂಗಅಂದ್ರ ಖಾತ್ರಿಯಲ್ಲದ ಕೆಲಸ. ಪಂಚಾಯಿತಿಯಿಂದ ಹಿಡದು ಯೂನನಿವರ್ಸಿಟಿವರೆಗೂ ಎಲ್ಲ ಭಾರತೀಯರಿಗೂ ಉದ್ಯೋಗ ಖಾತ್ರಿ ಅಭ್ಯಾಸ ಆಗಿ ಹೋಗೇದ. ಹಿಂಗಾಗಿ ಅಂತವರಿಗೆ ಇದು ಅಪಥ್ಯ. ಕೋಟ್ಯಾಂತರ ಮಂದಿಗೆ – ಕೂಲಿಕಾರರಿಗೆ, ಮನೆ ಕೆಲಸದವರಿಗೆ, ಅರೆಕಾಲಿಕ ಸಿಬ್ಬಂದಿಗಳಿಗೆ, ಅತಿಥಿ ಉಪನ್ಯಾಸಕರಿಗೆ ಇದು ದಿನ ನಿತ್ಯದ ಗೋಳು. ಅವರಿಗೆ ಏನೂ ಆಶ್ಚರ್ಯ ಆಗೋದಿಲ್ಲ.

ಈ ಗಿಗ್ಗು ಯಾಕ ಬಂತು ಅಂತ ತಿಳಕೋಬೇಕು ಅಂದ್ರ ಅದಕ್ಕ ಒಂದು ಸ್ವಲ್ಪ ಹಿನ್ನೆಲೆ ಬೇಕಾಗತದ. ಸರಳ ಭಾಷೆಯೊಳಗ ಹೇಳಬೇಕು ಅಂದ್ರ ಈ ಸಮಕಾಲೀನ ಜಾಗತಿಕ ಸಂದರ್ಭದಲ್ಲಿ ನವ್ಯೋತ್ತರ ವಸಾಹತುಶಾಹಿಯ ಪ್ರಭಾವದಿಂದ ಏನು ನಮ್ಮ ಅರ್ಥವ್ಯವಸ್ಥೆ ನಡದದ ಅಲ್ಲಾ. ಅದಕ್ಕ ಸಾಂಪ್ರದಾಯಿಕ ಅರ್ಥವ್ಯವಸ್ಥೆ ಅಥವಾ ಮಾರುಕಟ್ಟೆ ಹಿನ್ನೆಲೆಯ ಅರ್ಥವ್ಯವಸ್ಥೆ ಅಂತ ಅಂತಾರ.

ಇದರಾಗ ಎರಡು ಮಾರುಕಟ್ಟೆ ಮುಖ್ಯ ಆಗತಾವು. ಒಂದು ಸರಕು ಮತ್ತು ಸೇವೆ ಹಾಗೂ ಇನ್ನೊಂದು ಕಾರ್ಮಿಕ ಮಾರುಕಟ್ಟೆ. ಕಾರ್ಮಿಕ ವಿಭಾಗದೊಳ ಎರಡು ಉಪ ವಿಭಾಗ ಅದಾವು – ಕೌಶಲ್ಯ ರಹಿತ ಮತ್ತು ಕೌಶಲ್ಯ ಸಹಿತ.

ಇದು ಬೇಡಿಕೆ ಮತ್ತು ಪೂರೈಕೆಯ ಆಧಾರದ ಮೇಲೆ ನಡೀತೇತಿ. ಬೇಡಿಕೆ ಹೆಚ್ಚು ಇದ್ದರ ಸರಕಿನ ಬೆಲೆ ಹೆಚ್ಚಾಗಿ, ಸಂಬಳ ಹೆಚ್ಚಾಗಿ ಇರ್ತದ. ಪೂರೈಕೆ ಹೆಚ್ಚು ಆದರ ಬೆಲೆ ಮತ್ತು ಸಂಬಳ ಕಮ್ಮಿ. ಇದು ರಸ್ತೆ ಪಕ್ಕದಾಗ ಶೇಂಗಾ ಮಾರೋ ಮುದುಕಿಯಿಂದ ಹಿಡದು ಗೌತಮ್ ಅಡಾಣಿ ಅವರವರೆಗೆ ಎಲ್ಲರಿಗೂ ಗೊತ್ತಿರತದ.

