Homeರಾಜಕೀಯರಾಫೇಲ್ ಡೀಲ್ ಸ್ಫೋಟಕ ಸತ್ಯ: ಸುಪ್ರೀಂ ಕೋರ್ಟ್ಗೇ ಹಸೀ ಸುಳ್ಳು ಹೇಳಿದ ಮೋದಿ ಸರ್ಕಾರ

ರಾಫೇಲ್ ಡೀಲ್ ಸ್ಫೋಟಕ ಸತ್ಯ: ಸುಪ್ರೀಂ ಕೋರ್ಟ್ಗೇ ಹಸೀ ಸುಳ್ಳು ಹೇಳಿದ ಮೋದಿ ಸರ್ಕಾರ

- Advertisement -
- Advertisement -

ಬಹುಶಃ ಇದಕ್ಕಿಂತ ದೊಡ್ಡ ಹಗರಣ ಇತ್ತೀಚಿನ ದಿನಗಳಲ್ಲಿ ನಡೆದಿರಲಾರದು. ರಾಫೇಲ್ ಡೀಲ್ ವಿಚಾರದಲ್ಲಿ ಸತ್ಯವನ್ನು ಮುಚ್ಚಿ ಹಾಕಲು ಮೋದಿ ಸರ್ಕಾರ ಪ್ರಯತ್ನಿಸಿದಂತೆಲ್ಲಾ, ಹೊಸ ಹೊಸ ಹಗರಣಗಳನ್ನೇ ಮಾಡುತ್ತಿದೆ. ಅದರಲ್ಲಿ ಅತ್ಯಂತ ಹೊಸ ಹಗರಣ ಹಿಂದೆಂದಿಗಿಂತಲೂ ಆಘಾತಕಾರಿಯಾದುದು. ಮೋದಿ ಸರ್ಕಾರವು ಹಸೀ ಹಸೀ ಸುಳ್ಳನ್ನು ಸುಪ್ರಿಂಕೋರ್ಟಿಗೇ ಹೇಳಲಾಗಿದೆ.

ಹೌದು, ಇಂದು ರಾಫೇಲ್ ವಿಚಾರದಲ್ಲಿ ಸುಪ್ರೀಂಕೋರ್ಟು ತೀರ್ಪು ಹೊರಬಿದ್ದ ನಂತರ ಚುನಾವಣಾ ಸೋಲಿನಿಂದ ಕಂಗೆಟ್ಟಿದ್ದ ಬಿಜೆಪಿ ನಾಯಕರು ಮತ್ತು ಗೋದಿ ಮೀಡಿಯಾಗೆ ಇದ್ದಕ್ಕಿದ್ದಂತೆ ಭಾರೀ ಹುಮ್ಮಸ್ಸು ಬಂದಿತು. ಆದರೆ ಜಡ್ಜ್ಮೆಂಟ್ ಪ್ರತಿ ಹೊರಬಿದ್ದು ಅದನ್ನು ಸಂಪೂರ್ಣವಾಗಿ ಪರಿಶೀಲಿಸಿದ ನಂತರ ಇನ್ನೊಂದು ಹಗರಣ ಹೊರಬಿದ್ದಿತು.

