Homeಮುಖಪುಟಇಂದು ’ಜಾಗತಿಕ ಹುಲಿ ದಿನ’ | ಭಾರತದಲ್ಲಿವೆ ಅತಿ ಹೆಚ್ಚು ಹುಲಿಗಳು ...!

ಇಂದು ’ಜಾಗತಿಕ ಹುಲಿ ದಿನ’ | ಭಾರತದಲ್ಲಿವೆ ಅತಿ ಹೆಚ್ಚು ಹುಲಿಗಳು …!

- Advertisement -
- Advertisement -

ಜುಲೈ 29 ನ್ನು ’ಜಾಗತಿಕ ಹುಲಿ ದಿನ’ ಎಂದು ಆಚರಿಸಲಾಗುತ್ತಿದೆ. ಇದು ಹುಲಿ ಸಂರಕ್ಷಣೆಗಾಗಿ ಜಾಗೃತಿ ಮೂಡಿಸುವ ವಾರ್ಷಿಕ ಆಚರಣೆಯಾಗಿದೆ. ಹುಲಿಗಳನ್ನು ಹೊಂದಿರುವ 13 ರಾಷ್ಟ್ರಗಳು 2010 ರಂದು ಸೇಂಟ್ ಪೀಟರ್‌ ಬರ್ಗ್‌ನಲ್ಲಿ ಶೃಂಗಸಭೆ ನಡೆಸಿ 2022 ರ ಹೊತ್ತಿಗೆ ಹುಲಿಗಳ ಸಂಖ್ಯೆಯನ್ನು ದ್ವಿಗುಣಗೊಳಿಸುವ ಐತಿಹಾಸಿಕ ಬದ್ದತೆಯನ್ನು ಘೋಷಿಸಿದ್ದವು. ಅಂದಿನಿಂದ ಪ್ರತಿ ವರ್ಷ ಜುಲೈ 29 ಅನ್ನು ಜಾಗತಿಕ ಹುಲಿ ದಿನವನ್ನಾಗಿ ಆಚರಿಸಲಾಗುತ್ತದೆ.

’ಜಾಗತಿಕ ಹುಲಿ ದಿನ’ವು ಹುಲಿಗಳ ನೈಸರ್ಗಿಕ ಆವಾಸಸ್ಥಾನಗಳನ್ನು ರಕ್ಷಿಸಲು ಜಾಗತಿಕ ವ್ಯವಸ್ಥೆಯನ್ನು ಉತ್ತೇಜಿಸುವುದು ಮತ್ತು ಹುಲಿ ಸಂರಕ್ಷಣಾ ವಿಷಯಗಳಿಗೆ ಸಾರ್ವಜನಿಕರಲ್ಲಿ ಜಾಗೃತಿ ಮತ್ತು ಬೆಂಬಲವನ್ನು ನೀಡುವ ಗುರಿಯನ್ನು ಹೊಂದಿದೆ.

ಫೋಟೋ: ದಿ ಇಂಡಿಯನ್ ಎಕ್ಸ್‌ಪ್ರೆಸ್

ಈ ಪ್ರಯತ್ನದಿಂದಾಗಿ ಭಾರತ, ರಷ್ಯಾ ಮತ್ತು ನೇಪಾಳ ಕಾಡಿನಲ್ಲಿರುವ ಜಾಗತಿಕ ಹುಲಿಗಳ ಸಂಖ್ಯೆಯು ಕೆಲವು ವರ್ಷಗಳಿಂದ ಗಮನಾರ್ಹವಾಗಿ ಹೆಚ್ಚಳವಾಗಿದೆ. ಕಳೆದ ಒಂದು ಶತಮಾನದಲ್ಲಿ ಜಗತ್ತಿನಲ್ಲಿ 97% ದಷ್ಟು ಹುಲಿಗಳು ನಾಶವಾಗಿವೆ ಎಂದು ಅಧ್ಯಯನಗಳು ಹೇಳುತ್ತದೆ. ಜಾಗತಿಕವಾಗಿ ಹುಲಿಗಳ ಸಂಖ್ಯೆ ಕಳೆದ ನೂರು ವರ್ಷಗಳಲ್ಲೇ ಇದೆ ಮೊದಲ ಬಾರಿಗೆ ಹೆಚ್ಚಳವಾಗಿದೆ. ಪ್ರಸ್ತುತ ವಿಶ್ವದ ಕಾಡಿನಲ್ಲಿ 3890 ಹುಲಿಗಳಿವೆ ಎಂದು WWF (ವರ್ಲ್ಡ್‌ ವೈಡ್‌ಲೈಫ್‌ ಫಂಡ್) ಹೇಳುತ್ತದೆ. ಅದರಲ್ಲೂ 75% ಅಂದರೆ ಹುಲಿಗಳು ಭಾರತದಲ್ಲಿವೆ ಎಂಬುವುದು ವಿಶೇಷವಾಗಿದೆ.

