Homeಮುಖಪುಟಇಂದು ’ಜಾಗತಿಕ ಹುಲಿ ದಿನ’ | ಭಾರತದಲ್ಲಿವೆ ಅತಿ ಹೆಚ್ಚು ಹುಲಿಗಳು ...!

ಇಂದು ’ಜಾಗತಿಕ ಹುಲಿ ದಿನ’ | ಭಾರತದಲ್ಲಿವೆ ಅತಿ ಹೆಚ್ಚು ಹುಲಿಗಳು …!

- Advertisement -
- Advertisement -

ಜುಲೈ 29 ನ್ನು ’ಜಾಗತಿಕ ಹುಲಿ ದಿನ’ ಎಂದು ಆಚರಿಸಲಾಗುತ್ತಿದೆ. ಇದು ಹುಲಿ ಸಂರಕ್ಷಣೆಗಾಗಿ ಜಾಗೃತಿ ಮೂಡಿಸುವ ವಾರ್ಷಿಕ ಆಚರಣೆಯಾಗಿದೆ. ಹುಲಿಗಳನ್ನು ಹೊಂದಿರುವ 13 ರಾಷ್ಟ್ರಗಳು 2010 ರಂದು ಸೇಂಟ್ ಪೀಟರ್‌ ಬರ್ಗ್‌ನಲ್ಲಿ ಶೃಂಗಸಭೆ ನಡೆಸಿ 2022 ರ ಹೊತ್ತಿಗೆ ಹುಲಿಗಳ ಸಂಖ್ಯೆಯನ್ನು ದ್ವಿಗುಣಗೊಳಿಸುವ ಐತಿಹಾಸಿಕ ಬದ್ದತೆಯನ್ನು ಘೋಷಿಸಿದ್ದವು. ಅಂದಿನಿಂದ ಪ್ರತಿ ವರ್ಷ ಜುಲೈ 29 ಅನ್ನು ಜಾಗತಿಕ ಹುಲಿ ದಿನವನ್ನಾಗಿ ಆಚರಿಸಲಾಗುತ್ತದೆ.

’ಜಾಗತಿಕ ಹುಲಿ ದಿನ’ವು ಹುಲಿಗಳ ನೈಸರ್ಗಿಕ ಆವಾಸಸ್ಥಾನಗಳನ್ನು ರಕ್ಷಿಸಲು ಜಾಗತಿಕ ವ್ಯವಸ್ಥೆಯನ್ನು ಉತ್ತೇಜಿಸುವುದು ಮತ್ತು ಹುಲಿ ಸಂರಕ್ಷಣಾ ವಿಷಯಗಳಿಗೆ ಸಾರ್ವಜನಿಕರಲ್ಲಿ ಜಾಗೃತಿ ಮತ್ತು ಬೆಂಬಲವನ್ನು ನೀಡುವ ಗುರಿಯನ್ನು ಹೊಂದಿದೆ.

ಫೋಟೋ: ದಿ ಇಂಡಿಯನ್ ಎಕ್ಸ್‌ಪ್ರೆಸ್

ಈ ಪ್ರಯತ್ನದಿಂದಾಗಿ ಭಾರತ, ರಷ್ಯಾ ಮತ್ತು ನೇಪಾಳ ಕಾಡಿನಲ್ಲಿರುವ ಜಾಗತಿಕ ಹುಲಿಗಳ ಸಂಖ್ಯೆಯು ಕೆಲವು ವರ್ಷಗಳಿಂದ ಗಮನಾರ್ಹವಾಗಿ ಹೆಚ್ಚಳವಾಗಿದೆ. ಕಳೆದ ಒಂದು ಶತಮಾನದಲ್ಲಿ ಜಗತ್ತಿನಲ್ಲಿ 97% ದಷ್ಟು ಹುಲಿಗಳು ನಾಶವಾಗಿವೆ ಎಂದು ಅಧ್ಯಯನಗಳು ಹೇಳುತ್ತದೆ. ಜಾಗತಿಕವಾಗಿ ಹುಲಿಗಳ ಸಂಖ್ಯೆ ಕಳೆದ ನೂರು ವರ್ಷಗಳಲ್ಲೇ ಇದೆ ಮೊದಲ ಬಾರಿಗೆ ಹೆಚ್ಚಳವಾಗಿದೆ. ಪ್ರಸ್ತುತ ವಿಶ್ವದ ಕಾಡಿನಲ್ಲಿ 3890 ಹುಲಿಗಳಿವೆ ಎಂದು WWF (ವರ್ಲ್ಡ್‌ ವೈಡ್‌ಲೈಫ್‌ ಫಂಡ್) ಹೇಳುತ್ತದೆ. ಅದರಲ್ಲೂ 75% ಅಂದರೆ ಹುಲಿಗಳು ಭಾರತದಲ್ಲಿವೆ ಎಂಬುವುದು ವಿಶೇಷವಾಗಿದೆ.

