Homeಕರ್ನಾಟಕವೀಡಿಯೋ ಕರೆಯ ಮೂಲಕ ವೈದ್ಯರ ಮಾರ್ಗದರ್ಶನದಿಂದ ಯಶಸ್ವಿ ಹೆರಿಗೆ ಪ್ರಕ್ರಿಯೆ!

ವೀಡಿಯೋ ಕರೆಯ ಮೂಲಕ ವೈದ್ಯರ ಮಾರ್ಗದರ್ಶನದಿಂದ ಯಶಸ್ವಿ ಹೆರಿಗೆ ಪ್ರಕ್ರಿಯೆ!

ಈ ಮಹತ್ವದ ಕೆಲಸ ಮಾಡಿದ್ದಕ್ಕಾಗಿ ವೈದ್ಯರು ಮತ್ತು ನೆರಯವರಾದ ಮಧುಲಿಕಾ ದೇಸಾಯಿಯವರು ಅಭಿನಂದನೆಗೆ ಪಾತ್ರರಾಗಿದ್ದಾರೆ.

- Advertisement -
- Advertisement -

ಎಲ್ಲಾ ಕೆಲಸಗಳೂ ಆನ್‌ಲೈನ್‌ನಲ್ಲೇ ನಡೆಯುತ್ತಿರುವ  ಇಂಥಾ ಸಂದರ್ಭದಲ್ಲಿ ಹೆರಿಗೆಯು ಸಹ ಆನ್‌ಲೈನ್‌ ಸಹಾಯದಲ್ಲೇ ನಡೆದ ಅಪರೂಪದ ಪ್ರಕರಣ ಹಾವೇರಿಯಲ್ಲಿ ವರದಿಯಾಗಿದೆ.

ಕಳೆದ ಭಾನುವಾರ ವಾಸವಿ ಫಟ್ಟೆಪುರ ಎಂಬ ಮಹಿಳೆಗೆ ನಿಗದಿತ ದಿನಾಂಕಕ್ಕೆ ಮೊದಲೇ ಹೆರಿಗೆ ನೋವು ಕಾಣಿಸಿಕೊಂಡಿದೆ. ಅವರ ಪತಿ ರಾಘವೇಂದ್ರ ವಾಹನ ತರಲು ಹೋದವನು ಬರುವುದಕ್ಕೆ ತಡವಾಗಿದೆ.  ಅಂದು ವಾರಾಂತ್ಯ ಲಾಕ್ ಡೌನ್ ಇದ್ದಿದ್ದರಿಂದ ಯಾವುದೇ ಖಾಸಗೀ ವಾಹನಗಳು ಸಿಗಲಿಲ್ಲ. ನಂತರ ಮನೆಯಲ್ಲಿದ್ದವರು ಸಹಾಯಕ್ಕಾಗಿ ನೆರೆಯವರನ್ನು ಕೂಗಿದ್ದಾರೆ. ಆದರೆ ಅವರು ಬರುವುದರೊಳಗಾಗಿ ಮನೆಯಲ್ಲಿಯೇ ಹೆರಿಗೆ ಆಗಿತ್ತು ಎಂದು ನೆರೆಮನೆಯ ಮಧುಲಿಕಾ ದೇಸಾಯಿ ನಾನುಗೌರಿಗೆ ತಿಳಿಸಿದರು.

ನಂತರ ಅವರ ಪತಿ ಆಂಬುಲೆನ್ಸ್ ಗೆ ಕರೆ ಮಾಡಿದಾಗ, ಕೊರೊನಾ ಕರ್ತವ್ಯದಲ್ಲಿರುವುದಾಗಿಯೂ, ಬರುವುದಕ್ಕೆ 30-40 ನಿಮಿಷ ಆಗುತ್ತದೆ ಎಂದು ಮಧುಲಿಕಾ ಹೇಳಿದರು.

‘ನಾನು ಬಂದು ನೋಡಿದಾಗ ತಾಯಿ ಮತ್ತು ಮಗು ನೆಲದ ಮೇಲೆ ಮಲಗಿದ್ದರು. ನನಗೆ ಏನು ಮಾಡಬೆಕೆಂದು ತೋಚಲಿಲ್ಲ. ಮಗು ಮತ್ತು ತಾಯಿಯ ಜೀವ ಕಾಪಾಡಬೇಕಾಗಿದ್ದರಿಂದ, ನಮ್ಮದೇ ಬೀದಿಯ ಪ್ರಿಯಾಂಕ ಎನ್ನುವ ವೈದ್ಯೆಯೊಬ್ಬರು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದುದು ನೆನಪಿಗೆ ಬಂದು ತಕ್ಷಣ ಅವರಿಗೆ ವೀಡಿಯೋ ಕರೆ ಮಾಡಿ ಪರಿಸ್ಥಿತಿ ತಿಳಿಸಲಾಯಿತು’ ಎಂದು ಮಧುಲಿಕಾ ಹೇಳಿದರು.

