Homeಮುಖಪುಟಕರ್ನಾಟಕ ಚರ್ಚ್ ಸ್ಪೋಟ ಅಪರಾಧಿಗಳ ಮಂಧ್ಯಂತರ ಜಾಮೀನು ತಿರಸ್ಕರಿಸಿದ ಸುಪ್ರೀಂಕೋರ್ಟ್

ಕರ್ನಾಟಕ ಚರ್ಚ್ ಸ್ಪೋಟ ಅಪರಾಧಿಗಳ ಮಂಧ್ಯಂತರ ಜಾಮೀನು ತಿರಸ್ಕರಿಸಿದ ಸುಪ್ರೀಂಕೋರ್ಟ್

ದೀಂದರ್ ಅಂಜುಮಾನ್ ಸಂಘಟನೆಯ ಸದಸ್ಯರಾಗಿದ್ದು, ಬೆಂಗಳೂರು, ಹುಬ್ಬಳ್ಳಿ ಮತ್ತು ಕಲಬುರಗಿಯ ವಿವಿಧ ಚರ್ಚುಗಳಲ್ಲಿ ಪಿತೂರಿ ನಡೆಸಿ ಸ್ಫೋಟಗಳನ್ನು ನಡೆಸಿದ್ದಾರೆ ಎಂದು ಆರೋಪಿಸಲಾಗಿತ್ತು.

- Advertisement -
- Advertisement -

2000 ರಲ್ಲಿ ಬೆಂಗಳೂರು, ಹುಬ್ಬಳ್ಳಿ ಮತ್ತು ಕಲಬುರಗಿಯ ವಿವಿಧ ಚರ್ಚುಗಳಲ್ಲಿ ನಡೆದ ಸರಣಿ ಸ್ಫೋಟಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಇಬ್ಬರು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಪರಾಧಿಗಳು ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.

ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಅಜಯ್ ರಾಸ್ತೋಗಿ ಮತ್ತು ಅನಿರುದ್ಧ ಬೋಸ್ ಅವರ ನ್ಯಾಯಪೀಠವು ಬಂಧನದ ಅವಧಿ ಸಾಕಷ್ಟು ದೀರ್ಘವಾಗಿದ್ದರೂ, ಅವರ ವಿರುದ್ಧದ ಅಪರಾಧಗಳ ಸ್ವರೂಪದಿಂದಾಗಿ ಅವರನ್ನು ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿದೆ.

ಕೆಲವು ವಿಶೇಷ ಸಂದರ್ಭಗಳು ಎದುರಾದರೆ ಮಾತ್ರ ಜಾಮೀನು ಅರ್ಜಿಯ ಮೇಲ್ಮನವಿಗಳಿಗೆ ಅನುಮತಿ ಇದೆ ಎಂದು ನ್ಯಾಯಾಲಯ ತಿಳಿಸಿದೆ.

ಪ್ರಕರಣದ ಅಪರಾಧಿಯಾದ ಶಂಶುಜಾಮಾ ಆಂಧ್ರಪ್ರದೇಶದ ಖಾಯಂ ನಿವಾಸಿಯಾಗಿದ್ದು, ಅವರ ಕುಟುಂಬದವರೆಲ್ಲರೂ ಒಂದೇ ವಿಳಾಸದಲ್ಲಿ ವಾಸಿಸುತ್ತಿದ್ದಾರೆ. ಜಾಮೀನು ನೀಡುವಾಗ ಹೇರಿದ ಯಾವುದೇ ಷರತ್ತುಗಳನ್ನು ಉಲ್ಲಂಘಿಸುವುದಿಲ್ಲ ಎಂದು ಮನವಿ ಮಾಡಿದ್ದರು.

ಮತ್ತೊಂದು ಜಾಮೀನು ಅರ್ಜಿಯಲ್ಲಿ ಅಪರಾಧಿ ಶೇಕ್ ಫರ್ದೀನ್ ವಲ್ಲಿ ಅಲಿಯಾಸ್ ಫರೀದ್ ಜುಲೈ 16, 2000 ರಿಂದ ಬಂಧನದಲ್ಲಿದ್ದಾರೆ ಎಂದು ಅವರ ತಾಯಿ ಅರ್ಜಿ ಸಲ್ಲಿಸಿದ್ದರು. ಅವರ ತಂದೆ ಮರಣ ಶಯ್ಯೆಯಲ್ಲಿದ್ದರಿಂದ ಹಾಗೂ 86% ಶಾಶ್ವತ ಅಂಗವೈಕಲ್ಯದಿಂದ ಬಳಲುತ್ತಿದ್ದರಿಂದ ಮಾನವೀಯ ಆಧಾರದ ಮೇಲೆ ಮಧ್ಯಂತರ ಜಾಮೀನು ಕೋರಿದ್ದರು.

ಅರ್ಜಿದಾರರನ್ನು ವಕೀಲ ಕಾಮಿನಿ ಜೈಸ್ವಾಲ್ ಮತ್ತು ರಾಜ್ಯ ಸರ್ಕಾರವನ್ನು ವಕೀಲ ವಿ. ಎನ್. ರಘುಪತಿ ಪ್ರತಿನಿಧಿಸಿದ್ದರು.

ಆರೋಪಿಗಳು ದೀಂದರ್ ಅಂಜುಮಾನ್ ಸಂಘಟನೆಯ ಸದಸ್ಯರಾಗಿದ್ದು, ಬೆಂಗಳೂರು, ಹುಬ್ಬಳ್ಳಿ ಮತ್ತು ಕಲಬುರಗಿಯ ವಿವಿಧ ಚರ್ಚುಗಳಲ್ಲಿ ಪಿತೂರಿ ನಡೆಸಿ ಸ್ಫೋಟಗಳನ್ನು ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಜೂನ್ 8, 2000 ರಂದು, ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿಯ ಸೇಂಟ್ ಆನ್ ಕ್ಯಾಥೊಲಿಕ್ ಚರ್ಚ್‌ನಲ್ಲಿ ಸತತ ಎರಡು ಸ್ಫೋಟಗಳು ನಡೆದಿದ್ದವು. ಎರಡನೇ ಸ್ಫೋಟವು ಜುಲೈ 8, 2000 ರಂದು ಹುಬ್ಬಳ್ಳಿಯ ಸೇಂಟ್ ಲುಥೆರನ್ ಚರ್ಚ್‌ನಲ್ಲಿ ಮುಂಜಾನೆ 3:30 ರಿಂದ 4:30 ರವರೆಗೆ ನಡೆಯಿತು. ಮೂರನೇ ಬಾಂಬ್ ಸ್ಫೋಟವನ್ನು ಜುಲೈ 9, 2000 ರಂದು ರಾತ್ರಿ 10: 15 ಕ್ಕೆ ಬೆಂಗಳೂರಿನ ಜೆಜೆ ನಗರ ಮುಖ್ಯ ರಸ್ತೆಯಲ್ಲಿರುವ ಸೇಂಟ್ ಪೀಟರ್ ಮತ್ತು ಪಾಲ್ ಚರ್ಚ್‌ನಲ್ಲಿ ನಡೆಸಲಾಗಿತ್ತು.


ಓದಿ: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ನಳಿನಿಯಿಂದ ಆತ್ಮಹತ್ಯೆ ಬೆದರಿಕೆ!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...