Homeಅಂತರಾಷ್ಟ್ರೀಯಅಮೇರಿಕದಲ್ಲಿ ಟಿಕ್ ಟಾಕ್ ಬ್ಯಾನ್ ಮಾಡುತ್ತೇವೆ; ಡೋನಾಲ್ಡ್ ಟ್ರಂಪ್

ಅಮೇರಿಕದಲ್ಲಿ ಟಿಕ್ ಟಾಕ್ ಬ್ಯಾನ್ ಮಾಡುತ್ತೇವೆ; ಡೋನಾಲ್ಡ್ ಟ್ರಂಪ್

- Advertisement -
- Advertisement -

ಕಳೆದ ತಿಂಗಳಷ್ಟೇ ಭಾರತದಲ್ಲಿ ನಿಷೇಧಕ್ಕೊಳಗಾದ ಟಿಕ್ ಟಾಕ್ ಆಪ್‌ ಅನ್ನು ಅಮೇರಿಕದಲ್ಲಿಯೂ ಬ್ಯಾನ್ ಮಾಡುವುದಾಗಿ ಅಲ್ಲಿನ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಘೋಷಿಸಿದ್ದಾರೆ.

ಈ ಸೇವೆಯು ಚೀನಾದ ಗುಪ್ತಚರ ಸಾಧನವಾಗಿರಬಹುದೆಂದು ಅಮೆರಿಕದ ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದರಿಂದ ಡೊನಾಲ್ಡ್ ಟ್ರಂಪ್  ಟಿಕ್‌ಟಾಕ್ ಅನ್ನು ನಿರ್ಬಂಧಿಸುವುದಾಗಿ ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇತ್ತೀಚಿನ ದಿನಗಳಲ್ಲಿ ಅಮೆರಿಕಾ ಅಧಿಕಾರಿಗಳು ಚೀನಾದ ವಿರುದ್ಧ ಹಲವು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅದರ ಭಾಗವಾಗಿ ಇ ಆಪ್ ನಿಷೇಧಿಸುವ ಪ್ರಸ್ತಾಪ ಬಂದಿದೆ. ಆದರೆ ಟಿಕ್ ಟಾಕ್ ಚೀನಾದೊಂದಿಗಿನ ಯಾವುದೇ ಸಂಪರ್ಕ ಹೊಂದಿಲ್ಲ ಎಂದು ಘೋಷಿಸಿದೆ.

ಇಡೀ ಟಿಕ್ ಟಾಕ್ ಕಂಪನಿಯನ್ನೇ ಅಮೆರಿಕ ಕೊಂಡುಕೊಳ್ಳುವುದಾಗಿ ಸುದ್ದಿ ಹರಿದಾಡುತ್ತಿದ್ದವು.  ಆ್ಯಪ್‌ನ ಯುಎಸ್ ಕಾರ್ಯಾಚರಣೆಯನ್ನು ತನ್ನ ಚೀನಾದ ಮೂಲ ಸಂಸ್ಥೆ ಬೈಟ್‌ಡಾನ್ಸ್‌ನಿಂದ ಟ್ರಂಪ್‌ಗೆ ನೀಡಲಾಗುವುದು ಎಂದು ಮಾಧ್ಯಮಗಳು ಪ್ರಸಾರ ಮಾಡಿದ್ದವು. ಆದರೆ ಅದಕ್ಕೆ ವ್ಯತಿರಿಕ್ತವಾಗಿ ಟ್ರಂಪ್ ನಿಷೇಧವನ್ನು ಘೋಷಿಸಿದ್ದಾರೆ.

ಏರ್ ಫೋರ್ಸ್ ಒನ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, “ಟಿಕ್‌ಟಾಕ್‌ಗೆ ಸಂಬಂಧಿಸಿದಂತೆ, ನಾವು ಅವರನ್ನು ಅಮೆರಿಕದಿಂದ ನಿಷೇಧಿಸುತ್ತಿದ್ದೇವೆ” ಎಂದು ಹೇಳಿದ್ದಾರೆ.

