HomeಮುಖಪುಟEIA-2020 ಕುರಿತ ಕಾಂಗ್ರೆಸ್ ಸಲಹೆಗಳು ಆಧಾರರಹಿತ: ಪ್ರಕಾಶ್ ಜಾವಡೇಕರ್

EIA-2020 ಕುರಿತ ಕಾಂಗ್ರೆಸ್ ಸಲಹೆಗಳು ಆಧಾರರಹಿತ: ಪ್ರಕಾಶ್ ಜಾವಡೇಕರ್

ಮಾಜಿ ಪರಿಸರ ಸಚಿವರಾಗಿದ್ದ ಜೈರಾಮ್ ರಮೇಶ್ ವಿಜ್ಞಾನ ಮತ್ತು ತಂತ್ರಜ್ಞಾನ, ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆಗಳ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿದ್ದಾರೆ.

- Advertisement -
- Advertisement -

ಪರಿಸರ ಪರಿಣಾಮ ಮೌಲ್ಯಮಾಪನ (EIA)-2020 ರ ಅಧಿಸೂಚನೆಯ ಬಗ್ಗೆ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಅವರು ತೀವ್ರ ಆಕ್ಷೇಪಣೆಗಳನ್ನು ವ್ಯಕ್ತಪಡಿಸಿ ಬರೆದಿರುವ ಪತ್ರಕ್ಕೆ, ನಿಮ್ಮ ಆರೋಪ ಮತ್ತು ಸಲಹೆಗಳು ಆಧಾರರಹಿತ ಎಂದು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಪ್ರಕಾಶ್ ಜಾವಡೇಕರ್ ಉತ್ತರಿಸಿದ್ದಾರೆ.

ಮಾಜಿ ಪರಿಸರ ಸಚಿವರಾಗಿದ್ದ ಜೈರಾಮ್ ರಮೇಶ್ ವಿಜ್ಞಾನ ಮತ್ತು ತಂತ್ರಜ್ಞಾನ, ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆಗಳ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿದ್ದಾರೆ.

ಕರಡು ಅಧಿಸೂಚನೆಯು, ಸಾರ್ವಜನಿಕ ವಿಚಾರಣೆಗೆ ಸೂಚನೆ ಅವಧಿಯನ್ನು ಕಡಿಮೆ ಮಾಡಿ ಮತ್ತು ದೊಡ್ಡ ವರ್ಗದ ಜನರಿಂದ ದೂರವಿಡುತ್ತಾರೆ. ಇದು ಪರಿಸರ ತೆರವು ಪ್ರಕ್ರಿಯೆಯ ಎಲ್ಲಾ ಹಂತಗಳಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆಯನ್ನು ಕಡಿಮೆ ಮಾಡುತ್ತದೆ ಎಂದು ರಮೆಶ್ ತಮ್ಮ ಪತ್ರದಲ್ಲಿ ಆರೋಪಿಸಿದ್ದಾರೆ.

ಇದು ಪರಿಸರ ಅನುಮತಿಗಳ ಮಾನ್ಯತೆಯನ್ನು ಹೆಚ್ಚಿಸುತ್ತದೆ, ಯೋಜನೆಗಳು ನಿರ್ಮಾಣವಾಗದಿದ್ದರೂ ಸಹ ದೀರ್ಘಾವಧಿಯವರೆಗೆ ಭೂಮಿಯನ್ನು ಭದ್ರಪಡಿಸಿಕೊಳ್ಳಲು ಅನುವು ಮಾಡಿಕೊಡುತ್ತದೆ. ಇದು ಭೂ ಕಬಳಿಕೆಯನ್ನು ಉತ್ತೇಜಿಸುತ್ತದೆಯೇ ಹೊರತು ಅಭಿವೃದ್ಧಿಯನ್ನಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ.

ಇದು ರಾಜ್ಯ EIA ಅಧಿಕಾರಿಗಳನ್ನು ನೇಮಿಸಲು ಕೇಂದ್ರ ಸರ್ಕಾರಕ್ಕೆ ಸಂಪೂರ್ಣ ಅಧಿಕಾರವನ್ನು ನೀಡುತ್ತದೆ. EIA ಕರಡು, ಸಹಕಾರಿ ಸಂಯುಕ್ತ ವ್ಯವಸ್ಥೆಗೆ ಮತ್ತೊಂದು ಹೊಡೆತ ಎಂದು ರಮೇಶ್ ಹೇಳಿದ್ದಾರೆ.

ಈ ಕರಡು, ಪರಿಸರ ನಿಯಂತ್ರಣವನ್ನು “ಅನಗತ್ಯ ನಿಯಂತ್ರಕ ಹೊರೆ”ಯಾಗಿ ನೋಡುವ ಮನೋಭಾವದ ಪರಿಣಾಮವಾಗಿದೆ. ಆದರೆ ಜನರ ಕಲ್ಯಾಣ ಮತ್ತು ಸುಸ್ಥಿರ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳುವ ಸಾಧನವಾಗಿ ಅಲ್ಲ ಎಂದು ಅವರು ಹೇಳಿದ್ದಾರೆ.

