Homeಕರೋನಾ ತಲ್ಲಣಕಳೆದ 24 ಗಂಟೆಗಳಲ್ಲಿ ಅತ್ಯಧಿಕ 55 ಸಾವಿರ ಪ್ರಕರಣ ವರದಿ!

ಕಳೆದ 24 ಗಂಟೆಗಳಲ್ಲಿ ಅತ್ಯಧಿಕ 55 ಸಾವಿರ ಪ್ರಕರಣ ವರದಿ!

ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಪ್ರಕಾರ, ಜುಲೈ 30 ರವರೆಗೆ ಒಟ್ಟು 1,88,32,970 ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಗುರುವಾರ 6,42,588 ಮಾದರಿಗಳನ್ನು ಪರೀಕ್ಷಿಸಲಾಗಿದೆ.

- Advertisement -
- Advertisement -

ಹಲವಾರು ರಾಜ್ಯಗಳು ‘ಅನ್ಲಾಕ್ 3’ ಮಾರ್ಗಸೂಚಿಗಳನ್ನು ಘೋಷಿಸಿದರೂ ಸಹ ಕೊರೊನಾ ವೈರಸ್ ಪ್ರಕರಣಗಳು ದೇಶವನ್ನು ಪೀಡಿಸುತ್ತಿದ್ದು, ನಿನ್ನೆ ಒಂದೇ ದಿನ ಅತ್ಯಧಿಕ ಪ್ರಕರಣಗಳನ್ನು ದಾಖಲಿಸಿವೆ.

ಶುಕ್ರವಾರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಭಾರತವು 15 ಲಕ್ಷ ಗಡಿ ತಲುಪಿದ ಕೇವಲ ಎರಡು ದಿನಗಳ ನಂತರ, 16 ಲಕ್ಷವನ್ನು ಮೀರಿ 55,078 ಕೊರೊನಾ ಸೋಂಕುಗಳ ವರದಿಯೊಂದಿಗೆ ದಾಖಲೆಯ ಏಕದಿನ ಏರಿಕೆ ಕಂಡಿದೆ.

ಚೇತರಿಸಿಕೊಳ್ಳುವರ ಸಂಖ್ಯೆ 10,57,805 ಕ್ಕೆ ಏರಿದರೆ, ದೇಶವು ಈವರೆಗೆ 16,38,870 ಕೊರೊನಾ ವೈರಸ್ ಪ್ರಕರಣಗಳನ್ನು ದಾಖಲಿಸಿದೆ. ಸಾವಿನ ಸಂಖ್ಯೆ 35,747 ಕ್ಕೆ ಏರಿಕೆಯಾಗಿದ್ದು, 24 ಗಂಟೆಗಳಲ್ಲಿ 779 ಸಾವುಗಳು ವರದಿಯಾಗಿವೆ ಎಂದು ಬೆಳಿಗ್ಗೆ 8 ಗಂಟೆಯ ಪ್ರಕಟಣೆ ತಿಳಿಸಿದೆ.

ಕೊರೊನಾ ಪ್ರಕರಣಗಳು ಸತತ ಎರಡನೇ ದಿನ 50,000 ಕ್ಕಿಂತ ಹೆಚ್ಚಾಗಿ ವರದಿಯಾಗಿದೆ. ದೃಢಪಡಿಸಿದ ಒಟ್ಟು ಪ್ರಕರಣಗಳ ಸಂಖ್ಯೆಯಲ್ಲಿ ವಿದೇಶಿಯರು ಸೇರಿದ್ದಾರೆ. ಸದ್ಯಕ್ಕೆ ದೇಶದಲ್ಲಿ 5,45,318 ಸಕ್ರಿಯ ಕೊರೊನಾ ಪ್ರಕರಣಗಳಿವೆ.

ಚೇತರಿಕೆ ಪ್ರಮಾಣವು ಶೇಕಡಾ 64.54 ಕ್ಕೆ ಏರಿದರೆ, ಸಾವಿನ ಪ್ರಮಾಣವು ಶೇ. 2.18 ಕ್ಕೆ ಇಳಿದಿದೆ.

ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಪ್ರಕಾರ, ಜುಲೈ 30 ರವರೆಗೆ ಒಟ್ಟು 1,88,32,970 ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಗುರುವಾರ 6,42,588 ಮಾದರಿಗಳನ್ನು ಪರೀಕ್ಷಿಸಲಾಗಿದೆ.

ಶುಕ್ರವಾರ ವರದಿಯಾದ 779 ಸಾವುಗಳಲ್ಲಿ 266 ಮಹಾರಾಷ್ಟ್ರ, 97 ತಮಿಳುನಾಡು, ಕರ್ನಾಟಕದಿಂದ 83, ಆಂಧ್ರಪ್ರದೇಶದಿಂದ 68 ಮತ್ತು ಉತ್ತರಪ್ರದೇಶದಿಂದ 57 ಸಾವುಗಳು ಸಂಭವಿಸಿವೆ.

ಪಶ್ಚಿಮ ಬಂಗಾಳದಲ್ಲಿ 46, ದೆಹಲಿ 29, ಗುಜರಾತ್ 22, ಜಮ್ಮು ಮತ್ತು ಕಾಶ್ಮೀರ 17, ಮಧ್ಯಪ್ರದೇಶ 14 ಮತ್ತು ರಾಜಸ್ಥಾನ ಮತ್ತು ತೆಲಂಗಾಣ ತಲಾ 13 ಸಾವುಗಳು ದಾಖಲಾಗಿವೆ.

ಒಡಿಶಾದಿಂದ 10, ಪಂಜಾಬ್‌ನಿಂದ 9, ಜಾರ್ಖಂಡ್‌ನಿಂದ 5, ಬಿಹಾರ, ಹರಿಯಾಣ, ಮಣಿಪುರ ಮತ್ತು ಉತ್ತರಾಖಂಡದಿಂದ ತಲಾ 4, ಗೋವಾ ಮತ್ತು ಛತ್ತೀಸ್ಗಡ ದಿಂದ ತಲಾ ಮೂರು, ಅಸ್ಸಾಂ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಕೇರಳದಿಂದ ತಲಾ ಎರಡು ಸಾವುಗಳು ಸಂಭವಿಸಿವೆ ಮತ್ತು ಲಡಾಖ್ ಮತ್ತು ಪುದುಚೇರಿ ತಲಾ ಒಂದು ಸಾವು. ಮಣಿಪುರದಲ್ಲಿ ಮೊದಲ ಬಾರಿಗೆ ಕೊರೊನಾ ಸಾವು ವರದಿಯಾಗಿವೆ.

ಕೊರೊನಾ ಪ್ರಕರಣಗಳ ಅಘಾತಕಾರಿ ಬೆಳವಣಿಗೆಯು ಆಂಧ್ರಪ್ರದೇಶದಲ್ಲಿ ಮುಂದುವರಿದಿದೆ. ಏಕೆಂದರೆ ಇದು ಸತತ ಎರಡನೇ ದಿನದಲ್ಲಿ 10,000 ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿದೆ. ಈಗ ಅಲ್ಲಿ ಒಟ್ಟು ಸಂಖ್ಯೆ 1,30,557 ಕ್ಕೆ ತಲುಪಿದೆ.


ಇದನ್ನೂ ಓದಿ: ವಾಡಿಕೆಯ ಆರೋಗ್ಯ ಪರೀಕ್ಷೆಗಾಗಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...