Homeಕರ್ನಾಟಕವೀಡಿಯೋ ಕರೆಯ ಮೂಲಕ ವೈದ್ಯರ ಮಾರ್ಗದರ್ಶನದಿಂದ ಯಶಸ್ವಿ ಹೆರಿಗೆ ಪ್ರಕ್ರಿಯೆ!

ವೀಡಿಯೋ ಕರೆಯ ಮೂಲಕ ವೈದ್ಯರ ಮಾರ್ಗದರ್ಶನದಿಂದ ಯಶಸ್ವಿ ಹೆರಿಗೆ ಪ್ರಕ್ರಿಯೆ!

ಈ ಮಹತ್ವದ ಕೆಲಸ ಮಾಡಿದ್ದಕ್ಕಾಗಿ ವೈದ್ಯರು ಮತ್ತು ನೆರಯವರಾದ ಮಧುಲಿಕಾ ದೇಸಾಯಿಯವರು ಅಭಿನಂದನೆಗೆ ಪಾತ್ರರಾಗಿದ್ದಾರೆ.

- Advertisement -
- Advertisement -

ಎಲ್ಲಾ ಕೆಲಸಗಳೂ ಆನ್‌ಲೈನ್‌ನಲ್ಲೇ ನಡೆಯುತ್ತಿರುವ  ಇಂಥಾ ಸಂದರ್ಭದಲ್ಲಿ ಹೆರಿಗೆಯು ಸಹ ಆನ್‌ಲೈನ್‌ ಸಹಾಯದಲ್ಲೇ ನಡೆದ ಅಪರೂಪದ ಪ್ರಕರಣ ಹಾವೇರಿಯಲ್ಲಿ ವರದಿಯಾಗಿದೆ.

ಕಳೆದ ಭಾನುವಾರ ವಾಸವಿ ಫಟ್ಟೆಪುರ ಎಂಬ ಮಹಿಳೆಗೆ ನಿಗದಿತ ದಿನಾಂಕಕ್ಕೆ ಮೊದಲೇ ಹೆರಿಗೆ ನೋವು ಕಾಣಿಸಿಕೊಂಡಿದೆ. ಅವರ ಪತಿ ರಾಘವೇಂದ್ರ ವಾಹನ ತರಲು ಹೋದವನು ಬರುವುದಕ್ಕೆ ತಡವಾಗಿದೆ.  ಅಂದು ವಾರಾಂತ್ಯ ಲಾಕ್ ಡೌನ್ ಇದ್ದಿದ್ದರಿಂದ ಯಾವುದೇ ಖಾಸಗೀ ವಾಹನಗಳು ಸಿಗಲಿಲ್ಲ. ನಂತರ ಮನೆಯಲ್ಲಿದ್ದವರು ಸಹಾಯಕ್ಕಾಗಿ ನೆರೆಯವರನ್ನು ಕೂಗಿದ್ದಾರೆ. ಆದರೆ ಅವರು ಬರುವುದರೊಳಗಾಗಿ ಮನೆಯಲ್ಲಿಯೇ ಹೆರಿಗೆ ಆಗಿತ್ತು ಎಂದು ನೆರೆಮನೆಯ ಮಧುಲಿಕಾ ದೇಸಾಯಿ ನಾನುಗೌರಿಗೆ ತಿಳಿಸಿದರು.

ನಂತರ ಅವರ ಪತಿ ಆಂಬುಲೆನ್ಸ್ ಗೆ ಕರೆ ಮಾಡಿದಾಗ, ಕೊರೊನಾ ಕರ್ತವ್ಯದಲ್ಲಿರುವುದಾಗಿಯೂ, ಬರುವುದಕ್ಕೆ 30-40 ನಿಮಿಷ ಆಗುತ್ತದೆ ಎಂದು ಮಧುಲಿಕಾ ಹೇಳಿದರು.

‘ನಾನು ಬಂದು ನೋಡಿದಾಗ ತಾಯಿ ಮತ್ತು ಮಗು ನೆಲದ ಮೇಲೆ ಮಲಗಿದ್ದರು. ನನಗೆ ಏನು ಮಾಡಬೆಕೆಂದು ತೋಚಲಿಲ್ಲ. ಮಗು ಮತ್ತು ತಾಯಿಯ ಜೀವ ಕಾಪಾಡಬೇಕಾಗಿದ್ದರಿಂದ, ನಮ್ಮದೇ ಬೀದಿಯ ಪ್ರಿಯಾಂಕ ಎನ್ನುವ ವೈದ್ಯೆಯೊಬ್ಬರು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದುದು ನೆನಪಿಗೆ ಬಂದು ತಕ್ಷಣ ಅವರಿಗೆ ವೀಡಿಯೋ ಕರೆ ಮಾಡಿ ಪರಿಸ್ಥಿತಿ ತಿಳಿಸಲಾಯಿತು’ ಎಂದು ಮಧುಲಿಕಾ ಹೇಳಿದರು.

