Homeಮುಖಪುಟಇಂದು ’ಜಾಗತಿಕ ಹುಲಿ ದಿನ’ | ಭಾರತದಲ್ಲಿವೆ ಅತಿ ಹೆಚ್ಚು ಹುಲಿಗಳು ...!

ಇಂದು ’ಜಾಗತಿಕ ಹುಲಿ ದಿನ’ | ಭಾರತದಲ್ಲಿವೆ ಅತಿ ಹೆಚ್ಚು ಹುಲಿಗಳು …!

- Advertisement -
- Advertisement -

ಜುಲೈ 29 ನ್ನು ’ಜಾಗತಿಕ ಹುಲಿ ದಿನ’ ಎಂದು ಆಚರಿಸಲಾಗುತ್ತಿದೆ. ಇದು ಹುಲಿ ಸಂರಕ್ಷಣೆಗಾಗಿ ಜಾಗೃತಿ ಮೂಡಿಸುವ ವಾರ್ಷಿಕ ಆಚರಣೆಯಾಗಿದೆ. ಹುಲಿಗಳನ್ನು ಹೊಂದಿರುವ 13 ರಾಷ್ಟ್ರಗಳು 2010 ರಂದು ಸೇಂಟ್ ಪೀಟರ್‌ ಬರ್ಗ್‌ನಲ್ಲಿ ಶೃಂಗಸಭೆ ನಡೆಸಿ 2022 ರ ಹೊತ್ತಿಗೆ ಹುಲಿಗಳ ಸಂಖ್ಯೆಯನ್ನು ದ್ವಿಗುಣಗೊಳಿಸುವ ಐತಿಹಾಸಿಕ ಬದ್ದತೆಯನ್ನು ಘೋಷಿಸಿದ್ದವು. ಅಂದಿನಿಂದ ಪ್ರತಿ ವರ್ಷ ಜುಲೈ 29 ಅನ್ನು ಜಾಗತಿಕ ಹುಲಿ ದಿನವನ್ನಾಗಿ ಆಚರಿಸಲಾಗುತ್ತದೆ.

’ಜಾಗತಿಕ ಹುಲಿ ದಿನ’ವು ಹುಲಿಗಳ ನೈಸರ್ಗಿಕ ಆವಾಸಸ್ಥಾನಗಳನ್ನು ರಕ್ಷಿಸಲು ಜಾಗತಿಕ ವ್ಯವಸ್ಥೆಯನ್ನು ಉತ್ತೇಜಿಸುವುದು ಮತ್ತು ಹುಲಿ ಸಂರಕ್ಷಣಾ ವಿಷಯಗಳಿಗೆ ಸಾರ್ವಜನಿಕರಲ್ಲಿ ಜಾಗೃತಿ ಮತ್ತು ಬೆಂಬಲವನ್ನು ನೀಡುವ ಗುರಿಯನ್ನು ಹೊಂದಿದೆ.

ಫೋಟೋ: ದಿ ಇಂಡಿಯನ್ ಎಕ್ಸ್‌ಪ್ರೆಸ್

ಈ ಪ್ರಯತ್ನದಿಂದಾಗಿ ಭಾರತ, ರಷ್ಯಾ ಮತ್ತು ನೇಪಾಳ ಕಾಡಿನಲ್ಲಿರುವ ಜಾಗತಿಕ ಹುಲಿಗಳ ಸಂಖ್ಯೆಯು ಕೆಲವು ವರ್ಷಗಳಿಂದ ಗಮನಾರ್ಹವಾಗಿ ಹೆಚ್ಚಳವಾಗಿದೆ. ಕಳೆದ ಒಂದು ಶತಮಾನದಲ್ಲಿ ಜಗತ್ತಿನಲ್ಲಿ 97% ದಷ್ಟು ಹುಲಿಗಳು ನಾಶವಾಗಿವೆ ಎಂದು ಅಧ್ಯಯನಗಳು ಹೇಳುತ್ತದೆ. ಜಾಗತಿಕವಾಗಿ ಹುಲಿಗಳ ಸಂಖ್ಯೆ ಕಳೆದ ನೂರು ವರ್ಷಗಳಲ್ಲೇ ಇದೆ ಮೊದಲ ಬಾರಿಗೆ ಹೆಚ್ಚಳವಾಗಿದೆ. ಪ್ರಸ್ತುತ ವಿಶ್ವದ ಕಾಡಿನಲ್ಲಿ 3890 ಹುಲಿಗಳಿವೆ ಎಂದು WWF (ವರ್ಲ್ಡ್‌ ವೈಡ್‌ಲೈಫ್‌ ಫಂಡ್) ಹೇಳುತ್ತದೆ. ಅದರಲ್ಲೂ 75% ಅಂದರೆ ಹುಲಿಗಳು ಭಾರತದಲ್ಲಿವೆ ಎಂಬುವುದು ವಿಶೇಷವಾಗಿದೆ.

