Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ಈ ಫೋಟೋ ಅಂಗಾಂಗ ಕಳ್ಳಸಾಗಣೆ ದಂಧೆ ನಡೆಸುವವರದ್ದೇ?

ಫ್ಯಾಕ್ಟ್‌‌ಚೆಕ್‌: ಈ ಫೋಟೋ ಅಂಗಾಂಗ ಕಳ್ಳಸಾಗಣೆ ದಂಧೆ ನಡೆಸುವವರದ್ದೇ?

ವೈರಲ್‌ ಆಗುತ್ತಿರುವ ಫೋಟೋಗಳಲ್ಲಿ ಕೊರೊನಾ ಸಾಂಕ್ರಮಿಕದ ನಡುವೆ ಮಹಾರಾಷ್ಟ್ರದಲ್ಲಿ ಅಂಗಾಂಗ ಕಳ್ಳಸಾಗಣೆ ದಂಧೆ ನಡೆಯುತ್ತಿದೆ ಎಂದು ಉಲ್ಲೇಖಿಸಲಾಗಿದೆ.

- Advertisement -
- Advertisement -

ವಿದ್ಯುತ್ ಚಿತಾಗಾರದಲ್ಲಿ ನಡೆಯುತ್ತಿರುವ ಶವ ಸಂಸ್ಕಾರದಂತೆ ತೋರುವ ಹಲವಾರು ಫೋಟೋಗಳನ್ನು ಕೊರೊನಾ ಸಾಂಕ್ರಮಿಕದ ನಡುವೆ ಮಹಾರಾಷ್ಟ್ರದಲ್ಲಿ ಅಂಗಾಂಗ ಕಳ್ಳಸಾಗಣೆ ದಂಧೆ ನಡೆಯುತ್ತಿದೆ ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಮಹಿಳೆ ಹಾಗೂ ಇಬ್ಬರು ಪುರುಷರು ಸೇರಿಕೊಂಡು ಈ ಶವ ಸಂಸ್ಕಾರ ನಡೆಸುತ್ತಿರುವ ಫೋಟೋಗಳಲ್ಲಿ ದೇಹವನ್ನು ಹಾಳೆಯಲ್ಲಿ ಸುತ್ತಿರುವುದನ್ನು ತೋರಿಸುತ್ತದೆ. ಈ ಚಿತ್ರವನ್ನು ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್‌ ಸೋಗಿನಲ್ಲಿ ಅಂಗಾಂಗ ದಂಧೆ ನಡೆಯುತ್ತಿದೆ ಎಂಬ ನಿರೂಪಣೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ.

ವೈರಲ್ ಸಂದೇಶವು ವಿಸ್ತಾರವಾದ ಕತೆಯನ್ನು ಹೇಳುತ್ತದೆ. ಅದರ ಪ್ರಕಾರ, “ಭಯಂದರ್‌ನ ಗೋರೈ ಪ್ರದೇಶದಲ್ಲಿ ಯಾವುದೇ ಕೊರೊನಾ ವೈರಸ್ ಪ್ರಕರಣಗಳು ಕಂಡುಬಂದಿಲ್ಲ. ಆದರೆ ಕಳೆದ ಕೆಲವು ದಿನಗಳಲ್ಲಿ ಸಾಧಾರಣವಾದ ಕೆಮ್ಮು ಮತ್ತು ಶೀತದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋಗಿದ್ದರು. ಅಲ್ಲಿ ಅವರನ್ನು ಬಲವಂತವಾಗಿ ಆಸ್ಪತ್ರೆಯಲ್ಲಿ ದಾಖಲಿಸಿ ಅವರು ಕೊರೊನಾ ಪಾಸಿಟಿವ್ ಆಗಿದ್ದಾರೆ ಎಂದು ಹೇಳಿದ್ದಾರೆ”

ನಂತರ ಆ ವ್ಯಕ್ತಿ ಮೃತಪಟ್ಟಿದ್ದು, ಕುಟುಂಬದ ಸದಸ್ಯರು ಅವರ ಅಂತ್ಯ ಕ್ರಿಯೆ ಮಾಡಲು ಹೊರಟಿದ್ದರು. ಈ ಸಮಯದಲ್ಲಿ ಶವವನ್ನು ನೋಡಲು ಒತ್ತಾಯಿಸಿದ್ದರು ಆಗ ಶವದ ಎಲ್ಲಾ ಅಂಗಾಂಗಳು ಕಾಣೆಯಾಗಿದ್ದವು ಎಂದು ಆ ಪೋಸ್ಟ್ ಹೇಳುತ್ತದೆ.

