Homeಮುಖಪುಟಪಿ ಸಾಯಿನಾಥ್‌ರವರ 'ಪರಿ'ಗೆ ಪ್ರತಿಷ್ಠಿತ ಪ್ರೇಮ್ ಭಾಟಿಯಾ ಪ್ರಶಸ್ತಿ

ಪಿ ಸಾಯಿನಾಥ್‌ರವರ ‘ಪರಿ’ಗೆ ಪ್ರತಿಷ್ಠಿತ ಪ್ರೇಮ್ ಭಾಟಿಯಾ ಪ್ರಶಸ್ತಿ

- Advertisement -
- Advertisement -

2020ನೇ ಸಾಲಿನ ಪತ್ರಿಕೋದ್ಯಮಕ್ಕಾಗಿ ಪ್ರತಿಷ್ಠಿತ ಪ್ರೇಮ್ ಭಾಟಿಯಾ ಪ್ರಶಸ್ತಿಯು ಪಿ ಸಾಯಿನಾಥ್‌ರವರ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾ (ಪರಿ) ಮತ್ತು ಪತ್ರಕರ್ತ ದೀಪಂಕರ್ ಘೋಷ್ ಅವರಿಗೆ ಸಂದಿದೆ.

COVID-19 ಸಾಂಕ್ರಾಮಿಕ ಮತ್ತು ಸಂಬಂಧಿತ ವಿಷಯಗಳ ಪ್ರಸಾರಕ್ಕಾಗಿ ಘೋಷ್ ಮತ್ತು PARI ತಂಡವನ್ನು ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ ಎಂದು ಪ್ರೇಮ್ ಭಾಟಿಯಾ ಮೆಮೋರಿಯಲ್ ಟ್ರಸ್ಟ್‌ನ ಪತ್ರಿಕಾ ಹೇಳಿಕೆ ತಿಳಿಸಿದೆ.

PARI ತಂಡವು “ಹವಾಮಾನ ಬದಲಾವಣೆಯ ಪರಿಣಾಮಗಳು ಮತ್ತು ಗ್ರಾಮೀಣ ಭಾರತದ ಮೇಲೆ ಸಾಂಕ್ರಾಮಿಕದ ಪ್ರಭಾವ ಸೇರಿದಂತೆ ಅವರ ವ್ಯಾಪಕ ಕ್ಷೇತ್ರ ವರದಿಗಳಿಗಾಗಿ” ಪ್ರಶಸ್ತಿಯನ್ನು ಸ್ವೀಕರಿಸಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇದುವರೆಗೂ ಪ್ರಶಸ್ತಿಯನ್ನು ಸಾಮಾನ್ಯವಾಗಿ ಒಬ್ಬ ವ್ಯಕ್ತಿಗೆ ನೀಡಲಾಗುತ್ತಿತ್ತು. ಆದರೆ ಈ ಭಾರಿ ಆ ಸಂಪ್ರದಾಯವನ್ನು ಮುರಿದಿದ್ದು “PARI ಒಟ್ಟಾರೆ ಕ್ಷೇತ್ರ ವರದಿಗಾರರು, ಸ್ವಯಂಸೇವಕರು ಮತ್ತು ಅದರ ಸಮರ್ಪಿತ ತಂಡಕ್ಕಾಗಿ” ಪ್ರಶಸ್ತಿ ನೀಡಲಾಗುತ್ತಿದೆ ಎಂದು ಪ್ರೇಮ್ ಭಾಟಿಯಾ ಟ್ರಸ್ಟ್ ಹೇಳಿದೆ.

ವಲಸೆ ಕಾರ್ಮಿಕರ ಬಗ್ಗೆ, ಸೂಕ್ಷ್ಮವಾಗಿ ಹೆಣೆದುಕೊಂಡಿರುವ ಗ್ರಾಮೀಣ ಭಾರತದ ಆರ್ಥಿಕತೆಯ ಮೇಲೆ, ರೈತರು, ನಗರ ಮತ್ತು ಗ್ರಾಮೀಣ ಭಾಗದಲ್ಲಿನ ಕಾರ್ಮಿಕರು, ಕಬ್ಬು ಕತ್ತರಿಸುವವರು, ನೇಕಾರರು, ಆಟಿಕೆ ತಯಾರಕರು, ಇತರ ಕುಶಲಕರ್ಮಿಗಳು, ನೈರ್ಮಲ್ಯ ಕಾರ್ಮಿಕರು, ಸ್ಥಳಾಂತರಗೊಂಡ ಕಾರ್ಮಿಕರು, ಮುಂಬಯಿಯ ಪ್ರಮುಖ ಆಸ್ಪತ್ರೆಗಳ ಹೊರಗಿನ ಫುಟ್‌ಪಾತ್‌ಗಳಲ್ಲಿ ಕಾಯುತ್ತಿರುವ ಗ್ರಾಮೀಣ ಪ್ರದೇಶದ ಕ್ಯಾನ್ಸರ್ ರೋಗಿಗಳು, ಅಲೆಮಾರಿ ಪಾದ್ರಿಗಳು, ದೈನಂದಿನ ಬಾಜಿ ಕಟ್ಟುವವರು, ಜಾನಪದ ಕಲಾವಿದರು, ಮೀನುಗಾರರು, ಕ್ಷೌರಿಕರು, ಇಟ್ಟಿಗೆ ಗೂಡು ಕಾರ್ಮಿಕರು, ಹಾರ್ಮೋನಿಯಂ ರಿಪೇರಿ ಮಾಡುವವರು, ದಲಿತರು ಮತ್ತು ಆದಿವಾಸಿಗಳು… ಹೀಗೆ ವಿವಿಧ ಉದ್ಯೋಗಿಗಳ ಬಗ್ಗೆ ದೇಶದ 20 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸುತ್ತಾಡಿ ನೂರಾರು ವರದಿಗಳು ಮತ್ತು ವಿಡಿಯೋ ದಾಖಲೆಗಳನ್ನು ಪರಿ ಕಲೆಹಾಕಿದೆ ಎಂದು ಪರಿ ವೆಬ್‌ಸೈಟ್‌ನಲ್ಲಿ ತಿಳಿಸಲಾಗಿದೆ.

