Homeಮುಖಪುಟಪಿ ಸಾಯಿನಾಥ್‌ರವರ 'ಪರಿ'ಗೆ ಪ್ರತಿಷ್ಠಿತ ಪ್ರೇಮ್ ಭಾಟಿಯಾ ಪ್ರಶಸ್ತಿ

ಪಿ ಸಾಯಿನಾಥ್‌ರವರ ‘ಪರಿ’ಗೆ ಪ್ರತಿಷ್ಠಿತ ಪ್ರೇಮ್ ಭಾಟಿಯಾ ಪ್ರಶಸ್ತಿ

- Advertisement -
- Advertisement -

2020ನೇ ಸಾಲಿನ ಪತ್ರಿಕೋದ್ಯಮಕ್ಕಾಗಿ ಪ್ರತಿಷ್ಠಿತ ಪ್ರೇಮ್ ಭಾಟಿಯಾ ಪ್ರಶಸ್ತಿಯು ಪಿ ಸಾಯಿನಾಥ್‌ರವರ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾ (ಪರಿ) ಮತ್ತು ಪತ್ರಕರ್ತ ದೀಪಂಕರ್ ಘೋಷ್ ಅವರಿಗೆ ಸಂದಿದೆ.

COVID-19 ಸಾಂಕ್ರಾಮಿಕ ಮತ್ತು ಸಂಬಂಧಿತ ವಿಷಯಗಳ ಪ್ರಸಾರಕ್ಕಾಗಿ ಘೋಷ್ ಮತ್ತು PARI ತಂಡವನ್ನು ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ ಎಂದು ಪ್ರೇಮ್ ಭಾಟಿಯಾ ಮೆಮೋರಿಯಲ್ ಟ್ರಸ್ಟ್‌ನ ಪತ್ರಿಕಾ ಹೇಳಿಕೆ ತಿಳಿಸಿದೆ.

PARI ತಂಡವು “ಹವಾಮಾನ ಬದಲಾವಣೆಯ ಪರಿಣಾಮಗಳು ಮತ್ತು ಗ್ರಾಮೀಣ ಭಾರತದ ಮೇಲೆ ಸಾಂಕ್ರಾಮಿಕದ ಪ್ರಭಾವ ಸೇರಿದಂತೆ ಅವರ ವ್ಯಾಪಕ ಕ್ಷೇತ್ರ ವರದಿಗಳಿಗಾಗಿ” ಪ್ರಶಸ್ತಿಯನ್ನು ಸ್ವೀಕರಿಸಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇದುವರೆಗೂ ಪ್ರಶಸ್ತಿಯನ್ನು ಸಾಮಾನ್ಯವಾಗಿ ಒಬ್ಬ ವ್ಯಕ್ತಿಗೆ ನೀಡಲಾಗುತ್ತಿತ್ತು. ಆದರೆ ಈ ಭಾರಿ ಆ ಸಂಪ್ರದಾಯವನ್ನು ಮುರಿದಿದ್ದು “PARI ಒಟ್ಟಾರೆ ಕ್ಷೇತ್ರ ವರದಿಗಾರರು, ಸ್ವಯಂಸೇವಕರು ಮತ್ತು ಅದರ ಸಮರ್ಪಿತ ತಂಡಕ್ಕಾಗಿ” ಪ್ರಶಸ್ತಿ ನೀಡಲಾಗುತ್ತಿದೆ ಎಂದು ಪ್ರೇಮ್ ಭಾಟಿಯಾ ಟ್ರಸ್ಟ್ ಹೇಳಿದೆ.

ವಲಸೆ ಕಾರ್ಮಿಕರ ಬಗ್ಗೆ, ಸೂಕ್ಷ್ಮವಾಗಿ ಹೆಣೆದುಕೊಂಡಿರುವ ಗ್ರಾಮೀಣ ಭಾರತದ ಆರ್ಥಿಕತೆಯ ಮೇಲೆ, ರೈತರು, ನಗರ ಮತ್ತು ಗ್ರಾಮೀಣ ಭಾಗದಲ್ಲಿನ ಕಾರ್ಮಿಕರು, ಕಬ್ಬು ಕತ್ತರಿಸುವವರು, ನೇಕಾರರು, ಆಟಿಕೆ ತಯಾರಕರು, ಇತರ ಕುಶಲಕರ್ಮಿಗಳು, ನೈರ್ಮಲ್ಯ ಕಾರ್ಮಿಕರು, ಸ್ಥಳಾಂತರಗೊಂಡ ಕಾರ್ಮಿಕರು, ಮುಂಬಯಿಯ ಪ್ರಮುಖ ಆಸ್ಪತ್ರೆಗಳ ಹೊರಗಿನ ಫುಟ್‌ಪಾತ್‌ಗಳಲ್ಲಿ ಕಾಯುತ್ತಿರುವ ಗ್ರಾಮೀಣ ಪ್ರದೇಶದ ಕ್ಯಾನ್ಸರ್ ರೋಗಿಗಳು, ಅಲೆಮಾರಿ ಪಾದ್ರಿಗಳು, ದೈನಂದಿನ ಬಾಜಿ ಕಟ್ಟುವವರು, ಜಾನಪದ ಕಲಾವಿದರು, ಮೀನುಗಾರರು, ಕ್ಷೌರಿಕರು, ಇಟ್ಟಿಗೆ ಗೂಡು ಕಾರ್ಮಿಕರು, ಹಾರ್ಮೋನಿಯಂ ರಿಪೇರಿ ಮಾಡುವವರು, ದಲಿತರು ಮತ್ತು ಆದಿವಾಸಿಗಳು… ಹೀಗೆ ವಿವಿಧ ಉದ್ಯೋಗಿಗಳ ಬಗ್ಗೆ ದೇಶದ 20 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸುತ್ತಾಡಿ ನೂರಾರು ವರದಿಗಳು ಮತ್ತು ವಿಡಿಯೋ ದಾಖಲೆಗಳನ್ನು ಪರಿ ಕಲೆಹಾಕಿದೆ ಎಂದು ಪರಿ ವೆಬ್‌ಸೈಟ್‌ನಲ್ಲಿ ತಿಳಿಸಲಾಗಿದೆ.

