Homeಕರ್ನಾಟಕವೀಡಿಯೋ ಕರೆಯ ಮೂಲಕ ವೈದ್ಯರ ಮಾರ್ಗದರ್ಶನದಿಂದ ಯಶಸ್ವಿ ಹೆರಿಗೆ ಪ್ರಕ್ರಿಯೆ!

ವೀಡಿಯೋ ಕರೆಯ ಮೂಲಕ ವೈದ್ಯರ ಮಾರ್ಗದರ್ಶನದಿಂದ ಯಶಸ್ವಿ ಹೆರಿಗೆ ಪ್ರಕ್ರಿಯೆ!

ಈ ಮಹತ್ವದ ಕೆಲಸ ಮಾಡಿದ್ದಕ್ಕಾಗಿ ವೈದ್ಯರು ಮತ್ತು ನೆರಯವರಾದ ಮಧುಲಿಕಾ ದೇಸಾಯಿಯವರು ಅಭಿನಂದನೆಗೆ ಪಾತ್ರರಾಗಿದ್ದಾರೆ.

- Advertisement -
- Advertisement -

ಎಲ್ಲಾ ಕೆಲಸಗಳೂ ಆನ್‌ಲೈನ್‌ನಲ್ಲೇ ನಡೆಯುತ್ತಿರುವ  ಇಂಥಾ ಸಂದರ್ಭದಲ್ಲಿ ಹೆರಿಗೆಯು ಸಹ ಆನ್‌ಲೈನ್‌ ಸಹಾಯದಲ್ಲೇ ನಡೆದ ಅಪರೂಪದ ಪ್ರಕರಣ ಹಾವೇರಿಯಲ್ಲಿ ವರದಿಯಾಗಿದೆ.

ಕಳೆದ ಭಾನುವಾರ ವಾಸವಿ ಫಟ್ಟೆಪುರ ಎಂಬ ಮಹಿಳೆಗೆ ನಿಗದಿತ ದಿನಾಂಕಕ್ಕೆ ಮೊದಲೇ ಹೆರಿಗೆ ನೋವು ಕಾಣಿಸಿಕೊಂಡಿದೆ. ಅವರ ಪತಿ ರಾಘವೇಂದ್ರ ವಾಹನ ತರಲು ಹೋದವನು ಬರುವುದಕ್ಕೆ ತಡವಾಗಿದೆ.  ಅಂದು ವಾರಾಂತ್ಯ ಲಾಕ್ ಡೌನ್ ಇದ್ದಿದ್ದರಿಂದ ಯಾವುದೇ ಖಾಸಗೀ ವಾಹನಗಳು ಸಿಗಲಿಲ್ಲ. ನಂತರ ಮನೆಯಲ್ಲಿದ್ದವರು ಸಹಾಯಕ್ಕಾಗಿ ನೆರೆಯವರನ್ನು ಕೂಗಿದ್ದಾರೆ. ಆದರೆ ಅವರು ಬರುವುದರೊಳಗಾಗಿ ಮನೆಯಲ್ಲಿಯೇ ಹೆರಿಗೆ ಆಗಿತ್ತು ಎಂದು ನೆರೆಮನೆಯ ಮಧುಲಿಕಾ ದೇಸಾಯಿ ನಾನುಗೌರಿಗೆ ತಿಳಿಸಿದರು.

ನಂತರ ಅವರ ಪತಿ ಆಂಬುಲೆನ್ಸ್ ಗೆ ಕರೆ ಮಾಡಿದಾಗ, ಕೊರೊನಾ ಕರ್ತವ್ಯದಲ್ಲಿರುವುದಾಗಿಯೂ, ಬರುವುದಕ್ಕೆ 30-40 ನಿಮಿಷ ಆಗುತ್ತದೆ ಎಂದು ಮಧುಲಿಕಾ ಹೇಳಿದರು.

‘ನಾನು ಬಂದು ನೋಡಿದಾಗ ತಾಯಿ ಮತ್ತು ಮಗು ನೆಲದ ಮೇಲೆ ಮಲಗಿದ್ದರು. ನನಗೆ ಏನು ಮಾಡಬೆಕೆಂದು ತೋಚಲಿಲ್ಲ. ಮಗು ಮತ್ತು ತಾಯಿಯ ಜೀವ ಕಾಪಾಡಬೇಕಾಗಿದ್ದರಿಂದ, ನಮ್ಮದೇ ಬೀದಿಯ ಪ್ರಿಯಾಂಕ ಎನ್ನುವ ವೈದ್ಯೆಯೊಬ್ಬರು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದುದು ನೆನಪಿಗೆ ಬಂದು ತಕ್ಷಣ ಅವರಿಗೆ ವೀಡಿಯೋ ಕರೆ ಮಾಡಿ ಪರಿಸ್ಥಿತಿ ತಿಳಿಸಲಾಯಿತು’ ಎಂದು ಮಧುಲಿಕಾ ಹೇಳಿದರು.

