Homeಕರ್ನಾಟಕವೈದ್ಯಕೀಯ ಉಪಕರಣಗಳ ಖರೀದಿ ಹಗರಣದಲ್ಲಿ ಅಶ್ವತ್ಥ ನಾರಾಯಣ್ ಪಾತ್ರ: ಆಪ್ ಆರೋಪ

ವೈದ್ಯಕೀಯ ಉಪಕರಣಗಳ ಖರೀದಿ ಹಗರಣದಲ್ಲಿ ಅಶ್ವತ್ಥ ನಾರಾಯಣ್ ಪಾತ್ರ: ಆಪ್ ಆರೋಪ

- Advertisement -
- Advertisement -

ಬೆಂಗಳೂರು ಅಂತರರಾಷ್ಟ್ರೀಯ ವಸ್ತು ಪ್ರದರ್ಶನ ಮೈದಾನದಲ್ಲಿ ಸ್ಥಾಪಿಸಿರುವ ಬೃಹತ್ ಆರೈಕೆ ಕೇಂದ್ರಕ್ಕೆ ಬೇಕಾದ ಅಗತ್ಯ ವಸ್ತುಗಳ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ. ಈ ಹಗರಣದ ಹಿಂದೆ ಡಿಸಿಎಂ ಅಶ್ವಥ್ ನಾರಾಯಣ್ ಇದ್ದಾರೆ ಎಂದು ಆಮ್‌ ಆದ್ಮಿ ಪಕ್ಷ ಆರೋಪಿಸಿದೆ.

ಈ ಕುರಿತು ಹೈಕೋರ್ಟ್ ಮುಖ್ಯ ನ್ಯಾಯಧೀಶರ ನೇತೃತ್ವದಲ್ಲಿ ಸ್ವತಂತ್ರ ನ್ಯಾಯಾಂಗ ತನಿಖೆ ಆಗಲಿ ಎಂದು ಆಪ್‌ ಆಗ್ರಹಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಆಮ್ ಆದ್ಮಿ ಪಕ್ಷ ರಾಜ್ಯ ಮಾಧ್ಯಮ ಸಂಚಾಲಕರಾದ ಜಗದೀಶ್ ವಿ ಸದಂ, “ಸ್ವತಃ ವೈದ್ಯರಾಗಿರುವ, ಅಲ್ಲದೇ ಅನೇಕ ವೈದ್ಯಕೀಯ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿರುವ ಉಪಮುಖ್ಯಮಂತ್ರಿ ಸಿ.ಅಶ್ವಥ್ ನಾರಾಯಣ್ ವೈದ್ಯಕೀಯ ಪರಿಕರಗಳ ಖರೀದಿಯಲ್ಲಿ 2000 ಕೋಟಿ ಭ್ರಷ್ಟಾಚಾರ ನಡೆಯಲು ಹೇಗೆ ಅನುವು ಮಾಡಿಕೊಟ್ಟರು” ಎಂದು  ಪ್ರಶ್ನಿಸಿದ್ದಾರೆ.

ಸ್ವತಃ ವೈದ್ಯರಾಗಿರುವ ಅಶ್ವತ್ಥ ನಾರಾಯಣ ಅವರಿಗೆ ಯಾವ ಯಾವ ಉಪಕರಣ ಎಷ್ಟೆಷ್ಟು ಮೌಲ್ಯಕ್ಕೆ ದೊರೆಯುತ್ತದೆ ಎನ್ನುವ ಪ್ರಾಥಮಿಕ ಜ್ಞಾನ ಇದ್ದೇ ಇರುತ್ತದೆ. ಇವರು ಈ ಹಗರಣವನ್ನು ತಡೆಯಬಹುದಿತ್ತು, ಆದರೆ ಆ ಕೆಲಸ ಮಾಡದೇ ಕರ್ನಾಟಕದ ಮಾನ ರಾಷ್ಟ್ರ ಮಟ್ಟದಲ್ಲಿ ಹರಾಜಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ಲೋಕಾಯುಕ್ತ ಸಂಸ್ಥೆಯನ್ನು ಹಾಳುಗೆಡವಿತು. ಅಧಿಕಾರಕ್ಕೆ ಬಂದರೆ 24 ಗಂಟೆಗಳಲ್ಲಿ ಮರುಸ್ಥಾಪಿಸುತ್ತೇನೆ ಎಂದು ವೀರಾವೇ‍ಷದಿಂದ ಗರ್ಜಿಸಿದ್ದ ಯಡಿಯೂರಪ್ಪ ಈಗ ಮೆತ್ತಗಾಗಿದ್ದಾರೆ. ಭ್ರಷ್ಟಾಚಾರದ ವಿಷಯದಲ್ಲಿ ಈ ಪಕ್ಷಗಳ ನಿಯತ್ತು ಇಷ್ಟೇ ಎಂದು ಕಿಡಿಕಾರಿದ್ದಾರೆ.

