Homeಚಳವಳಿವರವರ ರಾವ್ ಆರೋಗ್ಯ ಮತ್ತು ಚಿಕಿತ್ಸೆಯ ವರದಿ ಸಲ್ಲಿಸುವಂತೆ ಬಾಂಬೆ ಹೈಕೋರ್ಟ್ ಸೂಚನೆ

ವರವರ ರಾವ್ ಆರೋಗ್ಯ ಮತ್ತು ಚಿಕಿತ್ಸೆಯ ವರದಿ ಸಲ್ಲಿಸುವಂತೆ ಬಾಂಬೆ ಹೈಕೋರ್ಟ್ ಸೂಚನೆ

ಕೊರೆಗಾಂವ್‌ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ ಬಂಧನಕ್ಕೊಳಗಾಗಿರುವ ವರವರ ರಾವ್ ಇತ್ತೀಚೆಗಷ್ಟೇ ಕೊರೊನಾ ಪಾಸಿಟಿವ್ ಆಗಿದ್ದರು.

- Advertisement -
- Advertisement -

ಕ್ರಾಂತಿಕಾರಿ ಕವಿ ವರವರ ರಾವ್ ಅವರ ಆರೋಗ್ಯ ಮತ್ತು ಚಿಕಿತ್ಸೆಯ ಬಗ್ಗೆ ವರದಿ ಸಲ್ಲಿಸುವಂತೆ ಬಾಂಬೆ ಹೈಕೋರ್ಟ್ ಮಂಗಳವಾರ ನಾನಾವತಿ ಆಸ್ಪತ್ರೆಗೆ ನಿರ್ದೇಶಿಸಿದೆ ಎಂದು ’ಲೈವ್ ಲಾ’ ವರದಿ ಮಾಡಿದೆ.

ಕೊರೆಗಾಂವ್‌ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ ಬಂಧನಕ್ಕೊಳಗಾಗಿರುವ ವರವರ ರಾವ್ ಇತ್ತೀಚೆಗಷ್ಟೇ ಕೊರೊನಾ ಪಾಸಿಟಿವ್ ಆಗಿದ್ದರು. ಅವರ ಆರೋಗ್ಯದ ಬಗ್ಗೆ ಹಾಗೂ ಅವರ ಚಿಕಿತ್ಸೆಯ ಬಗ್ಗೆ ಕುಟುಂಬವು ಆತಂಕ ಮತ್ತು ಹತಾಶೆಯನ್ನು ವ್ಯಕ್ತಪಡಿಸಿತ್ತು.

ನ್ಯಾಯಮೂರ್ತಿಗಳಾದ ಆರ್.ಡಿ. ಧನುಕಾ ಮತ್ತು ವಿ. ಜಿ. ಬಿಶ್ತ್ ಅವರ ವಿಭಾಗೀಯ ನ್ಯಾಯಪೀಠವು ಮಧ್ಯಂತರ ಜಾಮೀನು ನಿರಾಕರಣೆ ವಿರುದ್ಧ ರಾವ್ ಅವರ ಮನವಿ ಮತ್ತು ತಾಲೋಜ ಜೈಲು ಅಧಿಕಾರಿಗಳಿಗೆ ನಿರ್ದೇಶನ ಕೋರಿ ಸಲ್ಲಿಸಿದ ಅರ್ಜಿಯನ್ನು ವಿಚಾರಣೆ ನಡೆಸಿತು. ವರವರ ರಾವ್‌ ಅವರನ್ನು ಜೂನ್ 2, 2020 ರಂದು ಜೆಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿದ ನಂತರ ಜೈಲಿನ ಆಸ್ಪತ್ರೆಯಲ್ಲಿ ಇರಿಸಲಾಗಿದೆ.

ವರವರ ಅವರ ಪರವಾಗಿ ಹಾಜರಾದ ವಕೀಲ ಸುದೀಪ್ ಪಾಸ್ಬೋಲಾ ಆಸ್ಪತ್ರೆಯಿಂದ ಅಥವಾ ಜೈಲು ಅಧಿಕಾರಿಗಳಿಂದ ಅವರ ಆರೋಗ್ಯದ ಬಗ್ಗೆ ಯಾವುದೇ ಮಾಹಿತಿಯನ್ನು ಪಡೆಯಲು ಕುಟುಂಬಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಅರ್ಜಿಯಲ್ಲಿ ದೂರಿದ್ದಾರೆ.


