Homeಮುಖಪುಟಸುಪ್ರೀಂ ನಲ್ಲಿ ಸಚಿನ್ ಪೈಲಟ್ ಬಣದ ವಿರುದ್ಧ ಸಲ್ಲಿಸಿದ್ದ ಅರ್ಜಿ ಕೈಬಿಟ್ಟ ರಾಜಸ್ಥಾನ ಸ್ಪೀಕರ್..

ಸುಪ್ರೀಂ ನಲ್ಲಿ ಸಚಿನ್ ಪೈಲಟ್ ಬಣದ ವಿರುದ್ಧ ಸಲ್ಲಿಸಿದ್ದ ಅರ್ಜಿ ಕೈಬಿಟ್ಟ ರಾಜಸ್ಥಾನ ಸ್ಪೀಕರ್..

ನ್ಯಾಯಮೂರ್ತಿ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿ ಕೃಷ್ಣ ಮುರಾರಿ ಅವರನ್ನೂ ಒಳಗೊಂಡ ನ್ಯಾಯಪೀಠ ಅರ್ಜಿ ವಾಪಸ್ ಪಡೆಯಲು ಅವಕಾಶ ನೀಡಿತು.

- Advertisement -
- Advertisement -

ವಿಧಾನಸಭಾ ಅಧಿವೇಶನ ಕರೆಯುವಂತೆ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಸಲ್ಲಿಸಿದ್ದ ಅರ್ಜಿಯನ್ನು ಎರಡನೇ ಬಾರಿ ರಾಜ್ಯಪಾಲ ಕಾಳ್‌ರಾಜ್‌ ಮಿಶ್ರಾ ತಿರಸ್ಕರಿಸಿದ ಬೆನ್ನಲ್ಲೇ ಬಂಡಾಯ ಶಾಸಕರ ವಿರುದ್ಧ ಸುಪ್ರೀಂನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಸ್ಪೀಕರ್ ಸಿಪಿ ಜೋಶಿ ಹಿಂಪಡೆದಿದ್ದಾರೆ.

ರಾಜಸ್ಥಾನದಲ್ಲಿ ಸರ್ಕಾರದ ವಿರುದ್ಧ ಬಂಡಾಯವೆದ್ದಿರುವ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಮತ್ತು 18 ಕಾಂಗ್ರೆಸ್ ಶಾಸಕರ ವಿರುದ್ಧ ಅನರ್ಹತೆ ವಿಚಾರಣೆಯನ್ನು ಮುಂದೂಡಲು ಹೈಕೋರ್ಟ್ ನೀಡಿದ್ದ ನಿರ್ದೇಶನ ಪ್ರಶ್ನಿಸಿ ಸುಪ್ರೀಂನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ರಾಜಸ್ಥಾನ ವಿಧಾನಸಭೆ ಸ್ಪೀಕರ್ ಹಿಂತೆಗೆದುಕೊಂಡಿದ್ದಾರೆ.

ಈ ಮೊದಲು ಅಧಿವೇಶನ ನಡೆಸಲು ಸಾಧ್ಯವಿಲ್ಲ, ಏಕೆಂದರೆ ಈ ವಿಚಾರ ಕೋರ್ಟ್‌ನಲ್ಲಿದೆ ಎಂದು ರಾಜ್ಯಪಾಲರು ಕಾರಣ ನೀಡಿದ್ದರು. ಈ ವಾದವನ್ನು ದುರ್ಬಲಗೊಳಿಸುವ ಸಲುವಾಗಿ ಕಾಂಗ್ರೆಸ್ ಪಕ್ಷವು ಸುಪ್ರೀಂನಿಂದ ತನ್ನ ಅರ್ಜಿಯನ್ನು ಹಿಂಪಡೆದಿದೆ ಎನ್ನಲಾಗಿದೆ.