ಅದಲ್ಲದೆ ಡಬ್ಲ್ಯುಡಬ್ಲ್ಯುಎಫ್ ಪ್ರಕಾರ ಅಮೆರಿಕಾ (ಸುಮಾರು 5000 ದಿಂದ 7000) ದಲ್ಲಿ ಸಾಕು ಹುಲಿಗಳು ಇವೆ ಎನ್ನಲಾಗಿದೆ. ಅಲ್ಲಿ ಕಾಡು ಪ್ರಾಣಿಗಳನ್ನು ಸಾಕದಿರುವಂತೆ ಯಾವುದೆ ಕಾನೂನುಗಳಿಲ್ಲ. ಹುಲಿಯನ್ನು ಆನ್‌ಲೈನ್‌ನಲ್ಲಿ ಖರೀದಿಸಬಹುದಾಗಿದೆ. ಐದು ತಿಂಗಳ ಹುಲಿ ಮರಿಗೆ US $ 14,000 ಬೆಲೆಯನ್ನು ನಿಗದಿಪಡಿಸಲಾಗಿದೆ.

ಈ ಕುರಿತು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ್ ಜಾವಡೇಕಾರ್ ಟ್ವೀಟ್‌ ಮಾಡಿ “1973 ರಲ್ಲಿ ಹುಲಿ ಸಂರಕ್ಷಣಾ ಯೋಜನೆ ಆರಂಭಿಸಿದಾಗ ಕೇವಲ 09 ರಷ್ಟಿದ್ದ ಹುಲಿ ಅಭಯಾರಣ್ಯಗಳ ಸಂಖ್ಯೆ ಈಗ 50ಕ್ಕೆ ತಲುಪಿದೆ. ಭಾರತದಲ್ಲಿ 2967 ಹುಲಿಗಳಿವೆ. ಹುಲಿಗಳ ಆಹಾರ ಸರಪಳಿಯ ಉತ್ತುಂಗದಲ್ಲಿದೆ. ಹೆಚ್ಚಿದ ಹುಲಿಗಳಿರುವುದು ದೃಢವಾದ ಜೈವಿಕ-ವೈವಿಧ್ಯತೆಗೆ ಸಾಕ್ಷಿಯಾಗಿದೆ” ಎಂದಿದ್ದಾರೆ.


ಓದಿ: ಪರಿಸರ ಮಾಲಿನ್ಯಕ್ಕೆ ಯಾರನ್ನು ದೂಷಿಸಬೇಕು? ನಾವೇನು ಮಾಡಬೇಕು?


ಹುಲಿ ದಿನಾಚರಣೆಯ ಬಗ್ಗೆ ಮಾತನಾಡಿದ ವನ್ಯಜೀವಿ ತಜ್ಞ ಅನೂಪ್ ಪ್ರಕಾಶ್, “ಹುಲಿಯು ನಮ್ಮ ಜೈವಿಕ ಪರಿಸರದ ಬಹಳ ಮುಖ್ಯವಾದ ಪ್ರಾಣಿಯಾಗಿದೆ. ಒಂದು ಹುಲಿ ಇರಬೇಕೆಂದರೆ 5 ಚದರ ಕಿ.ಮೀ. ನಿಂದ ಹಿಡಿದು 100 ಚ.ಕಿ.ಮೀ. ಜಾಗ ಬೇಕಾಗುತ್ತದೆ. ಅಂದರೆ ಒಂದು ಹುಲಿ ಚೆನ್ನಾಗಿದೆ ಎಂದರೆ ಅಲ್ಲಿ ಪರಿಸರ ಸಮತೋಲನವಿದೆ, ಅದಿರುವ ವಿಸ್ತಾರವಾದ ಪ್ರದೇಶದ ಅರಣ್ಯ ಚೆನ್ನಾಗಿದೆ, ಅದಕ್ಕೆ ಆಹಾರವಾದ ಜಿಂಕೆ ತರದ ಪ್ರಾಣಿಗಳು, ಅದಕ್ಕೆ ವಾಸಿಸಲು ಯೋಗ್ಯವಾದ ಸ್ಥಳ, ನೀರು ಲಭ್ಯವಿದೆ ಹಾಗೂ ಮನುಷ್ಯರ ಚಲನೆ ಇಲ್ಲವೆಂದರ್ಥ. ಹುಲಿಯನ್ನು ಉಳಿಸಿದರೆ ಇತರ ಪ್ರಭೇದದ ಜೀವಿಗಳನ್ನು ಕೂಡಾ ಉಳಿಸಿದಂತೆ” ಎಂದು ಹೇಳುತ್ತಾರೆ.