ಅದಲ್ಲದೆ ಡಬ್ಲ್ಯುಡಬ್ಲ್ಯುಎಫ್ ಪ್ರಕಾರ ಅಮೆರಿಕಾ (ಸುಮಾರು 5000 ದಿಂದ 7000) ದಲ್ಲಿ ಸಾಕು ಹುಲಿಗಳು ಇವೆ ಎನ್ನಲಾಗಿದೆ. ಅಲ್ಲಿ ಕಾಡು ಪ್ರಾಣಿಗಳನ್ನು ಸಾಕದಿರುವಂತೆ ಯಾವುದೆ ಕಾನೂನುಗಳಿಲ್ಲ. ಹುಲಿಯನ್ನು ಆನ್‌ಲೈನ್‌ನಲ್ಲಿ ಖರೀದಿಸಬಹುದಾಗಿದೆ. ಐದು ತಿಂಗಳ ಹುಲಿ ಮರಿಗೆ US $ 14,000 ಬೆಲೆಯನ್ನು ನಿಗದಿಪಡಿಸಲಾಗಿದೆ.

ಈ ಕುರಿತು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ್ ಜಾವಡೇಕಾರ್ ಟ್ವೀಟ್‌ ಮಾಡಿ “1973 ರಲ್ಲಿ ಹುಲಿ ಸಂರಕ್ಷಣಾ ಯೋಜನೆ ಆರಂಭಿಸಿದಾಗ ಕೇವಲ 09 ರಷ್ಟಿದ್ದ ಹುಲಿ ಅಭಯಾರಣ್ಯಗಳ ಸಂಖ್ಯೆ ಈಗ 50ಕ್ಕೆ ತಲುಪಿದೆ. ಭಾರತದಲ್ಲಿ 2967 ಹುಲಿಗಳಿವೆ. ಹುಲಿಗಳ ಆಹಾರ ಸರಪಳಿಯ ಉತ್ತುಂಗದಲ್ಲಿದೆ. ಹೆಚ್ಚಿದ ಹುಲಿಗಳಿರುವುದು ದೃಢವಾದ ಜೈವಿಕ-ವೈವಿಧ್ಯತೆಗೆ ಸಾಕ್ಷಿಯಾಗಿದೆ” ಎಂದಿದ್ದಾರೆ.


ಓದಿ: ಪರಿಸರ ಮಾಲಿನ್ಯಕ್ಕೆ ಯಾರನ್ನು ದೂಷಿಸಬೇಕು? ನಾವೇನು ಮಾಡಬೇಕು?


ಹುಲಿ ದಿನಾಚರಣೆಯ ಬಗ್ಗೆ ಮಾತನಾಡಿದ ವನ್ಯಜೀವಿ ತಜ್ಞ ಅನೂಪ್ ಪ್ರಕಾಶ್, “ಹುಲಿಯು ನಮ್ಮ ಜೈವಿಕ ಪರಿಸರದ ಬಹಳ ಮುಖ್ಯವಾದ ಪ್ರಾಣಿಯಾಗಿದೆ. ಒಂದು ಹುಲಿ ಇರಬೇಕೆಂದರೆ 5 ಚದರ ಕಿ.ಮೀ. ನಿಂದ ಹಿಡಿದು 100 ಚ.ಕಿ.ಮೀ. ಜಾಗ ಬೇಕಾಗುತ್ತದೆ. ಅಂದರೆ ಒಂದು ಹುಲಿ ಚೆನ್ನಾಗಿದೆ ಎಂದರೆ ಅಲ್ಲಿ ಪರಿಸರ ಸಮತೋಲನವಿದೆ, ಅದಿರುವ ವಿಸ್ತಾರವಾದ ಪ್ರದೇಶದ ಅರಣ್ಯ ಚೆನ್ನಾಗಿದೆ, ಅದಕ್ಕೆ ಆಹಾರವಾದ ಜಿಂಕೆ ತರದ ಪ್ರಾಣಿಗಳು, ಅದಕ್ಕೆ ವಾಸಿಸಲು ಯೋಗ್ಯವಾದ ಸ್ಥಳ, ನೀರು ಲಭ್ಯವಿದೆ ಹಾಗೂ ಮನುಷ್ಯರ ಚಲನೆ ಇಲ್ಲವೆಂದರ್ಥ. ಹುಲಿಯನ್ನು ಉಳಿಸಿದರೆ ಇತರ ಪ್ರಭೇದದ ಜೀವಿಗಳನ್ನು ಕೂಡಾ ಉಳಿಸಿದಂತೆ” ಎಂದು ಹೇಳುತ್ತಾರೆ.

