Homeಮುಖಪುಟನೂತನ ಶಿಕ್ಷಣ ನೀತಿಗೆ ಭಾರೀ ವಿರೋಧ : TNRejectsNEP ಹ್ಯಾಷ್‌ಟ್ಯಾಗ್ ಟ್ರೆಂಡ್

ನೂತನ ಶಿಕ್ಷಣ ನೀತಿಗೆ ಭಾರೀ ವಿರೋಧ : TNRejectsNEP ಹ್ಯಾಷ್‌ಟ್ಯಾಗ್ ಟ್ರೆಂಡ್

- Advertisement -
- Advertisement -

ಕೇಂದ್ರ ಸರ್ಕಾರದ ಹೊಸ ಶಿಕ್ಷಣ ನೀತಿಯ (NEP) ಕರಡನ್ನು ಕೇಂದ್ರ ಕ್ಯಾಬಿನೆಟ್ ಅನುಮೋದಿಸಿರುವ ಹಿನ್ನೆಲೆಯಲ್ಲಿ ಅದಕ್ಕೆ ಭಾರೀ ವಿರೋಧ ಕಂಡುಬಂದಿದೆ. NEP ಯನ್ನು ತಮಿಳುನಾಡು ತಿರಸ್ಕರಿಸುತ್ತದೆ ಎಂಬ ಕರೆಗೆ ಭಾರೀ ಬೆಂಬಲ ವ್ಯಕ್ತವಾಗಿದ್ದು ಟ್ವಿಟ್ಟರ್‌ನಲ್ಲಿ TNRejectsNEP ಹ್ಯಾಷ್‌ಟ್ಯಾಗ್ ಟ್ರೆಂಡ್ ಆಗಿದೆ.

ಮೂವತ್ತು ಕೋಟಿ ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸುವ ಹೊಸ ಶಿಕ್ಷಣ ನೀತಿಯನ್ನು ಜಾರಿಗೆ ತರಲು ಏಕೆ ಇಷ್ಟು ತುರ್ತು?  ಮೂರು ವರ್ಷದ ಮಗು ಮೂರು ಭಾಷೆಗಳನ್ನು ಓದಬಹುದೇ? ದೇಶದ 1848 ಶಾಲೆಗಳು ಮುಚ್ಚಲ್ಪಡಲಿವೆ ಎಂಬುದಕ್ಕೆ ಉತ್ತರವೇನು? ಎಂಬ ಪ್ರಶ್ನೆಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗಿವೆ.

ಮುಂದಿನ ಎರಡು ದಶಕಗಳ ಭಾರತದ ಶಿಕ್ಷಣದ ರೋಡ್‌ ಮ್ಯಾಪ್‌ ಆಗಲಿರುವ NEP ಯನ್ನು ಕೊರೊನಾ ಸಾಂಕ್ರಾಮಿಕದ ನಡುವೆ ತರಾತುರಿಯಲ್ಲಿ ಜಾರಿಗೊಳಿಸುತ್ತಿರುವ ಅನ್ಯಾಯ ಎಂದು ಹಲವರು ದೂರಿದ್ದಾರೆ.

ಭಾರತದ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಿಗೆ ಮುಕ್ತ ಅವಕಾಶ ನೀಡುವುದು. ಯುಜಿಸಿ (ಯುನಿವರ್ಸಿಟಿ ಗ್ರಾಂಟ್ ಕಮಿಷನ್) ಮತ್ತು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಯನ್ನು ಕಿತ್ತುಹಾಕುವ ಹೊಸ ಶಿಕ್ಷಣ ನೀತಿ ನಮಗೆ ಬೇಡ ಎಂದು ಹಲವರು ಒತ್ತಾಯಿಸಿದ್ದಾರೆ.

