Homeಅಂಕಣಗಳು“ನಿನ್ನ ಕಪಟತನ ಗೊತ್ತಿಲ್ಲ ಅನ್ನಕಂಡ್ಯಾ” - ಥೂತ್ತೇರಿ ಯಾಹೂ

“ನಿನ್ನ ಕಪಟತನ ಗೊತ್ತಿಲ್ಲ ಅನ್ನಕಂಡ್ಯಾ” – ಥೂತ್ತೇರಿ ಯಾಹೂ

- Advertisement -
- Advertisement -

ಕೋವಿಡ್ ಸೋಂಕಿನ ನಿರ್ವಹಣೆಯಲ್ಲಿ ಯಡೂರಪ್ಪ ಸರಕಾರದ ಸಚಿವರು ಬರೋಬರಿ ಎರಡು ಸಾವಿರ ಕೋಟಿಯನ್ನು ಈಗಾಗಲೇ ಭರ್ತಿಯಾಗಿದ್ದ ತಮ್ಮ ಜೋಬುಗಳಿಗೆ ತುರುಕಿದ್ದಾರೆ ಎಂಬ ಸಿದ್ದರಾಮಯ್ಯನ ಆರೋಪಕ್ಕೆ ಸಂಬಂಧಿಸಿದಂತೆ, ಅವರನ್ನೆ ಕೇಳಿದರೆ ಹೇಗೆ ಅನ್ನಿಸಿ, ಯಾಹೂ ಬದಲಿಗೆ ಟಿವಿ ನಿರ್ವಾಹಕನ ಹೆಸರಲ್ಲಿ ಕೇಳಿದರೆ ಹೇಗೆ ಅನ್ನಿಸಿದ್ದರಿಂದ ಫೋನ್ ಮಾಡಲಾಗಿ ರಿಂಗಾಯ್ತು.

ರಿಂಗ್ ಠೊನ್ “ಕರಿಯ ಕಂಬಳಿ ಗದ್ದಿಗೆ ಮಾಡಿ ವೀರದೊಳ್ಳ ತಂದಿರಿಸಿದರೊ”………. “ಹಲೊ ಯಾರು”

“ನಾನು ಸಾರ್ ಟಿವಿ ಸಿಕ್ಸ್‍ನಿಂದ ಮಾತಾಡ್ತಯಿರೋದು.”

“ಟಿವಿ ಸಿಗಸೆ.”

“ಸಿಕ್ಸ್ ಸಾರ್ ಆರು.”

“ಅದ್ಯಾವುದ್ರೀ.”

“ನೈನ್ ಉಲ್ಟಾ ಬರದ್ರೆ ಸಿಕ್ಸು ಸಾರ್.”

“ಯರಡು ನಿಮ್ದೆಯಾ.”

“ಹೌದು ಸಾರ್ ಒಂದೆರಡು ಪ್ರಶ್ನೆ ಕೇಳ್ತಿನಿ ಸಾರ್.”

“ಏನ್ನಿನ್ನೆಸರು.”

“ಶ್ಯಾನುಭೊಗ್ ಹೆಮ್ಮಿಗನೂರು ಸಾರ್.”

“ಶ್ಯಾನುಭೊಗರ ಪೈಕಿನಾ.”

“ಹೌದು ಸಾರ್.”

“ಯಲ್ಲ ಊರು ಬುಟ್ಟು ಬಂದು ಟಿವಿವಳಿಕೆ ಸೇರ್ಕಂಡುಬುಟ್ಟಿದ್ದಿರಿ.”

“ಹೌದು ಸಾರ್.”

“ಅದೇನು ಪ್ರಶ್ನೆ ಕೇಳು.”

“ಕೋವಿಡ್ ಸೋಂಕಿನ ನಿರ್ವಹಣೆಯಲ್ಲಿ ಈ ಸರಕಾರ ಭ್ರಷ್ಟಾಚಾರ ಮಾಡಿದೆ ಅಂತ ತಾವು ಆಪಾದನೆ ಮಾಡಿದ್ದಿರಿ ಸಾರ್, ಇದು ನಿಮಗೆಂಗೆ ಗೊತ್ತಾಯ್ತು ಸಾರ್.”