ಫೋಟೋ ಕೃಪೆ: ದಿ ಗ್ರೇಟ್ ಪಾಜೆಕ್ಟ್

ಭಾರತ ಹುಲಿ ಸಂರಕ್ಷಣೆಯಲ್ಲಿ ಜಾಗತಿಕವಾಗಿ ಗುರುತಿಸಿಕೊಂಡರೂ ಕೂಡಾ ಇಲ್ಲಿ ಎಲ್ಲವೂ ಚೆನ್ನಾಗಿಲ್ಲ ಎಂದು ಅನೂಪ್ ಆತಂಕ ವ್ಯಕ್ತಪಡಿಸುತ್ತಾರೆ. “ಅಭಿವೃದ್ದಿಯ ಹೆಸರಲ್ಲಿ ಅರಣ್ಯ ನಾಶ ಹೆಚ್ಚಿದೆ. ಹುಲಿಗಳಿರುವ ಪ್ರದೇಶಗಳಲ್ಲೇ ಕಲ್ಲಿದ್ದಲು ಗಣಿಗಾರಿಕೆ ನಡೆಯುತ್ತಿದೆ. ನದಿ ತಿರುವು ಎಂದು ಹುಲಿಗಳ ಪ್ರದೇಶಗಳನ್ನು ನಾಶ ಮಾಡಲಾಗುತ್ತದೆ. ಇವೆಲ್ಲವು ನಡೆಯುತ್ತಿರುವ ಸಂಧರ್ಭದಲ್ಲಿ ಸರ್ಕಾರ ಹೆಸರಿಗೆ ಮಾತ್ರ ಹುಲಿ ದಿನವನ್ನಾಗಿ ಆಚರಿಸುವುದನ್ನು ಬಿಟ್ಟು ವಾಸ್ತವವಾಗಿ ಹುಲಿ ಸಂರಕ್ಷಣೆಗೆ ಒತ್ತುಕೊಡಬೇಕು” ಎಂದು  ಆಗ್ರಹಿಸಿದ್ದಾರೆ.

ಬಂಗಾಲಿ ಹುಲಿ, ಕ್ಯಾಸ್ಪಿಯನ್ ಹುಲಿ, ಸೈಬೀರಿಯನ್ ಹುಲಿ, ದಕ್ಷಿಣ ಚೀನಾ ಹುಲಿ, ಇಂಡೋಚೈನಿಸ್ ಹುಲಿ, ಮಲಯನ್ ಹುಲಿ, ಜಾವಾ ಹುಲಿ, ಬಾಲಿ ಹುಲಿ, ಸುಮಾತ್ರ ಹುಲಿ ಹೀಗೆ ಹುಲಿಯನ್ನು ಹಲವಾರು ಪ್ರಭೇದಗಳನ್ನಾಗಿ ಗುರುತಿಸಲಾಗಿದೆ.

ಇವುಗಳಲ್ಲಿ ಬಾಲಿ, ಜಾವಾ ಹಾಗೂ ಕ್ಯಾಸ್ಪಿಯನ್ ಹುಲಿ ಪ್ರಬೇಧಗಳು 1980ರ ಹೊತ್ತಿಗೆ ನಿರ್ನಾಮವಾಗಿವೆ ಎನ್ನಲಾಗಿದೆ.


ಓದಿ:

ಸಾಂಕ್ರಾಮಿಕ ಪಿಡುಗು ಸಮಯದಲ್ಲಿಯೂ ಪರಿಸರ ಕಾಯ್ದೆಗಳನ್ನು ದುರ್ಬಲಗೊಳಿಸುತ್ತಿರುವ ಕೇಂದ್ರ ಸರ್ಕಾರ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...