ಡಾ. ಪ್ರಿಯಾಂಕ ಮಂತಗಿ ಆಗತಾನೆ ಕರ್ತವ್ಯಕ್ಕೆ ಹಾಜರಾಗುತ್ತಿದ್ದರು. ವಿಷಯ ತಿಳಿದ ತಕ್ಷಣ ‘ಹೆದರಬೇಡಿ. ಈಗಾಗಲೇ ಹೆರಿಗೆ ಆಗಿರುವುದರಿಂದ ಹೆಚ್ಚು ತಡಮಾಡದೇ ಹೊಕ್ಕುಳಬಳ್ಳಿ ಕತ್ತರಿಸಿ. ಎರಡೂ ಬದಿಯಲ್ಲಿ ಸ್ವಲ್ಪ ಜಾಗ ಬಿಟ್ಟು ಕತ್ತರಿಸಿದಾಗ ಹೆಚ್ಚು ರಕ್ತಸ್ರಾವವಾಗದಂತೆ ಎರಡು ಕಡೆ ಕಟ್ಟಬೇಕು. ನಂತರ ಮಧ್ಯದಲ್ಲಿ ಕತ್ತರಿಸ ಬೇಕು. ಇಲ್ಲದಿದ್ದರೆ ತಾಯಿ ಮತ್ತು ಮಗುವಿನ ಜೀವಕ್ಕೆ ಅಪಾಯ’ ಎಂದು ವೈದ್ಯರು ವೀಡಿಯೋ ಕರೆಯಲ್ಲಿಯೇ ಮಾರ್ಗದರ್ಶನ ಮಾಡಿದ್ದಾರೆ.

ಮಧುಲಿಕಾ ವೈದ್ಯರ ನಿರ್ದೇಶನದ ಮೇರೆಗೆ, ವಿಜಯಲಕ್ಷ್ಮಿ ಜೋಶಿ, ಮಾಧುರಿ ಕಾಮನಹಳ್ಳಿ, ಮುಕ್ತಾ ಕಾಮನಹಳ್ಳಿ ಮತ್ತು ಶಿವಲೀಲಾ ಪಟ್ಟಾರ್ ಅವರ ಸಹಾಯದೊಂದಿಗೆ ಗ್ಲೌಸ್ ಮತ್ತು ಮಾಸ್ಕ್ ಹಾಕಿಕೊಂಡು, ಹೊಸದಾದ ಬ್ಲೇಡ್ ನಿಂದ ಹೊಕ್ಕುಳಬಳ್ಳಿ ಕತ್ತರಿಸಿ, ಮಗು ಮತ್ತು ತಾಯಿಯನ್ನು ರಕ್ಷಿಸಿದ್ದಾರೆ.

ನಂತರ ಮಗುವನ್ನು ಸ್ವಚ್ಚಗೊಳಿಸಿ, ಬೆಚ್ಚಗಿನ ಬಟ್ಟೆಯಲ್ಲಿ ಹೊದಿಸಿ, ತಾಯಿಗೆ ಹಾಲುಣಿಸಲು ಹೇಳಿದರು. ಅಷ್ಟರಲ್ಲಿ ಸ್ಥಳಕ್ಕೆ ಆಂಬುಲೆನ್ಸ್ ಬಂದಿತ್ತು.

ಈಗ ವಾಸವಿಯವರ ತವರೂರಾದ ನವಲಗುಂದದಲ್ಲಿದ್ದು, ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ.

ಈ ಮಹತ್ವದ ಕೆಲಸ ಮಾಡಿದ್ದಕ್ಕಾಗಿ ವೈದ್ಯರು ಮತ್ತು ನೆರಯವರಾದ ಮಧುಲಿಕಾ ದೇಸಾಯಿಯವರು ಅಭಿನಂದನೆಗೆ ಪಾತ್ರರಾಗಿದ್ದಾರೆ.


ಇದನ್ನೂ ಓದಿ: ರಫೇಲ್ ಒಂದು ಗೇಮ್ ಚೇಂಜರ್, ಚೀನಾದ ಜೆ20 ಇದಕ್ಕೆ ಸಮವಲ್ಲ: ಮಾಜಿ ವಾಯುದಳ ಮುಖ್ಯಸ್ಥ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...