ಅಮೆರಿಕದ ವಿದೇಶಿ ಹೂಡಿಕೆ ಸಮಿತಿ (ಸಿಎಫ್‌ಐಯುಎಸ್) ಅಮೆರಿಕದ ರಾಷ್ಟ್ರೀಯ ಭದ್ರತೆಯ ಮೇಲೆ ಪರಿಣಾಮ ಬೀರುವ ವ್ಯವಹಾರಗಳ ಬಗ್ಗೆ ತನಿಖೆ ನಡೆಸಿದ ನಂತರ ಟ್ರಂಪ್ ಅವರ ಈ ಘೋಷಣೆ ಮಾಡಿದ್ದಾರೆ.

ವಿಶ್ವಾದ್ಯಂತ ನೂರು ಕೋಟಿಗೂ ಹೆಚ್ಚು ಬಳಕೆದಾರರನ್ನು ಹೊಂದಿದ್ದ ಟಿಕ್‌ ಟಾಕ್ ಯುವಜನರಲ್ಲಿ ಹೆಚ್ಚು ಜನಪ್ರಿಯ ಆಪ್ ಆಗಿದೆ. ಸಾಮಾನ್ಯ ಜನರು ಸುಲಭವಾಗಿ ಬಳಸಬಹುದಾಗಿದ್ದ ಈ ಆಪ್ ಸಣ್ಣ ಸಣ್ಣ ವಿಡಿಯೋಗಳಿಗೆ ಪ್ರಸಿದ್ದಿಯಾಗಿತ್ತು.

ಭಾರತ ಮತ್ತು ಚೀನಾ ನಡುವೆ ಸಂಘರ್ಷ ಆರಂಭವಾದಾಗಿನಿಂದ ಕಳೆದ ತಿಂಗಳು ಭಾರತವು ಈ ಆಪ್‌ ಅನ್ನು ನಿಷೇಧಿಸಿದೆ. “ಟಿಕ್‌ಟಾಕ್‌ನ ದೀರ್ಘಕಾಲೀನ ಯಶಸ್ಸಿನ ಬಗ್ಗೆ ನಮಗೆ ವಿಶ್ವಾಸವಿದೆ” ಎಂದು ಕಂಪನಿ ವಕ್ತಾರರು ತಿಳಿಸಿದ್ದಾರೆ.

“ನಾವು ರಾಜಕೀಯ ಮಾಡುವುದಿಲ್ಲ, ನಾವು ರಾಜಕೀಯ ಜಾಹೀರಾತನ್ನು ಸ್ವೀಕರಿಸುವುದಿಲ್ಲ ಮತ್ತು ಯಾವುದೇ ಕಾರ್ಯಸೂಚಿಯನ್ನು ಹೊಂದಿಲ್ಲ. ಪ್ರತಿಯೊಬ್ಬರೂ ಆನಂದಿಸಲು ರೋಮಾಂಚಕ, ಕ್ರಿಯಾತ್ಮಕ ವೇದಿಕೆಯಾಗಿ ಉಳಿಯುವುದು ನಮ್ಮ ಏಕೈಕ ಉದ್ದೇಶ” ಎಂದು ಟಿಕ್‌ಟಾಕ್ ಸಿಇಒ ಕೆವಿನ್ ಮೇಯರ್ ತಿಳಿಸಿದ್ದಾರೆ.

2017 ರಲ್ಲಿ ಬೈಟ್‌ಡ್ಯಾನ್ಸ್ ಯುಎಸ್ ಮೂಲದ ಅಪ್ಲಿಕೇಶನ್ ಮ್ಯೂಸಿಕಲ್.ಲೈ ಅನ್ನು ಸ್ವಾಧೀನಪಡಿಸಿಕೊಂಡ ನಂತರ ಅದನ್ನು ತನ್ನದೇ ಆದ ವೀಡಿಯೊ ಸೇವೆಯೊಂದಿಗೆ ವಿಲೀನಗೊಳಿಸಿದ ನಂತರ ವೇದಿಕೆಯ ಜನಪ್ರಿಯತೆ ಹೆಚ್ಚಾಯಿತು.


ಇದನ್ನೂ ಓದಿ: ಅಮೇರಿಕಾದ ಹೂಡಿಕೆದಾರರಿಗೆ ತನ್ನ ಪಾಲನ್ನು ಮಾರಾಟ ಮಾಡಲಿದೆಯೆ ಟಿಕ್‌ಟಾಕ್‌‌?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...