ಇದಕ್ಕೆ ಪ್ರತಿಯಾಗಿ ಜಾವಡೇಕರ್ “ಕರಡು ಅಧಿಸೂಚನೆಯನ್ನು ಸೂಚನೆ ಮತ್ತು ಸಲಹೆಗಳಿಗಾಗಿ ಸಾರ್ವಜನಿಕ ವಲಯದಲ್ಲಿ ಇರಿಸಲಾಗಿದೆ. ನಿಮ್ಮ ಅವಲೋಕನಗಳನ್ನು ಗುರುತಿಸಲಾಗಿದೆ. ಸಲಹೆಗಳಿಗಾಗಿ ಇನ್ನೂ 15 ದಿನಗಳಿವೆ. ನಿಮ್ಮ ಎಲ್ಲಾ ಸಲಹೆಗಳು ಮತ್ತು ಆರೋಪಗಳು ಆಧಾರರಹಿತ ಮತ್ತು ತಪ್ಪು ವ್ಯಾಖ್ಯಾನವನ್ನು ಹೊಂದಿವೆ. ನಾನು ನಿಮಗೆ ವಿವರವಾಗಿ ಉತ್ತರಿಸುತ್ತೇನೆ” ಎಂದಿದ್ದಾರೆ.

ಕರಡನ್ನು ಅಂತಿಮಗೊಳಿಸುವ ಮೊದಲು ಕೇಂದ್ರವು ಸಲಹೆಗಳನ್ನು ಪರಿಗಣನೆಗೆ ತೆಗೆದುಕೊಳ್ಳುತ್ತದೆ. ಸರ್ಕಾರದ ನಿರ್ಧಾರಗಳನ್ನು ಸಂಸತ್ತು ಮತ್ತು ಸ್ಥಾಯಿ ಸಮಿತಿಗಳು ಪರಿಶೀಲಿಸಬಹುದು ಎಂದು ಪರಿಸರ ಸಚಿವರು ಹೇಳಿದರು.

ಏನಿದು EIA-2020;

ಎನ್ವಿರಾನ್ಮೆಂಟ್ ಇಂಪ್ಯಾಕ್ಟ್ ಅಸೆಸ್ಮೆಂಟ್ (EIA)-2020 ಕರಡು ಅಧಿಸೂಚನೆಯ ಹೊಸ ಮಾರ್ಪಾಡುಗಳು, ಪ್ರಸ್ತುತ ಅಸ್ತಿತ್ವದಲ್ಲಿರುವ EIA-2006ನ್ನು ಕೂಲಂಕಷವಾಗಿ ಪರಿಶೀಲಿಸಲು ಪ್ರಯತ್ನಿಸುತ್ತದೆ.

ಕೈಗಾರಿಕೆಗಳು ತಮ್ಮ ಉದ್ದೇಶಿತ ಚಟುವಟಿಕೆಯ ಪರಿಸರ ಮತ್ತು ಪರಿಸರೀಯ ಪರಿಣಾಮವನ್ನು ಮತ್ತು ಕಾರ್ಯವಿಧಾನವನ್ನು ನಿರ್ಣಯಿಸಲು ಹೊಸ ಕಾರ್ಯವಿಧಾನವನ್ನು ಸೂಚಿಸುತ್ತವೆ. ಇವುಗಳನ್ನು ತಜ್ಞರ ಸಮಿತಿಗಳು ಮೌಲ್ಯಮಾಪನ ಮಾಡುತ್ತವೆ ಎಂದು ಪರಿಸರ ಸಚಿವಾಲಯ ತಿಳಿಸಿದೆ.

ಮಾಹಿತಿ ಹಕ್ಕು ಕಾಯ್ದೆ ಅರ್ಜಿದಾರರು ನೀಡಿದ ದಾಖಲೆಗಳು, ಕರಡು ಕುರಿತು ಸಾರ್ವಜನಿಕ ಪ್ರತಿಕ್ರಿಯೆಗಾಗಿ ನೀಡಿರುವ ಸಮಯದ ಅವಧಿಯನ್ನು ವಿಸ್ತರಿಸುವ ಸಚಿವಾಲಯದ ಹಿರಿಯ ಅಧಿಕಾರಿಯ ಶಿಫಾರಸುಗಳನ್ನು ಜಾವಡೇಕರ್ ರದ್ದುಪಡಿಸಿದ್ದಾರೆ ಎನ್ನಲಾಗಿದೆ.

ಪರಿಸರ ಸಚಿವಾಲಯವು ಕರಡು ಕಾನೂನನ್ನು ಮಾರ್ಚ್ 12 ರಂದು ಚರ್ಚೆಗೆ ಮತ್ತು ಪ್ರತಿಕ್ರಿಯೆಗಾಗಿ 60 ದಿನಗಳ ಅವಧಿಗೆ ಸಾರ್ವಜನಿಕ ವಲಯದಲ್ಲಿ ಇರಿಸಿತ್ತು.

ಜೂನ್ 30 ರಂದು ದೆಹಲಿ ಹೈಕೋರ್ಟ್ ಕರಡು ಬಗ್ಗೆ ಸಾರ್ವಜನಿಕ ಪ್ರತಿಕ್ರಿಯೆ ನೀಡಲು ಗಡುವನ್ನು ಆಗಸ್ಟ್ 11 ಕ್ಕೆ ವಿಸ್ತರಿಸಿದೆ. ಹೈಕೋರ್ಟ್‌ನಲ್ಲಿ ಸಲ್ಲಿಸಲಾದ ಅರ್ಜಿಯು ಸಾರ್ವಜನಿಕರ ಪ್ರತಿಕ್ರಿಯೆಗಾಗಿ ಸಮಯವನ್ನು ವಿಸ್ತರಿಸಿದೆ ಎಂದು ಪ್ರಸ್ತಾಪಿಸಲಾಗಿದೆ.


ಇದನ್ನೂ ಓದಿ: ಚೆಂಗ್ಡುವಿನ ಅಮೇರಿಕಾದ ರಾಯಭಾರಿಯ ಕಛೇರಿ ಮುಚ್ಚಿಸಿದ ಚೀನಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...