Homeಕರ್ನಾಟಕಕೋವಿಡ್ ಪರೀಕ್ಷಿಸುವ ಆರ್‌ಟಿ-ಪಿಸಿಆರ್ ಕಿಟ್‌ಗಳಿಗೆ ಮೂರು ಪಟ್ಟು ಹಣಕೊಟ್ಟು ಖರೀದಿಸಿದ ಕರ್ನಾಟಕ!

ಕೋವಿಡ್ ಪರೀಕ್ಷಿಸುವ ಆರ್‌ಟಿ-ಪಿಸಿಆರ್ ಕಿಟ್‌ಗಳಿಗೆ ಮೂರು ಪಟ್ಟು ಹಣಕೊಟ್ಟು ಖರೀದಿಸಿದ ಕರ್ನಾಟಕ!

ವೈದ್ಯಕೀಯ ಸಾಮಗ್ರ ಖರೀದಿ ವಿಚಾರದಲ್ಲಿ ರಾಜ್ಯ ಸರ್ಕಾರವು ದೊಡ್ಡ ಭ್ರಷ್ಟಾಚಾರವೆಸಗಿದೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ಹೊತ್ತಿನಲ್ಲಿ ಈ ವಿಚಾರಕ್ಕೆ ಭಾರೀ ಮಹತ್ವ ಬಂದಿದೆ.

- Advertisement -
- Advertisement -

ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದಾಗ ಮೇ ತಿಂಗಳಿನಲ್ಲಿ ಕರ್ನಾಟಕ ಸರ್ಕಾರವು ಕೋವಿಡ್ ಪರೀಕ್ಷಿಸುವ ಆರ್‌ಟಿ-ಪಿಸಿಆರ್ ಮತ್ತು ಆರ್‌ಎನ್‌ಎ ಹೊರತೆಗೆಯುವ ಕಿಟ್‌ಗಳಿಗೆ ಮೂರು ಪಟ್ಟು ಹಣಕೊಟ್ಟು ಖರೀದಿಸಿದೆ ಎಂದು ತಿಳಿದುಬಂದಿದೆ.

ವೈದ್ಯಕೀಯ ಸಾಮಗ್ರ ಖರೀದಿ ವಿಚಾರದಲ್ಲಿ ರಾಜ್ಯ ಸರ್ಕಾರವು ದೊಡ್ಡ ಭ್ರಷ್ಟಾಚಾರವೆಸಗಿದೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ಹೊತ್ತಿನಲ್ಲಿ ಈ ವಿಚಾರಕ್ಕೆ ಭಾರೀ ಮಹತ್ವ ಬಂದಿದೆ.

ಕರ್ನಾಟಕ ಸ್ಟೇಟ್ ಲಾಜಿಸ್ಟಿಕ್ ಅಂಡ್ ವೇರ್ ಹೌಸಿಂಗ್ ಸೊಸೈಟಿಯು ಕಿಟ್‌ಗಳನ್ನು ಖರೀದಿ ಮಾಡಿದ್ದು, ಬೇರೆ ರಾಜ್ಯಗಳು ಪಾವತಿಸಿದ್ದಕ್ಕಿಂತ ಹೆಚ್ಚಿನ ಹಣವನ್ನು ಕರ್ನಾಟಕ ಪಾವತಿಸಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಒಡಿಶಾ ಮತ್ತು ಗುಜರಾತ್‌ನಂತಹ ರಾಜ್ಯಗಳು ಆರ್‌ಟಿ-ಪಿಸಿಆರ್ ಮತ್ತು ಆರ್‌ಎನ್‌ಎ ಹೊರತೆಗೆಯುವ ಕಿಟ್‌ಗಳನ್ನು ಪ್ರತ್ಯೇಕವಾಗಿ ಖರೀದಿಸಿದರೆ, ಕರ್ನಾಟಕದ ಕೆಎಸ್‌ಡಿಎಲ್‌ಡಬ್ಲ್ಯೂಎಸ್ ಇವೆರಡನ್ನೂ ಜೊತೆಯಾಗಿ ಹೆಚ್ಚಿನ ಬೆಲೆಗೆ ಖರೀದಿಸಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಹೈದರಾಬಾದ್ ಮೂಲದ ಕಂಪನಿಯೊಂದರಿಂದ ಒಡಿಶಾ ರಾಜ್ಯವು ಆರ್‌ಟಿ-ಪಿಸಿಆರ್ ಕಿಟ್‌ನ್ನು ಪ್ರತಿ ಯೂನಿಟ್‌ಗೆ 550 ರೂ.ಗೆ ಖರೀದಿಸಿದರೆ, ಆರ್‌ಎನ್‌ಎ ಹೊರತೆಗೆಯುವ ಕಿಟ್‌ಗೆ ತಲಾ 100 ರೂ. ಪಾವತಿಸಿದೆ. ಗುಜರಾತ್ 25,000 ಆರ್‌ಎನ್‌ಎ ಹೊರತೆಗೆಯುವ ಕಿಟ್‌ಗಳಿಗೆ ಅದೇ ಸಂಸ್ಥೆಯಿಂದ ಪ್ರತಿ ಯೂನಿಟ್‌ಗೆ 179 ರೂ ನಂತೆ ಖರೀದಿಸಿದೆ. ಚತ್ತೀಸ್‌ಘಡ ಸರ್ಕಾರವು ಪ್ರತಿ ಆರ್‌ಟಿ-ಪಿಸಿಆರ್ ಕಿಟ್‌ಗೆ 571.2 ರೂ ನಂತೆ ಖರೀದಿಸಿದೆ.

