Homeಮುಖಪುಟನೂತನ ಶಿಕ್ಷಣ ನೀತಿಗೆ ಭಾರೀ ವಿರೋಧ : TNRejectsNEP ಹ್ಯಾಷ್‌ಟ್ಯಾಗ್ ಟ್ರೆಂಡ್

ನೂತನ ಶಿಕ್ಷಣ ನೀತಿಗೆ ಭಾರೀ ವಿರೋಧ : TNRejectsNEP ಹ್ಯಾಷ್‌ಟ್ಯಾಗ್ ಟ್ರೆಂಡ್

- Advertisement -
- Advertisement -

ಕೇಂದ್ರ ಸರ್ಕಾರದ ಹೊಸ ಶಿಕ್ಷಣ ನೀತಿಯ (NEP) ಕರಡನ್ನು ಕೇಂದ್ರ ಕ್ಯಾಬಿನೆಟ್ ಅನುಮೋದಿಸಿರುವ ಹಿನ್ನೆಲೆಯಲ್ಲಿ ಅದಕ್ಕೆ ಭಾರೀ ವಿರೋಧ ಕಂಡುಬಂದಿದೆ. NEP ಯನ್ನು ತಮಿಳುನಾಡು ತಿರಸ್ಕರಿಸುತ್ತದೆ ಎಂಬ ಕರೆಗೆ ಭಾರೀ ಬೆಂಬಲ ವ್ಯಕ್ತವಾಗಿದ್ದು ಟ್ವಿಟ್ಟರ್‌ನಲ್ಲಿ TNRejectsNEP ಹ್ಯಾಷ್‌ಟ್ಯಾಗ್ ಟ್ರೆಂಡ್ ಆಗಿದೆ.

ಮೂವತ್ತು ಕೋಟಿ ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸುವ ಹೊಸ ಶಿಕ್ಷಣ ನೀತಿಯನ್ನು ಜಾರಿಗೆ ತರಲು ಏಕೆ ಇಷ್ಟು ತುರ್ತು?  ಮೂರು ವರ್ಷದ ಮಗು ಮೂರು ಭಾಷೆಗಳನ್ನು ಓದಬಹುದೇ? ದೇಶದ 1848 ಶಾಲೆಗಳು ಮುಚ್ಚಲ್ಪಡಲಿವೆ ಎಂಬುದಕ್ಕೆ ಉತ್ತರವೇನು? ಎಂಬ ಪ್ರಶ್ನೆಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗಿವೆ.

ಮುಂದಿನ ಎರಡು ದಶಕಗಳ ಭಾರತದ ಶಿಕ್ಷಣದ ರೋಡ್‌ ಮ್ಯಾಪ್‌ ಆಗಲಿರುವ NEP ಯನ್ನು ಕೊರೊನಾ ಸಾಂಕ್ರಾಮಿಕದ ನಡುವೆ ತರಾತುರಿಯಲ್ಲಿ ಜಾರಿಗೊಳಿಸುತ್ತಿರುವ ಅನ್ಯಾಯ ಎಂದು ಹಲವರು ದೂರಿದ್ದಾರೆ.

ಭಾರತದ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಿಗೆ ಮುಕ್ತ ಅವಕಾಶ ನೀಡುವುದು. ಯುಜಿಸಿ (ಯುನಿವರ್ಸಿಟಿ ಗ್ರಾಂಟ್ ಕಮಿಷನ್) ಮತ್ತು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಯನ್ನು ಕಿತ್ತುಹಾಕುವ ಹೊಸ ಶಿಕ್ಷಣ ನೀತಿ ನಮಗೆ ಬೇಡ ಎಂದು ಹಲವರು ಒತ್ತಾಯಿಸಿದ್ದಾರೆ.

