Homeಮುಖಪುಟಇಂದು ’ಜಾಗತಿಕ ಹುಲಿ ದಿನ’ | ಭಾರತದಲ್ಲಿವೆ ಅತಿ ಹೆಚ್ಚು ಹುಲಿಗಳು ...!

ಇಂದು ’ಜಾಗತಿಕ ಹುಲಿ ದಿನ’ | ಭಾರತದಲ್ಲಿವೆ ಅತಿ ಹೆಚ್ಚು ಹುಲಿಗಳು …!

- Advertisement -
- Advertisement -

ಜುಲೈ 29 ನ್ನು ’ಜಾಗತಿಕ ಹುಲಿ ದಿನ’ ಎಂದು ಆಚರಿಸಲಾಗುತ್ತಿದೆ. ಇದು ಹುಲಿ ಸಂರಕ್ಷಣೆಗಾಗಿ ಜಾಗೃತಿ ಮೂಡಿಸುವ ವಾರ್ಷಿಕ ಆಚರಣೆಯಾಗಿದೆ. ಹುಲಿಗಳನ್ನು ಹೊಂದಿರುವ 13 ರಾಷ್ಟ್ರಗಳು 2010 ರಂದು ಸೇಂಟ್ ಪೀಟರ್‌ ಬರ್ಗ್‌ನಲ್ಲಿ ಶೃಂಗಸಭೆ ನಡೆಸಿ 2022 ರ ಹೊತ್ತಿಗೆ ಹುಲಿಗಳ ಸಂಖ್ಯೆಯನ್ನು ದ್ವಿಗುಣಗೊಳಿಸುವ ಐತಿಹಾಸಿಕ ಬದ್ದತೆಯನ್ನು ಘೋಷಿಸಿದ್ದವು. ಅಂದಿನಿಂದ ಪ್ರತಿ ವರ್ಷ ಜುಲೈ 29 ಅನ್ನು ಜಾಗತಿಕ ಹುಲಿ ದಿನವನ್ನಾಗಿ ಆಚರಿಸಲಾಗುತ್ತದೆ.

’ಜಾಗತಿಕ ಹುಲಿ ದಿನ’ವು ಹುಲಿಗಳ ನೈಸರ್ಗಿಕ ಆವಾಸಸ್ಥಾನಗಳನ್ನು ರಕ್ಷಿಸಲು ಜಾಗತಿಕ ವ್ಯವಸ್ಥೆಯನ್ನು ಉತ್ತೇಜಿಸುವುದು ಮತ್ತು ಹುಲಿ ಸಂರಕ್ಷಣಾ ವಿಷಯಗಳಿಗೆ ಸಾರ್ವಜನಿಕರಲ್ಲಿ ಜಾಗೃತಿ ಮತ್ತು ಬೆಂಬಲವನ್ನು ನೀಡುವ ಗುರಿಯನ್ನು ಹೊಂದಿದೆ.

ಫೋಟೋ: ದಿ ಇಂಡಿಯನ್ ಎಕ್ಸ್‌ಪ್ರೆಸ್

ಈ ಪ್ರಯತ್ನದಿಂದಾಗಿ ಭಾರತ, ರಷ್ಯಾ ಮತ್ತು ನೇಪಾಳ ಕಾಡಿನಲ್ಲಿರುವ ಜಾಗತಿಕ ಹುಲಿಗಳ ಸಂಖ್ಯೆಯು ಕೆಲವು ವರ್ಷಗಳಿಂದ ಗಮನಾರ್ಹವಾಗಿ ಹೆಚ್ಚಳವಾಗಿದೆ. ಕಳೆದ ಒಂದು ಶತಮಾನದಲ್ಲಿ ಜಗತ್ತಿನಲ್ಲಿ 97% ದಷ್ಟು ಹುಲಿಗಳು ನಾಶವಾಗಿವೆ ಎಂದು ಅಧ್ಯಯನಗಳು ಹೇಳುತ್ತದೆ. ಜಾಗತಿಕವಾಗಿ ಹುಲಿಗಳ ಸಂಖ್ಯೆ ಕಳೆದ ನೂರು ವರ್ಷಗಳಲ್ಲೇ ಇದೆ ಮೊದಲ ಬಾರಿಗೆ ಹೆಚ್ಚಳವಾಗಿದೆ. ಪ್ರಸ್ತುತ ವಿಶ್ವದ ಕಾಡಿನಲ್ಲಿ 3890 ಹುಲಿಗಳಿವೆ ಎಂದು WWF (ವರ್ಲ್ಡ್‌ ವೈಡ್‌ಲೈಫ್‌ ಫಂಡ್) ಹೇಳುತ್ತದೆ. ಅದರಲ್ಲೂ 75% ಅಂದರೆ ಹುಲಿಗಳು ಭಾರತದಲ್ಲಿವೆ ಎಂಬುವುದು ವಿಶೇಷವಾಗಿದೆ.

