Homeಮುಖಪುಟಐಪಿಎಸ್‌ ನಾಗೇಶ್ವರ್‌ ರಾವ್‌ ವಿರುದ್ದ ಕ್ರಮ ಕೈಗೊಳ್ಳುವಂತೆ ಬೃಂದಾ ಕಾರಟ್‌ ಪತ್ರ

ಐಪಿಎಸ್‌ ನಾಗೇಶ್ವರ್‌ ರಾವ್‌ ವಿರುದ್ದ ಕ್ರಮ ಕೈಗೊಳ್ಳುವಂತೆ ಬೃಂದಾ ಕಾರಟ್‌ ಪತ್ರ

ಸ್ವಾತಂತ್ರ್ಯ ಹೋರಾಟಗಾರ ಮೌಲಾನಾ ಅಬುಲ್ ಕಲಾಂ ಆಜಾದ್, ಶಿಕ್ಷಣಕ್ಕೆ ಗಮನಾರ್ಹ ಕೊಡುಗೆ ನೀಡಿದ್ದ ಮುಸ್ಲಿಂ ಶಿಕ್ಷಣ ತಜ್ಞರನ್ನು ಹಾಗೂ ಎಡಪಂಥೀಯರ ವಿರುದ್ದ ನಾಗೇಶ್ವರ್‌ ರಾವ್‌ ಟ್ವಿಟ್ಟರ್‌ನಲ್ಲಿ ಅವಹೇಳನಕಾರಿ ಭಾಷೆ ಬಳಸಿ ಟೀಕಿಸಿದ್ದರು.

- Advertisement -
- Advertisement -

ಸರ್ಕಾರಿ ಅಧಿಕಾರಿಯಾಗಿದ್ದುಕೊಂಡು ಕೋಮು ಸಾಮರಸ್ಯ ಕದಡುವ ಐಪಿಎಸ್ ನಾಗೇಶ್ವರರಾವ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಿಪಿಐ (ಎಂ) ಪಾಲಿಟ್ ಬ್ಯೂರೋ ಸದಸ್ಯರಾದ ಬೃಂದಾ ಕಾರಟ್‌ ಕೇಂದ್ರ ಗೃಹಸಚಿವ ಅಮಿ‌ತ್‌ ಶಾ ಮತ್ತು ದೆಹಲಿ ಪೋಲೀಸರಿಗೆ ಪತ್ರ ಬರೆದಿದ್ದಾರೆ.

ಗೃಹ ಸಚಿವಾಲಯದ ಅಡಿಯಲ್ಲಿ ಅಗ್ನಿಶಾಮಕ ಸೇವೆಗಳು, ಗೃಹರಕ್ಷಕರು ಮತ್ತು ನಾಗರಿಕ ರಕ್ಷಣಾ ಮಹಾನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ಐಪಿಎಸ್ ಕೇಡರ್ ನಾಗೇಶ್ವರ ರಾವ್ ಟ್ವಿಟರ್‌ನಲ್ಲಿ ಅತ್ಯಂತ ಅತಿರೇಕದ ರಾಜಕೀಯ ಪ್ರೇರಿತ ಹೇಳಿಕೆಗಳನ್ನು ನೀಡಿದ್ದು ಅದು ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದು ಗೃಹಸಚಿವ ಅಮಿತ್‌ ಷಾಗೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಸ್ವಾತಂತ್ರ್ಯ ಹೋರಾಟಗಾರ ಮೌಲಾನಾ ಅಬುಲ್ ಕಲಾಂ ಆಜಾದ್, ಶಿಕ್ಷಣಕ್ಕೆ ಗಮನಾರ್ಹ ಕೊಡುಗೆ ನೀಡಿದ್ದ ಮುಸ್ಲಿಂ ಶಿಕ್ಷಣ ತಜ್ಞರನ್ನು ಹಾಗೂ ಎಡಪಂಥೀಯರ ವಿರುದ್ದ ಅವರು ಟ್ವಿಟ್ಟರ್‌ನಲ್ಲಿ ಅವಹೇಳನಕಾರಿ ಭಾಷೆ ಬಳಸಿ ಟೀಕಿಸಿದ್ದರು.

ಅಲ್ಲದೆ ಆರೆಸ್ಸೆಸ್‌ ಮತ್ತು ಬಿಜೆಪಿ ಭಾರತದ ಪುನರ್ ನಿರ್ಮಾಣಕ್ಕಾಗಿ ಕೆಲಸ ಮಾಡುತ್ತಿದೆ ಎಂದು ಪ್ರಸ್ತುತ ಐಪಿಎಸ್‌ ಸೇವೆಯಲ್ಲಿ ಇರುವ ನಾಗೇಶ್ವರ ರಾವ್ ಹೊಗಳಿದ್ದಾರೆ.

