Homeಕರ್ನಾಟಕತುಮಕೂರು ಸ್ಮಾರ್ಟ್ ಸಿಟಿ: ಕಳಪೆ ಕಾಮಗಾರಿಯಿಂದ ಅಧ್ವಾನಗೊಂಡ ನಗರ: ಆರೋಪ

ತುಮಕೂರು ಸ್ಮಾರ್ಟ್ ಸಿಟಿ: ಕಳಪೆ ಕಾಮಗಾರಿಯಿಂದ ಅಧ್ವಾನಗೊಂಡ ನಗರ: ಆರೋಪ

ಗುತ್ತಿಗೆದಾರರಿಗೆ ಪ್ರಭಲರ ಬೆಂಬಲವಿರುವುದರಿಂದ ಯಾರೂ ಚಕಾರ ಎತ್ತುತ್ತಿಲ್ಲ ಎಂದು ಜನತೆ ಆರೋಪಿಸಿದ್ದಾರೆ. 

- Advertisement -
- Advertisement -

ಸ್ಮಾರ್ಟ್ ಸಿಟಿ ಕಾಮಗಾರಿಗಳು ತುಮಕೂರು ನಗರದೆಲ್ಲೆಡೆ ನಡೆಯುತ್ತಿದ್ದು ನಗರ ಅಧ್ವಾನಗೊಂಡಿದೆ. ಮಳೆಗಾಲದಲ್ಲಿ ಕಾಮಗಾರಿ ಆರಂಭಿಸಿರುವುದರಿಂದ ಮಳೆ ನೀರು ರಸ್ತೆಯ ಮೇಲೆ ಹರಿಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಸ್ಮಾರ್ಟ್ ಸಿಟಿ ಕಾಮಗಾರಿಗಳು ಗುಣಮಟ್ಟದಿಂದ ಕೂಡಿಲ್ಲ. ಸಾಕಷ್ಟು ಅವ್ಯವಹಾರ ನಡೆದಿದೆ ಎಂದು ಕೂಗುಹಾಕಿದವರು ಸೊಲ್ಲೇ ಎತ್ತದೆ ಮೌನಕ್ಕೆ ಜಾರಿದ್ದಾರೆ. ಕಳಪೆ ಕಾಮಗಾರಿಯ ತನಿಖೆ ನಡೆಸಬೇಕೆಂದರೂ ಅದು ಅಲ್ಲಿಗೆ ನಿಂತುಹೋಗಿದೆ. ಗುತ್ತಿಗೆದಾರರಿಗೆ ಪ್ರಭಲರ ಬೆಂಬಲವಿರುವುದರಿಂದ ಯಾರೂ ಚಕಾರ ಎತ್ತುತ್ತಿಲ್ಲ ಎಂದು ಜನತೆ ಆರೋಪಿಸಿದ್ದಾರೆ.

ಮಳೆಗಾಲದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಗಳು ಅರ್ಧಕ್ಕೆ ನಿಂತು ಹೋಗಿರುವುದರಿಂದ ಜನರು ತೊಂದರೆ ಪಡುವಂತಾಗಿದೆ. ರಸ್ತೆಯ ಉದ್ದಕ್ಕೂ ತೋಡಿರುವ ಗುಂಡಿಗಳು ಹಾಗೆಯೇ ಉಳಿದಿವೆ. ಮಳೆ ಬಂದು ತೋಡಿದ ಚರಂಡಿಯ ಮಣ್ಣು ಮತ್ತೆ ಗುಂಡಿಗೆ ಕೊಚ್ಚಿಕೊಂಡು ಹೋಗಿರುವಂತಹ ನಿದರ್ಶನಗಳು ನಗರ ಹೃದಯ ಭಾಗದಲ್ಲಿ ಎತ್ತನೋಡಿದರೂ ರಸ್ತೆಯ ಇಕ್ಕೆಲಗಳಲ್ಲಿ ಮಣ್ಣನ್ನು ಅಗೆದಿರುವ ದೃಶ್ಯಗಳೇ ಕಣ್ಣಿಗೆ ರಾಚುತ್ತವೆ.

