Homeಮುಖಪುಟಬಾಲಿವುಡ್ ಗ್ಯಾಂಗ್! ಸ್ವಜನಪಕ್ಷಪಾತದ ಸುಳಿಯಲ್ಲಿ ಹಿಂದಿ ಚಿತ್ರರಂಗ

ಬಾಲಿವುಡ್ ಗ್ಯಾಂಗ್! ಸ್ವಜನಪಕ್ಷಪಾತದ ಸುಳಿಯಲ್ಲಿ ಹಿಂದಿ ಚಿತ್ರರಂಗ

- Advertisement -
- Advertisement -

ಬಹುತೇಕರಿಗೆ ನೆನಪಿದೆ. ತೊಂಬತ್ತರ ದಶಕದ ಮಧ್ಯಭಾಗದಲ್ಲಿ, ಅಂದರೆ 1995ರಲ್ಲಿ ರಾಮ್ ಗೋಪಾಲ್ ವರ್ಮಾ ನಿರ್ದೇಶನದ ‘ರಂಗೀಲಾ’ ಚಿತ್ರ ಹೊರಬಂತು. 90ರ ದಶಕದ ಹಿಂದಿ ಚಿತ್ರರಂಗದ ಅಷ್ಟೇನು ಆಪ್ತವಲ್ಲದ ಸಿನಿ ಸಂಗೀತಕ್ಕೆ ಹೊಸ ಹುರುಪು ಬಂದಿತ್ತು. ಮೂವತ್ತು ವರ್ಷದ ಎ ಆರ್ ರೆಹಮಾನ್ ಸಿನಿ ಸಂಗೀತದ ಹೊಸ ರುಚಿಯನ್ನು ಉಣಿಸಿದರು. ಅಷ್ಟು ಹೊತ್ತಿಗೆ ದಕ್ಷಿಣ ಭಾರತದಲ್ಲಿ ಹದಿನೆಂಟು ಚಿತ್ರಗಳಿಗೆ ಸಂಗೀತ ನೀಡಿ ತಮ್ಮ ಛಾಪು ಒತ್ತಿದ್ದರು.

ದಕ್ಷಿಣದವರೇ ಆದ ವರ್ಮಾ ರೆಹಮಾನ್‍ರನ್ನು ಹಿಂದಿ ಚಿತ್ರರಂಗಕ್ಕೆ ಪರಿಚಯಿಸಿದ್ದು, ಬಾಲಿವುಡ್ ಸಿನಿ ಸಂಗೀತದ ಸ್ವರೂಪವನ್ನೇ ಬದಲಿಸಿತು.

ಅದು ಪಂಜಾಬಿ ಹಿನ್ನೆಲೆಯ ‘ರಂಗ್‍ದೇ ಬಸಂತಿ’ ಇರಲಿ, ಸೂಫಿ ಸಂಗೀತ ಅನುಭವ ನೀಡುವ ‘ಜೋಧಾ ಅಕ್ಬರ್’ ಇರಲಿ, ಪಾಶ್ಚಾತ್ಯ ಸ್ಪರ್ಶವಿರುವ ‘ಯುವ್‍ರಾಜ್’ ಇರಲಿ, ಹೀಗೆ ಪಟ್ಟಿ ಮಾಡುತ್ತಲೇ ಹೋಗಬಹುದು. ಅಂತಹ ವೈವಿಧ್ಯಮಯವಾದ ಸಂಗೀತ ನೀಡಿದ ಪ್ರತಿಭಾವಂತ ರೆಹಮಾನ್.

ಯಾಕೆ ಇಷ್ಟೆಲ್ಲಾ ನೆನಪಿಸಿಕೊಳ್ಳಬೇಕಾಯಿತು ಎಂದರೆ, ಯಾವ ಜನ ಈತನನ್ನು ಕೊಂಡಾಡಿದ್ದರೊ, ಅವರೇ ಗುಂಪುಗಾರಿಕೆ, ಸ್ವಜನಪಕ್ಷಪಾತ ಮಾಡುವ ಮೂಲಕ ತಮ್ಮನ್ನು ಅವಕಾಶಗಳಿಂದ ದೂರ ಮಾಡುತ್ತಿದ್ದಾರೆ ಎಂದು ಈಗ ಸ್ವತಃ ರೆಹಮಾನ್ ಹೇಳಿದ್ದಾರೆ. ಅವರು ‘ಗ್ಯಾಂಗ್’ ಎನ್ನುವ ಪದವನ್ನು ಬಳಸಿದ್ದಾರೆ. ಅಂದರೆ ಒಂದು ಗುಂಪು ವ್ಯವಸ್ಥಿತವಾಗಿ ಯಾರನ್ನು ಬೆಳೆಸಬೇಕು, ಯಾರನ್ನು ತುಳಿಯಬೇಕು ಎಂಬುದನ್ನು ನಿರ್ಧರಿಸುತ್ತದೆ ಎಂಬುದನ್ನು ಸೂಚಿಸಿದ್ದಾರೆ.