“ನಾನು ಮುಖ್ಯಮಂತ್ರಿಯಾಗಿದ್ದೊನು ಐದು ವರ್ಷ ಸರಕಾರ ನಡೆಸಿದ್ದೀನಿ.”

“ಅಂದ್ರೆ ಭ್ರಷ್ಟಾಚಾರ ಹೇಗೆ ನಡೆಯುತ್ತೆ ಅಂತ ನಿಮಗೆ ಗೊತ್ತಲ್ಲವ ಸಾರ್.”

“ಹೌದು ಗೊತ್ತು.”

“ನೀವು ಆಪಾದನೆ ಮಾಡ್ತಾಯಿರೊ ಮಂತ್ರಿಗಳು ನಿಮ್ಮ ಜೊತೆಲೂ ಇದ್ರಲವ ಸಾರ್.”

“ಇದ್ರು ಈಗಿಲ್ಲ ಅಲ್ಲಿಗೋಗಿ ಮಂತ್ರಿಗಳಾಗ್ಯವುರೆ ಹಾಗಂತ ಸುಮ್ಮನಿರಕ್ಕಾಗಲ್ಲ.”

“ನಿಮ್ಮ ಕಾಲದಲ್ಲೂ ಭ್ರಷ್ಟಾಚಾರ ನಡೆದಿತ್ತಲವ್ ಸಾರ್.”

“ಯಾರು ಮಾಡಿದ್ರ್ರು.”

“ಅಂಜನೇಯರ ಮೇಲೆ ದೂರು ಬಂದಿತ್ತು.”

“ಆತ ಸದನದಲ್ಲೇ ಉತ್ತರ ಕೊಟ್ಟ.”

“ಭ್ರಷ್ಟಾಚಾರ ಆಪಾದನೆ ಆಮೇಲೆ ಮಾಡಿ ಬೇಕಾದ್ರೆ ಸದನದಲ್ಲಿ ಪ್ರಶ್ನೆ ಮಾಡಿ ಈಗ ವಿಪತ್ತು ನಿರ್ವಹಿಸಿ ಅಂತ ದೇವೇಗೌಡ್ರು ಹೇಳಿದಾರೆ ಸಾರ್.”

“ಸರಿಯಯ್ಯಾ ವಿಪ್ಪತ್ತು ನಿರ್ವಹಿಸುವವಾಗಲೇ ನಡೆದಿರೋ ಅಕ್ರಮ ಕೇಳಬಾರದಾ.”

“ಏನಾಧಾರ ಇಟಗಂಡು ಕೇಳ್ತಿರಿ ಅಂತಾಯಿದಾರೆ.”

“ನಾನು ವಿರೊಧಪಕ್ಷದ ನಾಯಕ. ಆಪಾದನೆ ಮಾಡಬೇಕಾದ್ರೆ ಸಾಕ್ಷಾಧಾರ ಇಟಗಂಡೇ ಕೇಳ್ತಿನಿ.”

“ನಿಮ್ಮ ಆಪಾದನೆಗಳಿಗೆ ಕಾಂಗ್ರೆಸ್ಸಲ್ಲೇ ಸಹಮತ ಇಲ್ಲವಂತಲ್ಲಾ ಸಾರ್.”

“ಈ ವಿಷಯದಲ್ಲಿ ಕಾಂಗ್ರೆಸ್‍ನಲ್ಲಿ ಸಹಮತ ಇದೆ.”

“ಡಿ.ಕೆಶಿವಕುಮಾರ್ ನಿಮ್ಮ ಸಂಬಂಧ ಹೇಗಿದೆ ಸಾರ್.”

“ಚನ್ನಾಗಿದ್ದಿವಿ.”

“ನೀವು ವಿರೊಧಪಕ್ಷದ ನಾಯಕರು, ಅವರು ಪಾರ್ಟಿ ಅಧ್ಯಕ್ಷರು. ಭ್ರಷ್ಟಾಚಾರ ಆಪಾದನೆಯಲ್ಲಿ ಸಹಮತ ಇಲ್ಲ ಅಂತ ಸುದ್ದಿ ಇದೆ ಸಾರ್.”