ವೈದ್ಯರನ್ನು ದೇವರ ಸ್ವರೂಪವಾಗಿ ನೋಡುತ್ತಿರುವಾಗ, ವೈದ್ಯರು ಇಂತಹ ಘೋರ ಕೃತ್ಯಗಳನ್ನು ಮಾಡಿದ್ದಾರೆ ಎಂದು ವೈರಲ್‌ ಪೋಸ್ಟ್‌ ಆರೋಪಿಸುತ್ತದೆ. ಇದಕ್ಕಿಂತಲೂ ಮೊದಲು ಇಂತಹ ಎಷ್ಟು ಘಟನೆಗಳು ನಡೆದಿವೆಯೊ ಎಂದು ಆಶ್ಚರ್ಯ ವ್ಯಕ್ತಪಡಿಸಿ ಇದನ್ನು ಸಿಬಿಐ ತನಿಖೆ ನಡೆಸಬೇಕು ಎಂದು ಅದು ಒತ್ತಾಯಿಸಿದೆ.

ಫೇಸ್‌ಬುಕ್ ಹಾಗೂ ಟ್ವಿಟರ್‌ನಲ್ಲಿ ಇದೇ ರೀತಿಯ ಸಂದೇಶದೊಂದಿಗೆ ಅನೇಕ ಜನರು ಈ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಅಂತಹ ಹೆಚ್ಚಿನ ಪೋಸ್ಟ್‌ಗಳನ್ನು ಇಲ್ಲಿ, ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಫ್ಯಾಕ್ಟ್‌ಚೆಕ್‌

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಈ ಫೋಟೋಗಳನ್ನು ರಿವರ್ಸ್ ಇಮೇಜ್ ಹುಡುಕಾಟ ನಡೆಸಿ ಅದು ದೆಹಲಿ ಕ್ರೈಮ್ ಪ್ರೆಸ್ ಎಂಬ ವೆಬ್‌ಸೈಟ್‌ ಬರೆದಿರುವ ಲೇಖನವೆಂದು ದಿ ಕ್ವಿಂಟ್ ಪತ್ತೆ ಹಚ್ಚಿದೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಅದೇ ವೈರಲ್ ಕತೆಯಲ್ಲಿ ಅಲ್ಲೂ ಕೂಡಾ ಫೋಟೋಗಳನ್ನು ಬಳಸಲಾಗಿದೆ.

ಈ ಲೇಖನವನ್ನು ಓಂ ಶುಕ್ಲಾ ಎಂಬವರು ಬರೆದಿದ್ದು, ಅವರ ಫೇಸ್‌ಬುಕ್‌ ಬಯೊದಲ್ಲಿ ಅವರನ್ನು ಸ್ಪೆಷಲ್‌ ಇನ್ವೆಸ್ಟಿಗೇಟರ್‌ ಎಂದು ಉಲ್ಲೇಖಿಸಿದ್ದಾರೆ.

ನಂತರ, ಫೇಸ್‌ಬುಕ್‌ನಲ್ಲಿ ’ಮಾನವ ಅಂಗಾಂಗ ಕಳ್ಳಸಾಗಣೆ’ (मानव अंगो की तस्करी) ಎಂಬ ಕೀವರ್ಡ್ ಅನ್ನು ಶುಕ್ಲಾ ಅವರ ಹೆಸರಿನೊಂದಿಗೆ ಹುಡುಕಾಟವನ್ನು ನಡೆಸಿದಾಗ, ಲಕ್ನೋ ಮೂಲದ ಮಹಿಳೆಯಾದ ’ವರ್ಷಾ ವರ್ಮಾ’ ಎಂಬ ಹೆಸರಿನ ಪೋಸ್ಟ್ ಕಂಡುಕೊಳ್ಳಲಾಗಿದೆ.