“ಹೈಕೋರ್ಟ್‌ಗಳು ಸುಪ್ರೀಂ ಕೋರ್ಟ್‌ನ ತೀರ್ಪುಗಳನ್ನು ಅನುಸರಿಸುತ್ತಿಲ್ಲ ಎಂಬುದು ನಮಗೆ ನೋವುಂಟು ಮಾಡಿದೆ. ಆದ್ದರಿಂದ ಈ ಮನವಿಯನ್ನು ಹಿಂತೆಗೆದುಕೊಳ್ಳಲು ದಯೆಯಿಂದ ನಮಗೆ ಅನುಮತಿ ನೀಡಿ” ಎಂದು ಜೋಶಿಯನ್ನು ಪ್ರತಿನಿಧಿಸುತ್ತಿದ್ದ ಹಿರಿಯ ಸಲಹೆಗಾರ ಕಪಿಲ್ ಸಿಬಲ್ ಸುಪ್ರೀಂನಲ್ಲಿ ಮನವಿ ಮಾಡಿದ್ದಾರೆ.

ನ್ಯಾಯಮೂರ್ತಿ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿ ಕೃಷ್ಣ ಮುರಾರಿ ಅವರನ್ನೂ ಒಳಗೊಂಡ ನ್ಯಾಯಪೀಠ ಅರ್ಜಿ ವಾಪಸ್ ಪಡೆಯಲು ಅವಕಾಶ ನೀಡಿತು.

ಸದ್ಯಕ್ಕೆ ಆಡಳಿತದಲ್ಲಿರುವ ಕಾಂಗ್ರೆಸ್ ಪಕ್ಷವು 102 ಸದಸ್ಯ ಬಲವನ್ನು ಹೊಂದಿದ್ದು ಸರಳ ಬಹುಮತಕ್ಕಿಂತ 1 ಸ್ಥಾನ ಮಾತ್ರ ಹೆಚ್ಚು ಪಡೆದಿದೆ. ಪೈಲಟ್‌ ಬಣದಲ್ಲಿರುವ ಕಾಂಗ್ರೆಸ್ ಶಾಸಕರು ಜೈಪುರಕ್ಕೆ ವಾಪಸ್ ಬಂದಲ್ಲಿ ಅವರಲ್ಲಿ ಕೆಲವರು ತನ್ನ ಪರವಾಗಿ ಮತ ಚಲಾಯಿಸಬಹುದೆಂಬ ವಿಶ್ವಾಸ ಅವರಿಗಿದೆ.

ಇದೇ ಸಂದರ್ಭದಲ್ಲಿ ಬಿಎಸ್‌ಪಿ ಮುಖ್ಯಸ್ಥೆ ಮಾಯವತಿಯವರು, ರಾಜಸ್ಥಾನದಲ್ಲಿ ಬಿಎಸ್‌ಪಿಯಿಂದ ಆಯ್ಕೆಯಾಗಿ ಕಾಂಗ್ರೆಸ್‌ಗೆ ಪಕ್ಷಾಂತರ ಮಾಡಿರುವ 6 ಶಾಸಕರಿಗೆ ಒಂದು ವೇಳೆ ವಿಶ್ವಾಸಮತ ಯಾಚನೆ ನಡೆದರೆ ಗೆಹ್ಲೋಟ್ ವಿರುದ್ಧವಾಗಿ ಮತ ಚಲಾಯಿಸುವಂತೆ ವಿಪ್ ಜಾರಿಗೊಳಿಸಿದ್ದಾರೆ. ಬಿಎಸ್‌ಪಿಯ ಒಟ್ಟು 6 ಶಾಸಕರಲ್ಲಿ 6 ಜನರು ಕಾಂಗ್ರೆಸ್ ಸೇರಿರುವುದರಿಂದ ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯವಾಗುವುದಿಲ್ಲ ಎಂಬುದು ಕಾಂಗ್ರೆಸ್ ನಿಲುವಾಗಿದೆ. ಬಿಎಸ್‌ಪಿ ಪಕ್ಷವು ರಾಷ್ಟ್ರೀಯ ಅಸ್ತಿತ್ವ ಹೊಂದಿದ್ದು ಕೇವಲ ಒಂದು ರಾಜ್ಯದಲ್ಲಿ ಪಕ್ಷಾಂತರ ಮಾಡಿದರೆ ಅದು ತಾಂತ್ರಿಕವಾಗಿ ತಪ್ಪು ಎಂಬುದು ಮಾಯಾವತಿಯವರ ನಿಲುವಾಗಿದೆ.


ಇದನ್ನೂ ಓದಿ: ಪ್ರಜಾಪ್ರಭುತ್ವಕ್ಕಾಗಿ ಮಾತನಾಡಿ: ರಾಜಸ್ಥಾನ ಬಿಕ್ಕಟ್ಟಿನ ಕುರಿತು ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...