ಖ್ಯಾತ ಪತ್ರಕರ್ತ ಪಿ.ಸಾಯಿನಾಥ್ ಅವರು 2014 ರಲ್ಲಿ ಸ್ಥಾಪಿಸಿದ ವೆಬ್‌ಸೈಟ್‌ ‘ಪರಿ’ ವರದಿಗಾರಿಕೆಯ ಮೂಲಕ ಗ್ರಾಮೀಣ ಭಾರತದ ಕುರಿತಾದ ದಾಖಲಾತಿಗಳ ಸಂಗ್ರಹವಾಗಿದೆ. “ಪಾರಿ ಜೀವಂತ ಜರ್ನಲ್ ಮತ್ತು ಆರ್ಕೈವ್ ಆಗಿದೆ. ಇದು ಪ್ರಸ್ತುತ ಗ್ರಾಮೀಣ ಭಾರತದ ಮೂಲೆಗೆ ತಳ್ಳಲ್ಪಟ್ಟ ವರದಿಗಳನ್ನು ಮುನ್ನೆಲೆಗೆ ತರಲು ಪ್ರಯತ್ನಿಸುತ್ತದೆ. ಈಗಾಗಲೇ ಪ್ರಕಟವಾದ ಕಥೆಗಳು, ವರದಿಗಳು, ವೀಡಿಯೊಗಳು ಮತ್ತು ಆಡಿಯೊಗಳ ಡೇಟಾಬೇಸ್ ಅನ್ನು ಸಾಧ್ಯವಾದಷ್ಟು ಮೂಲಗಳಿಂದ ಸಂಗ್ರಹಿಸಲಾಗಿದೆ. PARIಯ ಒಂದು ಕುತೂಹಲಕಾರಿ ಅಂಶವೆಂದರೆ, ಜನರ ದೈನಂದಿನ ಜೀವನದ ಬಗ್ಗೆ ಬರೆಯುತ್ತಿರುವ ಮತ್ತು ನಮ್ಮ ಯೋಜನೆಯ ಮಾನದಂಡಗಳನ್ನು ಪೂರೈಸುವ, ಯೋಜನೆಯ ಆದೇಶವನ್ನು ಅನುಸರಿಸಲು ಸಿದ್ಧರಿರುವ ಯಾರಾದರೂ ವೆಬ್‌ಸೈಟ್‌ಗೆ ಕೊಡುಗೆ ನೀಡಬಹುದು. ಇಲ್ಲಿರುವ ಎಲ್ಲವನ್ನು ಉಚಿತವಾಗಿ ಓದಬಹುದು” ಎಂದು ಪಿ ಸಾಯಿನಾಥ್ ಹೇಳುತ್ತಾರೆ.

ಮತ್ತೊರ್ವ ಪರ್ತಕರ್ತ, ಇಂಡಿಯನ್ ಎಕ್ಸ್‌ಪ್ರೆಸ್‌ನ ರಾಜಕೀಯ ವಿಭಾಗದ ಮುಖ್ಯಸ್ಥ ದೀಪಂಕರ್ ಘೋಷ್ ಅವರಿಗೂ ಸಹ ಪ್ರೇಮ್ ಭಾಟಿಯಾ ಪ್ರಶಸ್ತಿ ನೀಡಲಾಗಿದೆ.

ಪ್ರಖ್ಯಾತ ಪತ್ರಕರ್ತ ಪ್ರೇಮ್ ಭಾಟಿಯಾ (1911-1995) ಅವರ ನೆನಪಿಗಾಗಿ 1995 ರಲ್ಲಿ ಪ್ರೇಮ್ ಭಾಟಿಯಾ ಪ್ರಶಸ್ತಿಗಳನ್ನು ಸ್ಥಾಪಿಸಲಾಗಿದೆ. ವಸ್ತುನಿಷ್ಠ ವರದಿಗಾರಿಕೆ, ಸತ್ಯದ ನಿರ್ಭೀತ ಅನ್ವೇಷಣೆ ಮತ್ತು ಭಾರತದಲ್ಲಿ ಪತ್ರಿಕೋದ್ಯಮದ ಗುಣಮಟ್ಟವನ್ನು ಸುಧಾರಿಸುವ ಬದ್ಧತೆಯ ಮೌಲ್ಯಗಳನ್ನು ಪ್ರಚುರ ಪಡಿಸುವುದು ಅದರ ಉದ್ದೇಶವಾಗಿದೆ.


ಇದನ್ನೂ ಓದಿ: ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌ಗೆ ಗೌರವ ಡಾಕ್ಟರೇಟ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...