ಅದಲ್ಲದೆ ಡಬ್ಲ್ಯುಡಬ್ಲ್ಯುಎಫ್ ಪ್ರಕಾರ ಅಮೆರಿಕಾ (ಸುಮಾರು 5000 ದಿಂದ 7000) ದಲ್ಲಿ ಸಾಕು ಹುಲಿಗಳು ಇವೆ ಎನ್ನಲಾಗಿದೆ. ಅಲ್ಲಿ ಕಾಡು ಪ್ರಾಣಿಗಳನ್ನು ಸಾಕದಿರುವಂತೆ ಯಾವುದೆ ಕಾನೂನುಗಳಿಲ್ಲ. ಹುಲಿಯನ್ನು ಆನ್‌ಲೈನ್‌ನಲ್ಲಿ ಖರೀದಿಸಬಹುದಾಗಿದೆ. ಐದು ತಿಂಗಳ ಹುಲಿ ಮರಿಗೆ US $ 14,000 ಬೆಲೆಯನ್ನು ನಿಗದಿಪಡಿಸಲಾಗಿದೆ.

ಈ ಕುರಿತು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ್ ಜಾವಡೇಕಾರ್ ಟ್ವೀಟ್‌ ಮಾಡಿ “1973 ರಲ್ಲಿ ಹುಲಿ ಸಂರಕ್ಷಣಾ ಯೋಜನೆ ಆರಂಭಿಸಿದಾಗ ಕೇವಲ 09 ರಷ್ಟಿದ್ದ ಹುಲಿ ಅಭಯಾರಣ್ಯಗಳ ಸಂಖ್ಯೆ ಈಗ 50ಕ್ಕೆ ತಲುಪಿದೆ. ಭಾರತದಲ್ಲಿ 2967 ಹುಲಿಗಳಿವೆ. ಹುಲಿಗಳ ಆಹಾರ ಸರಪಳಿಯ ಉತ್ತುಂಗದಲ್ಲಿದೆ. ಹೆಚ್ಚಿದ ಹುಲಿಗಳಿರುವುದು ದೃಢವಾದ ಜೈವಿಕ-ವೈವಿಧ್ಯತೆಗೆ ಸಾಕ್ಷಿಯಾಗಿದೆ” ಎಂದಿದ್ದಾರೆ.


ಓದಿ: ಪರಿಸರ ಮಾಲಿನ್ಯಕ್ಕೆ ಯಾರನ್ನು ದೂಷಿಸಬೇಕು? ನಾವೇನು ಮಾಡಬೇಕು?


ಹುಲಿ ದಿನಾಚರಣೆಯ ಬಗ್ಗೆ ಮಾತನಾಡಿದ ವನ್ಯಜೀವಿ ತಜ್ಞ ಅನೂಪ್ ಪ್ರಕಾಶ್, “ಹುಲಿಯು ನಮ್ಮ ಜೈವಿಕ ಪರಿಸರದ ಬಹಳ ಮುಖ್ಯವಾದ ಪ್ರಾಣಿಯಾಗಿದೆ. ಒಂದು ಹುಲಿ ಇರಬೇಕೆಂದರೆ 5 ಚದರ ಕಿ.ಮೀ. ನಿಂದ ಹಿಡಿದು 100 ಚ.ಕಿ.ಮೀ. ಜಾಗ ಬೇಕಾಗುತ್ತದೆ. ಅಂದರೆ ಒಂದು ಹುಲಿ ಚೆನ್ನಾಗಿದೆ ಎಂದರೆ ಅಲ್ಲಿ ಪರಿಸರ ಸಮತೋಲನವಿದೆ, ಅದಿರುವ ವಿಸ್ತಾರವಾದ ಪ್ರದೇಶದ ಅರಣ್ಯ ಚೆನ್ನಾಗಿದೆ, ಅದಕ್ಕೆ ಆಹಾರವಾದ ಜಿಂಕೆ ತರದ ಪ್ರಾಣಿಗಳು, ಅದಕ್ಕೆ ವಾಸಿಸಲು ಯೋಗ್ಯವಾದ ಸ್ಥಳ, ನೀರು ಲಭ್ಯವಿದೆ ಹಾಗೂ ಮನುಷ್ಯರ ಚಲನೆ ಇಲ್ಲವೆಂದರ್ಥ. ಹುಲಿಯನ್ನು ಉಳಿಸಿದರೆ ಇತರ ಪ್ರಭೇದದ ಜೀವಿಗಳನ್ನು ಕೂಡಾ ಉಳಿಸಿದಂತೆ” ಎಂದು ಹೇಳುತ್ತಾರೆ.