ಹೊಸ ಶಿಕ್ಷಣ ನೀತಿಯಲ್ಲಿ 2035ರ ವೇಳೆಗೆ 50% ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕೆ ದಾಖಲಾಗಬೇಕೆಂಬ ಗುರಿ ಹೊಂದಿದೆ. ಈ ಗುರಿಯನ್ನು ಈಗಾಗಲೇ ತಮಿಳುನಾಡಿ ಸಾಧಿಸಿಯಾಗಿದೆ. ನಿಮ್ಮ ಎನ್‌ಇಪಿ ನಮಗೆ ಬೇಡ ಎಂದು ಬಳಕೆದಾರರೊಬ್ಬರು ಟ್ವೀಟ್‌ ಮಾಡಿದ್ದಾರೆ.

ಶಿಕ್ಷಣವು ಮೂಲಭೂತ ಮಾನವ ಹಕ್ಕು. ಅದು ಮೇಲ್ವರ್ಗಕ್ಕೆ ಮಾತ್ರ ಇರಬಾರದು. ಈ ನೀತಿಯು ಜಾರಿಗೆ ಬಂದರೆ ಬಡ ಜನರಿಗೆ ಶಿಕ್ಷಣವನ್ನು ಕಠಿಣವಾಗಿಸುತ್ತಿದೆ, ನಮಗೆ ಅಂತಹ ನೀತಿ ಅಗತ್ಯವಿಲ್ಲ. ನಾವು ಶಿಕ್ಷಣದಲ್ಲಿ ಚೆನ್ನಾಗಿ ಪ್ರಗತಿ ಹೊಂದಿದ್ದೇವೆ, ಅನಗತ್ಯ ನೀತಿಯನ್ನು ಹೇರಬೇಡಿ, ನಮ್ಮಿಂದ ಕಲಿಯಿರಿ ಎಂದು ಅನ್ಬುಲಗು ಎಂಬುವವರು ಅಭಿಪ್ರಾಯಪಟ್ಟಿದ್ದಾರೆ.

ತ್ರಿಭಾಷದ ಹೆಸರಿನಲ್ಲಿ ಹಿಂದಿ ಹೇರಿಕೆಯನ್ನು ಸಹ ಹಲವಾರು ಜನ ವಿರೋಧಿಸಿದ್ದಾರೆ. ಹಿಂದಿ ನಮ್ಮ ಮಾತೃಭಾಷೆಯಲ್ಲ, ರಾಷ್ಟ್ರಭಾಷೆಯಲ್ಲ, ಸಂಪರ್ಕಭಾಷೆಯೂ ಅಲ್ಲ, ಹೆಚ್ಚು ಜನರು ಮಾತನಾಡುವ ಭಾಷೆಯೂ ಅಲ್ಲ. ಹಾಗಾಗಿ ನಮಗೆ ಹಿಂದಿ ಬೇಡ, ತಮಿಳು ಮತ್ತು ಇಂಗ್ಲಿಷ್ ಸಾಕು ಎಂದು ಟ್ವೀಟ್ ಮಾಡಿದ್ದಾರೆ.

ಇದೇ ಸಂದರ್ಭದಲ್ಲಿ #NEPisBrahmanism (ಎನ್‌ಇಪಿ ಎಂದರೆ ಬ್ರಾಹ್ಮಣ್ಯಕರಣ) ಎಂಬ ಹ್ಯಾಷ್‌ಟ್ಯಾಗ್ ಸಹ ಟ್ರೆಂಡ್ ಆಗಿದೆ. ಈಗಾಗಲೇ ಜಾತಿ ತಾರತಮ್ಯವನ್ನು ಎನ್‌ಇಪಿ ಹೆಚ್ಚು ಮಾಡುತ್ತದೆ. ಉನ್ನತ ಜಾತಿಗಳ ಹಿತ ಕಾಯಲು ಇದನ್ನು ಜಾರಿಗೊಳಿಸಲಾಗುತ್ತಿದೆ ಎಂದು ನೆಟ್ಟಿಗರು ಆರೋಪಿಸಿದ್ದಾರೆ.


ಇದನ್ನೂ ಓದಿ: ಮಕ್ಕಳ ಆನ್‌ಲೈನ್ ಶಿಕ್ಷಣಕ್ಕಾಗಿ ತಾಳಿ ಮಾರಿಕೊಂಡ ಘಟನೆ ನನ್ನ ಹೃದಯ ಹಿಂಡುತ್ತಿದೆ: ಎಚ್‌ಡಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...