ಕೌಶಲ್ಯ ಅನ್ನೋದು ಹೆಚ್ಚು ಆದಷ್ಟು ಸಂಬಳ ಹೆಚ್ಚು. ಕಮ್ಮಿ ಆದರ ಕಮ್ಮಿ. ಆಷ್ಟ.

ಆದರ ಇನ್ನೂ ಮುಂದು ಬರೋ ಗಿಗ್ಗಾವಸ್ತೆಯೊಳಗ ಇದು ಎಲ್ಲಾ ಉಲ್ಟಾ ಪಲ್ಟ ಆಗತದ.

ಯಾವ ಕೆಲಸಗಾರ ಎಷ್ಟು ಕೌಶಲ್ಯಾದಿಂದ ಕೆಲಸ ಮಾಡತಾನ, ಅವನಿಗೆ ಎಷ್ಟು ಅನುಭವ ಐತಿ, ಇದು ಯಾವುದೂ ಲೆಕ್ಕಕ್ಕೆ ಬರೋದಿಲ್ಲ.

ಎಂಥ ಕೆಲಸಗಾರನ ಇರಲಿ ಯಾರೂ ಕಾಯಂ ಅಲ್ಲ. ಎಲ್ಲರೂ ಅರೆಕಾಲಿಕ. ಉದಾಹರಣೆಗೆ ಪೊಲೀಸು, ಡಾಕ್ಟರು, ಸೇನಾ ಪಡೆ, ಶಿಕ್ಷಕರು, ನರ್ಸು, ಕಾರ್ಖಾನೆ ಕಾರ್ಮಿಕರು, ಬ್ಯಾಂಕು ಸಿಬ್ಬಂದಿ, ಎಲ್ಲರೂ ಗುತ್ತಿಗೆ ಮೇಲೆ ಕೆಲಸ ಮಾಡೋದು.

ಕೆಲವರು ಅದರ ಒಳ್ಳೆ ಗುಣಗಳನ್ನು ಪಟ್ಟಿ ಮಾಡಿದಾರು. ಅವು ಯಾವಪ ಅಂದ್ರ – ಜಲ್ದಿ ಕೆಲಸ ಸಿಗೋದು, ಬರೇ ಫೈಲು ಓಡಾಟ ಇಲ್ಲ, ಕೆಂಪು ಪಟ್ಟಿಗೆ ಕತ್ತರಿ, ಮನೆಯಲ್ಲಿಯೇ ಕುಳಿತು ಕೆಲಸ ಮಾಡೋದು, ತಮ್ಮ ಅನುಕೂಲಕ್ಕೆ ತಕ್ಕಂತೆ ಕೆಲಸ, ಕಚೇರಿ ಕೆಲಸ ಇಲ್ಲ, ಹಾಜರಿ ಹಾಕೋದು ಇಲ್ಲ, ಒಬ್ಬ ವ್ಯಕ್ತಿ ನೂರಾರು ತರಹ ಕೆಲಸ ಮಾಡೋದರಿಂದ ಅವನಿಗೆ ಬೇರೆ ಬೇರೆ ಕ್ಷೇತ್ರದ ಅನುಭವ ಜಾಸ್ತಿ, ನಿವೃತ್ತರಿಗೂ ಕೆಲಸ, ಇತ್ಯಾದಿ.

ಇನ್ನ ಗಿಗ್ಗು ವ್ಯವಸ್ಥೆಯ ಅವಗುಣಗಳನ್ನ ನೋಡೋಣ. ಅವು ಕಣ್ಣಿಗೆ ಕಾಣೋವಂತಾವು.