ಫೋಟೋ ಕೃಪೆ: ದಿ ಗ್ರೇಟ್ ಪಾಜೆಕ್ಟ್

ಭಾರತ ಹುಲಿ ಸಂರಕ್ಷಣೆಯಲ್ಲಿ ಜಾಗತಿಕವಾಗಿ ಗುರುತಿಸಿಕೊಂಡರೂ ಕೂಡಾ ಇಲ್ಲಿ ಎಲ್ಲವೂ ಚೆನ್ನಾಗಿಲ್ಲ ಎಂದು ಅನೂಪ್ ಆತಂಕ ವ್ಯಕ್ತಪಡಿಸುತ್ತಾರೆ. “ಅಭಿವೃದ್ದಿಯ ಹೆಸರಲ್ಲಿ ಅರಣ್ಯ ನಾಶ ಹೆಚ್ಚಿದೆ. ಹುಲಿಗಳಿರುವ ಪ್ರದೇಶಗಳಲ್ಲೇ ಕಲ್ಲಿದ್ದಲು ಗಣಿಗಾರಿಕೆ ನಡೆಯುತ್ತಿದೆ. ನದಿ ತಿರುವು ಎಂದು ಹುಲಿಗಳ ಪ್ರದೇಶಗಳನ್ನು ನಾಶ ಮಾಡಲಾಗುತ್ತದೆ. ಇವೆಲ್ಲವು ನಡೆಯುತ್ತಿರುವ ಸಂಧರ್ಭದಲ್ಲಿ ಸರ್ಕಾರ ಹೆಸರಿಗೆ ಮಾತ್ರ ಹುಲಿ ದಿನವನ್ನಾಗಿ ಆಚರಿಸುವುದನ್ನು ಬಿಟ್ಟು ವಾಸ್ತವವಾಗಿ ಹುಲಿ ಸಂರಕ್ಷಣೆಗೆ ಒತ್ತುಕೊಡಬೇಕು” ಎಂದು  ಆಗ್ರಹಿಸಿದ್ದಾರೆ.

ಬಂಗಾಲಿ ಹುಲಿ, ಕ್ಯಾಸ್ಪಿಯನ್ ಹುಲಿ, ಸೈಬೀರಿಯನ್ ಹುಲಿ, ದಕ್ಷಿಣ ಚೀನಾ ಹುಲಿ, ಇಂಡೋಚೈನಿಸ್ ಹುಲಿ, ಮಲಯನ್ ಹುಲಿ, ಜಾವಾ ಹುಲಿ, ಬಾಲಿ ಹುಲಿ, ಸುಮಾತ್ರ ಹುಲಿ ಹೀಗೆ ಹುಲಿಯನ್ನು ಹಲವಾರು ಪ್ರಭೇದಗಳನ್ನಾಗಿ ಗುರುತಿಸಲಾಗಿದೆ.

ಇವುಗಳಲ್ಲಿ ಬಾಲಿ, ಜಾವಾ ಹಾಗೂ ಕ್ಯಾಸ್ಪಿಯನ್ ಹುಲಿ ಪ್ರಬೇಧಗಳು 1980ರ ಹೊತ್ತಿಗೆ ನಿರ್ನಾಮವಾಗಿವೆ ಎನ್ನಲಾಗಿದೆ.


ಓದಿ:

ಸಾಂಕ್ರಾಮಿಕ ಪಿಡುಗು ಸಮಯದಲ್ಲಿಯೂ ಪರಿಸರ ಕಾಯ್ದೆಗಳನ್ನು ದುರ್ಬಲಗೊಳಿಸುತ್ತಿರುವ ಕೇಂದ್ರ ಸರ್ಕಾರ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...