ಡಾ. ಪ್ರಿಯಾಂಕ ಮಂತಗಿ ಆಗತಾನೆ ಕರ್ತವ್ಯಕ್ಕೆ ಹಾಜರಾಗುತ್ತಿದ್ದರು. ವಿಷಯ ತಿಳಿದ ತಕ್ಷಣ ‘ಹೆದರಬೇಡಿ. ಈಗಾಗಲೇ ಹೆರಿಗೆ ಆಗಿರುವುದರಿಂದ ಹೆಚ್ಚು ತಡಮಾಡದೇ ಹೊಕ್ಕುಳಬಳ್ಳಿ ಕತ್ತರಿಸಿ. ಎರಡೂ ಬದಿಯಲ್ಲಿ ಸ್ವಲ್ಪ ಜಾಗ ಬಿಟ್ಟು ಕತ್ತರಿಸಿದಾಗ ಹೆಚ್ಚು ರಕ್ತಸ್ರಾವವಾಗದಂತೆ ಎರಡು ಕಡೆ ಕಟ್ಟಬೇಕು. ನಂತರ ಮಧ್ಯದಲ್ಲಿ ಕತ್ತರಿಸ ಬೇಕು. ಇಲ್ಲದಿದ್ದರೆ ತಾಯಿ ಮತ್ತು ಮಗುವಿನ ಜೀವಕ್ಕೆ ಅಪಾಯ’ ಎಂದು ವೈದ್ಯರು ವೀಡಿಯೋ ಕರೆಯಲ್ಲಿಯೇ ಮಾರ್ಗದರ್ಶನ ಮಾಡಿದ್ದಾರೆ.

ಮಧುಲಿಕಾ ವೈದ್ಯರ ನಿರ್ದೇಶನದ ಮೇರೆಗೆ, ವಿಜಯಲಕ್ಷ್ಮಿ ಜೋಶಿ, ಮಾಧುರಿ ಕಾಮನಹಳ್ಳಿ, ಮುಕ್ತಾ ಕಾಮನಹಳ್ಳಿ ಮತ್ತು ಶಿವಲೀಲಾ ಪಟ್ಟಾರ್ ಅವರ ಸಹಾಯದೊಂದಿಗೆ ಗ್ಲೌಸ್ ಮತ್ತು ಮಾಸ್ಕ್ ಹಾಕಿಕೊಂಡು, ಹೊಸದಾದ ಬ್ಲೇಡ್ ನಿಂದ ಹೊಕ್ಕುಳಬಳ್ಳಿ ಕತ್ತರಿಸಿ, ಮಗು ಮತ್ತು ತಾಯಿಯನ್ನು ರಕ್ಷಿಸಿದ್ದಾರೆ.

ನಂತರ ಮಗುವನ್ನು ಸ್ವಚ್ಚಗೊಳಿಸಿ, ಬೆಚ್ಚಗಿನ ಬಟ್ಟೆಯಲ್ಲಿ ಹೊದಿಸಿ, ತಾಯಿಗೆ ಹಾಲುಣಿಸಲು ಹೇಳಿದರು. ಅಷ್ಟರಲ್ಲಿ ಸ್ಥಳಕ್ಕೆ ಆಂಬುಲೆನ್ಸ್ ಬಂದಿತ್ತು.

ಈಗ ವಾಸವಿಯವರ ತವರೂರಾದ ನವಲಗುಂದದಲ್ಲಿದ್ದು, ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ.

ಈ ಮಹತ್ವದ ಕೆಲಸ ಮಾಡಿದ್ದಕ್ಕಾಗಿ ವೈದ್ಯರು ಮತ್ತು ನೆರಯವರಾದ ಮಧುಲಿಕಾ ದೇಸಾಯಿಯವರು ಅಭಿನಂದನೆಗೆ ಪಾತ್ರರಾಗಿದ್ದಾರೆ.


ಇದನ್ನೂ ಓದಿ: ರಫೇಲ್ ಒಂದು ಗೇಮ್ ಚೇಂಜರ್, ಚೀನಾದ ಜೆ20 ಇದಕ್ಕೆ ಸಮವಲ್ಲ: ಮಾಜಿ ವಾಯುದಳ ಮುಖ್ಯಸ್ಥ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...