ಆದರೆ ಅದೇ ಹೈದರಾಬಾದ್ ಮೂಲದ ಸಂಸ್ಥೆಯು ತಯಾರಿಸಿದ ಆರ್‌ಟಿ-ಪಿಸಿಆರ್ ಮತ್ತು ಆರ್‌ಎನ್‌ಎ ಹೊರತೆಗೆಯುವ ಕಿಟ್‌ಗಳನ್ನು ಬೆಂಗಳೂರು ಮೂಲದ ಕಂಪನಿಯ ಮೂಲಕ 1,120 ರೂಗೆ ಕೆಎಸ್‌ಡಿಎಲ್‌ಡಬ್ಲ್ಯೂಎಸ್ ಖರೀದಿಸಿದೆ. ಪ್ರತಿ ಆರ್‌ಟಿ-ಪಿಸಿಆರ್ ಮತ್ತು ಆರ್‌ಎನ್‌ಎ ಹೊರತೆಗೆಯುವ ಕಿಟ್‌ಗಳ ಬೆಲೆ ನಮೂದಿಸದಿದ್ದರೂ ಒಟ್ಟಾರೆಯಾಗಿ ಕೆಎಸ್‌ಡಿಎಲ್‌ಡಬ್ಲ್ಯೂಎಸ್ ಮೇ ತಿಂಗಳ ಕೊನೆಯಲ್ಲಿ 3.92 ಕೋಟಿ ರೂ.ಗಳ ವೆಚ್ಚದಲ್ಲಿ 35,000 ಪರೀಕ್ಷಾ ಕಿಟ್‌ಗಳನ್ನು ಖರೀದಿಸಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಈ ಕುರಿತು ಕರ್ನಾಟಕ ರಾಷ್ಟ್ರ ಸಮಿತಿಯು ಸಾರ್ವಜನಿಕ ಲೆಕ್ಕಪತ್ರ ಸಮಿತಿ ಮತ್ತು ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ಸಲ್ಲಿಸಿದರೂ ಕೂಡ ಯಾವುದೇ ತನಿಖೆ ನಡೆದಿಲ್ಲ. “ಎಸಿಬಿಯು ಪ್ರಾಥಮಿಕ ವಿಚಾರಣೆಯನ್ನು ಪ್ರಾರಂಭಿಸಲು ಸರ್ಕಾರದಿಂದ ಅನುಮತಿ ಕೋರಿದ್ದು, ಎಫ್ಐಆರ್ ದಾಖಲಿಸಲು ಸರ್ಕಾರ ಇನ್ನೂ ಅನುಮತಿ ನೀಡಿಲ್ಲ” ಎನ್ನಲಾಗಿದೆ.

ಒಟ್ಟಾರೆಯಾಗಿ ಮೇಲ್ನೋಟಕ್ಕೆ ಕೋವಿಡ್ ಪರೀಕ್ಷಾ ಕಿಟ್‌ಗಳನ್ನು ದುಬಾರಿ ಬೆಲೆ ತೆತ್ತು ಖರೀದಿಸಿರುವುದು ಕಂಡುಬಂದಿದೆ. ಇದು ಸಾಕಷ್ಟು ಅನುಮಾನಗಳಿಗೂ ಎಡೆಮಾಡಿಕೊಟ್ಟಿದೆ.


ಇದನ್ನೂ ಓದಿ: ಭ್ರಷ್ಟಾಚಾರದ ಆರೋಪ: ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ಗೆ ಬಿಜೆಪಿಯಿಂದ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...