Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಮಾಸ್ಕ್ ಧರಿಸದ ಮೇಕೆ ಬಂಧಿಸಿದ ಕಾನ್ಪುರ ಪೊಲೀಸರು?- ತಪ್ಪು ವರದಿ ಮಾಡಿದ ಮಾಧ್ಯಮಗಳು

ಫ್ಯಾಕ್ಟ್‌ಚೆಕ್: ಮಾಸ್ಕ್ ಧರಿಸದ ಮೇಕೆ ಬಂಧಿಸಿದ ಕಾನ್ಪುರ ಪೊಲೀಸರು?- ತಪ್ಪು ವರದಿ ಮಾಡಿದ ಮಾಧ್ಯಮಗಳು

- Advertisement -
- Advertisement -

ಮಾಸ್ಕ್ ಧರಿಸದ ಮೇಕೆ ಒಂದನ್ನು ಕಾನ್ಪುರ ಪೊಲೀಸರು ಬಂಧಿಸಿದ್ದಾರೆ ಎಂಬ ವಿಲಕ್ಷಣ ಸುದ್ದಿ ಜುಲೈ 27 ರಂದು ಹಲವು ಮಾಧ್ಯಮಗಳಲ್ಲಿ ಪ್ರಕಟವಾಯಿತು. ಕನ್ನಡದ ಸುವರ್ಣ ಟಿವಿ ಸೇರಿದಂತೆ, ನ್ಯಾಷನಲ್ ಹೆರಾಲ್ಡ್, ಒರಿಸ್ಸಾ ಪೋಸ್ಟ್ ಮತ್ತು ನ್ಯೂಸ್ 18 ಇಂಗ್ಲಿಷ್‌ ಸೇರಿದಂತೆ ಹಲವು ಪತ್ರಿಕೆಗಳು ಇದೇ ಸುದ್ದಿಯನ್ನು ವರದಿ ಮಾಡಿವೆ.

ಸುದ್ದಿ ಸಂಸ್ಥೆ ಐಎಎನ್‌ಎಸ್ ಪ್ರಕಾರ “ಈ ಘಟನೆ ವಾರಾಂತ್ಯದಲ್ಲಿ ನಡೆಯಿತು ಮತ್ತು ಬೆಕೊಂಗಂಜ್ ಪೊಲೀಸರು ಜೀಪ್‌ನಲ್ಲಿ ಮೇಕೆ ಎತ್ತಿಕೊಂಡು ಪೊಲೀಸ್ ಠಾಣೆಗೆ ಕರೆದೊಯ್ದರು ಎಂದು ಪೊಲೀಸರು ತಮ್ಮ ಜೀಪಿನಲ್ಲಿ ಮೇಕೆ ತುಂಬುವ ವಿಡಿಯೋವನ್ನು ಹಲವರು ಪ್ರಸಾರ ಮಾಡಿದ್ದಾರೆ.

ಟೈಮ್ಸ್ ನೌ, ರಿಪಬ್ಲಿಕ್ ಮತ್ತು ಇಂಡಿಯಾ ಟೈಮ್ಸ್ ಇದೇ ರೀತಿಯ ವರದಿಗಳನ್ನು ಮಾಡಿವೆ. ಕೆಲ ಮಾಧ್ಯಮಗಳು ವ್ಯಕ್ತಿಯೊಬ್ಬ ಮಾಸ್ಕ್ ಧರಿಸದೆ ಮೇಕೆಯೊಂದನ್ನು ಹಿಡಿದು ಹೋಗುತ್ತಿದ್ದ, ಪೊಲೀಸರು ಬಂದ ತಕ್ಷಣ ಮೇಕೆ ಬಿಟ್ಟು ಓಡಿ ಹೋಗಿದ್ದಾನೆ. ಪೊಲೀಸರು ಮೇಕೆಯನ್ನು ಬಂಧಿಸಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

