Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ಈ ಫೋಟೋ ಅಂಗಾಂಗ ಕಳ್ಳಸಾಗಣೆ ದಂಧೆ ನಡೆಸುವವರದ್ದೇ?

ಫ್ಯಾಕ್ಟ್‌‌ಚೆಕ್‌: ಈ ಫೋಟೋ ಅಂಗಾಂಗ ಕಳ್ಳಸಾಗಣೆ ದಂಧೆ ನಡೆಸುವವರದ್ದೇ?

ವೈರಲ್‌ ಆಗುತ್ತಿರುವ ಫೋಟೋಗಳಲ್ಲಿ ಕೊರೊನಾ ಸಾಂಕ್ರಮಿಕದ ನಡುವೆ ಮಹಾರಾಷ್ಟ್ರದಲ್ಲಿ ಅಂಗಾಂಗ ಕಳ್ಳಸಾಗಣೆ ದಂಧೆ ನಡೆಯುತ್ತಿದೆ ಎಂದು ಉಲ್ಲೇಖಿಸಲಾಗಿದೆ.

- Advertisement -
- Advertisement -

ವಿದ್ಯುತ್ ಚಿತಾಗಾರದಲ್ಲಿ ನಡೆಯುತ್ತಿರುವ ಶವ ಸಂಸ್ಕಾರದಂತೆ ತೋರುವ ಹಲವಾರು ಫೋಟೋಗಳನ್ನು ಕೊರೊನಾ ಸಾಂಕ್ರಮಿಕದ ನಡುವೆ ಮಹಾರಾಷ್ಟ್ರದಲ್ಲಿ ಅಂಗಾಂಗ ಕಳ್ಳಸಾಗಣೆ ದಂಧೆ ನಡೆಯುತ್ತಿದೆ ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಮಹಿಳೆ ಹಾಗೂ ಇಬ್ಬರು ಪುರುಷರು ಸೇರಿಕೊಂಡು ಈ ಶವ ಸಂಸ್ಕಾರ ನಡೆಸುತ್ತಿರುವ ಫೋಟೋಗಳಲ್ಲಿ ದೇಹವನ್ನು ಹಾಳೆಯಲ್ಲಿ ಸುತ್ತಿರುವುದನ್ನು ತೋರಿಸುತ್ತದೆ. ಈ ಚಿತ್ರವನ್ನು ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್‌ ಸೋಗಿನಲ್ಲಿ ಅಂಗಾಂಗ ದಂಧೆ ನಡೆಯುತ್ತಿದೆ ಎಂಬ ನಿರೂಪಣೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ.

ವೈರಲ್ ಸಂದೇಶವು ವಿಸ್ತಾರವಾದ ಕತೆಯನ್ನು ಹೇಳುತ್ತದೆ. ಅದರ ಪ್ರಕಾರ, “ಭಯಂದರ್‌ನ ಗೋರೈ ಪ್ರದೇಶದಲ್ಲಿ ಯಾವುದೇ ಕೊರೊನಾ ವೈರಸ್ ಪ್ರಕರಣಗಳು ಕಂಡುಬಂದಿಲ್ಲ. ಆದರೆ ಕಳೆದ ಕೆಲವು ದಿನಗಳಲ್ಲಿ ಸಾಧಾರಣವಾದ ಕೆಮ್ಮು ಮತ್ತು ಶೀತದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋಗಿದ್ದರು. ಅಲ್ಲಿ ಅವರನ್ನು ಬಲವಂತವಾಗಿ ಆಸ್ಪತ್ರೆಯಲ್ಲಿ ದಾಖಲಿಸಿ ಅವರು ಕೊರೊನಾ ಪಾಸಿಟಿವ್ ಆಗಿದ್ದಾರೆ ಎಂದು ಹೇಳಿದ್ದಾರೆ”

ನಂತರ ಆ ವ್ಯಕ್ತಿ ಮೃತಪಟ್ಟಿದ್ದು, ಕುಟುಂಬದ ಸದಸ್ಯರು ಅವರ ಅಂತ್ಯ ಕ್ರಿಯೆ ಮಾಡಲು ಹೊರಟಿದ್ದರು. ಈ ಸಮಯದಲ್ಲಿ ಶವವನ್ನು ನೋಡಲು ಒತ್ತಾಯಿಸಿದ್ದರು ಆಗ ಶವದ ಎಲ್ಲಾ ಅಂಗಾಂಗಳು ಕಾಣೆಯಾಗಿದ್ದವು ಎಂದು ಆ ಪೋಸ್ಟ್ ಹೇಳುತ್ತದೆ.