ಆಡಳಿತ ಪಕ್ಷ ಬಿಜೆಪಿಯ ಮಾಜಿ ಸಚಿವ ಸೊಗಡು ಶಿವಣ್ಣ, ಸಂಸದ ಜಿ. ಎಸ್. ಬಸವರಾಜು ಮತ್ತು ಶಾಸಕ ಜಿ. ಬಿ. ಜ್ಯೋತಿಗಣೇಶ್, ಕಾಂಗ್ರೆಸ್ ಮಾಜಿ ಶಾಸಕ ರಫೀಕ್ ಅಹಮದ್ ಎಲ್ಲರೂ ಕೂಡ ಸ್ಮಾರ್ಟ್ ಸಿಟಿ ಕಾಮಗಾರಿ ಅವ್ಯವಸ್ಥೆ ಮತ್ತು ಕಳಪೆ ಕಾಮಗಾರಿ ಬಗ್ಗೆ ಮಾಧ್ಯಮಗಳ ಮೂಲಕ ಧ್ವನಿ ಎತ್ತಿದ್ದರು. ತನಿಖೆ ನಡೆಸುವಂತೆ ಆಗ್ರಹಿಸಿದ್ದರು. ಆದರೆ ಅದ್ಯಾಕೋ ಎಲ್ಲರೂ ಸುಮ್ಮನಾಗಿದ್ದಾರೆ.

ನಗರದಲ್ಲಿ ಕೋಟ್ಯಂತರ ರೂಪಾಯಿ ವೆಚ್ದದ ವಿವಿಧ ಕಾಮಗಾರಿಗಳು ಚಾಲ್ತಿಯಲ್ಲಿವೆ. ಬಾರ್ ಲೈನ್ ರಸ್ತೆ, ಅಶೋಕ ರಸ್ತೆ, ಗುಂಚಿಚೌಕ, ಮಂಡಿಪೇಟೆ, ಜೆ.ಸಿ.ರಸ್ತೆ, ವಿವೇಕಾನಂದ ರಸ್ತೆ, ಡಾ.ರಾಧಾಕೃಷ್ಣ ರಸ್ತೆ, ಹೀಗೆ ನಗರದ ಬಹುತೇಕ ಕಡೆಗಳಲ್ಲಿ ಕಾಮಗಾರಿಗಳು ನಡೆಯುತ್ತಿವೆ. ಕೆಲವು ಕಡೆ ನಿಂತುಹೋಗಿವೆ. ಹಾಗಾಗಿ ನಗರದ ಜನತೆ ಸಮಸ್ಯೆ ಎದುರಿಸಬೇಕಾಗಿ ಬಂದಿದೆ.

ಒಳಚರಂಡಿ, ವಿವಿಧ ಕೇಬಲ್ ಅಳವಡಿಕೆಗೆ, ಹೊಸ ಚರಂಡಿ, ಮ್ಯಾನ್ ಹೋಲ್  ನಿರ್ಮಾಣ, ಹೀಗೆ ಹತ್ತು ಹಲವು ರೀತಿಯ ಕಾಮಗಾರಿಗಳಿಗೆ ರಸ್ತೆ ನಡುವೆ ಮತ್ತು ಇಕ್ಕೆಲೆಗಳಲ್ಲಿ ದೊಡ್ಡದೊಡ್ಡ ಚರಂಡಿಗಳನ್ನು ತೋಡಿ ಹಾಗೆಯೇ ಬಿಟ್ಟಿದ್ದು ಅನಾಹುತಕ್ಕೆ ಬಾಯಿ ತೆರೆದಿವೆ. ಬಿ.ಎಚ್. ರಸ್ತೆಯಲ್ಲಿ ಚರಂಡಿ ನಿರ್ಮಾಣಕ್ಕಾಗಿ ತೋಡಿದ್ದು ಅವುಗಳನ್ನು ಸರಿಯಾಗಿ ಮುಚ್ಚಿಲ್ಲ. ವಿವೇಕಾನಂದ ರಸ್ತೆಯಲ್ಲಿ ಒಳಚರಂಡಿ ಕಾಮಗಾರಿ ಮಾಡಿದ್ದು ಪದೇಪದೇ ರಸ್ತೆ ನಡುವೆಯೇ ಗುಂಡಿ ಬೀಳುತ್ತದೆ. ಅದನ್ನು ಮುಚ್ಚಿದರೆ ಮತ್ತೊಂದು ಕಡೆ ಗುಂಡಿ ಳೀಳುತ್ತದೆ. ಇದು ಕಳಪೆ ಕಾಮಗಾರಿಗೆ ಹಿಡಿದ ಕನ್ನಡಿಯಾಗಿದೆ ಎಂದು ಜನತೆ ದೂರಿದ್ದಾರೆ.