ಇದನ್ನು ಖಂಡಿಸಿರುವ ಬೃಂದಾ ಕಾರಟ್, ಸಾಂವಿಧಾನಿಕ ಹಕ್ಕಿನ ಪ್ರಕಾರ ಒಬ್ಬ ವ್ಯಕ್ತಿಯು ತನ್ನ ಅಭಿಪ್ರಾಯ ಹೇಳುವುದು ಅಭಿವ್ಯಕ್ತಿ ಸ್ವಾತಂತ್ರ್ಯವಾಗಿದೆ. ಆದರೆ ನಾಗರಿಕ ಸೇವೆ ಸಲ್ಲಿಸುತ್ತಿರುವ ಅಧಿಕಾರಿಯಾಗಿ, ನಾಗೇಶ್ವರ ರಾವ್ ಸೇವಾ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಐಪಿಸಿಯ ಸೆಕ್ಷನ್ 153 ಎ ಮತ್ತು 295 ಎ ಅಡಿಯಲ್ಲಿ ಈ ಅಪರಾಧಗಳಿಗೆ ಅವರು ತಪ್ಪಿತಸ್ಥನಾಗಿದ್ದಾರೆ ಎಂದು ಹೇಳಿದ್ದಾರೆ.

ನಾಗೇಶ್ವರ್‌ ರಾಮ್‌ ಸೇವಾ ನಿಯಮಗಳನ್ನು ಉಲ್ಲಂಘಿಸಿರುವುದು ಅಥವಾ ಕೋಮು ಭಾವನೆಗಳನ್ನು ಪ್ರಚೋದಿಸುವುದು ಇದೇ ಮೊದಲಲ್ಲ ಎಂದು ಅವರು ಹಲವಾರು ಘಟನೆಗಳ ಉದಾಹಣೆ ನೀಡಿದ್ದಾರೆ.

ನಾಗೇಶ್ವರ್‌ ಹೇಳಿಕೆಗಳು ನೋಡಿದರೆ ಜುಲೈ 31 ರಂದು ನಿವೃತ್ತಿಯ ನಂತರ ಬಿಜೆಪಿ ಅಥವಾ ಆರೆಸ್ಸೆಸ್‌‌ಗೆ ಸೇರ್ಪಡೆಗೊಳ್ಳಲು ಅರ್ಹರಾಗಬಹುದು ಎಂದು ಅವರು ಪತ್ರದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಿ ಇಂಡಿಯನ್ ಎಕ್ಸ್‌ಪ್ರೆಸ್‌ನಲ್ಲಿ ಬಂದಿರುವ ವರದಿಗಳನ್ನು ಉಲ್ಲೇಖಿಸಿರುವ ಬೃಂದಾ ಕಾರಟ್‌, ಸೇವೆ ಸಲ್ಲಿಸುವ ಅಧಿಕಾರಿಯಾಗಿ ನಾಗೇಶ್ವರ್‌ ರಾವ್‌ ಪಕ್ಷಾಪಾತಿ ಹೇಳಿಕೆಗಳನ್ನು ನೀಡಿದ್ದಾರೆ. ಆದ್ದರಿಂದ ಸೇವಾ ನಿಯಮಗಳ ಉಲ್ಲಂಘನೆಗಾಗಿ ಅವರ ಮೇಲೆ ಐಪಿಸಿಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಿ ಚಾರ್ಜ್‌ಶೀಟ್ ಹಾಕಬೇಕು ಎಂದು ಬರೆದಿದ್ದಾರೆ.

ಸೆಕ್ಷನ್ 153 ಎ ಮತ್ತು 295 ಎ ಅಡಿಯಲ್ಲಿ ಎಫ್‌ಐಆರ್ ನೋಂದಣಿ ಮಾಡುವಂತೆ ಕೋರಿ ನಾಗೇಶ್ವರ್‌ ರಾವ್‌ ವಿರುದ್ಧ ದೂರು ದಾಖಲಿಸಿರುವ ಬೃಂದಾ ಕಾರಟ್‌, ಅವರ ವಿಚಾರಣೆ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಗೃಹಸಚಿವರಿಗೆ ವಿನಂತಿಸಿದ್ದಾರೆ.


ಇದನ್ನೂ ಓದಿ: ಡೀಸೆಲ್ ಮೇಲಿನ ವ್ಯಾಟ್ ಕಡಿತ; ದೆಹಲಿಯಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 8 ರೂ. ಇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...