Homeಅಂತರಾಷ್ಟ್ರೀಯವಿಶ್ವದ ಉನ್ನತ ಚಿಂತಕರ ಪಟ್ಟಿಯಲ್ಲಿ ಕೇರಳ ಆರೋಗ್ಯ ಮಂತ್ರಿ ಕೆ.ಕೆ. ಶೈಲಜಾ ಹೆಸರು!

ವಿಶ್ವದ ಉನ್ನತ ಚಿಂತಕರ ಪಟ್ಟಿಯಲ್ಲಿ ಕೇರಳ ಆರೋಗ್ಯ ಮಂತ್ರಿ ಕೆ.ಕೆ. ಶೈಲಜಾ ಹೆಸರು!

ಕೊರೊನಾ ಸಾಂಕ್ರಮಿಕದ ಏರುಗತಿಯನ್ನು ತಡೆದಕ್ಕಾಗಿ ಹಾಗೂ ದಕ್ಷಿಣ ಭಾರತದ ರಾಜ್ಯದಲ್ಲಿ ಕಡಿಮೆ ಸಾವಿನ ಪ್ರಮಾಣ ಗಳಿಸಿದ ಕೀರ್ತಿಗೆ ಶೈಲಾಜಾ ಪಾತ್ರರಾಗಿದ್ದಾರೆ.

- Advertisement -
- Advertisement -

ಕೊರೊನಾ ವಿರುದ್ಧ ರಾಜ್ಯದ ಹೋರಾಟವನ್ನು ಮುನ್ನಡೆಸಿದ್ದಕ್ಕಾಗಿ ವಿಶ್ವದಾದ್ಯಂತ ಶ್ಲಾಘಿಸಲ್ಪಟ್ಟ ಕೇರಳದ ಆರೋಗ್ಯ ಸಚಿವೆ ಕೆ. ಕೆ. ಶೈಲಾಜಾ ಈಗ ಬ್ರಿಟಿಷ್ ನಿಯತಕಾಲಿಕೆ ಪ್ರಾಸ್ಪೆಕ್ಟ್ ಗುರುತಿಸಿರುವ ವಿಶ್ವದ 50 ಉನ್ನತ ಚಿಂತಕರ ಪಟ್ಟಿಯಲ್ಲಿ ಒಬ್ಬರಾಗಿದ್ದಾರೆ.

ಈ ಪಟ್ಟಿಯಲ್ಲಿ ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್, ಫ್ರೆಂಚ್ ಅರ್ಥಶಾಸ್ತ್ರಜ್ಞ ಮತ್ತು ನೊಬೆಲ್ ಪ್ರಶಸ್ತಿ ವಿಜೇತ ಎಸ್ತರ್ ಡುಫ್ಲೋ, ಆಫ್ರಿಕನ್ ಅಮೆರಿಕನ್ ಕಾದಂಬರಿಕಾರ್ತಿ ಮೂರು ಬಾರಿ ಹ್ಯೂಗೋ ಪ್ರಶಸ್ತಿ ವಿಜೇತೆ ಎನ್. ಕೆ. ಜೆಮಿಸಿನ್, ಐರಿಶ್ ನಟಿ ಸ್ಯಾಲಿ ರೂನಿ ಮತ್ತು ಇತಿಹಾಸಕಾರ ವಿಲಿಯಂ ಡಾಲ್ರಿಂಪಲ್ ಸೇರಿದ್ದಾರೆ.

ಕಳೆದ ನಾಲ್ಕು ದಶಕಗಳಲ್ಲಿ ಹೆಚ್ಚಿನ ಭಾಗ ಭಾರತದಲ್ಲೇ ಇರುವ ಸ್ಕಾಟಿಷ್ ಇತಿಹಾಸಕಾರ ಡಾಲ್ರಿಂಪಲ್ ಅವರನ್ನು ಬಿಟ್ಟರೆ, ಈ ಪಟ್ಟಿಯಲ್ಲಿ ಇಪ್ಪತ್ಮೂರು ಮಹಿಳೆಯರು ಸ್ಥಾನ ಪಡೆದಿದ್ದಾರೆ. ಶೈಲಾಜಾ ಅದರಲ್ಲಿರುವ ಏಕೈಕ ಭಾರತೀಯರಾಗಿದ್ದಾರೆ.


