Homeಕರ್ನಾಟಕಕೇರಳ ಹಾಗೂ ಕರ್ನಾಟಕದ ಕರಾವಳಿಯಾದ್ಯಂತ ಸರಳ ‘ಬಕ್ರೀದ್’ ಆಚರಣೆ

ಕೇರಳ ಹಾಗೂ ಕರ್ನಾಟಕದ ಕರಾವಳಿಯಾದ್ಯಂತ ಸರಳ ‘ಬಕ್ರೀದ್’ ಆಚರಣೆ

ಪ್ರವಾದಿ ಇಬ್ರಾಹಿಂ ಹಾಗೂ ಅವರ ಮಗ ಇಸ್ಮಾಯಿಲ್ ಅವರ ತ್ಯಾಗ-ಬಲಿದಾನದ ನೆನೆಪಿನಲ್ಲಿ ವಿಶ್ವದಾದ್ಯಂತ ಮುಸಲ್ಮಾನರು ಬಕ್ರೀದ್ ಹಬ್ಬ ಆಚರಿಸುತ್ತಾರೆ.

- Advertisement -
- Advertisement -

ತ್ಯಾಗ ಮತ್ತು ಬಲಿದಾನದ ಸಂಕೇಂತವಾದ ಬಕ್ರೀದ್ ಹಬ್ಬವನ್ನು ಕೇರಳ ಸೇರಿದಂತೆ ಕರ್ನಾಟದ ಕರಾವಳಿಯಾದ್ಯಂತ ಅತ್ಯಂತ ಸರಳವಾಗಿ ಆಚರಿಸಲಾಗುತ್ತಿದೆ. ಪ್ರವಾದಿ ಇಬ್ರಾಹಿಂ ಮತ್ತು ಅವರ ಪುತ್ರ ಇಸ್ಮಾಯಿಲ್ ಅವರ ತ್ಯಾಗ ಮತ್ತು ಬಲಿದಾದನ ನೆನಪಿಗೆ ಮುಸಲ್ಮಾನರು ಈ ಹಬ್ಬವನ್ನು ಆಚರಿಸುತ್ತಾರೆ.

ಹಬ್ಬವನ್ನು ಅತ್ಯಂತ ಸರಳವಾಗಿ ಆಚರಿಸಲು ಸರಕಾರ ಹೊರಡಿಸಿದ ಮಾರ್ಗಸೂಚಿಯಂತೆ ಸುರಕ್ಷಿತ ಅಂತರ ಕಾಪಾಡಿ ಮಸೀದಿಗಳಲ್ಲಿ ಸಾಮೂಹಿಕವಾಗಿ ಈದ್ ಪ್ರಾರ್ಥನೆಯನ್ನು ಮಾಡಲಾಯಿತು. ದಕ್ಷಿಣ ಕನ್ನಡ, ಉಡುಪಿ ಹಾಗು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಾದ್ಯಂತ ತಮ್ಮ ವ್ಯಾಪ್ತಿಯಲ್ಲಿರುವ ಮಸೀದಿಗಳಲ್ಲಿ ಮುಸ್ಲಿಮರು ಬಕ್ರೀದ್ ನಮಾಝ್ ಮಾಡಿದರು.

ದ.ಕ ಜಿಲ್ಲೆಯಲ್ಲಿ ಕೊರೊನಾ ಪ್ರಯುಕ್ತ ಈದ್ಗಾದಲ್ಲಿ ಸಾಮೂಹಿಕ ನಮಾಝ್‌ಗೆ ನಿರ್ಬಂಧ ವಿಧಿಸಲಾಗಿದ್ದರಿಂದ ಅಲ್ಲಿ ನಮಾಝ್ ಇರಲಿಲ್ಲ. ಅಲ್ಲದೆ 60 ವರ್ಷಕ್ಕಿಂದ ಮೇಲ್ಪಟ್ಟ ಹಾಗೂ 10 ವರ್ಷಕ್ಕಿಂತ ಕೆಳಗಿನ ಪ್ರಾಯದವರು ಮಸೀದಿ ಪ್ರವೇಶಿಸಲು ಅವಕಾಶ ಇರಲಿಲ್ಲ.

ತ್ಯಾಗ ಬಲಿದಾನದ ಹಬ್ಬಕ್ಕೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮೂಲಕ ಶುಭಾಶಯ ಹೇಳಿದ್ದಾರೆ. ತಮ್ಮ ಟ್ವೀಟ್‌ನಲ್ಲಿ “ತ್ಯಾಗ ಮತ್ತು ಬಲಿದಾನದ ಮಹತ್ವವನ್ನು ಸಾರುವ ಬಕ್ರೀದ್ ಹಬ್ಬದ ಆಶಯಗಳು ನಮ್ಮೆಲ್ಲರ ಬದುಕಿನ ಮೌಲ್ಯಗಳಾಗಲಿ.‌ ಸುಖ-ಕಷ್ಟಗಳೆರಡರ ಕಾಲದಲ್ಲಿಯೂ ಸೌಹಾರ್ದತೆಯ ಬಂಧ ನಮ್ಮೆಲ್ಲರನ್ನು ಬೆಸೆದಿರಲಿ” ಎಂದು ಶುಭಾಶಯ ಹೇಳಿದ್ದಾರೆ.