ತಪ್ಪು ವರದಿ

ಮೇಲ್ನೋಟಕ್ಕೆ ಇದು ಹಾಸ್ಯದ ಸಂಗತಿಯಾಗಿ ಗೋಚರಿಸುತ್ತದೆ. ಸಾಮಾನ್ಯ ಜ್ಞಾನವಿರುವ ಯಾರೂ ಕೂಡ ಇದನ್ನು ನಂಬಲು ಸಾಧ್ಯವಿಲ್ಲ. ಆದರೆ ಹಲವು ಮಾಧ್ಯಮಗಳು ಇದನ್ನು ‘ಸುದ್ದಿ’ಯನ್ನಾಗಿ ಪ್ರಕಟ ಮಾಡಿವೆ. ಜನರಲ್ಲಿ ಗೊಂದಲ ಹುಟ್ಟಿಸುವುದು ಆ ಮೂಲಕ ಅವರು ಈ ಸುದ್ದಿಯನ್ನು ಓದುವಂತೆ ಮಾಡುವುದು ಅವರ ಉದ್ದೇಶವಾಗಿದೆ. ಪೊಲೀಸ್ ಜೀಪ್‌ಗೆ ಮೇಕೆ ತುಂಬುವ ವಿಡಿಯೋವನ್ನು ಮಾಧ್ಯಮಗಳು ಪದೇ ಪದೇ ತೋರಿಸಿವೆ. ಇನ್ನು ಕೆಲವರು ತನ್ನ ಮೇಕೆಯನ್ನು ಪೊಲೀಸರು ಬಲವಂತವಾಗಿ ತೆಗೆದುಕೊಂಡು ಹೋಗಿದ್ದಾರೆ ಎಂದು ವ್ಯಕ್ತಿಯೊಬ್ಬರು ಆರೋಪಿಸಿದ್ದಾರೆ ಎಂದು ಟ್ವಿಟ್ಟರ್‌ನಲ್ಲಿ ದೂರಿದ್ದಾರೆ. ಒಟ್ಟಿನಲ್ಲಿ ಗಾಸಿಪ್ ಹುಟ್ಟುಹಾಕುವಲ್ಲಿ ಮಾಧ್ಯಮಗಳು ಯಶಸ್ವಿಯಾಗಿವೆ. ಆದರೆ ಈ ಎಲ್ಲಾ ವರದಿಗಳು ತಪ್ಪಾಗಿವೆ.

ವಾಸ್ತವವೇನು?

ಲಾಕ್‌ಡೌನ್ ಸಮಯದಲ್ಲಿ ದಾದಾ ಮಿಯಾನ್ ಎಂಬ ಪ್ರದೇಶದಲ್ಲಿ ಮಾಲೀಕರಿಲ್ಲದ ಮೇಕೆಯೊಂದು ತಿರುಗಾಡುತ್ತಿದೆ. ಈ ಕುರಿತು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ ಕಾರಣ ಬೆಕೊಂಗಂಜ್ ಪೊಲೀಸರು ಅದನ್ನು ಠಾಣೆಗೆ ಕರೆತಂದಿದ್ದಾರೆ. ಸ್ವಲ್ಪ ಸಮಯದ ಬಳಿಕ ಅದರ ಮಾಲೀಕ ಮೊಹಮ್ಮದ್ ಅಲಿಯ ಮಗ ಖಾನಿಕುಜ್ಮಾ ಅವರಿಗೆ ಹಸ್ತಾಂತರಿಸಲಾಗಿದೆ ಎಂದು ಕಾನ್ಪುರ್ ಪೊಲೀಸರು ಟ್ವಿಟ್ಟರ್‌ನಲ್ಲಿ ತಿಳಿಸಿದ್ದಾರೆ.

ಆಲ್ಟ್ ನ್ಯೂಸ್ ಈ ಕುರಿತು ಫ್ಯಾಕ್ಟ್‌ಚೆಕ್ ನಡೆಸಿದ್ದು, ಬೆಕೊಂಗಂಜ್ ಪೊಲೀಸರನ್ನು ಕೇಳಿದಾಗ “ಮಾಲೀಕರಿಲ್ಲದೆ ತಿರುಗಾಡುತ್ತಿದ್ದ ಮೇಕೆಯನ್ನು ಕರೆತಂದಿದ್ದವು. ನಂತರ ಅದರ ಮಾಲೀಕರಿಗೆ ಹಸ್ತಾಂತರಿಸಲಾಗಿದೆ. ಮಾಸ್ಕ್ ಧರಿಸದ ಕಾರಣ ನಾವು ಮೇಕೆಯನ್ನು ಬಂಧಿಸಿದ್ದೇವೆ ಎಂಬು ಸುದ್ದಿ ಸಂಪೂರ್ಣ ಸುಳ್ಳು” ಎಂದಿದ್ದಾರೆ.

ಮೇಕೆ ಮಾಲೀಕರಾದ ಮೊಹಮ್ಮದ್ ಅಲಿ, ಪತ್ರಿಕೆಗಳಲ್ಲಿನ ಸುದ್ದಿ ವರದಿಗಳನ್ನು ನೋಡಿ ನಕ್ಕಿದ್ದಾರೆ. “ಪೊಲೀಸರು ನಮಗೆ ಸಹಾಯ ಮಾಡಿದರು. ಅವರು ಅದನ್ನು ಪೊಲೀಸ್ ಠಾಣೆಗೆ ತಂದು ನಮಗೆ ತಿಳಿಸದಿದ್ದರೆ ನಮ್ಮ ಮೇಕೆ ಕಳೆದುಹೋಗುತ್ತದೆ” ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ಕೊರೊನಾ Fact check : ಜನ ಮನೆಯಿಂದ ಹೊರಬರದಿರಲು ಬೀದಿಗಳಿಗೆ 800 ಸಿಂಹಗಳನ್ನು ಬಿಟ್ಟ ರಷ್ಯಾ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...