ಒಂದು ದೇಶದೊಳಗ ಹೆಚ್ಚಾನು ಹೆಚ್ಚು ಅರೆಕಾಲಿಕ, ಗುತ್ತಿಗೆ ಕೆಲ್ಸನ ಇರತಾವು. ಎಲ್ಲರಿಗೂ ಸರಕಾರಿ ಕೆಲಸ ಎಲ್ಲಿ ಸಿಗತದ? ನಮ್ಮ ದೇಶದಾಗ ಸರ್ಕಾರಿ ನೌಕರರು ಕೇವಲ ಮೂರು ಶೇಕಡಾ ಅದಾರು. ಉಳಿದ 97 ಶೇಕಡಾ ಕೆಲಸಗಾರರು ಖಾಸಗಿ ಕ್ಷೇತ್ರದಾಗ ಅದಾರು.

ಇವರಿಗೆ ಯಾರಿಗೂ ಸಿಬ್ಬಂದಿ ಕಲ್ಯಾಣದ ಯೋಜನೆಗಳು ಲಾಗೂ ಆಗೋದಿಲ್ಲ. ಇವರಿಗೆ ಪಿಂಚಣಿ ಇಲ್ಲ, ಆರೋಗ್ಯ – ಅಪಘಾತ ವಿಮೆ ಇಲ್ಲ, ಉದ್ಯೋಗಿ ವಿಮಾ ಯೋಜನೆಯ ಆಸ್ಪತ್ರೆ – ಮುಂತಾದ ಸೌಲಭ್ಯ ಇಲ್ಲ.

ಮೊದಲಿಗೆ ನಮ್ಮ ಬೆಂಗಳೂರಿನೊಳಗ ಎಚ್‌ಎಂಟಿ, ಬಿಇಎಲ್ ಅಂಥ ಸಾರ್ವಜನಿಕ ಕಂಪನಿಗಳು ಇದ್ದವು. ಅದರಾಗ ದೊಡ್ಡ ಹುದ್ದೆ ಒಳಗ ಇದ್ದವರು ಹಾಗೂ ಅವರ ಗಾಡಿ ಚಾಲಕರು ಎಲ್ಲರೂ ಕಾಯಂ ಕೆಲಸದಾಗ ಇದ್ದರು. ಅವರು ಇಬ್ಬರೂ ತಮ್ಮ ಮಕ್ಕಳನ್ನ ಒಳ್ಳೆ ಸಾಲಿಗೆ ಕಳಿಸಿ, ಒಳ್ಳೆ ಕೆಲಸ ಕೊಡಿಸಿ, ಪಿಂಚಣಿ ಪಡೆದು, ಮೊಮ್ಮಕ್ಕಳನ್ನ ನೋಡಲಿಕ್ಕೆ ಅಮೇರಿಕಾಗೆ ಹೋಗಿ, ನಯಾಗರ ಜಲಪಾತದ ಮುಂದ ನಿಂತು ಫೋಟೋ ಹೊಡಿಸಿಕಂಡರು. ಎಲ್ಲ ಜಾತಿ, ಜನಾಂಗದವರು ಈ ಸೌಲಭ್ಯಗಳನ್ನ ಪಡೆದರು.

ಖಾಸಗಿ ಕಂಪನಿಗಳು ಇಷ್ಟು ಅನುಕೂಲ ಮಾಡಿಕೊಡಲಾರದೇ ಇದ್ದರೂ ಕೂಡ, ಸ್ವಲ್ಪ ಅನುಕೂಲ ಮಾಡಿ ಕೊಡಬೇಕು ಅಂತ ನಮ್ಮಲ್ಲೇ ಕಾರ್ಮಿಕ ಕಲ್ಯಾಣ ಕಾಯಿದೆಗಳು ಬಂದವು. ಅವನ್ನು ಮುಖಾ ಮೂತಿ ನೋಡದೇ ಕೊರೊನಾ ನೆವ ಹೇಳಿ ಬಂದು ಮಾಡಲಾಯಿತು.

