Homeಕರೋನಾ ತಲ್ಲಣಕೆಲಸಕ್ಕೆ ಸೇರಿ 3 ತಿಂಗಳಾದರೂ ದಾದಿಯರಿಗೆ ಸಂಬಳ ಕೊಡದ ಬಿಎಂಸಿ!

ಕೆಲಸಕ್ಕೆ ಸೇರಿ 3 ತಿಂಗಳಾದರೂ ದಾದಿಯರಿಗೆ ಸಂಬಳ ಕೊಡದ ಬಿಎಂಸಿ!

ಏಪ್ರಿಲ್-ಮೇ ತಿಂಗಳಲ್ಲಿ ಬೃಹಮ್‌ಮುಂಬೈ ಮುನ್ಸಿಪಲ್‌ ಕಾರ್ಪೊರೇಶನ್ ಈ ದಾದಿಯರನ್ನು ವಿಶೇಷ ನೇಮಕಾತಿ ಅಡಿಯಲ್ಲಿ ನೇಮಕ ಮಾಡಿತ್ತು.

- Advertisement -
- Advertisement -

ಮುಂಬೈ ಮಹಾನಗರದಲ್ಲಿ ಕೊರೊನಾ ವೈರಸ್ ವಿರುದ್ಧದ ಹೋರಾಟವನ್ನು ಬಲಪಡಿಸಲು ಹೊಸದಾಗಿ ನೇಮಕಗೊಂಡ 209 ದಾದಿಯರಿಗೆ ಮುಂಬೈ ನಾಗರಿಕ ಸಂಸ್ಥೆಯಾದ ಬೃಹನ್‌‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಸಂಬಳ ಹಾಗೂ ವಿಶೇಷ ದೈನಂದಿನ ಭತ್ಯೆಯನ್ನು ನೀಡಿಲ್ಲ ಎಂದು ಕಾರ್ಮಿಕ ಸಂಘಟನೆ ಆರೋಪಿಸಿದೆ.

ನಗರದಲ್ಲಿ ಕೊರೊನಾ ವೈರಸ್ ಹರಡಲು ಪ್ರಾರಂಭವಾದ ಏಪ್ರಿಲ್-ಮೇ ತಿಂಗಳಲ್ಲಿ ಬಿಎಂಸಿ ಈ ದಾದಿಯರನ್ನು ವಿಶೇಷ ನೇಮಕಾತಿ ಅಡಿಯಲ್ಲಿ ನೇಮಕ ಮಾಡಿದೆ ಎಂದು ಮುನ್ಸಿಪಲ್ ಮಜ್ದೂರ್ ಯೂನಿಯನ್ (ಎಂಎಂಯು) ತಿಳಿಸಿದೆ.

ಆದಾಗ್ಯೂ, ಕಳೆದ ಮೂರು ತಿಂಗಳುಗಳಿಂದ ಬಿಎಂಸಿ ಅವರಿಗೆ ಸಂಬಳ ಹಾಗೂ ದೈನಂದಿನ 300 ರೂ. ವಿಶೇಷ ಭತ್ಯೆ ನೀಡಿಲ್ಲ ಎಂದು ಎಂಎಂಯು ಹೇಳಿದೆ.

ರೋಸ್ಟರ್ (ನೇಮಕಾತಿ) ಪರಿಶೀಲನೆ ನಡೆಯುತ್ತಿರುವ ಪ್ರಕ್ರಿಯೆಯಿಂದಾಗಿ ವೇತನ ವಿತರಣೆ ವಿಳಂಬವಾಗಿದೆ. ಆದರೆ ದಾದಿಯರಿಗೆ ಶೀಘ್ರದಲ್ಲೇ ಅವರ ವೇತನವನ್ನು ನೀಡಲಾಗುವುದು ಎಂದು ಬಿಎಂಸಿ ಆರೋಗ್ಯ ಇಲಾಖೆ ಅಧಿಕಾರಿ ಭರವಸೆ ನೀಡಿದ್ದಾರೆ.

“ನಾನು ಮೇ ಮೊದಲ ವಾರದಲ್ಲಿ ಬಿಎಂಸಿಯ ಕರ್ತವ್ಯಕ್ಕೆ ಸೇರಿಕೊಂಡೆ. ಅಂದಿನಿಂದ ನಾನು ಕೊರೊನಾ ಸೌಲಭ್ಯದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಲ್ಲದೆ ಬಿಎಂಸಿ ಆಹಾರ ಮತ್ತು ವಸತಿ ವ್ಯವಸ್ಥೆ ಮಾಡಿದ ಹೋಟೆಲ್‌ನಲ್ಲಿ ಉಳಿದುಕೊಂಡಿದ್ದೇನೆ, ಆದರೆ ನನಗೆ ಸಂಬಳ ಅಥವಾ 300 ರೂ. ದಿನದ ವಿಶೇಷ ಭತ್ಯೆ ಇನ್ನು ಸಿಕ್ಕಿಲ್ಲ” ಎಂದು ದಾದಿಯೊಬ್ಬರು ಹೇಳಿದ್ದಾಗಿ ನ್ಯೂಸ್ ಕ್ಲಿಕ್ ವರದಿ ಮಾಡಿದೆ.