ಹೊಸ ಶಿಕ್ಷಣ ನೀತಿಯಲ್ಲಿ 2035ರ ವೇಳೆಗೆ 50% ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕೆ ದಾಖಲಾಗಬೇಕೆಂಬ ಗುರಿ ಹೊಂದಿದೆ. ಈ ಗುರಿಯನ್ನು ಈಗಾಗಲೇ ತಮಿಳುನಾಡಿ ಸಾಧಿಸಿಯಾಗಿದೆ. ನಿಮ್ಮ ಎನ್‌ಇಪಿ ನಮಗೆ ಬೇಡ ಎಂದು ಬಳಕೆದಾರರೊಬ್ಬರು ಟ್ವೀಟ್‌ ಮಾಡಿದ್ದಾರೆ.

ಶಿಕ್ಷಣವು ಮೂಲಭೂತ ಮಾನವ ಹಕ್ಕು. ಅದು ಮೇಲ್ವರ್ಗಕ್ಕೆ ಮಾತ್ರ ಇರಬಾರದು. ಈ ನೀತಿಯು ಜಾರಿಗೆ ಬಂದರೆ ಬಡ ಜನರಿಗೆ ಶಿಕ್ಷಣವನ್ನು ಕಠಿಣವಾಗಿಸುತ್ತಿದೆ, ನಮಗೆ ಅಂತಹ ನೀತಿ ಅಗತ್ಯವಿಲ್ಲ. ನಾವು ಶಿಕ್ಷಣದಲ್ಲಿ ಚೆನ್ನಾಗಿ ಪ್ರಗತಿ ಹೊಂದಿದ್ದೇವೆ, ಅನಗತ್ಯ ನೀತಿಯನ್ನು ಹೇರಬೇಡಿ, ನಮ್ಮಿಂದ ಕಲಿಯಿರಿ ಎಂದು ಅನ್ಬುಲಗು ಎಂಬುವವರು ಅಭಿಪ್ರಾಯಪಟ್ಟಿದ್ದಾರೆ.

ತ್ರಿಭಾಷದ ಹೆಸರಿನಲ್ಲಿ ಹಿಂದಿ ಹೇರಿಕೆಯನ್ನು ಸಹ ಹಲವಾರು ಜನ ವಿರೋಧಿಸಿದ್ದಾರೆ. ಹಿಂದಿ ನಮ್ಮ ಮಾತೃಭಾಷೆಯಲ್ಲ, ರಾಷ್ಟ್ರಭಾಷೆಯಲ್ಲ, ಸಂಪರ್ಕಭಾಷೆಯೂ ಅಲ್ಲ, ಹೆಚ್ಚು ಜನರು ಮಾತನಾಡುವ ಭಾಷೆಯೂ ಅಲ್ಲ. ಹಾಗಾಗಿ ನಮಗೆ ಹಿಂದಿ ಬೇಡ, ತಮಿಳು ಮತ್ತು ಇಂಗ್ಲಿಷ್ ಸಾಕು ಎಂದು ಟ್ವೀಟ್ ಮಾಡಿದ್ದಾರೆ.

ಇದೇ ಸಂದರ್ಭದಲ್ಲಿ #NEPisBrahmanism (ಎನ್‌ಇಪಿ ಎಂದರೆ ಬ್ರಾಹ್ಮಣ್ಯಕರಣ) ಎಂಬ ಹ್ಯಾಷ್‌ಟ್ಯಾಗ್ ಸಹ ಟ್ರೆಂಡ್ ಆಗಿದೆ. ಈಗಾಗಲೇ ಜಾತಿ ತಾರತಮ್ಯವನ್ನು ಎನ್‌ಇಪಿ ಹೆಚ್ಚು ಮಾಡುತ್ತದೆ. ಉನ್ನತ ಜಾತಿಗಳ ಹಿತ ಕಾಯಲು ಇದನ್ನು ಜಾರಿಗೊಳಿಸಲಾಗುತ್ತಿದೆ ಎಂದು ನೆಟ್ಟಿಗರು ಆರೋಪಿಸಿದ್ದಾರೆ.


ಇದನ್ನೂ ಓದಿ: ಮಕ್ಕಳ ಆನ್‌ಲೈನ್ ಶಿಕ್ಷಣಕ್ಕಾಗಿ ತಾಳಿ ಮಾರಿಕೊಂಡ ಘಟನೆ ನನ್ನ ಹೃದಯ ಹಿಂಡುತ್ತಿದೆ: ಎಚ್‌ಡಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...