ಜುಲೈ 21 ರ ದಿನಾಂಕದಂದು ಹಾಕಲಾದ ಅವರ ಪೋಸ್ಟ್,  ವೈರಲ್ ಫೋಟೋಗಳಲ್ಲಿ ಕಾಣಿಸಿಕೊಂಡ ಮಹಿಳೆ ಇವರೆ ಆಗಿದ್ದು. ಮಹಾರಾಷ್ಟ್ರದಲ್ಲಿ ಅಂಗಾಂಗ ದಂಧೆ ನಡೆಯುತ್ತಿದೆ ಎಂದು ತಪ್ಪಾಗಿ ಉಲ್ಲೇಖಿಸಲು ತನ್ನ ಫೋಟೋಗಳನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. ವೈರಲ್ ಫೋಟೊದಲ್ಲಿ ಅವರು, ಅವರ ಸಹೋದ್ಯೋಗಿ ದೀಪಕ್ ಮಹಾಜನ್, ”ಏಕ್ ಕೋಶಿಶ್ ಐಸಿ ಭಿ” ಎನ್‌ಜಿಒ ಮೂಲಕ ವಾರಸುದಾರರ ಶವಗಳನ್ನು ದಫನ್ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ವೈರಲ್‌ ಆಗುತ್ತಿರುವ ಚಿತ್ರವನ್ನು ವರ್ಷಾ ವರ್ಮ ಜುಲೈ 18 ರಂದು ಪೋಸ್ಟ್ ಮಾಡಿದ್ದರು. ಆ ಪೋಸ್ಟ್‌ನಲ್ಲಿ ಲಕ್ನೋದ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಯ ಸಮಯದಲ್ಲಿ ಮೃತಪಟ್ಟ 43 ವರ್ಷದ ವಾರಸುದಾರರಿಲ್ಲದ ಮಹಿಳೆಯ ಶವವನ್ನು ಮರಣೋತ್ತರ ಪರೀಕ್ಷೆಯ ನಂತರ ದಹನ ಮಾಡಿದ್ದಾರೆ ಎಂಬ ಸಂದೇಶ ಬರೆದಿದ್ದರು.

ಲಾಕ್‌ಡೌನ್ ಸಮಯದಲ್ಲಿ ಅವರು ಇಲ್ಲಿಯವರೆಗೆ ಅಂತಹ 17 ವಾರಸುದಾರರಿಲ್ಲದ ಶವಗಳನ್ನು ಅಂತ್ಯಸಂಸ್ಕಾರ ಮಾಡಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ಶುಕ್ಲಾ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕೋರಿ ವರ್ಷಾ ವರ್ಮ ಸೈಬರ್ ಸೆಲ್‌ಗೆ ಎಫ್‌ಐಆರ್ ಕೂಡ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಜುಲೈ 18 ರಂದು ಲಖನೌದಲ್ಲಿ ಈ ಶವಸಂಸ್ಕಾರ ನಡೆದಿದೆ ಎಂದು “ದಿ ಕ್ವಿಂಟ್” ದೃಡಪಡಿಸಿದೆ.

ವರ್ಷಾ ವರ್ಮ ತನ್ನ ವಕೀಲರ ಸಲಹೆಯನ್ನು ಪಡೆದುಕೊಂಡು ಸ್ಥಳೀಯ ಸೈಬರ್ ಸೆಲ್ ಮತ್ತು ಪೊಲೀಸ್ ಠಾಣೆಯಲ್ಲಿ ಶುಕ್ಲಾ ವಿರುದ್ಧ ಎಫ್ಐಆರ್ ದಾಖಲಿಸಿದ್ದರು ಮತ್ತು ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಯೋಜಿಸುತ್ತಿದ್ದಾರೆ ಎಂದು ದಿ ಕ್ವಿಂಟ್‌ಗೆ ಹೇಳಿದ್ದಾರೆ.

ಒಟ್ಟಿನಲ್ಲಿ ವಾರಿಸುದಾರರಿಲ್ಲದ ಶವವನ್ನು ಅಂತ್ಯ ಕ್ರಿಯೆ ಮಾಡುವ ಫೋಟೋಗಳನ್ನು ಮಹಾರಾಷ್ಟ್ರದಲ್ಲಿ ನಡೆಸುತ್ತಿರುವ ಮಾನವ ಅಂಗಾಂಗ ಕಳ್ಳಸಾಗಣೆ ದಂಧೆ ಬಯಲಾಗಿದೆ ಎಂಬ ಸುಳ್ಳು ನಿರೂಪಣೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ ಎಂಬುದು ಸ್ಪಷ್ಟವಾಗಿದೆ.
ಕೃಪೆ: ದಿ ಕ್ವಿಂಟ್


ಓದಿ: ಫ್ಯಾಕ್ಟ್‌ಚೆಕ್: ಮಾಸ್ಕ್ ಧರಿಸದ ಮೇಕೆ ಬಂಧಿಸಿದ ಕಾನ್ಪುರ ಪೊಲೀಸರು?- ತಪ್ಪು ವರದಿ ಮಾಡಿದ ಮಾಧ್ಯಮಗಳು 


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...