Homeಮುಖಪುಟದೇಶದ ಮೊದಲ ದೃಷ್ಟಿಹೀನ ವಿಕಲಚೇತನ ಆಯುಕ್ತ ಪ್ರಸನ್ನ ಕುಮಾರ್ ಪಿಂಚಾ ನಿಧನ

ದೇಶದ ಮೊದಲ ದೃಷ್ಟಿಹೀನ ವಿಕಲಚೇತನ ಆಯುಕ್ತ ಪ್ರಸನ್ನ ಕುಮಾರ್ ಪಿಂಚಾ ನಿಧನ

ಹುಟ್ಟಿನಿಂದಲೇ ಅಂಧರಾಗಿದ್ದ ಇವರು ದೇಶದ ಮೊದಲ ದೃಷ್ಟಿಹೀನ ವಿಕಲಚೇತನ ಆಯುಕ್ತರಾಗಿದ್ದಾರೆ.

- Advertisement -
- Advertisement -

ಭಾರತದ ಮೊದಲ ದೃಷ್ಟಿಹೀನ ವಿಶೇ‍ಷಚೇತನ ಆಯುಕ್ತ ಪ್ರಸನ್ನ ಕುಮಾರ್ ಪಿಂಚಾ (68) ಅವರು ಭಾನುವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಹುಟ್ಟಿನಿಂದಲೇ ಅಂಧರಾಗಿದ್ದ ಪಿಂಚಾ ಪ್ರತಿಷ್ಠಿತ ವಿಕಲಚೇತನರ ಹಕ್ಕುಗಳ ಸಾಮಾಜಿಕ ಕಾರ್ಯಕರ್ತರಾಗಿದ್ದಾರೆ. ಅವರು ಡಿಸೆಂಬರ್ 2011 ರಿಂದ 2014 ರವರೆಗೆ ಮೂರು ವರ್ಷಗಳ ಅವಧಿಗೆ ವಿಕಲಾಂಗರಿಗಾಗಿ ಮುಖ್ಯ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು.

ಪಿಂಚಾ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ನವದೆಹಲಿಯ ಸಾಕೆತ್‌ನ ಮ್ಯಾಕ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಕೋಲ್ಕತ್ತಾದ ಅಂಧರ ಶಾಲೆಯಲ್ಲಿ ಓದಿದ ಪಿಂಚಾ, ಅಸ್ಸಾಂನಲ್ಲಿ ತನ್ನ ಬ್ಯಾಚುಲರ್ ಇನ್ ಲಾ ಮಾಡಿದ್ದಾರೆ. ಇಂಗ್ಲಿಷ್‌ನಲ್ಲಿ ಸ್ನಾತಕೋತ್ತರ ಪದವಿಯನ್ನೂ ಪಡೆದಿದ್ದಾರೆ.

ಸಾಮಾಜಿಕ ಕಾರ್ಯಕರ್ತರಾದ ಅವರು ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳೊಂದಿಗೆ ಮೂರು ದಶಕಗಳಿಗಿಂತ ಹೆಚ್ಚಿನ ಅವಧಿಯಲ್ಲಿ ಕೆಲಸ ಮಾಡಿದ್ದಾರೆ. ಆಕ್ಷನ್ ಏಡ್ ಎಂಬ ಅಂತಾರಾಷ್ಟ್ರೀಯ ಎನ್‌ಜಿಒ ಜೊತೆ ಸೇರಿ ಅಸ್ಸಾಂನ ತಳ ಸಮುದಾಯಗಳೊಂದಿಗೆ ವ್ಯಾಪಕ ಕೆಲಸ ಮಾಡಿದ್ದರು.

1999 ರಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದಿಂದ ಅತ್ಯುತ್ತಮ ಉದ್ಯೋಗಿಗಳ (ದೃಷ್ಟಿ ಅಂಗವಿಕಲರ) ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದಿದ್ದರು.