ಸುವಿಧಾ ಕ್ಯಾಬಿನ್ ಹಗರಣ

ಪೌರ ಕಾರ್ಮಿಕರಿಗೆ ಸುವಿಧಾ ಕ್ಯಾಬಿನ್ ಸ್ಥಾಪಿಸುವ ಹೆಸರಿನಲ್ಲಿ ಬೇನಾಮಿ ಕಂಪೆನಿಗೆ 16 ಕೋಟಿ ಮೌಲ್ಯದ ಗುತ್ತಿಗೆ ನೀಡಲು ಹೊರಟಿರುವುದರ ಹಿಂದೆ ಡಿಸಿಎಂ ಅಶ್ವಥ್ ನಾರಾಯಣ ಅವರೂ ಇದ್ದಾರೆ ಎಂದು ಆಪ್‌ ಮುಖಂಡ ಶರತ್ ಖಾದ್ರಿ ಆರೋಪಿಸಿದ್ದಾರೆ.

ಆಗ್ರ್ಯಾ ಇನ್‌ಫ್ರಾಟೆಕ್ ಎನ್ನುವ ಅಸ್ತಿತ್ವವೇ ಇಲ್ಲದ ಸಂಸ್ಥೆಗೆ ಗುತ್ತಿಗೆ ನೀಡಲಾಗುತ್ತಿದ್ದು, 20 ಅಡಿ ಉದ್ದ, 8.5 ಅಡಿ ಅಗಲ, 8 ಅಡಿ ಎತ್ತರದ ಈ ಕ್ಯಾಬೀನ್‌ನಲ್ಲಿ ಪೌರ ಕಾರ್ಮಿಕರಿಗೆ ಪ್ರತ್ಯೇಕ ಶೌಚಾಲಯ, ಊಟ ಮಾಡಲು ಹಾಗೂ ಬಟ್ಟೆ ಬದಲಾಯಿಸಲು ಸ್ಥಳಾವಕಾಶ ನೀಡುವುದು ಇದರ ಉದ್ದೇಶ. ಆದರೆ, ಮಾರುಕಟ್ಟೆ ದರದಲ್ಲಿ ಈ ಕ್ಯಾಬಿನ್‌ಗಳನ್ನು ತಯಾರಿಸಲು ಸುಮಾರು 80 ಸಾವಿರ ಖರ್ಚಾಗುತ್ತದೆ. ಆದರೆ ಯಾವುದೇ ಅನುಭವವೇ ಇಲ್ಲದ ಹಾಗೂ ಅಸ್ತಿತ್ವವೇ ಇಲ್ಲದ ಸಂಸ್ಥೆಯಾದ ಆಗ್ರ್ಯಾ ಇನ್‌ಫ್ರಾಟೆಕ್ ಸಂಸ್ಥೆ ಒಂದು ಕ್ಯಾಬಿನ್‌ಗೆ 8 ಲಕ್ಷ ಎಂದು ದರ ನಿಗದಿ ಮಾಡಿ ಪೂರೈಸಲು ಮುಂದಾಗಿದೆ. ಇದು ಹಗಲು ದರೋಡೆಯಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಕೇವಲ ಬಾಯಿ ಮಾತಿನಲ್ಲಿ ಪೌರ ಕಾರ್ಮಿಕರ ಬಗ್ಗೆ ಕನಿಕರ ತೋರಿಸಿ ಅವರ ಬೆನ್ನಿಗೆ ಚೂರಿ ಇರಿಯುವ ಕೆಲಸ ನಡೆಯುತ್ತಿದೆ‌. ಈ ಭ್ರಷ್ಟಾಚಾರದಲ್ಲಿ ತೊಡಗಿರುವ ಡಿಸಿಎಂ ಅಶ್ವಥ್ ನಾರಾಯಣ್‌ ಅವರು ರಾಜೀನಾಮೆ ನೀಡಬೇಕೆಂದು ಆಪ್‌ ಆಗ್ರಹಿಸಿದೆ.


ಇದನ್ನೂ ಓದಿ: ವೈದ್ಯಕೀಯ ಸಾಮಗ್ರಿ ಖರೀದಿ ಹಗರಣ: ಈಶ್ವರ ಖಂಡ್ರೆ, ಸುಧಾಕರ್ ನಡುವೆ ಜಟಾಪಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...