Homeಕರ್ನಾಟಕತಂದೆಯ ಹತ್ಯೆ ನಂತರ ಬಂಧನಕ್ಕೊಳಗಾಗಿದ್ದ ಯುವತಿ ಜಾಮೀನಿನ ಮೇಲೆ ಬಿಡುಗಡೆ

ತಂದೆಯ ಹತ್ಯೆ ನಂತರ ಬಂಧನಕ್ಕೊಳಗಾಗಿದ್ದ ಯುವತಿ ಜಾಮೀನಿನ ಮೇಲೆ ಬಿಡುಗಡೆ

ಆಕೆಯ ವಿರುದ್ಧದ ಪ್ರಕರಣಕ್ಕೆ ಸೆಕ್ಷನ್ 100 (ಆತ್ಮರಕ್ಷಣೆ) ಸೇರಿಸಬಹುದೇ ಎಂದು ಪೊಲೀಸರು ಇನ್ನೂ ಯೋಚಿಸುತ್ತಿದ್ದಾರೆ ಎನ್ನಲಾಗಿದೆ.

- Advertisement -
- Advertisement -

ತನ್ನ ತಂದೆಯೊಂದಿಗೆ ಜಗಳವಾಡಿ ಕತ್ತರಿ ಚುಚ್ಚಿದ ನಂತರ ಬಂಧನಕ್ಕೊಳಗಾಗಿದ್ದ 15 ವರ್ಷದ ಬೆಂಗಳೂರು ಬಾಲಕಿಯನ್ನು ಒಂದು ವಾರದ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಆಕೆಯನ್ನು ಬಾಲಾಪರಾಧಿ ಜೈಲಿನಲ್ಲಿ ಇರಿಸಿದ್ದು, ಗುರುವಾರ ಬಾಲಾಪರಾಧಿ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಯಿತು. ಆ ಸಮಯದಲ್ಲಿ ಆಕೆಗೆ ಜಾಮೀನು ನೀಡಲಾಯಿತು.

ಜುಲೈ 23, ಗುರುವಾರ ಬಾಲಕಿಯನ್ನು ವಶಕ್ಕೆ ಪಡೆಯಲಾಯಿತು. ಆಕೆ, ತಂದೆಯ ಮೇಲೆ ಗಲಾಟೆಯ ಸಮಯದಲ್ಲಿ ಕತ್ತರಿಗಳಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಳು. ನಂತರ ಆಕೆಯ ತಂದೆ ಸಾವನ್ನಪ್ಪಿದ್ದರು.

ಐಪಿಸಿಯ ಸೆಕ್ಷನ್ 304 ರ ಅಡಿಯಲ್ಲಿ ಆಕೆಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಇದು ಕೊಲೆಯ ಉದ್ದೇಶವಲ್ಲದ ನರಹತ್ಯೆಯಾಗಿದೆ ಎನ್ನಲಾಗಿದೆ.

ಜನವರಿಯಲ್ಲಿ ಈ ಹಿಂದೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಪ್ರಕಾರ, ಬಾಲಾಪರಾಧಿಗಳು ಕನಿಷ್ಠ ಏಳು ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸುವ ಅಪರಾಧದ ಆರೋಪಗಳನ್ನು ಹೊತ್ತಿದ್ದರೆ, ಅದನ್ನು ‘ಘೋರ ಅಥವಾ ಗಂಭೀರ’ ಎಂದು ಪರಿಗಣಿಸಲಾಗುತ್ತದೆ.

ಐಪಿಸಿ  ಸೆಕ್ಷನ್ 304 ರ ಪ್ರಕಾರ ಗರಿಷ್ಠ 10 ವರ್ಷ ಶಿಕ್ಷೆ ವಿಧಿಸಲಾಗಿದ್ದರೂ, ಅದು ಕನಿಷ್ಠ ಶಿಕ್ಷೆಯನ್ನು ಸೂಚಿಸುವುದಿಲ್ಲ, ಆದ್ದರಿಂದ ಬಾಲಕಿ ಜಾಮೀನು ಪಡೆಯಲು ಅರ್ಹಳಾಗಿದ್ದಳು.

ಬಾಲಕಿ ಪ್ರಸ್ತುತ ತನ್ನ ಕುಟುಂಬಕ್ಕೆ ಮರಳಿದ್ದಾಳೆ. ಆಕೆಯ ಅಜ್ಜಿ ಮತ್ತು ಚಿಕ್ಕಪ್ಪ ಅವರೊಂದಿಗೆ ಇರಲು ಬೆಂಗಳೂರಿನಲ್ಲಿದ್ದಾಳೆ. ಈ ನಡುವೆ ಆಕೆಯ ವಿರುದ್ಧದ ಪ್ರಕರಣಕ್ಕೆ ಸೆಕ್ಷನ್ 100 (ಆತ್ಮರಕ್ಷಣೆ) ಸೇರಿಸಬಹುದೇ ಎಂದು ಪೊಲೀಸರು ಇನ್ನೂ ಯೋಚಿಸುತ್ತಿದ್ದಾರೆ ಎನ್ನಲಾಗಿದೆ.