“ನೋಡೋ ಶಾನುಭೊಗ, ನೀನು ಫೋನ್ ಮಾಡಿದ್ದು ಎಡೂರಪ್ಪನ ಸರಕಾರದಲ್ಲಿ ಕೋವಿಡ್ ನಿರ್ವಹಣೆಗೆ ಖರೀದಿ ಮಾಡಿದ ಸಾಮಾಗ್ರಿ ವಿಷಯದಲ್ಲಿ ಎರಡು ಸಾವಿರ ಕೋಟಿ ಭ್ರಷ್ಟಾಚಾರದ ವಿಷಯ ಕೇಳಕ್ಕೆ, ಅದು ಬುಟ್ಟು ನಮ್ಮ ಪಾರ್ಟಿ ವಿಷಯ ಕೇಳ್ತಿಯಲ್ಲ ನಾವೇನು ಪವರಲಿದ್ದಿವಾ.”

“ಪವರಿಗೆ ಬರ್ತಿರ ಸಾರ್.”

“ಅದಾಮೇಲೆ ಕಣಯ್ಯ, ಈ ಕೋವಿಡ್‍ನಲ್ಲಿ ಉಳುದು ಬದುಕಿದ ಮೇಲಿನ ಮಾತಾಲ್ಲವಾ.”

“ಅಂತೂ ಮುಖ್ಯಮಂತ್ರಿ ಸ್ಪರ್ಧೆಲಿ ನೀವೂ ಇದೀರಿ.”

“ಲೇ ಶಾನುಭೊಗ, ಎಷ್ಟೇ ಆಗಲಿ ಹಳ್ಳಿ ಜನಗಳಿಗೆ ಮಂಕುಬೂದಿ ಎರಚಿ ನೂರಾರು ವರ್ಷ ಹಳ್ಳಿ ಆಳಿದೋನು ನೀನು ಅಂಗಂತ ಈಗ್ಲು ನನ್ನನ್ನ ಯಾಮಾರಸಕ್ಕೆ ಬರಬೇಡ.”

“ನಾನೇನು ತಪ್ಪು ಮಾತಾಡಿದ್ನ ಸಾರ್.”

“ತಪ್ಪಲ್ಲ ನಿಮ್ಮ ಕಪಟತನ ಜನಗಳಿಗೆ ಗೊತ್ತಿಲ್ಲ ಅಂತ ತಿಳಕೊಬ್ಯಾಡ ವಿರೊಧಪಕ್ಷದ ಕೆಲಸನ ನೀವೂಕೂಡ ಮಾಡಬೇಕಾಗಿತ್ತು. ಸರಕಾರನ ಪ್ರಶ್ನೆ ಮಾಡಬೇಕಾಗಿತ್ತು. ಖರೀದಿ ಮಾಡಿದ ಪದಾರ್ಥನ ತಂದು ಜನಗಳಿಗೆ ಕೊಡಬೇಕಾಗಿತ್ತು. ಅದನ್ಯಲ್ಲ ಬಿಟ್ಟು ದೇಶಾಗೃಹಗಳಿಗೆ ಕ್ಯಾಮರ ಹೊತ್ತುಗಂಡು ಹೋಗ್ತಾಯಿದ್ದಿರಿ. ಈ ಕಡೆ ರಾಮುಲು, ಸುಧಾಕರ, ಆಶೋಕನ್ನ ಪ್ರಶ್ನೆ ಮಾಡದು ಬುಟ್ಟು ನನ್ನನ್ನ ಕುರುತು ನನ್ನ ಪಾರ್ಟಿ ವಿಷಯ ಕೇಳ್ತಯಿದ್ದಿ, ಕೇಳಿದ ಜನಗಳು ನಗತಾಯಿಲ್ಲ ಅಂತ ತಿಳಕೊಂಡಿದ್ದಿಯಾ.”

“ಆಯ್ತು ಸಾರ್ ಭ್ರಷ್ಟಾಚಾರ ನಡೆದಿದೆ ಅಂತ ನೀವು ಹೇಳ್ತಿರ, ಅಂತದ್ದೇನು ಆಗಿಲ್ಲ ಅಂತ ಅವುರುಳ್ತಾಯಿದಾರೆ. ನೀವೆ ಪವರಲ್ಲಿದ್ರೆ ಏನು ಮಾಡತಿದ್ರೀ?”