ಡಾ. ಪ್ರಿಯಾಂಕ ಮಂತಗಿ ಆಗತಾನೆ ಕರ್ತವ್ಯಕ್ಕೆ ಹಾಜರಾಗುತ್ತಿದ್ದರು. ವಿಷಯ ತಿಳಿದ ತಕ್ಷಣ ‘ಹೆದರಬೇಡಿ. ಈಗಾಗಲೇ ಹೆರಿಗೆ ಆಗಿರುವುದರಿಂದ ಹೆಚ್ಚು ತಡಮಾಡದೇ ಹೊಕ್ಕುಳಬಳ್ಳಿ ಕತ್ತರಿಸಿ. ಎರಡೂ ಬದಿಯಲ್ಲಿ ಸ್ವಲ್ಪ ಜಾಗ ಬಿಟ್ಟು ಕತ್ತರಿಸಿದಾಗ ಹೆಚ್ಚು ರಕ್ತಸ್ರಾವವಾಗದಂತೆ ಎರಡು ಕಡೆ ಕಟ್ಟಬೇಕು. ನಂತರ ಮಧ್ಯದಲ್ಲಿ ಕತ್ತರಿಸ ಬೇಕು. ಇಲ್ಲದಿದ್ದರೆ ತಾಯಿ ಮತ್ತು ಮಗುವಿನ ಜೀವಕ್ಕೆ ಅಪಾಯ’ ಎಂದು ವೈದ್ಯರು ವೀಡಿಯೋ ಕರೆಯಲ್ಲಿಯೇ ಮಾರ್ಗದರ್ಶನ ಮಾಡಿದ್ದಾರೆ.

ಮಧುಲಿಕಾ ವೈದ್ಯರ ನಿರ್ದೇಶನದ ಮೇರೆಗೆ, ವಿಜಯಲಕ್ಷ್ಮಿ ಜೋಶಿ, ಮಾಧುರಿ ಕಾಮನಹಳ್ಳಿ, ಮುಕ್ತಾ ಕಾಮನಹಳ್ಳಿ ಮತ್ತು ಶಿವಲೀಲಾ ಪಟ್ಟಾರ್ ಅವರ ಸಹಾಯದೊಂದಿಗೆ ಗ್ಲೌಸ್ ಮತ್ತು ಮಾಸ್ಕ್ ಹಾಕಿಕೊಂಡು, ಹೊಸದಾದ ಬ್ಲೇಡ್ ನಿಂದ ಹೊಕ್ಕುಳಬಳ್ಳಿ ಕತ್ತರಿಸಿ, ಮಗು ಮತ್ತು ತಾಯಿಯನ್ನು ರಕ್ಷಿಸಿದ್ದಾರೆ.

ನಂತರ ಮಗುವನ್ನು ಸ್ವಚ್ಚಗೊಳಿಸಿ, ಬೆಚ್ಚಗಿನ ಬಟ್ಟೆಯಲ್ಲಿ ಹೊದಿಸಿ, ತಾಯಿಗೆ ಹಾಲುಣಿಸಲು ಹೇಳಿದರು. ಅಷ್ಟರಲ್ಲಿ ಸ್ಥಳಕ್ಕೆ ಆಂಬುಲೆನ್ಸ್ ಬಂದಿತ್ತು.

ಈಗ ವಾಸವಿಯವರ ತವರೂರಾದ ನವಲಗುಂದದಲ್ಲಿದ್ದು, ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ.

ಈ ಮಹತ್ವದ ಕೆಲಸ ಮಾಡಿದ್ದಕ್ಕಾಗಿ ವೈದ್ಯರು ಮತ್ತು ನೆರಯವರಾದ ಮಧುಲಿಕಾ ದೇಸಾಯಿಯವರು ಅಭಿನಂದನೆಗೆ ಪಾತ್ರರಾಗಿದ್ದಾರೆ.


ಇದನ್ನೂ ಓದಿ: ರಫೇಲ್ ಒಂದು ಗೇಮ್ ಚೇಂಜರ್, ಚೀನಾದ ಜೆ20 ಇದಕ್ಕೆ ಸಮವಲ್ಲ: ಮಾಜಿ ವಾಯುದಳ ಮುಖ್ಯಸ್ಥ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...