ನಿಜ, ಯಾವುದೇ ಸೃಜನಶೀಲ ವ್ಯಕ್ತಿಯ ಸೃಜನಶಕ್ತಿ ಒಂದು ಕಾಲದ ನಂತರ ಆಕರ್ಷಣೆ ಕಳೆದುಕೊಳ್ಳುತ್ತದೆ. ಆದರೆ ರೆಹಮಾನ್ ಇತರೆ ಭಾಷೆಯ ಸಿನಿಮಾಗಳಿಗೆ ನೀಡುವ ಸಂಗೀತದಲ್ಲಿ ಇನ್ನೂ ಅದೇ ಮೋಡಿ ಉಳಿದಿದೆ. ಆದರೂ ಹಿಂದಿ ಚಿತ್ರರಂಗ ಅವರನ್ನು ದೂರವಿಟ್ಟಿದ್ದು ಏಕೆ?

ರೆಹಮಾನ್ ಸಾರ್ವಜನಿಕವಾಗಿ ಬಾಲಿವುಡ್‍ನ ಪಕ್ಷಪಾತವನ್ನು, ಗುಂಪುಗಾರಿಕೆಯ ಬಗ್ಗೆ ತಮ್ಮ ಅಸಮಾಧಾನ, ಬೇಸರವನ್ನು ಹೊರಹಾಕುವುದಕ್ಕೂ ಎರಡು ದಿನಗಳ ಮೊದಲು ಹಿಂದಿನ ಪ್ರಸಿದ್ಧ ನಿರ್ದೇಶಕರುಗಳಾದ ಅನುಭವ ಸಿನ್ಹಾ, ಹನ್ಸಲ್ ಮೆಹ್ತಾ ಮತ್ತು ಸುಧೀರ್ ಶರ್ಮಾ, ಇನ್ನು ಬಾಲಿವುಡ್‍ನಿಂದ ಹೊರನಡೆಯುವುದಾಗಿ ಹೇಳಿಕೆಯನ್ನು ಕೊಟ್ಟಿದ್ದಾರೆ. ಇದು ಬಾಲಿವುಡ್ ಪಾಲಿಗೆ ಒಂದು ಆಘಾತ!

ತೊಂಬತ್ತರ ದಶಕದಲ್ಲಿ ಎರಡನೆಯ ದರ್ಜೆಯ ಸಿನಿಮಾಗಳೇ ಸದ್ದು ಮಾಡುತ್ತಿದ್ದಾಗ, ಹೊಸ ಅಲೆಯ ಸಿನಿಮಾ ಮತ್ತು ಸಂಗೀತ ಎರಡೂ ನಿಧಾನವಾಗಿ ತನ್ನ ಛಾಪು ಒತ್ತಿತು. ಇದು 2000ದಲ್ಲೂ ಮುಂದುವರೆದು ಹಿಂದಿ ಚಿತ್ರರಂಗದಲ್ಲಿ ಹೊಸ ಪ್ರಯೋಗಗಳು ನಡೆದವು.

ಖಾನ್, ಕಪೂರ್ ಸೇರಿದಂತೆ ಕೆಲವೇ ಕುಟುಂಬಗಳು ಹಿಂದಿ ಚಿತ್ರರಂಗವನ್ನು ನಿಯಂತ್ರಿಸುತ್ತಿದ್ದವು. ಆದರೆ ಕಾಲ ಸರಿದಂತೆ ಯಾವುದೇ ನಟನೆಯ ಹಿನ್ನೆಲೆಯಿಲ್ಲದ, ಸಿನಿಮಾ ಕುಟುಂಬದವರಲ್ಲದ ಪ್ರತಿಭೆಗಳು ನಟನೆ, ನಿರ್ದೇಶನ, ಸಂಗೀತ ನಿರ್ದೇಶನದ ಕನಸುಗಳನ್ನು ಹೊತ್ತು ಬಾಲಿವುಡ್ ಅಂಗಳಕ್ಕೆ ಬಂದರು. ವರ್ಷಗಟ್ಟಲೆ ಕಷ್ಟಪಟ್ಟು ತಮ್ಮದೇ ಆದ ವರ್ಚಸ್ಸು ರೂಪಿಸಿಕೊಳ್ಳಲು ಶ್ರಮಿಸಿದರು.