ಸುಪ್ರೀಂಕೋರ್ಟು ಹೇಳಿದ್ದು ಇಷ್ಟು. ಈ ವ್ಯವಹಾರದ ತಾಂತ್ರಿಕ ಅಂಶಗಳನ್ನು ನಿರ್ಧರಿಸುವುದು ನಮ್ಮ ಪರಿಣಿತಿಯ ವಿಚಾರ ಅಲ್ಲ; ಡಸಾಲ್ಟ್ & ರಿಲೆಯನ್ಸ್ ನಡುವೆ ಏನು ನಡೆದಿದೆ ಅದು ಎರಡು ಕಾರ್ಪೋರೇಟ್ ಕಂಪೆನಿಗಳ ನಡುವಿನ ವ್ಯವಹಾರ; ಇದರಲ್ಲಿ ಪ್ರತಿವಾದಿ (ನರೇಂದ್ರ ದಾಮೋದರದಾಸ್ ಮೋದಿ)ಯ ಪಾತ್ರದ ಬಗ್ಗೆ ಏನು ಹೇಳಲಾಗುತ್ತಿದೆ ಅದನ್ನು ಅವರು ನಿರಾಕರಿಸಿದ್ದಾರೆ. ಈ ವ್ಯವಹಾರವನ್ನು ಸೂಕ್ತ ಪ್ರಕ್ರಿಯೆಗಳನ್ನು ಅನುಸರಿಸಿಯೇ ಮಾಡಲಾಗಿದೆ. (ಈ ಕುರಿತು ತೀರ್ಪಿನ 21ನೇ ಪುಟದ 25ನೇ ಪಾಯಿಂಟ್‌ನಲ್ಲಿ ಹೇಳಲಾಗಿದೆ) ವ್ಯವಹಾರದ ದರಗಳ ಕುರಿತು ಕಂಟ್ರೋಲರ್ & ಆಡಿಟರ್ ಜನರಲ್ (ಸಿಎಜಿ) ಮುಂದೆ ಇಡಲಾಗಿದೆ ಮತ್ತು ಅದನ್ನು ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ (ಪಿಎಸಿ) ಪರಿಶೀಲಿಸಿದೆ. ಇವೆಲ್ಲಾ ಕಾರಣಗಳಿಂದ ಇದರಲ್ಲಿ ಮಧ್ಯಪ್ರವೇಶಿಸುವುದು ಸರಿಯಲ್ಲ ಎಂದು ನ್ಯಾಯಾಲಯವು ಭಾವಿಸಿ ಈ ಪಿಟಿಷನ್‌ಅನ್ನು ವಜಾಗೊಳಿಸುತ್ತೇವೆ.

ಈ ಎಲ್ಲಾ ವ್ಯವಹಾರವು ಸೂಕ್ತ ಪ್ರಕ್ರಿಯೆಯನ್ನನುಸರಿಸಿಯೇ ನಡೆದಿದೆ ಎಂದು ಸುಪ್ರೀಂಕೋರ್ಟು ಭಾವಿಸಲು ಇದು ಮುಖ್ಯ ಕಾರಣಗಳಲ್ಲೊಂದಾಗಿದೆ.

(ತೀರ್ಪಿನ ಪ್ರತಿಯ ಈ ಭಾಗವನ್ನೂ ನೋಡಬಹುದು)

ಆದರೆ, ವಾಸ್ತವವೇನು?

ಕಾಕತಾಳೀಯವಾಗಿ, ಈ ತೀರ್ಪು ಬಂದ ದಿನವೇ ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯ ಸಭೆ ಮಧ್ಯಾಹ್ನ 3 ಗಂಟೆಗೆ ನಡೆದಿದೆ. ಅದರ ಅಧ್ಯಕ್ಷರು ಡೆಪ್ಯುಟಿ ಸಿಎಜಿಯನ್ನು ‘ನಮ್ಮ ಮುಂದಿಟ್ಟಿದ್ದ ಆ ವರದಿ ಯಾವುದು?’ ಎಂದು ಕೇಳಿದ್ದಾರೆ. ಅಂತಹ ಯಾವ ವರದಿಯೂ ಇಲ್ಲವೆಂದು ಅವರು ಉತ್ತರಿಸಿದ್ದಾರೆ. ಅಂದರೆ, ಸಿಎಜಿಯ ಮುಂದಾಗಲೀ ಪಿಎಸಿಯ ಮುಂದಾಗಲೀ ಅಂತಹ ಯಾವ ಮಾಹಿತಿಯನ್ನೂ ಕೊಟ್ಟೇ ಇಲ್ಲ. ಅಷ್ಟೂ ಸಾಲದೆಂಬಂತೆ ಅವೆಲ್ಲವನ್ನೂ ಮಾಡಿಯಾಗಿದೆಯೆಂದು ಸುಪ್ರೀಂಕೋರ್ಟಿಗೇ ಸುಳ್ಳು ಹೇಳಲಾಗಿದೆ.