ಓದಿ: ನೆರೆಯ ಕೇರಳ ಮಾದರಿ ಅನುಸರಿಸಲು ಸರ್ಕಾರ ಸಿದ್ದವಿಲ್ಲವೇಕೆ? : ಕುಮಾರಸ್ವಾಮಿ ಪ್ರಶ್ನೆ


ನಿಯತಕಾಲಿಕವು ತನ್ನ ಮುಂದಿನ ಸಂಚಿಕೆಯಲ್ಲಿ (ಸೆಪ್ಟೆಂಬರ್ 1) ವರ್ಷದ ಉನ್ನತ ಚಿಂತಕ ಮತ್ತು ಟಾಪ್ -10 ಚಿಂತಕರನ್ನು ಹೆಸರಿಸಲಿದೆ. ಆಯ್ಕೆಯು ಓದುಗರ ಮತಗಳು ಮತ್ತು ಸಂಪಾದಕೀಯ ಸಮಿತಿಯ ಆಲೋಚನೆಗಳನ್ನು ಆಧರಿಸಿರುತ್ತದೆ.

ಕೊರೊನಾ ಸಾಂಕ್ರಮಿಕದ ಏರುಗತಿಯನ್ನು ತಡೆದುದ್ದಕ್ಕಾಗಿ ಹಾಗೂ ದಕ್ಷಿಣ ಭಾರತದ ರಾಜ್ಯದಲ್ಲಿ ಕಡಿಮೆ ಸಾವಿನ ಪ್ರಮಾಣ ಗಳಿಸಿದ ಕೀರ್ತಿಗೆ ಶೈಲಾಜಾ ಪಾತ್ರರಾಗಿದ್ದಾರೆ ಎಂದು ಪತ್ರಿಕೆ ಹೇಳಿದೆ.

ಕೊರೊನಾ ಸೋಂಕು ಚೀನಾದಲ್ಲಿ ವರದಿಯಾಗುತ್ತಿದ್ದಂತೆ ಕೇರಳವು ಯಾವುದೇ ಸಮಯ ವ್ಯರ್ಥ ಮಾಡಿರಲಿಲ್ಲ. ಮುಂಬರುವ ಸವಾಲುಗಳನ್ನು ಎದುರಿಸಲು ತಜ್ಞರ ಸಲಹೆ ಪಡೆದು ಅದಕ್ಕೆ ಬೇಕಾದ ಮುನ್ನೆಚ್ಚರಿಕೆಗಳನ್ನು ರಾಜ್ಯವು ತೆಗೆದುಕೊಂಡಿತು. ಅದರಂತೆ ಮೊದಲ ಕೊರೊನಾ ಪ್ರಕರಣವು ಜನವರಿ 27 ರಂದು ಕೇರಳದಲ್ಲಿ ವರದಿಯಾದಾಗಲೇ ವೈರಸ್ ಎದುರಿಸಲು ರಾಜ್ಯವು ಸಿದ್ಧವಾಗಿತ್ತು.

ವಿಶ್ವ ಆರೋಗ್ಯ ಸಂಸ್ಥೆಯ (ಡಬ್ಲ್ಯುಎಚ್‌ಒ) ಪ್ರೋಟೋಕಾಲ್ ಅನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವುದರಿಂದ ಪರೀಕ್ಷೆ, ಜಾಡು, ಪ್ರತ್ಯೇಕಿಸುವಿಕೆ ಮತ್ತು ಬೆಂಬಲ ಮತ್ತು ಬ್ರೇಕ್ ದಿ ಚೈನ್ ಅಭಿಯಾನಗಳು ರಾಜ್ಯದಾದ್ಯಂತ ನಡೆದಿತ್ತು.

ಕೇರಳದಲ್ಲಿ 2018 ರ ನಿಫಾ ವೈರಸ್ ಅನ್ನು ನಿಭಾಯಿಸಿದರಿಂದ ಗಳಿಸಿದ ಅನುಭವದಿಂದ ಅವರಿಗೆ ಬಹಳ ಸಹಾಯವಾಯಿತು.

ಪ್ರಸ್ತುತ ಕೊರೊನಾ ವೈರಸ್‌ನಿಂದಾಗಿ ಉಂಟಾದ ಸಾವಿನ ಪ್ರಮಾಣವು ಕೇರಳದಲ್ಲಿ ಶೇಕಡಾ 0.3 ರಷ್ಟಿದ್ದರೆ, ಭಾರತದ ಉಳಿದ ಭಾಗಗಳಲ್ಲಿ ಇದು ಶೇಕಡಾ 2.25 ಕ್ಕಿಂತ ಹೆಚ್ಚಿದೆ.


ಓದಿ: ಕೊರೊನಾ ವಿರುದ್ದದ ಹೋರಾಟ: ಕೇರಳದ ಆರೋಗ್ಯ ಮಂತ್ರಿಗೆ ವಿಶ್ವಸಂಸ್ಥೆಯಿಂದ ಗೌರವ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...