ಕೇರಳದಲ್ಲೂ ಇಂದು ಬಕ್ರೀದನ್ನು ಆಚರಿಸಲಾಗುತ್ತಿದೆ. ಕೇರಳದ ಮಲಪ್ಪುರಂ ಹಾಗೂ ಇತರ ಜಿಲ್ಲೆಗಳಲ್ಲಿ ಸರಳವಾಗಿ ಹಾಗೂ ಅಂತರ ಕಾಪಾಡಿಕೊಂಡು ಹಬ್ಬದ ನಮಾಝ್ ನಡೆಸಲಾಯಿತು.

ಕೇರಳ ಮುಸ್ಲಿಮರ ಧಾರ್ಮಿಕ ಮತ್ತು ಆಧ್ಯಾತ್ಮಿಕ ನಾಯಕರಾದ ಕಾಂತಪುರಂ ಎ ಪಿ ಅಬೂಬಕರ್ ಮುಸ್ಲಿಯಾರ್ ಮತ್ತು ಸೆಯ್ಯದ್ ಹೈದರಾಲಿ ಶಿಹಾಬ್ ತಂಙಲ್ ಸೇರಿದಂತೆ ಸಾಮಾಜಿಕ ಮುಖಂಡರು, ತಮ್ಮ ಸಹೋದರರನ್ನು ಕೊರೊನಾ ಕಾರ್ಯಸೂಚಿಯ ಮಿತಿಯಲ್ಲಿ ಈದ್ ಆಚರಿಸಲು ಒತ್ತಾಯಿಸಿದ್ದರು. ಆಚರಣೆ ಮತ್ತು ಪ್ರಾರ್ಥನಾ ಸಭೆಗಳು ಯಾವುದೇ ರೀತಿಯಲ್ಲಿ ಸಾಮಾಜಿಕ ಕೂಟಗಳು ಮತ್ತು ಸಾರ್ವಜನಿಕ ಸಭೆಗಳಿಗೆ ನಿಗದಿಪಡಿಸಿದ ಮಾನದಂಡಗಳಿಗೆ ವಿರುದ್ಧವಾಗಿರಬಾರದು ಎಂದು ಅವರು ಕೇಳಿದ್ದರು.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ “ಈದ್-ಉಲ್-ಅಝ್ಹಾ ನಮಗೆ ತ್ಯಾಗ, ಭಕ್ತಿ ಮತ್ತು ಮಾನವೀಯತೆ, ಪ್ರೀತಿಯ ದೊಡ್ಡ ಸಂದೇಶವನ್ನು ನೀಡುತ್ತದೆ. ಈ ವರ್ಷದ ಈದ್ ಆಚರಣೆಯು ಜೀವನದಲ್ಲಿ ಈ ಮಹಾನ್ ಮೌಲ್ಯಗಳನ್ನು ಸಾಕಾರಗೊಳಿಸುವ ಪ್ರತಿಜ್ಞೆಯನ್ನು ನವೀಕರಿಸಲು ಬಂದ ಒಂದು ಅವಕಾಶವಾಗಿದೆ. ಪ್ರಪಂಚದಾದ್ಯಂತವಿರುವ ಮಲಯಾಳಿಗಳಿಗೆ ಈದ್ ಶುಭ ಹಾರೈಸುತ್ತೇನೆ.” ಎಂದು ಟ್ಟಿಟ್ಟರ್‌ ಮೂಲಕ ಶುಭಾಶಯ ಕೋರಿದ್ದಾರೆ.

ನಾಳೆ ಕರ್ನಾಟಕದ ಇತರ ಜಿಲ್ಲೆಗಳಲ್ಲಿ ಹಾಗೂ ಭಾರತದಾದ್ಯಂತ ಬಕ್ರೀದ್ ಆಚರಿಸಲಾಗುತ್ತದೆ.


ಓದಿ: ಹುಲಿ ಜಾನಪದ; ಕನ್ನಡ ಜಾನಪದ ಪರಂಪರೆಯಲ್ಲಿ ಹುಲಿಯ ಜತೆಗಿನ ಮುಖಾಮುಖಿ- ಅರುಣ್ ಜೋಳದಕೂಡ್ಲಿಗಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...