ಖ್ಯಾತ ಪತ್ರಕರ್ತ ಪಿ.ಸಾಯಿನಾಥ್ ಅವರು 2014 ರಲ್ಲಿ ಸ್ಥಾಪಿಸಿದ ವೆಬ್‌ಸೈಟ್‌ ‘ಪರಿ’ ವರದಿಗಾರಿಕೆಯ ಮೂಲಕ ಗ್ರಾಮೀಣ ಭಾರತದ ಕುರಿತಾದ ದಾಖಲಾತಿಗಳ ಸಂಗ್ರಹವಾಗಿದೆ. “ಪಾರಿ ಜೀವಂತ ಜರ್ನಲ್ ಮತ್ತು ಆರ್ಕೈವ್ ಆಗಿದೆ. ಇದು ಪ್ರಸ್ತುತ ಗ್ರಾಮೀಣ ಭಾರತದ ಮೂಲೆಗೆ ತಳ್ಳಲ್ಪಟ್ಟ ವರದಿಗಳನ್ನು ಮುನ್ನೆಲೆಗೆ ತರಲು ಪ್ರಯತ್ನಿಸುತ್ತದೆ. ಈಗಾಗಲೇ ಪ್ರಕಟವಾದ ಕಥೆಗಳು, ವರದಿಗಳು, ವೀಡಿಯೊಗಳು ಮತ್ತು ಆಡಿಯೊಗಳ ಡೇಟಾಬೇಸ್ ಅನ್ನು ಸಾಧ್ಯವಾದಷ್ಟು ಮೂಲಗಳಿಂದ ಸಂಗ್ರಹಿಸಲಾಗಿದೆ. PARIಯ ಒಂದು ಕುತೂಹಲಕಾರಿ ಅಂಶವೆಂದರೆ, ಜನರ ದೈನಂದಿನ ಜೀವನದ ಬಗ್ಗೆ ಬರೆಯುತ್ತಿರುವ ಮತ್ತು ನಮ್ಮ ಯೋಜನೆಯ ಮಾನದಂಡಗಳನ್ನು ಪೂರೈಸುವ, ಯೋಜನೆಯ ಆದೇಶವನ್ನು ಅನುಸರಿಸಲು ಸಿದ್ಧರಿರುವ ಯಾರಾದರೂ ವೆಬ್‌ಸೈಟ್‌ಗೆ ಕೊಡುಗೆ ನೀಡಬಹುದು. ಇಲ್ಲಿರುವ ಎಲ್ಲವನ್ನು ಉಚಿತವಾಗಿ ಓದಬಹುದು” ಎಂದು ಪಿ ಸಾಯಿನಾಥ್ ಹೇಳುತ್ತಾರೆ.

ಮತ್ತೊರ್ವ ಪರ್ತಕರ್ತ, ಇಂಡಿಯನ್ ಎಕ್ಸ್‌ಪ್ರೆಸ್‌ನ ರಾಜಕೀಯ ವಿಭಾಗದ ಮುಖ್ಯಸ್ಥ ದೀಪಂಕರ್ ಘೋಷ್ ಅವರಿಗೂ ಸಹ ಪ್ರೇಮ್ ಭಾಟಿಯಾ ಪ್ರಶಸ್ತಿ ನೀಡಲಾಗಿದೆ.

ಪ್ರಖ್ಯಾತ ಪತ್ರಕರ್ತ ಪ್ರೇಮ್ ಭಾಟಿಯಾ (1911-1995) ಅವರ ನೆನಪಿಗಾಗಿ 1995 ರಲ್ಲಿ ಪ್ರೇಮ್ ಭಾಟಿಯಾ ಪ್ರಶಸ್ತಿಗಳನ್ನು ಸ್ಥಾಪಿಸಲಾಗಿದೆ. ವಸ್ತುನಿಷ್ಠ ವರದಿಗಾರಿಕೆ, ಸತ್ಯದ ನಿರ್ಭೀತ ಅನ್ವೇಷಣೆ ಮತ್ತು ಭಾರತದಲ್ಲಿ ಪತ್ರಿಕೋದ್ಯಮದ ಗುಣಮಟ್ಟವನ್ನು ಸುಧಾರಿಸುವ ಬದ್ಧತೆಯ ಮೌಲ್ಯಗಳನ್ನು ಪ್ರಚುರ ಪಡಿಸುವುದು ಅದರ ಉದ್ದೇಶವಾಗಿದೆ.


ಇದನ್ನೂ ಓದಿ: ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌ಗೆ ಗೌರವ ಡಾಕ್ಟರೇಟ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...