ಫೋಟೋ ಕೃಪೆ: ದಿ ಗ್ರೇಟ್ ಪಾಜೆಕ್ಟ್

ಭಾರತ ಹುಲಿ ಸಂರಕ್ಷಣೆಯಲ್ಲಿ ಜಾಗತಿಕವಾಗಿ ಗುರುತಿಸಿಕೊಂಡರೂ ಕೂಡಾ ಇಲ್ಲಿ ಎಲ್ಲವೂ ಚೆನ್ನಾಗಿಲ್ಲ ಎಂದು ಅನೂಪ್ ಆತಂಕ ವ್ಯಕ್ತಪಡಿಸುತ್ತಾರೆ. “ಅಭಿವೃದ್ದಿಯ ಹೆಸರಲ್ಲಿ ಅರಣ್ಯ ನಾಶ ಹೆಚ್ಚಿದೆ. ಹುಲಿಗಳಿರುವ ಪ್ರದೇಶಗಳಲ್ಲೇ ಕಲ್ಲಿದ್ದಲು ಗಣಿಗಾರಿಕೆ ನಡೆಯುತ್ತಿದೆ. ನದಿ ತಿರುವು ಎಂದು ಹುಲಿಗಳ ಪ್ರದೇಶಗಳನ್ನು ನಾಶ ಮಾಡಲಾಗುತ್ತದೆ. ಇವೆಲ್ಲವು ನಡೆಯುತ್ತಿರುವ ಸಂಧರ್ಭದಲ್ಲಿ ಸರ್ಕಾರ ಹೆಸರಿಗೆ ಮಾತ್ರ ಹುಲಿ ದಿನವನ್ನಾಗಿ ಆಚರಿಸುವುದನ್ನು ಬಿಟ್ಟು ವಾಸ್ತವವಾಗಿ ಹುಲಿ ಸಂರಕ್ಷಣೆಗೆ ಒತ್ತುಕೊಡಬೇಕು” ಎಂದು  ಆಗ್ರಹಿಸಿದ್ದಾರೆ.

ಬಂಗಾಲಿ ಹುಲಿ, ಕ್ಯಾಸ್ಪಿಯನ್ ಹುಲಿ, ಸೈಬೀರಿಯನ್ ಹುಲಿ, ದಕ್ಷಿಣ ಚೀನಾ ಹುಲಿ, ಇಂಡೋಚೈನಿಸ್ ಹುಲಿ, ಮಲಯನ್ ಹುಲಿ, ಜಾವಾ ಹುಲಿ, ಬಾಲಿ ಹುಲಿ, ಸುಮಾತ್ರ ಹುಲಿ ಹೀಗೆ ಹುಲಿಯನ್ನು ಹಲವಾರು ಪ್ರಭೇದಗಳನ್ನಾಗಿ ಗುರುತಿಸಲಾಗಿದೆ.

ಇವುಗಳಲ್ಲಿ ಬಾಲಿ, ಜಾವಾ ಹಾಗೂ ಕ್ಯಾಸ್ಪಿಯನ್ ಹುಲಿ ಪ್ರಬೇಧಗಳು 1980ರ ಹೊತ್ತಿಗೆ ನಿರ್ನಾಮವಾಗಿವೆ ಎನ್ನಲಾಗಿದೆ.


ಓದಿ:

ಸಾಂಕ್ರಾಮಿಕ ಪಿಡುಗು ಸಮಯದಲ್ಲಿಯೂ ಪರಿಸರ ಕಾಯ್ದೆಗಳನ್ನು ದುರ್ಬಲಗೊಳಿಸುತ್ತಿರುವ ಕೇಂದ್ರ ಸರ್ಕಾರ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...