ಈ ಲೇಖನ ಬರೆಯುವ ಹೊತ್ತಿಗೆ ‘ಗ್ಯಾಂಗ್’ವೊಂದರ ಸ್ವಜನ ಪಕ್ಷಪಾತ ಅವರ ವೃತ್ತಿಜೀವನಕ್ಕೆ ಎಷ್ಟು ತೊಂದರೆ ಕೊಟ್ಟಿತು ಎಂಬುದನ್ನು ನಟ ರಣವೀರ್ ಶೊರೆ ವಿವರಿಸಿದ್ದಾರೆ. ಮಹೇಶ್ ಕುಟುಂಬದಿಂದ ಸಾಕಷ್ಟು ತೊಂದರೆ ಅನುಭವಿಸಿದ್ದ ಶೋರೆ, ತಮ್ಮ ವಿರುದ್ಧ ಹರಡಲಾದ ಗಾಳಿಸುದ್ದಿ, ಸುಳ್ಳುಗಳಿಂದ ಮುಕ್ತವಾಗಿ ನಟನಾಗಿ ಬೆಳೆಯುವುದಕ್ಕೆ ಉಂಟಾದ ಕಷ್ಟಗಳ ಬಗ್ಗೆ ಹೇಳಿಕೊಂಡಿದ್ದಾರೆ.

ಮತ್ತೊಬ್ಬ ನಟ ಆಯುಷ್‌ಮಾನ್ ಖೊರನಾ, ಬಾಲಿವುಡ್‍ನಲ್ಲಿ ಸ್ವಜನ ಪಕ್ಷಪಾತವಿಲ್ಲದೇ ಹೋಗಿದ್ದರೆ ಐದು ವರ್ಷದ ಮೊದಲೇ ನಾನು ನಾಯಕ ನಟನಾಗುತ್ತಿದ್ದೆ ಎಂದು ಹೇಳಿಕೊಂಡಿದ್ದಾರೆ.

ನಟ ಸುಶಾಂತ್ ರಾಜಪೂತ್ ಸಾವು ಹಲವರನ್ನು ಕಂಗೆಡಿಸಿದೆ. ಸಾಮಾನ್ಯ ಕುಟುಂಬದಿಂದ ಬಂದ ಸುಶಾಂತ್ ಸಿಂಗ್ ಒಳ್ಳೆಯ ನಟನಾಗಿ ಬೆಳೆಯುವುದನ್ನು ಸಹಿಸಿದ ಬಾಲಿವುಡ್‍ನ ಕೆಲವು ಹಿರಿಯರು ಆತನಿಗೆ ಅವಕಾಶ ಕೊಡದೇ ಇದ್ದ ಸುದ್ದಿಗಳು ನಿಧಾನವಾಗಿ ಹೊರಗೆ ಬರಲಾರಂಭಿಸಿದ ಕೂಡಲೇ ಅನೇಕರು ಬಾಲಿವುಡ್‍ನ ಒಳಗಿನ ಹೊಲಸನ್ನು ಬಿಚ್ಚಿಡಲಾರಂಭಿಸಿದ್ದಾರೆ.

ಈ ಬಾಲಿವುಡ್ ಒಂದು ಕಾಲದಲ್ಲಿ ಹಾಜಿ ಮಸ್ತಾನ್, ದಾವೂದ್ ಇಬ್ರಾಹಿಂ ಹಿಡಿತದಲ್ಲಿತ್ತು. ಅನಿಲ್ ಕಪೂರ್, ಸಲ್ಮಾನ್ ಖಾನ್, ಸುನಿಲ್ ದತ್, ಮಂದಾಕಿನಿ ಹೀಗೆ ಎಷ್ಟೊಂದು ನಟನಟಿಯರು ಭೂಗತ ದೊರೆಗಳ ಸಂಪರ್ಕದಲ್ಲಿ ಇದ್ದದ್ದು, ಸಿನಿಮಾ ನಿರ್ಮಾಣ, ನಟ-ನಟಿಯರ ಆಯ್ಕೆ ಎಲ್ಲದರಲ್ಲೂ ಈ ಭೂಗತ ಪಾತಕಿಗಳ ಕೈವಾಡ ಇದ್ದ ವಿಷಯಗಳೆಲ್ಲವೂ ತಿಳಿದದ್ದೆ. ಆದರೆ ಬಾಲಿವುಡ್‍ನ ಬೆರಳೆಣಿಕೆಯ ಚಿತ್ರ ನಿರ್ಮಾಣ ಸಂಸ್ಥೆಗಳು ಬಲಿಷ್ಠವಾದ ಮೇಲೆ, ಅವು ಬಾಲಿವುಡ್‍ನ ಪಾರುಪತ್ಯ ನಡೆಸುತ್ತಿವೆ ಎಂಬ ದೂರುಗಳು ಈಗ ಬಯಲಾಗುತ್ತಿವೆ.