ಓದಿ: ಕವಿ ವರವರ ರಾವ್ ಬಿಡುಗಡೆಗೊಳಿಸಿ: ಸಾಹಿತಿ, ಚಿಂತಕರ ಆಗ್ರಹ


ಅವರ ಕುಟುಂಬವು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಮತ್ತು ಮಹಾರಾಷ್ಟ್ರದ ಗೃಹ ಸಚಿವರಿಗೆ ಮಧ್ಯಪ್ರವೇಶ ಮಾಡಬೇಕು ಎಂದು ಪತ್ರ ಬರೆದಿದ್ದು, ಹನ್ನೆರಡು ದಿನಗಳಿಂದ ರಾವ್ ಅವರ ಆರೋಗ್ಯದ ಬಗ್ಗೆ ಯಾವುದೇ ಮಾಹಿತಿಗಳು ಬಂದಿಲ್ಲ ಎಂದು ಆರೋಪಿಸಿದ್ದಾರೆ.

ಎನ್ಐಎ ಸಲಹೆಗಾರ ಹೆಚ್ಚುವರಿ ಸಾಲಿಸಿಟರ್ ಜನರಲ್ ಅನಿಲ್ ಸಿಂಗ್ “ಕುಟುಂಬವು ಅವರನ್ನು ಮಾತನಾಡಲು ಅಥವಾ ಭೇಟಿಯಾಗಲು ಬಯಸಿದರೆ ಹಾಗೂ ಆಸ್ಪತ್ರೆ ಅನುಮತಿಸಿದರೆ ನಮಗೆ ಯಾವುದೇ ಸಮಸ್ಯೆ ಇಲ್ಲ. ನಾನಾವತಿ ಆಸ್ಪತ್ರೆ ಅತ್ಯುತ್ತಮ ಆಸ್ಪತ್ರೆ ಮತ್ತು ಅವರ ಆರೋಗ್ಯದ ಬಗ್ಗೆ ಅಥವಾ ಚಿಕಿತ್ಸೆ ಬಗ್ಗೆ ಯಾವುದೇ ಕುಂದುಕೊರತೆ ಇರುವುದಿಲ್ಲ” ಎಂದು ಹೇಳಿದರು

ಇದಕ್ಕೆ ಪ್ರತಿಕ್ರಿಯಿಸಿದ ಪಾಸ್ಬೋಲಾ, ಅವರ ಆರೋಗ್ಯದ ಬಗ್ಗೆ ಯಾವುದೇ ಮಾಹಿತಿ ಇಲ್ಲದಿರುವಾಗ ಯಾವುದೇ ಕುಂದುಕೊರತೆ ಇಲ್ಲ ಎಂದು ಹೇಗೆ ಹೇಳುತ್ತೀರಿ ಎಂದು ಪ್ರಶ್ನಿಸಿದ್ದಾರೆ.

ಈ ಸಮಯದಲ್ಲಿ ಅವರ ಆರೋಗ್ಯ ಮಾಹಿತಿಯನ್ನು ಹಂಚಿಕೊಂಡರೆ ಏನಾದರೂ ಸಮಸ್ಯೆ ಇದೆಯೇ ಎಂದು ನ್ಯಾಯಪೀಠ ರಾಜ್ಯವನ್ನು ಕೇಳಿದೆ. ಯಾವುದೇ ಮಾಹಿತಿ ಹಂಚಿಕೊಳ್ಳಲು ಕುಟುಂಬಕ್ಕೆ ಯಾವುದೇ ಆಕ್ಷೇಪವಿಲ್ಲದಿದ್ದರೆ ವರದಿ ಸಲ್ಲಿಸಲು ಆಸ್ಪತ್ರೆಗೆ ನಿರ್ದೇಶನ ನೀಡಬಹುದು ಎಂದು ಪಿಪಿ ದೀಪಕ್ ಠಾಕ್ರೆ ಹೇಳಿದ್ದಾರೆ.

ಹೀಗಾಗಿ, ರಾವ್ ಅವರ ಆರೋಗ್ಯ ಸ್ಥಿತಿ ಮತ್ತು ಚಿಕಿತ್ಸೆಯ ಕುರಿತು ವರದಿಯನ್ನು ಸಲ್ಲಿಸುವಂತೆ ನ್ಯಾಯಪೀಠ ನಾನಾವತಿ ಆಸ್ಪತ್ರೆಗೆ ನಿರ್ದೇಶಿಸಿತು. ಈ ವಿಷಯದ ಮುಂದಿನ ವಿಚಾರಣೆಯ ದಿನಾಂಕ ಆಗಸ್ಟ್ 7 ರಂದು ನಡೆಯಲಿದೆ.


ಓದಿ: ವರವರ ರಾವ್ ಅನಾರೋಗ್ಯದ ಸ್ಥಿತಿಯನ್ನು ದುರುಪಯೋಗ ಮಾಡುತ್ತಿದ್ದಾರೆ; ಅವರಿಗೆ ಜಾಮಿನು ನೀಡಕೂಡದು: NIA


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...