ಅದಲ್ಲದೆ ಡಬ್ಲ್ಯುಡಬ್ಲ್ಯುಎಫ್ ಪ್ರಕಾರ ಅಮೆರಿಕಾ (ಸುಮಾರು 5000 ದಿಂದ 7000) ದಲ್ಲಿ ಸಾಕು ಹುಲಿಗಳು ಇವೆ ಎನ್ನಲಾಗಿದೆ. ಅಲ್ಲಿ ಕಾಡು ಪ್ರಾಣಿಗಳನ್ನು ಸಾಕದಿರುವಂತೆ ಯಾವುದೆ ಕಾನೂನುಗಳಿಲ್ಲ. ಹುಲಿಯನ್ನು ಆನ್‌ಲೈನ್‌ನಲ್ಲಿ ಖರೀದಿಸಬಹುದಾಗಿದೆ. ಐದು ತಿಂಗಳ ಹುಲಿ ಮರಿಗೆ US $ 14,000 ಬೆಲೆಯನ್ನು ನಿಗದಿಪಡಿಸಲಾಗಿದೆ.

ಈ ಕುರಿತು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ್ ಜಾವಡೇಕಾರ್ ಟ್ವೀಟ್‌ ಮಾಡಿ “1973 ರಲ್ಲಿ ಹುಲಿ ಸಂರಕ್ಷಣಾ ಯೋಜನೆ ಆರಂಭಿಸಿದಾಗ ಕೇವಲ 09 ರಷ್ಟಿದ್ದ ಹುಲಿ ಅಭಯಾರಣ್ಯಗಳ ಸಂಖ್ಯೆ ಈಗ 50ಕ್ಕೆ ತಲುಪಿದೆ. ಭಾರತದಲ್ಲಿ 2967 ಹುಲಿಗಳಿವೆ. ಹುಲಿಗಳ ಆಹಾರ ಸರಪಳಿಯ ಉತ್ತುಂಗದಲ್ಲಿದೆ. ಹೆಚ್ಚಿದ ಹುಲಿಗಳಿರುವುದು ದೃಢವಾದ ಜೈವಿಕ-ವೈವಿಧ್ಯತೆಗೆ ಸಾಕ್ಷಿಯಾಗಿದೆ” ಎಂದಿದ್ದಾರೆ.


ಓದಿ: ಪರಿಸರ ಮಾಲಿನ್ಯಕ್ಕೆ ಯಾರನ್ನು ದೂಷಿಸಬೇಕು? ನಾವೇನು ಮಾಡಬೇಕು?


ಹುಲಿ ದಿನಾಚರಣೆಯ ಬಗ್ಗೆ ಮಾತನಾಡಿದ ವನ್ಯಜೀವಿ ತಜ್ಞ ಅನೂಪ್ ಪ್ರಕಾಶ್, “ಹುಲಿಯು ನಮ್ಮ ಜೈವಿಕ ಪರಿಸರದ ಬಹಳ ಮುಖ್ಯವಾದ ಪ್ರಾಣಿಯಾಗಿದೆ. ಒಂದು ಹುಲಿ ಇರಬೇಕೆಂದರೆ 5 ಚದರ ಕಿ.ಮೀ. ನಿಂದ ಹಿಡಿದು 100 ಚ.ಕಿ.ಮೀ. ಜಾಗ ಬೇಕಾಗುತ್ತದೆ. ಅಂದರೆ ಒಂದು ಹುಲಿ ಚೆನ್ನಾಗಿದೆ ಎಂದರೆ ಅಲ್ಲಿ ಪರಿಸರ ಸಮತೋಲನವಿದೆ, ಅದಿರುವ ವಿಸ್ತಾರವಾದ ಪ್ರದೇಶದ ಅರಣ್ಯ ಚೆನ್ನಾಗಿದೆ, ಅದಕ್ಕೆ ಆಹಾರವಾದ ಜಿಂಕೆ ತರದ ಪ್ರಾಣಿಗಳು, ಅದಕ್ಕೆ ವಾಸಿಸಲು ಯೋಗ್ಯವಾದ ಸ್ಥಳ, ನೀರು ಲಭ್ಯವಿದೆ ಹಾಗೂ ಮನುಷ್ಯರ ಚಲನೆ ಇಲ್ಲವೆಂದರ್ಥ. ಹುಲಿಯನ್ನು ಉಳಿಸಿದರೆ ಇತರ ಪ್ರಭೇದದ ಜೀವಿಗಳನ್ನು ಕೂಡಾ ಉಳಿಸಿದಂತೆ” ಎಂದು ಹೇಳುತ್ತಾರೆ.