ಧರ್ಮ ಪ್ರೊಡಕ್ಷನ್ಸ್‌ನ ಕರಣ್ ಜೋಹರ್ ಈಗ ನೆಪೊಟಿಸಂ ಆರೋಪಕ್ಕೆ ತೀವ್ರವಾಗಿ ಗುರಿಯಾಗಿರುವ ನಿರ್ಮಾಪಕ. ಸೂಪರ್ ಸ್ಟಾರ್ ಗಳನ್ನೇ ತಾರಾಗಣಕ್ಕೆ ಬಳಸಿ ಕೆಟ್ಟ ಸಿನಿಮಾಗಳನ್ನು ನಿರ್ಮಿಸಿಯೂ ಮಾರುಕಟ್ಟೆಯಲ್ಲಿ ಬದುಕುಳಿಯುವ ಯಶ್ ರಾಜ್ ಫಿಲ್ಮ್ಸ್ ವಿರುದ್ಧ ಅಂತಹ ದೂರುಗಳಿವೆ.

ಪ್ರೊಡಕ್ಷನ್ ಹೌಸ್‍ಗಳಷ್ಟೇ ಅಲ್ಲ, ಚಿತ್ರರಂಗದ ಹಿರಿತಲೆಗಳು ಕೂಡ ಉತ್ಸಾಹಿಗಳನ್ನು ಹತ್ತಿಕ್ಕಿದ್ದಾರೆ. ಮಹೇಶ್ ಭಟ್‍ರಂತಹ ನಿರ್ದೇಶಕರ ಮೇಲೆ ಇಂತಹ ಆರೋಪಗಳಿವೆ.

ಗುಜರಾತ್‍ನ ಗೋಧ್ರಾ ಪ್ರಕರಣದ ನಂತರ ರಾಜಕೀಯದ ಪ್ರಭಾವವೂ ತೀವ್ರವಾಗಿದ್ದು, ಚಿತ್ರರಂಗದ ಅನೇಕ ನಟ, ನಿರ್ದೇಶಕರಿಗೆ ತಮ್ಮ ವೃತ್ತಿ ಮುಂದುವರೆಸುವ ಸವಾಲು ಕೂಡ ಕಾಡಿದೆ. ಸದ್ಯ ಬಾಲಿವುಡ್‍ಗೆ ಗುಡ್ ಬೈ ಹೇಳಿದ ಮೂವರು ನಿರ್ದೇಶಕರು, ಭಯೋತ್ಪಾದನೆ, ಜಾತಿ ವ್ಯವಸ್ಥೆ, ಭ್ರಷ್ಟ ರಾಜಕಾರಣ, ಕೋಮು ರಾಜಕಾರಣಗಳನ್ನು ಬಲವಾಗಿ ಖಂಡಿಸಿ ಚಿತ್ರಗಳನ್ನು ನಿರ್ಮಿಸಿದ್ದವರು.

ಕಾಲಕಾಲಕ್ಕೆ ತನ್ನ ಹಿತಾಸಕ್ತಿ ಕಾಪಾಡಿಕೊಳ್ಳುವುದಕ್ಕೆ ಎಲ್ಲ ರೀತಿಯ ಪಟ್ಟುಗಳನ್ನು ಹಾಕುತ್ತಾ ಬಂದ ಹಿಂದಿ ಚಿತ್ರರಂಗದ ಕೆಲವು ಪ್ರಭಾವಿಗಳು ನಿಧಾನವಾಗಿ ಕಥೆ, ಪ್ರತಿಭೆ, ಸೃಜನಶೀಲತೆಗೆ ಒತ್ತುಕೊಡದೆ, ಅಸ್ತಿತ್ವ, ಹಿತಾಸಕ್ತಿಗಳಿಗೆ ಒತ್ತುನೀಡುತ್ತಾ, ಪ್ರತಿಭಾವಂತರನ್ನು ಮತ್ತು ಚಿತ್ರ ನಿರ್ಮಾಣದ ನೈಜ ಸೃಜನಶೀಲ ಕ್ರಿಯೆಯನ್ನು ಕೊಲ್ಲಲಾರಂಭಿಸಿವೆ.

ಎಸ್ ಕುಮಾರ್


ಇದನ್ನು ಓದಿ: ಕರ್ನಾಟಕದ ಕರಿ ಚಿರತೆ; ಜಂಗಲ್ ಬುಕ್‌‌ ಸಿನಿಮಾದ ’ಬಘೀರಾ’ ಎಂದ ನೆಟ್ಟಿಗರು..!
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...