ವೈದ್ಯರನ್ನು ದೇವರ ಸ್ವರೂಪವಾಗಿ ನೋಡುತ್ತಿರುವಾಗ, ವೈದ್ಯರು ಇಂತಹ ಘೋರ ಕೃತ್ಯಗಳನ್ನು ಮಾಡಿದ್ದಾರೆ ಎಂದು ವೈರಲ್‌ ಪೋಸ್ಟ್‌ ಆರೋಪಿಸುತ್ತದೆ. ಇದಕ್ಕಿಂತಲೂ ಮೊದಲು ಇಂತಹ ಎಷ್ಟು ಘಟನೆಗಳು ನಡೆದಿವೆಯೊ ಎಂದು ಆಶ್ಚರ್ಯ ವ್ಯಕ್ತಪಡಿಸಿ ಇದನ್ನು ಸಿಬಿಐ ತನಿಖೆ ನಡೆಸಬೇಕು ಎಂದು ಅದು ಒತ್ತಾಯಿಸಿದೆ.

ಫೇಸ್‌ಬುಕ್ ಹಾಗೂ ಟ್ವಿಟರ್‌ನಲ್ಲಿ ಇದೇ ರೀತಿಯ ಸಂದೇಶದೊಂದಿಗೆ ಅನೇಕ ಜನರು ಈ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಅಂತಹ ಹೆಚ್ಚಿನ ಪೋಸ್ಟ್‌ಗಳನ್ನು ಇಲ್ಲಿ, ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಫ್ಯಾಕ್ಟ್‌ಚೆಕ್‌

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಈ ಫೋಟೋಗಳನ್ನು ರಿವರ್ಸ್ ಇಮೇಜ್ ಹುಡುಕಾಟ ನಡೆಸಿ ಅದು ದೆಹಲಿ ಕ್ರೈಮ್ ಪ್ರೆಸ್ ಎಂಬ ವೆಬ್‌ಸೈಟ್‌ ಬರೆದಿರುವ ಲೇಖನವೆಂದು ದಿ ಕ್ವಿಂಟ್ ಪತ್ತೆ ಹಚ್ಚಿದೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಅದೇ ವೈರಲ್ ಕತೆಯಲ್ಲಿ ಅಲ್ಲೂ ಕೂಡಾ ಫೋಟೋಗಳನ್ನು ಬಳಸಲಾಗಿದೆ.

ಈ ಲೇಖನವನ್ನು ಓಂ ಶುಕ್ಲಾ ಎಂಬವರು ಬರೆದಿದ್ದು, ಅವರ ಫೇಸ್‌ಬುಕ್‌ ಬಯೊದಲ್ಲಿ ಅವರನ್ನು ಸ್ಪೆಷಲ್‌ ಇನ್ವೆಸ್ಟಿಗೇಟರ್‌ ಎಂದು ಉಲ್ಲೇಖಿಸಿದ್ದಾರೆ.

ನಂತರ, ಫೇಸ್‌ಬುಕ್‌ನಲ್ಲಿ ’ಮಾನವ ಅಂಗಾಂಗ ಕಳ್ಳಸಾಗಣೆ’ (मानव अंगो की तस्करी) ಎಂಬ ಕೀವರ್ಡ್ ಅನ್ನು ಶುಕ್ಲಾ ಅವರ ಹೆಸರಿನೊಂದಿಗೆ ಹುಡುಕಾಟವನ್ನು ನಡೆಸಿದಾಗ, ಲಕ್ನೋ ಮೂಲದ ಮಹಿಳೆಯಾದ ’ವರ್ಷಾ ವರ್ಮಾ’ ಎಂಬ ಹೆಸರಿನ ಪೋಸ್ಟ್ ಕಂಡುಕೊಳ್ಳಲಾಗಿದೆ.