ಅಸ್ಸಾಂನ ಜೋರ್ಹಾಟ್ನಲ್ಲಿರುವ ಸರ್ಕಾರಿ ಇನ್ಸ್ಟಿಟ್ಯೂಟ್ ಫಾರ್ ದಿ ಬ್ಲೈಂಡ್‌ ಇದರ ಸ್ಥಾಪಕ ಪ್ರಾಂಶುಪಾಲರಾಗಿದ್ದರು.

ಪಿಂಚಾ ಹಲವಾರು ಉನ್ನತ ಹಾಗೂ ಜವಾಬ್ದಾರಿಯುತ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಆಕ್ಷನ್ ಏಡ್‌ನಲ್ಲಿ ಈಶಾನ್ಯ ಭಾರತದ ಪ್ರಾದೇಶಿಕ ಹಿರಿಯ ವ್ಯವಸ್ಥಾಪಕ ಹುದ್ದೆಯನ್ನು ಅಲಂಕರಿಸಿದ್ದರು. ಹಿರಿಯ ವ್ಯವಸ್ಥಾಪಕರಾಗಿ ಮತ್ತು ರಾಷ್ಟ್ರೀಯ ಥೀಮ್ ಲೀಡರ್ ಆಗಿ ಕೂಡಾ ಸೇವೆ ಸಲ್ಲಿಸಿದ್ದಾರೆ. ಅಲ್ಲದೆ ಅಸ್ಸಾಂ ಸರ್ಕಾರದ ಸಮಾಜ ಕಲ್ಯಾಣ ಜಂಟಿ ನಿರ್ದೇಶಕರ ಹುದ್ದೆಯಲ್ಲಿದ್ದರು.

ವಿಶೇ‍ಷಚೇತನರಿಗಾಗಿ ಮುಖ್ಯ ಆಯುಕ್ತರಾಗಿ ಅಧಿಕಾರ ವಹಿಸಿಕೊಳ್ಳುವ ಮೊದಲು, ಅವರು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದೊಂದಿಗೆ (ಎನ್‌ಎಚ್‌ಆರ್‌ಸಿ) ವಿಶೇ‍ಷಚೇತನರಿಗಾಗಿ ವಿಶೇಷ ವರದಿಗಾರರಾಗಿದ್ದರು. ಆಟಿಸಂ, ಸೆರೆಬ್ರಲ್ ಪಾಲ್ಸಿ, ಮಾನಸಿಕ ಕುಂಠಿತ ಮತ್ತು ಬಹು ವಿಕಲಾಂಗತೆ ಹೊಂದಿರುವ ವ್ಯಕ್ತಿಗಳ ಕಲ್ಯಾಣಕ್ಕಾಗಿ ರಾಷ್ಟ್ರೀಯ ಟ್ರಸ್ಟ್‌ನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದರು.

ವಿಶೇ‍ಷಚೇತನ ವ್ಯಕ್ತಿಗಳ ಹಕ್ಕುಗಳಿಗೆ ಅನುಗುಣವಾಗಿ ಸಂವಿಧಾನದಲ್ಲಿ ಬದಲಾವಣೆಗಳ ಸರಣಿಯನ್ನು ಪಿಂಚಾ ಪ್ರತಿಪಾದಿಸಿದರು. “ಅಂಗವಿಕಲರು” ಎಂಬ ಪದವನ್ನು “ವಿಶೇ‍ಷಚೇತನ ವ್ಯಕ್ತಿಗಳು” ಎಂದು ಬದಲಾಯಿಸಬೇಕೆಂದು ಅವರು ಬಯಸಿದ್ದರು.


ಓದಿ:

ಎಲೆಮರೆ -39: ಊರನ್ನೇ ರಂಗಭೂಮಿ ಮಾಡಿದ ಶಿಕ್ಷಕ ಅಶೋಕ ತೋಟ್ನಳ್ಳಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...