ಫೋಟೋ ಕೃಪೆ: ದಿ ಗ್ರೇಟ್ ಪಾಜೆಕ್ಟ್

ಭಾರತ ಹುಲಿ ಸಂರಕ್ಷಣೆಯಲ್ಲಿ ಜಾಗತಿಕವಾಗಿ ಗುರುತಿಸಿಕೊಂಡರೂ ಕೂಡಾ ಇಲ್ಲಿ ಎಲ್ಲವೂ ಚೆನ್ನಾಗಿಲ್ಲ ಎಂದು ಅನೂಪ್ ಆತಂಕ ವ್ಯಕ್ತಪಡಿಸುತ್ತಾರೆ. “ಅಭಿವೃದ್ದಿಯ ಹೆಸರಲ್ಲಿ ಅರಣ್ಯ ನಾಶ ಹೆಚ್ಚಿದೆ. ಹುಲಿಗಳಿರುವ ಪ್ರದೇಶಗಳಲ್ಲೇ ಕಲ್ಲಿದ್ದಲು ಗಣಿಗಾರಿಕೆ ನಡೆಯುತ್ತಿದೆ. ನದಿ ತಿರುವು ಎಂದು ಹುಲಿಗಳ ಪ್ರದೇಶಗಳನ್ನು ನಾಶ ಮಾಡಲಾಗುತ್ತದೆ. ಇವೆಲ್ಲವು ನಡೆಯುತ್ತಿರುವ ಸಂಧರ್ಭದಲ್ಲಿ ಸರ್ಕಾರ ಹೆಸರಿಗೆ ಮಾತ್ರ ಹುಲಿ ದಿನವನ್ನಾಗಿ ಆಚರಿಸುವುದನ್ನು ಬಿಟ್ಟು ವಾಸ್ತವವಾಗಿ ಹುಲಿ ಸಂರಕ್ಷಣೆಗೆ ಒತ್ತುಕೊಡಬೇಕು” ಎಂದು  ಆಗ್ರಹಿಸಿದ್ದಾರೆ.

ಬಂಗಾಲಿ ಹುಲಿ, ಕ್ಯಾಸ್ಪಿಯನ್ ಹುಲಿ, ಸೈಬೀರಿಯನ್ ಹುಲಿ, ದಕ್ಷಿಣ ಚೀನಾ ಹುಲಿ, ಇಂಡೋಚೈನಿಸ್ ಹುಲಿ, ಮಲಯನ್ ಹುಲಿ, ಜಾವಾ ಹುಲಿ, ಬಾಲಿ ಹುಲಿ, ಸುಮಾತ್ರ ಹುಲಿ ಹೀಗೆ ಹುಲಿಯನ್ನು ಹಲವಾರು ಪ್ರಭೇದಗಳನ್ನಾಗಿ ಗುರುತಿಸಲಾಗಿದೆ.

ಇವುಗಳಲ್ಲಿ ಬಾಲಿ, ಜಾವಾ ಹಾಗೂ ಕ್ಯಾಸ್ಪಿಯನ್ ಹುಲಿ ಪ್ರಬೇಧಗಳು 1980ರ ಹೊತ್ತಿಗೆ ನಿರ್ನಾಮವಾಗಿವೆ ಎನ್ನಲಾಗಿದೆ.


ಓದಿ:

ಸಾಂಕ್ರಾಮಿಕ ಪಿಡುಗು ಸಮಯದಲ್ಲಿಯೂ ಪರಿಸರ ಕಾಯ್ದೆಗಳನ್ನು ದುರ್ಬಲಗೊಳಿಸುತ್ತಿರುವ ಕೇಂದ್ರ ಸರ್ಕಾರ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...