“ಒಂದು ವೇಳೆ ನಾನೇ ಇದ್ರೆ ಸಮಸ್ಯೆ ಬಗ್ಗೆ ಚನ್ನಾಗಿ ತಿಳಕಂಡಿರೋರು ಜೊತೆ ಮಾತಾಡತಿದ್ದೆ. ಅವುರ ಅನುಭವನ ಬಳಸಿಕೊಳ್ತಿದ್ದೆ. ಅನಾಹುತಗಳಿಗೂ ಮೊದ್ಲು ತಯಾರಿ ನಡೆಸತಿದ್ದೆ. ನಮ್ಮ ತಪ್ಪುಗಳನ್ನ 24 ಗಂಟೆ ತೋರಸೊ ನಿಮ್ಮನ್ನ ವಿಶ್ವಾಸಕ್ಕೆ ತಗಳತಿದ್ದೆ. ಆದ್ರೆ ನಿಮ್ಮಂತ ಸುಳ್ಳು ಜನನ ನನ್ನ ಜನುಮದಲ್ಲಿ ನೋಡಿಲ್ಲ.”

“ಯಾಕ್ ಸಾರ್ ಹಾಗಂತಿರಿ.”

“ಇಂದಿರಾ ಕ್ಯಾಂಟೀನಲ್ಲಿ ಜಿರ್ಲೆ ಸಿಕ್ಕುತು ಅಂತ ಅದ ತಂದು ತೋರಿಸಿದ್ರ, ಸಿದ್ದರಾಮಯ್ಯ ಕೊಡ್ತಾಯಿರದು ನಿಜವಾದ ಅಕ್ಕಿಯಲ್ಲ ಪ್ಲಾಸ್ಟಿಕ್ ಅಕ್ಕಿ ಅಂತ ಚರ್ಚೆ ಮಾಡಿದ್ರಿ, ಇಲ್ಲದಕ್ಕೆ ಬಣ್ಣಕಟ್ಟಿ ಹೇಳತಿದ್ರಿ, ಆದ್ರೆ ಇವತ್ತು ನೀವ್ಯಲ್ಲ ಧ್ವನಿನೆ ಕಳಕಂಡಿದ್ದಿರಿ. ಒಂಥರ ಸತ್ತೊಗಿದ್ದಿರಿ, ಆದ್ರೆ ತಿಳಕಳಿ ನೀವಿಲ್ಲದೆನೂ ದೇಶ ನಡೆಯುತ್ತೆ. ಆದ್ರೆ ಸರಿಯಾಗಿ ನಡೆಯಕ್ಕೆ ನೀವು ಬುಡಲ್ಲ. ಅಲವೇನೂ ಶ್ಯಾನಭೋಗ.”

“ಸಾರಿ ಸಾರ್.”


ಇದನ್ನು ಓದಿ: ನಿನಗೆ ಬ್ಲಡ್ ಕ್ಯಾನ್ಸರ್ ಇರಬೇಕು ಕಣೋ : ಯಾಹೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯ ಸಂಸದರಿಗೆ ಸಂಕಷ್ಟ: 7 ದಿನಗಳಲ್ಲಿ ಉತ್ತರಿಸಲು ಲೋಕಸಭೆ ಸಚಿವಾಲಯ ತಾಕೀತು

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ 20 ಬಂಡಾಯ ಸಂಸದರಿಗೆ ಲೋಕಸಭಾ ಸಚಿವಾಲಯವು ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳ ಒಳಗಾಗಿ ಸೂಕ್ತ ಉತ್ತರ ನೀಡುವಂತೆ ಸೂಚಿಸಿದೆ. ಪಕ್ಷಾಂತರ ಕಾಯ್ದೆಯಡಿ ಸಂಸದರ ಅನರ್ಹತೆ ಪ್ರಕ್ರಿಯೆಗಳನ್ನು...

ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ಮೇಯರ್ ವಿರೋಧ: ಸಂಘದ ‘ಹೊರಗಿಡುವ ದೃಷ್ಟಿಕೋನ’ ಖಂಡಿಸಿದ ಮಮ್ದಾನಿ

ಅಮೆರಿಕದ ನ್ಯೂಯಾರ್ಕ್ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಭಾರತೀಯ ಮೂಲದವರ ಸಮಾವೇಶವು...

ಕರ್ನಾಟಕದಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂಡಿಯಾ ಟುಡೇ ರೌಂಡ್‌ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ...

ಬೀದಿ ಬದಿ ವ್ಯಾಪಾರಿಗಳ ತೆರವು ಅಕ್ರಮ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಮಂಗಳೂರಿನ ಟೌನ್ ಹಾಲ್ ಸಮೀಪ ನಡೆಯುವ ಸಂಡೇ ಬಜಾರ್‌ನಲ್ಲಿ ಪಾದಚಾರಿ ಮಾರ್ಗದ ಬಳಿ ಇದ್ದ ಬೀದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲಾ...

ತೆಲಂಗಾಂಣ | ಹೈದರಾಬಾದ್‌-ವಿಜಯವಾಡ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು; ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ (ಆ.26) ಮುಂಜಾನೆ ಖಾಸಗಿ ಎಲೆಕ್ಟ್ರಿಕ್ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ...

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ.

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ...

ತಮಿಳುನಾಡು| ಮರ್ಯಾದೆಗೇಡು ಹತ್ಯೆ ಶಂಕೆ; 25 ವರ್ಷದ ದಲಿತ ಯುವಕನ ಭೀಕರ ಕೊಲೆ

ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನೊಬ್ಬನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ಮರ್ಯಾದೆಗೇಡು ಕೊಲೆಯ ಶಂಕೆ ವ್ಯಕ್ತವಾಗಿದೆ. ಆಗಸ್ಟ್ 16 ರಂದು ರಾತ್ರಿ ಚೆಂಗಲ್ಪಟ್ಟುವಿನ ಕೇಳಂಬಾಕ್ಕಂ ನಿವಾಸಿ ಪ್ರವೀಣ್ ಅವರ ಮೇಲೆ ದಾಳಿಕೋರರಾದ...

44 ಲಕ್ಷ ಮತದಾರರಿಗೆ ನೋಟಿಸ್: BLA ಗಳಿಗೆ ಪಟ್ಟಿ ನೀಡಿ, ಪಾರದರ್ಶಕತೆ ಕಾಯ್ದುಕೊಳ್ಳಲು ‘ಜಾಗೃತ ಕರ್ನಾಟಕ’ ಒತ್ತಾಯ

ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಪ್ರಕಟಗೊಳ್ಳುತ್ತಿರುವ ಕರಡು ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಎಚ್ಚರವಹಿಸಬೇಕು ಹಾಗೂ ನೋಟಿಸ್ ಪ್ರಕ್ರಿಯೆಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಆಗ್ರಹಿಸಿ ‘ಜಾಗೃತ...

ಕೇರಳ ಬಿಜೆಪಿಗೆ ಹಿರಿಯ ನಟ ಎಸ್. ದೇವನ್ ಗುಡ್‌ಬೈ: ‘ದಳಪತಿ’ ವಿಜಯ್ ಟಿವಿಕೆ ಪಕ್ಷ ಸೇರಲು ಒಲವು!

ಮಲಯಾಳಂ ನಟ ಹಾಗೂ ರಾಜಕಾರಣಿ ಎಸ್. ದೇವನ್ ಅವರು ತಮಿಳುನಾಡಿನ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷವನ್ನು ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಕೇರಳ...

ಮತ್ತೆ ಜೈಲಿನಿಂದ ಹೊರಬಂದ ಅತ್ಯಾಚಾರಿ ರಾಮ್ ರಹೀಮ್! 6 ವರ್ಷದಲ್ಲಿ 17ನೇ ಬಾರಿ ಪೆರೋಲ್

ನವದೆಹಲಿ/ರೋಹ್ಟಕ್: ಇಬ್ಬರು ಮಹಿಳಾ ಶಿಷ್ಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಹರಿಯಾಣ ಸರ್ಕಾರ ಪುನಃ...