ಘಟನೆಯ ವಿವರ

ಜುಲೈ 22 ರಂದು ರಾತ್ರಿ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಕುಟುಂಬವು ಈ ಹಿಂದೆ ತಿಳಿಸಿತ್ತು. ಬಾಲಕಿಯು ಪ್ರತಿನಿತ್ಯ ಅತಿಯಾಗಿ ಕುಡಿಯುತ್ತಿದ್ದ ತನ್ನ ತಂದೆಗೆ ಬುದ್ಧಿ ಹೇಳಲು ಪ್ರಯತ್ನಿಸಿದ್ದಳು. ತನ್ನ ಅಧ್ಯಯನಕ್ಕೆ ತೊಂದರೆಯಾಗುವಂತೆ ಜೋರಾಗಿ ಪಿಯಾನೋ ನುಡಿಸಬಾರದೆಂದು ಹೇಳಿದ್ದಳು ಎನ್ನಲಾಗಿದೆ.

ಇದರಿಂದ ಕೋಪಗೊಂಡು ಆಕೆಯ ತಂದೆ ಯುವತಿಯನ್ನು ಹೊಡೆದು ಆಕ್ರಮಣ ಮಾಡಲು ಪ್ರಯತ್ನಿಸಿದನು. ನಂತರ ತೀಕ್ಷ್ಣವಾದ ವಸ್ತುವನ್ನು ಎತ್ತಿಕೊಂಡನು. ತನ್ನನ್ನು ರಕ್ಷಿಸಿಕೊಳ್ಳಲು ಹುಡುಗಿ ಕೈಗೆ ಸಿಕ್ಕ ಕತ್ತರಿಗಳನ್ನು ತೆಗೆದುಕೊಂಡು ಚುಚ್ಚಿದ್ದಾಳೆ ಎಂದು ಕುಟುಂಬ ಹೇಳಿದೆ.

ಮತ್ತೊಂದು ಕೋಣೆಯಲ್ಲಿದ್ದ ಹುಡುಗಿಯ ಕಿರಿಯ ಸಹೋದರ ನೆರೆಹೊರೆಯವರನ್ನು ಕರೆತರಲು ಓಡಿಹೋದನು. ನಂತರ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ತಂದೆ ಕುಡಿಯುತ್ತಿದ್ದರು, ಆಗಾಗ್ಗೆ ಹಿಂಸೆ ನಿಡುತ್ತಿದ್ದರು. ಕೆಲವು ವರ್ಷಗಳ ಹಿಂದೆ ನಮ್ಮ ತಾಯಿಯ ಮರಣದ ನಂತರ ಹೀಗೆ ಮಾಡುತ್ತಿದ್ದರು ಎಂದು ಕುಟುಂಬವು ತಿಳಿಸಿದೆ.

“ಅವನು ತುಂಬಾ ಓದಿದ್ದ ಮತ್ತು ಬುದ್ಧಿವಂತ. ಐಟಿ ಮೇಜರ್‌ನಲ್ಲಿ 12 ವರ್ಷಗಳ ಕಾಲ ಕೆಲಸ ಮಾಡಿದ ನಂತರ ಕೆಲಸ ಬಿಟ್ಟಿದ್ದ. 2011 ರ ಸುಮಾರಿಗೆ ಅವರ ಪತ್ನಿ ಎರಡನೇ ಮಗುವಿಗೆ ಜನ್ಮ ನಿಡಿದ್ದಳು. ಮಗುವಿಗೆ ಹತ್ತು ದಿನಗಳಿದ್ದಾಗ, ತಾಯಿ ತೀರಿಕೊಂಡಳು. ಇದು ಆತನ ಜೀವನದಲ್ಲಿ ಮಹತ್ವದ ತಿರುವು ಎಂದು ಸಂಬಂಧಿಯೊಬ್ಬರು ಹೇಳಿದ್ದಾರೆ.

ನೆರೆಹೊರೆಯವರು ತಮ್ಮ ಹೇಳಿಕೆಯಲ್ಲಿ ಇಬ್ಬರು ಮಕ್ಕಳು ಸಾಕಷ್ಟು ಕಷ್ಟಗಳನ್ನು ಅನುಭವಿಸಿದ್ದಾರೆ. ಹಾಗಾಗಿ ಸಹಾನುಭೂತಿಯ ದೃಷ್ಟಿಕೋನದಿಂದ ಕ್ರಮ ತೆಗೆದುಕೊಳ್ಳಬೇಕು ಎಂದು ಉಲ್ಲೇಖಿಸಿದ್ದಾರೆ.


ಇದನ್ನೂ ಓದಿ: ವಾಡಿಕೆಯ ಆರೋಗ್ಯ ಪರೀಕ್ಷೆಗಾಗಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...