Homeಮುಖಪುಟಡೀಸೆಲ್ ಮೇಲಿನ ವ್ಯಾಟ್ ಕಡಿತ; ದೆಹಲಿಯಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 8 ರೂ. ಇಳಿಕೆ

ಡೀಸೆಲ್ ಮೇಲಿನ ವ್ಯಾಟ್ ಕಡಿತ; ದೆಹಲಿಯಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 8 ರೂ. ಇಳಿಕೆ

ಕೇಂದ್ರ ಸರ್ಕಾರ ಪೆಟ್ರೋಲ್ ಮೇಲೆ 32.98 ರೂ ಹಾಗೂ ಡೀಸೆಲ್ ಮೇಲೆ 31.83 ಸುಂಕ ವಿಧಿಸುತ್ತದೆ.

- Advertisement -
- Advertisement -

ಕೊರೊನಾ ಬಿಕ್ಕಟ್ಟಿನಿಂದಾದ ಆರ್ಥಿಕ ಹೊರೆ ತಗ್ಗಿಸುವ ಉದ್ದೇಶಕ್ಕಾಗಿ ಡೀಸೆಲ್ ಮೇಲೆ ಶೇ. 30 ರಷ್ಟು ವ್ಯಾಟ್ ತೆರಿಗೆ ವಿಧಿಸಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈಗ ವ್ಯಾಟ್ ತೆರಿಗೆಯನ್ನು ಶೇ. 16.75 ಕ್ಕೆ ಇಳಿಸಿದ್ದಾರೆ.

ಇದರಿಂದಾಗಿ ದೆಹಲಿಯಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 8.36 ರೂಪಾಯಿಯಷ್ಟು ಕಡಿಮೆ ಆಗಲಿದೆ. ಲೀಟರ್‌ಗೆ 82 ರೂ ಇದ್ದ ಡೀಸೆಲ್ ಬೆಲೆ ವ್ಯಾಟ್ ಕಡಿತದಿಂದಾಗಿ 73.64ಕ್ಕೆ ಇಳಿಕೆಯಾಗಲಿದೆ.

ದೆಹಲಿಯ ಉದ್ಯಮಿಗಳು ಮತ್ತು ವರ್ತಕರ ಬೇಡಿಕೆ ಮೇರೆಗೆ ವ್ಯಾಟ್ ಇಳಿಕೆಯ ಈ ಕ್ರಮ ಕೈಗೊಳ್ಳಲಾಗಿದೆ. ಡೀಸೆಲ್ ಬೆಲೆ ಇಳಿಕೆಯಿಂದ ದೆಹಲಿಯ ಆರ್ಥಿಕತೆಗೆ ಪುಷ್ಟಿ ಸಿಗುತ್ತದೆ ಎಂದು ಕೇಜ್ರಿವಾಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಭಾರತದಲ್ಲಿ ಮೊದಲಿಂದಲೂ ಡೀಸೆಲ್‌ಗೆ ಕಡಿಮೆ ಸುಂಕ ವಿಧಿಸಲಾಗುತ್ತಿದೆ. ಇದರಿಂದಾಗಿ ಡೀಸೆಲ್ ಯಾವಾಗಲೂ ಪೆಟ್ರೋಲ್‌ಗಿಂತಲೂ ಬೆಲೆ ಕಡಿಮೆ ಇರುತ್ತಿತ್ತು. ಆದರೆ, ಕೊರೋನಾ ಸಂಕಷ್ಟದ ಪರಿಸ್ಥಿತಿಯಲ್ಲಿ ಆರ್ಥಿಕತೆ ಸುಧಾರಿಸಲು ಮತ್ತು ಮಾಲಿನ್ಯಕಾರಕ ಡಿಸೆಲ್ಗೆ ಕಡಿವಾಣ ಹಾಕುವ ಉದ್ದೇಶದಿಂದ ದೆಹಲಿ ಸರ್ಕಾರ ಡೀಸೆಲ್ ಮೇಲೆ ವ್ಯಾಟ್ ತೆರಿಗೆಯನ್ನು ಶೇ. 30ರಷ್ಟು ಹೇರಲು ನಿರ್ಧರಿಸಿತ್ತು.


ಇದನ್ನೂ ಓದಿ: ದೆಹಲಿಯಲ್ಲಿ ಮುಸ್ಲಿಂ ವೈದ್ಯೆಯ ಮೇಲೆ RSS ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆಯೇ?


ಇದರಿಂದಾಗಿ ದೆಹಲಿಯಲ್ಲಿ ಪೆಟ್ರೋಲ್‌‌ಗಿಂತ ಡೀಸೆಲ್ ದುಬಾರಿಯಾಗಿತ್ತು. ಕಳೆದ ತಿಂಗಳ 18 ದಿನಗಳಲ್ಲಿ ಪೆಟ್ರೋಲ್ ಬೆಲೆ 8.50 ರೂ ಏರಿಕೆಯಾದರೆ, ಡೀಸೆಲ್ 10.48 ರೂ ಬೆಲೆ ಹೆಚ್ಚಳ ಕಂಡಿತ್ತು. ಸರ್ಕಾರದ ಈ ಕ್ರಮಕ್ಕೆ ಹಲವು ಕಡೆಗಳಿಂದ ವಿರೋಧ ವ್ಯಕ್ತವಾಗಿತ್ತು.

ಇಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಸೇರಲಾಗಿದ್ದ ಸಂಪುಟ ಸಭೆಯಲ್ಲಿ ಡೀಸೆಲ್ ಮೇಲಿನ ವ್ಯಾಟ್ ಇಳಿಕೆ ಮಾಡುವ ನಿರ್ಧಾರಕ್ಕೆ ಬರಲಾಗಿದೆ.

ರಾಜ್ಯ ಸರ್ಕಾರಗಳೂ ಕೂಡ ವ್ಯಾಟ್‌ ಅನ್ನು ಹೆಚ್ಚುವರಿಯಾಗಿ ವಿಧಿಸುತ್ತವೆ. ಹೀಗಾಗಿ ರಾಜ್ಯದಿಂದ ರಾಜ್ಯಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ವ್ಯತ್ಯಾಸ ಇರುತ್ತದೆ.

ಡೀಸೆಲ್ ಮತ್ತು ಪೆಟ್ರೋಲ್‌ಗೆ ಕೇಂದ್ರ ಸರ್ಕಾರ ಈಗ ಸರಿ ಸುಮಾರು ಒಂದೇ ಮೊತ್ತದ ತೆರಿಗೆ ವಿಧಿಸುತ್ತದೆ. ಪೆಟ್ರೋಲ್ ಮೇಲೆ ಕೇಂದ್ರ ಸರ್ಕಾರದ ಸುಂಕ 32.98 ರೂ ಇದ್ದು, ಡೀಸೆಲ್ ಮೇಲೆ 31.83 ಸುಂಕ ವಿಧಿಸುತ್ತದೆ.


ಓದಿ: ಭೀಮಾ ಕೋರೆಗಾಂವ್ ಪ್ರಕರಣ: ದೆಹಲಿ ಪ್ರಾಧ್ಯಾಪಕನ ಬಂಧನ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...