ಖುದ್ದು ಪಿಎಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರನ್ನೂ ಪಕ್ಕದಲ್ಲೇ ಕೂರಿಸಿಕೊಂಡು, ಕಾಂಗ್ರೆಸ್ ಅಧ್ಯಕ್ಷ ರಾಹುಲ್‌ಗಾಂಧಿಯವರು ಇಂದು ಪತ್ರಿಕಾಗೋಷ್ಠಿ ನಡೆಸಿ ಇದೆಲ್ಲವನ್ನೂ ವಿವರಿಸಿದ್ದಾರೆ. (ಪತ್ರಿಕಾಗೋಷ್ಠಿಯ ವಿಡಿಯೋ ಇದರೊಂದಿಗಿದೆ, ನೋಡಬಹುದು)

ಹಾಗೆಯೇ ಸುಪ್ರೀಂಕೋರ್ಟಿನ ಅತ್ಯಂತ ಘನತೆವೆತ್ತ ನ್ಯಾಯವಾದಿಗಳಲ್ಲೊಬ್ಬರಾದ ಪ್ರಶಾಂತ್ ಭೂಷಣ್ ಏನು ಹೇಳಿದ್ದಾರೆಂಬುದರ ಕುರಿತೂ ಸದ್ಯದಲ್ಲೇ ವಿವರಗಳನ್ನು ನಿಮ್ಮ ಮುಂದಿಡಲಾಗುವುದು. ಎಲ್ಲಾ ವಿವರಗಳೂ ಈ ಸುದ್ದಿಯೊಂದಿಗೆ ಅಪ್‌ಡೇಟ್ ಆಗುತ್ತಿರುತ್ತದೆ, ಸರ್ಕಾರವು ಮತ್ತು ಸುಪ್ರೀಂಕೋರ್ಟು ನಂತರ ಏನೇನು ಹೇಳುತ್ತದೆ ಎಂಬ ವಿವರಗಳು ಇದರ ಜೊತೆಗೆ ಇರುತ್ತವೆ. ಆಗಿಂದಾಗ್ಗೆ ಈ ಪುಟವನ್ನು ನೀವು ನೋಡುತ್ತಿರಬಹುದು.

ಅದೇನೇ ಇರಲಿ, ಸುಪ್ರೀಂಕೋರ್ಟಿನ ತೀರ್ಪು ಬಂದು ಕ್ಲೀನ್‌ಚಿಟ್ ಸಿಕ್ಕಿತು ಎಂದು ಎಲ್ಲರೂ ಭಾವಿಸುತ್ತಿರುವಾಗ, ಅದು ಕ್ಲೀನ್‌ಚಿಟ್ ಅಲ್ಲ; ಪಾರ್ಲಿಮೆಂಟ್ ಸಮಿತಿಗೇ ವರದಿ ಕೊಟ್ಟಿದ್ದೇವೆಂದು ಸುಪ್ರೀಂಕೋರ್ಟಿಗೇ ಸ್ವತಃ ಕೇಂದ್ರ ಸರ್ಕಾರವೇ ಸುಳ್ಳು ಹೇಳಿದ ಪ್ರಕರಣ ಎಂದು ಬಿಚ್ಚಿಕೊಳ್ಳುತ್ತಿರುವುದು ನಿಜಕ್ಕೂ ಆಘಾತಕಾರಿ ಸಂಗತಿಯಾಗಿದೆ.

ಈ ವಿಚಾರದಲ್ಲಿ ಹೊರಬರುವ, ಈ ವಾದಕ್ಕೆ ಪ್ರತಿಯಾಗಿ ಬರುವ ವಾದಗಳನ್ನೂ ನಿಮ್ಮ ಮುಂದಿಡುವ ಕೆಲಸವನ್ನು ಈ ಪುಟದಲ್ಲಿ ಮಾಡಲಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...