ಗಿಗ್ಗುದಾಗ ಈ ಕಾಯಿದೆಗಳ ಸುಳಿವೆ ಇರಂಗಿಲ್ಲ. ಉಳ್ಳವರು – ಮತ್ತು ಇಲ್ಲದವರು ಅಂತ ವ್ಯತ್ಯಾಸ ಖಾತ್ರಿ. ಇವರಿಗೆ ಸಿಕ್ಕಿದ್ದು ಅವರಿಗೆ ಸಿಗಬೇಕು ಅಂತ ಇಲ್ಲ.

ಕೊರೊನಾದಿಂದ ಈ ಸ್ಥಿತಿ ಬಂದೇತಿ ಅಂತ ಬಂಡವಾಳಶಾಹಿಗಳು ಹೇಳತಾರ. ಆದರ ಅವರ ಮನಸ್ಥಿತಿ ನೋಡಿದರ ಅವರು ಇದನ್ನ ಮಾಡಲಿಕ್ಕೆ ಕಾಯುತ್ತಾ ಇದ್ದರು, ಅಷ್ಟರಾಗ ಕೊರೊನಾ ಮಾಮ ಬಂದು ಅವರ ಕೆಲಸ ಹಗುರ ಮಾಡಿದ ಅಂತ ಅನ್ನಸತೇತಿ.

ಗಿಗ್ಗು ಅಂದ್ರ ಇಂಗ್ಲೀಷ್‌ದಾಗ ಸಂಗೀತ ಕಚೇರಿ ಅಂತ. ಅಂದ್ರ ಊರೂರಿಗೆ ಹಾಡಿಕೋತ ಹೋಗೋರು ಯಾವ ಊರಾಗೂ ನಿಲ್ಲೋದಿಲ್ಲಾ. ಅವರಿಗೆ ಯಾವ ಊರು ಆದರೇನು? ಸಂಗೀತ ಮುಖ್ಯ ಅಂತ ಅಲ್ಲಿಯ ಅರ್ಥ.

ನಮ್ಮಲ್ಲೆ ಹಂಗ ಇಲ್ಲಲ್ಲ. ಊರಾಗ ಒಂದು ಕಾರಖಾನೆ ಹಾಕಿಕೋತ ಹೋಗೋರಿಗೆ ಕೆಲಸಗಾರರ ಹಂಗು ಯಾಕ? ಅವರಿಗೆ ಬರೇ ರೊಕ್ಕದ ಚಿಂತೆ. ಯಾವ ಪಕ್ಷ ಅಧಿಕಾರಕ್ಕ ಬರ್ತೇತೋ ಆ ಪಕ್ಷದ ಬೆನ್ನು ಬಡಿಯೋರು ಅವರು. ಕೆಲಸಗಾರರು ಮಾತ್ರ ಊರು ಬಿಟ್ಟು, ದುಡಿಯಲಿಕ್ಕೆ ಹೋಗಿ ಲಾಕಡೌನ್ ಆದಾಗ ಸಾವಿರಾರು ಕಿಲೋ ಮೀಟರು ನಡಕೋತ ಬಂದು ರಸ್ತೆದಾಗ ಸಾಯೋರು. ಮಾಲೀಕರಿಗೆ ಕಾನೂನಿಗೆ ಕಿಮ್ಮತ್ತು ಇಲ್ಲ, ಕೆಲಸಗಾರರಿಗೆ ಕಾನೂನು ಗೊತ್ತಿಲ್ಲ. ಸರಕಾರ ಮಾಲೀಕರ ಮಾತು ಕೇಳತದ, ಕೆಲಸಗಾರರ ಮಾತು ಕೇಳೋದಿಲ್ಲ.

ಈ ಗಿಗ್ಗು ಬದಲಾಯಿಸುವುದು ಯಾರ ಕೈಯಾಗ ಐತಿ?


ಇದನ್ನೂ ಓದಿ: ಕೋವಿಡ್‌ನಿಂದ ನೆಲಕಚ್ಚಿರುವ ಆರ್ಥಿಕತೆಯನ್ನು ಮೇಲೆತ್ತಲು ಸರ್ಕಾರ ಮಾಡಬೇಕಾದುದ್ದೇನು? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...