ಜುಲೈ 21 ರ ದಿನಾಂಕದಂದು ಹಾಕಲಾದ ಅವರ ಪೋಸ್ಟ್,  ವೈರಲ್ ಫೋಟೋಗಳಲ್ಲಿ ಕಾಣಿಸಿಕೊಂಡ ಮಹಿಳೆ ಇವರೆ ಆಗಿದ್ದು. ಮಹಾರಾಷ್ಟ್ರದಲ್ಲಿ ಅಂಗಾಂಗ ದಂಧೆ ನಡೆಯುತ್ತಿದೆ ಎಂದು ತಪ್ಪಾಗಿ ಉಲ್ಲೇಖಿಸಲು ತನ್ನ ಫೋಟೋಗಳನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. ವೈರಲ್ ಫೋಟೊದಲ್ಲಿ ಅವರು, ಅವರ ಸಹೋದ್ಯೋಗಿ ದೀಪಕ್ ಮಹಾಜನ್, ”ಏಕ್ ಕೋಶಿಶ್ ಐಸಿ ಭಿ” ಎನ್‌ಜಿಒ ಮೂಲಕ ವಾರಸುದಾರರ ಶವಗಳನ್ನು ದಫನ್ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ವೈರಲ್‌ ಆಗುತ್ತಿರುವ ಚಿತ್ರವನ್ನು ವರ್ಷಾ ವರ್ಮ ಜುಲೈ 18 ರಂದು ಪೋಸ್ಟ್ ಮಾಡಿದ್ದರು. ಆ ಪೋಸ್ಟ್‌ನಲ್ಲಿ ಲಕ್ನೋದ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಯ ಸಮಯದಲ್ಲಿ ಮೃತಪಟ್ಟ 43 ವರ್ಷದ ವಾರಸುದಾರರಿಲ್ಲದ ಮಹಿಳೆಯ ಶವವನ್ನು ಮರಣೋತ್ತರ ಪರೀಕ್ಷೆಯ ನಂತರ ದಹನ ಮಾಡಿದ್ದಾರೆ ಎಂಬ ಸಂದೇಶ ಬರೆದಿದ್ದರು.

ಲಾಕ್‌ಡೌನ್ ಸಮಯದಲ್ಲಿ ಅವರು ಇಲ್ಲಿಯವರೆಗೆ ಅಂತಹ 17 ವಾರಸುದಾರರಿಲ್ಲದ ಶವಗಳನ್ನು ಅಂತ್ಯಸಂಸ್ಕಾರ ಮಾಡಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ಶುಕ್ಲಾ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕೋರಿ ವರ್ಷಾ ವರ್ಮ ಸೈಬರ್ ಸೆಲ್‌ಗೆ ಎಫ್‌ಐಆರ್ ಕೂಡ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಜುಲೈ 18 ರಂದು ಲಖನೌದಲ್ಲಿ ಈ ಶವಸಂಸ್ಕಾರ ನಡೆದಿದೆ ಎಂದು “ದಿ ಕ್ವಿಂಟ್” ದೃಡಪಡಿಸಿದೆ.

ವರ್ಷಾ ವರ್ಮ ತನ್ನ ವಕೀಲರ ಸಲಹೆಯನ್ನು ಪಡೆದುಕೊಂಡು ಸ್ಥಳೀಯ ಸೈಬರ್ ಸೆಲ್ ಮತ್ತು ಪೊಲೀಸ್ ಠಾಣೆಯಲ್ಲಿ ಶುಕ್ಲಾ ವಿರುದ್ಧ ಎಫ್ಐಆರ್ ದಾಖಲಿಸಿದ್ದರು ಮತ್ತು ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಯೋಜಿಸುತ್ತಿದ್ದಾರೆ ಎಂದು ದಿ ಕ್ವಿಂಟ್‌ಗೆ ಹೇಳಿದ್ದಾರೆ.

ಒಟ್ಟಿನಲ್ಲಿ ವಾರಿಸುದಾರರಿಲ್ಲದ ಶವವನ್ನು ಅಂತ್ಯ ಕ್ರಿಯೆ ಮಾಡುವ ಫೋಟೋಗಳನ್ನು ಮಹಾರಾಷ್ಟ್ರದಲ್ಲಿ ನಡೆಸುತ್ತಿರುವ ಮಾನವ ಅಂಗಾಂಗ ಕಳ್ಳಸಾಗಣೆ ದಂಧೆ ಬಯಲಾಗಿದೆ ಎಂಬ ಸುಳ್ಳು ನಿರೂಪಣೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ ಎಂಬುದು ಸ್ಪಷ್ಟವಾಗಿದೆ.
ಕೃಪೆ: ದಿ ಕ್ವಿಂಟ್


ಓದಿ: ಫ್ಯಾಕ್ಟ್‌ಚೆಕ್: ಮಾಸ್ಕ್ ಧರಿಸದ ಮೇಕೆ ಬಂಧಿಸಿದ ಕಾನ್ಪುರ ಪೊಲೀಸರು?- ತಪ್ಪು ವರದಿ ಮಾಡಿದ ಮಾಧ್ಯಮಗಳು 


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...