ಗುಣಮಟ್ಟದ ಕಾಮಗಾರಿಗಳನ್ನು ಕೊರತೆ, ಕಾಮಗಾರಿಗಳ ಅವ್ಯವಸ್ಥೆಯಿಂದ ಕನ್ನಡ ಭವನದ ಕೆಳಹಂತದ ಶಭಾ ಭವನಕ್ಕೆ ನೀರು ನುಗ್ಗಿತ್ತು. ಪೀಠೋಪಕರಣಗಳು, ನೂರಾರು ಬಂಡಲ್ ಪೇಪರ್ ಗಳು ನೀರಿನಲ್ಲಿ ಮುಳುಗಿ ಹೋಗಿದ್ದವು.. ಸ್ಮಾರ್ಟ್ ಸಿಟಿ ಕಾಮಗಾರಿಗೆ ರಸ್ತೆ ಬದಿಯಲ್ಲಿ ತೋಡಿದ ಗುಂಡಿಯನ್ನು ಸರಿಯಾಗಿ ಮುಚ್ಚದೆ ನೀರು ನುಗ್ಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಬಾ.ಹ.ರಮಾಕುಮಾರಿ ಆರೋಪಿಸಿದ್ದಾರೆ.

ಸ್ಮಾರ್ಟ್ ಸಿಟಿ ಕಾರ್ಯಕ್ಕೆ ತುಮಕೂರು ಮಹಾನಗರ ಪಾಲಿಕೆಗೆ ಪ್ರಶಸ್ತಿಗಳ ಬರುತ್ತಲೇ ಇವೆ. ಆದರೆ ನಗರ ಗಬ್ಬೆದ್ದು ಹೋಗಿರುವುದನ್ನು ನೋಡಿದರೆ ಅದು ಹೇಗೆ ಪ್ರಶಸ್ತಿಗಳನ್ನು ನೀಡಲಾಯಿತು ಎಂದು ಜನರ ಪ್ರಶ್ನಿಸುತ್ತಿದ್ದಾರೆ.

ಸ್ಮಾರ್ಟ್ ಸಿಟಿ ಹೆಸರಿನಲ್ಲಿ ನೂರಾರು ಕೋಟಿ ರೂಪಾಯಿ ಕಾಮಗಾರಿಗಳಿಗೆ ಸುರಿಯುತ್ತಿದ್ದರೂ ನಗರ ಮಾತ್ರ ಸ್ಮಾರ್ಟ್ ಆಗುತ್ತಿಲ್ಲ.ಕೆಲವರ ಜೇಬುಗಳು ಸ್ಮಾರ್ಟ್ ಗೊಳ್ಳುತ್ತಿವೆ. ಜನರಿಗೆ ಮಾತ್ರ ಮೂರು ಕಾಸಿನ ಉಪಯೋಗವೂ ಇಲ್ಲ ಎಂದು ದೂರಲಾಗಿದೆ.


ಓದಿ: ತುಮಕೂರು ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ಮೈದಾಳಕೆರೆಗೆ ವಿಷಕಾರಿ ಪ್ಲಾಸ್ಟಿಕ್ ಬೂದಿ!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...