Homeಅಂತರಾಷ್ಟ್ರೀಯಅಕ್ಸಯ್‌ಚಿನ್‌, ಟಿಬೆಟ್‌ನಲ್ಲಿ ಮಿಲಿಟರಿ ನಿರ್ಮಾಣ ಮುಂದುವರೆಸಿದ ಚೀನಾ

ಅಕ್ಸಯ್‌ಚಿನ್‌, ಟಿಬೆಟ್‌ನಲ್ಲಿ ಮಿಲಿಟರಿ ನಿರ್ಮಾಣ ಮುಂದುವರೆಸಿದ ಚೀನಾ

ರಕ್ಷಣಾ ಹಾಗೂ ಭದ್ರತಾ ಮೂಲಗಳ ಪ್ರಕಾರ ಚೀನಾ ಹೆಚ್ಚುವರಿಯಾಗಿ ಸೈನಿಕರು ಮತ್ತು ಸಲಕರಣೆಗಳನ್ನು ಗಣನೀಯವಾಗಿ ಹೆಚ್ಚಿಸಿದೆ ಎನ್ನಲಾಗಿದೆ.

- Advertisement -
- Advertisement -

ಭಾರತೀಯ ಉಪಗ್ರಹ ಚಿತ್ರಗಳು ಹಾಗೂ ಭಾರತದ ಸ್ನೇಹಿತ ದೇಶಗಳು ಸಂಗ್ರಹಿಸಿದ ಚಿತ್ರಗಳಲ್ಲಿ ಟಿಬೆಟ್ ಸ್ವಾಯತ್ತ ಪ್ರದೇಶದಲ್ಲಿ ಚೀನಾವು ಭಾರಿ ಸಂಖ್ಯೆಯ ಸೈನ್ಯವನ್ನು ನೇಮಿಸಿದೆ ಎಂದು ದಿ ಪ್ರಿಂಟ್ ವರದಿ ಮಾಡಿದೆ.

ರಕ್ಷಣಾ ಹಾಗೂ ಭದ್ರತಾ ಮೂಲಗಳ ಪ್ರಕಾರ ಚೀನಾ ದೇಶವು ಹೆಚ್ಚುವರಿಯಾಗಿ ಸೈನಿಕರು ಮತ್ತು ಸಲಕರಣೆಗಳನ್ನು ಅದರಲ್ಲೂ ವಿಶೇಷವಾಗಿ ಅಕ್ಸಾಯ್ ಚಿನ್ ಪ್ರದೇಶದಲ್ಲಿ ಸೈನಿಕರ ಪ್ರಮಾಣವನ್ನು ಗಣನೀಯ ಹೆಚ್ಚಿಸಿರುವುದು ಭಾರತೀಯ ಸೈನ್ಯವೂ ಜಾಗರೂಕತೆಯಿಂದ ಇರುವಂತೆ ಮಾಡಿದೆ ಎನ್ನಲಾಗಿದೆ.

ಮಾಹಿತಿಯ ಪ್ರಕಾರ ಚೀನಾ ಸೈನ್ಯವು ದೀರ್ಘ ಮತ್ತು ಕಠಿಣ ಚಳಿಗಾಲಕ್ಕೆ ತಯಾರಾಗುತ್ತಿದೆ ಎನ್ನಲಾಗಿದೆ. ಹೆಲಿಪ್ಯಾಡ್‌ಗಳನ್ನು ರಚಿಸಲಾಗಿದ್ದು, ಹೊಸ ನಿರ್ಮಾಣ ನಡೆಯುತ್ತಿದೆ ಎಂದು ಎಡೆಟ್ರೆಸ್ಪಾ ಎಂಬ ಟ್ವಿಟ್ಟರ್‌ ಖಾತೆ ಟ್ವೀಟ್ ಮಾಡಿದೆ.

ಜುಲೈ 21 ರಂದು ಟಿಬೆಟ್‌ನ ಶಿಕ್ವಾನ್ಹೆಯಿಂದ ಪಿಎಲ್‌ಎ ನಿರ್ಮಾಣವನ್ನು ತೋರಿಸುವ ಉಪಗ್ರಹ ಚಿತ್ರಗಳನ್ನು ಪೋಸ್ಟ್ ಮಾಡಿ, ಲಡಾಖ್‌ನ ಎಲ್‌ಎಸಿಯಲ್ಲಿ ನಡೆಯುತ್ತಿರುವ ಉದ್ವಿಗ್ನತೆಗಳ ಪೋಷಕ ಪಾತ್ರದ ಭಾಗವೆಂದು ಶಂಕಿಸಲಾಗಿದೆ” ಎಂದು ಎಡೆಟ್ರೆಸ್ಫಾ ಹೇಳಿದೆ.

ಚೀನಾ ಸೈನ್ಯದ ನಿರ್ಮಾಣ ಕಾರ್ಯವು ನಡೆಯುತ್ತಿರುವುದು ನಿಜ ಎಂದು ಮೂಲಗಳು ದೃಢಪಡಿಸಿದೆ, ಅಲ್ಲಿ ಕನಿಷ್ಠ ಸುಮಾರು 5,000 ಸೈನಿಕರು ಮತ್ತು ಉಪಕರಣಗಳ ಇವೆ ಎಂದು ನಂಬಲಾಗಿದೆ. ಈ ಪ್ರದೇಶದಲ್ಲಿ ಹೆಲಿಪ್ಯಾಡ್‌ಗಳು ಸಹ ಕಂಡು ಬಂದಿದ್ದು, ಹೊಸ ನಿರ್ಮಾಣ ನಡೆಯುತ್ತಿದೆ ಎನ್ನಲಾಗಿದೆ.

ಈ ಹಿಂದೆ ಸಂಘರ್ಷ ನಡೆದ ತಾಣಗಳಲ್ಲಿ ಒಂದು ಮಟ್ಟದ ಶಾಂತಿ ಸ್ಥಾಪಿಸಲಾಗಿದೆಯಾದರೂ, ಚೀನಾ ಸೇನೆ ಅದರ ಹಿಂಭಾಗದ ಪ್ರದೇಶಗಳಲ್ಲಿ ತನ್ನ ಸ್ಥಾನಗಳನ್ನು ಬಲಪಡಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಭಾರತೀಯ ಸೇನೆ ಕೂಡ ಚಳಿಗಾಲಕ್ಕೆ ಭರದಿಂದ ಸಜ್ಜಾಗುತ್ತಿದೆ. ಎಲ್‌ಎಸಿಯ ಉದ್ದಕ್ಕೂ ಅನೇಕ ಸ್ಥಳಗಳಲ್ಲಿ ನಿಯೋಜಿಸಲಾಗಿರುವ 30,000 ಕ್ಕೂ ಹೆಚ್ಚು ಹೆಚ್ಚುವರಿ ಸೈನಿಕರಿಗೆ ಸಮರ್ಪಕ ಪಡಿತರ ಹಾಗೂ ತಡೆಸಾಧನಗಳನ್ನು ಖಚಿತಪಡಿಸಿಕೊಳ್ಳಲಾಗುತ್ತಿದೆ.


ಓದಿ: ದೇಶಭಕ್ತ ಲಡಾಖ್‌ ಜನರು ಮಾತನಾಡುತ್ತಿದ್ದಾರೆ; ಆ ಮಾತುಗಳನ್ನು ಕೇಳಿ: ರಾಹುಲ್ ಗಾಂಧಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...