ಅವರು ಬಿಎಂಸಿಗೆ ಸೇರುವ ಮೊದಲು ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದ್ದು, ಮುನ್ಸಿಪಾಲಿಟಿಯು ಶಾಶ್ವತ ಆಧಾರದ ಮೇಲೆ ದಾದಿಯರನ್ನು ನೇಮಿಸಲು ಜಾಹೀರಾತುಗಳನ್ನು ನೀಡಿದ್ದರಿಂದ ಉದ್ಯೋಗ ಬದಲಿಸಿದ್ದಾರೆ ಎನ್ನಲಾಗಿದೆ.

ಆದರೆ ಪ್ರಸ್ತುತ ಎದುರಿಸುತ್ತಿರುವ ಆರ್ಥಿಕ ತೊಂದರೆಯಿಂದಾಗಿ ಈ ನಿರ್ಧಾರಕ್ಕೆ ಮಾಡಿದ್ದಕ್ಕೆ ವಿಷಾದ ವ್ಯಕ್ತಪಡಿಸುತ್ತಿದ್ದಾರೆ. “ಹಣಕಾಸಿನ ಹೊಣೆಗಾರಿಕೆಗಳನ್ನು ಹೊಂದಿರುವಾಗ, ಮೂರು ತಿಂಗಳವರೆಗೆ ಸಂಬಳವಿಲ್ಲದೆ ಬದುಕುವುದು ಕಷ್ಟ” ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಪುರಸಭೆ ಆಯುಕ್ತ ಇಕ್ಬಾಲ್ ಸಿಂಗ್ ಚಾಹಲ್ ಅವರಿಗೆ ಜುಲೈ 25 ರಂದು ಬರೆದ ಪತ್ರದಲ್ಲಿ, ಹೊಸದಾಗಿ ನೇಮಕಗೊಂಡಿರುವ ಈ 209 ದಾದಿಯರಿಗೆ ತಕ್ಷಣ ಸಂಬಳ ಮತ್ತು ಭತ್ಯೆಯನ್ನು ನೀಡಬೇಕೆಂದು ಎಂಎಂಯು ಒತ್ತಾಯಿಸಿದೆ.

ಅವರು ಕರ್ತವ್ಯಕ್ಕೆ ಸೇರಿದ ದಿನಾಂಕದಿಂದ ಬಿಎಂಸಿ ನಡೆಸುವ ಆಸ್ಪತ್ರೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಳನ್ನು ಪರಿಗಣಿಸುವಂತೆ ಯೂನಿಯನ್ ಪಾಲಿಕೆಯನ್ನು ಕೇಳಿದೆ.

ಈ ಎಲ್ಲ ದಾದಿಯರಿಗೆ ಬಿಎಂಸಿಯ ನರ್ಸಿಂಗ್ ಕಾಲೇಜಿನಲ್ಲಿ ತರಬೇತಿ ನೀಡಲಾಗಿದೆ. ಏಪ್ರಿಲ್-ಮೇ ತಿಂಗಳಲ್ಲಿ ಕೊರೊನಾ ವೈರಸ್ ಪ್ರಕರಣಗಳು ತೀವ್ರವಾಗಿ ಏರಿಕೆಯಾಗಲು ಪ್ರಾರಂಭವಾದಾಗ ಅವರನ್ನು ತಕ್ಷಣ ಸೇರಲು ತಿಳಿಸಲಾಗಿದೆ ಎಂದು ಎಂಎಂಯು ಕಾರ್ಯದರ್ಶಿ ಪ್ರದೀಪ್ ನರ್ಕರ್ ಹೇಳಿದ್ದಾರೆ.

“ಹೆಚ್ಚಿನ ಎಲ್ಲಾ ದಾದಿಯರು ಖಾಸಗಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುತ್ತಿದ್ದರು. ಅವರು ತಮ್ಮ ಸೇವೆಗಳನ್ನು ತುರ್ತಾಗಿ ಅಗತ್ಯವಿರುವ ಬಿಎಂಸಿಗೆ ಸೇರಲು ತಮ್ಮ ಉದ್ಯೋಗವನ್ನು ತೊರೆದರು. ಆದರೆ ಈಗ ಅವರು ಸಂಬಳ ಮತ್ತು ಭತ್ಯೆಗಳಿಂದ ವಂಚಿತರಾಗಿದ್ದಾರೆ, ಇದರಿಂದಾಗಿ ಅವರಿಗೆ ಬದುಕುಳಿಯುವುದು ಕಷ್ಟಕರವಾಗಿದೆ” ಎಂದು ಅವರು ಹೇಳಿದರು.


ಓದಿ: ಕಾರ್ಮಿಕ ಕಾನೂನು ತಿದ್ದುಪಡಿಗೆ ವಿರೋಧ: ಸುಗ್ರೀವಾಜ್ಞೆ ಪ್ರತಿ ಸುಟ್ಟು ಪ್ರತಿಭಟನೆಗೆ ನಿರ್ಧಾರ.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...