Homeಅಂಕಣಗಳುಪತ್ರಿಕಾ ವೃತ್ತಿಧರ್ಮ, `ಉದ್ಯಮ’ವಾದಾಗ.....

ಪತ್ರಿಕಾ ವೃತ್ತಿಧರ್ಮ, `ಉದ್ಯಮ’ವಾದಾಗ…..

- Advertisement -
- Advertisement -

– ಗೌರಿ ಲಂಕೇಶ್
ಆಗಸ್ಟ್ 10, 2005 (`ಕಂಡಹಾಗೆ’ ಸಂಪಾದಕೀಯದಿಂದ) |

ಪತ್ರಕರ್ತೆಯಾಗಿ ನನ್ನ 22 ವರ್ಷದ ಅನುಭವದಲ್ಲಿ ಪತ್ರಿಕೋದ್ಯಮ ಹೊಸ ಆಯಾಮಗಳನ್ನು ಪಡೆಯುತ್ತಿರುವುದನ್ನು ಕಂಡಿದ್ದೇನೆ. ಇಂದು ನನ್ನ ಸಹೋದ್ಯೋಗಿ ಮಿತ್ರರು ಮುಂಬೈ, ದೆಹಲಿ, ಅಮೆರಿಕಾ, ಇಂಗ್ಲೆಂಡ್‍ಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ವಿದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರು ತಿಂಗಳಿಗೆ ಮೂರು ಲಕ್ಷ ರೂಪಾಯಿ ಪಡೆಯುತ್ತಿದ್ದರೆ, ಮುಂಬೈ ಮತ್ತು ದೆಹಲಿಯಲ್ಲಿರುವವರು ಐವತ್ತು ಸಾವಿರದಷ್ಟು ಸಂಬಳ ಪಡೆಯುತ್ತಿದ್ದಾರೆ.
ಪತ್ರಿಕಾ ವೃತ್ತಿ ಎಂಬುದು ಪತ್ರಿಕೋದ್ಯಮವಾಗಿ ಪರಿವರ್ತನೆಗೊಂಡಿರುವುದರ ಪರಿಣಾಮ ಇದು. ಇವತ್ತು ದೊಡ್ಡ ಉದ್ಯಮಪತಿಗಳು, ಶ್ರೀಮಂತ ರಾಜಕಾರಣಿಗಳು ಪತ್ರಿಕಾ ಮಾಲಿಕರಾಗಿದ್ದಾರೆ. ಇದರಿಂದಾಗಿ ಬಹುತೇಕ ಎಲ್ಲಾ ಪತ್ರಿಕೆಗಳೂ ಕಾಪೆರ್ರೇಟ್ ಮತ್ತು ರಾಜಕಾರಣಿಗಳ ಹಂಗಿನಲ್ಲಿರುತ್ತವೆ. ಅಂತಹವರಿಂದ ಸಮಾಜಿಕ ಬದ್ಧತೆ, ಜನಪರ ಕಾಳಜಿಗಳನ್ನು ನಿರೀಕ್ಷಿಸುವುದು ಅಸಾಧ್ಯ. ಇದಕ್ಕೆ ಒಂದು ಉದಾಹರಣೆ ಕೊಡಬಹುದು. ಬೆಂಗಳೂರು ಜಿಲ್ಲೆಯ ದೊಡ್ಡಬಳ್ಳಾಪುರ, ನೆಲಮಂಗಲ ಸುತ್ತಮುತ್ತ ಅರ್ಕಾವತಿ, ದಕ್ಷಿಣ ಪಿನಾಕಿನಿ ನದಿಗಳಿವೆ. ಇವುಗಳ ಅಂತರ್ಜಲ ಬತ್ತಿ ಹೋಗುತ್ತಿರುವಾಗಲೇ ಖಾಸಗಿ ಕಾರ್ಖಾನೆಗಳು ತಮ್ಮtoxic wasteಗಳನ್ನು ಈ ನದಿಗಳಿಗೇ ಹರಿಸಿ ಜಲಮಾಲಿನ್ಯ ಮಾಡುತ್ತಿವೆ. ಇದರ ವಿರುದ್ಧ ಹೋರಾಟ ಪ್ರಾರಂಭಿಸಿರುವ ವಕೀಲ ಜಯರಾಂ ಮತ್ತು ಸ್ನೇಹಿತರು ಪತ್ರಕರ್ತರನ್ನು ಕರೆದು ಕೊಂಡು ಪೆಪ್ಸಿಯ ಘಟಕವೊಂದು ಹೀಗೆ ಜಲಮಾಲಿನ್ಯ ಮಾಡುತ್ತಿರುವುದನ್ನು ತೋರಿಸಿ ದರು. ಆದರೆ ಅದು ಯಾವ ಪತ್ರಿಕೆಗಳಲ್ಲೂ ಪ್ರಕಟವಾಗಲಿಲ್ಲ. ಇದಕ್ಕೆ ಕಾರಣವೇನೆಂದು ಜಯರಾಂರವರು ವಿಚಾರಿಸಿದಾಗ ಪತ್ರಿಕೆಯ ಮಾಲೀಕರು ಪೆಪ್ಸಿಯ ಜಾಹೀರಾತುಗಳು ಸಿಗುವುದಿಲ್ಲವೆಂದು ಹೆದರಿ ಅದನ್ನು ಪ್ರಕಟಿಸದಿರಲು ನಿರ್ಧರಿಸಿದ್ದು ಗೊತ್ತಾಯಿತು. ಅಂದರೆ ಪತ್ರಿಕಾ ಮಾಲೀಕರಿಗೆ ಪೆಪ್ಸಿಯ ಹಣ ಬೇಕೆ ಹೊರತು ಬೆಂಗಳೂರಿಗೆ ಶೇ. 30ರಷ್ಟು ಕುಡಿಯುವ ನೀರನ್ನು ನೀಡುತ್ತಿರುವ ನದಿಗಳ ಸ್ವಚ್ಛತೆ ಅಲ್ಲ!
ಇತ್ತೀಚೆಗೆ ಎಲ್ಲ ಪತ್ರಿಕೆಗಳಲ್ಲಿ ವಾಚಕರು “ಪ್ರತಿಭಟನೆಗಳಿಂದಾಗಿ ಸಾರ್ವಜನಿಕರಾದ ನಮಗೆ ಅನಾನುಕೂಲವಾಗುತ್ತಿದೆ” ಎಂದು ಬರೆದಿರುವ ಪತ್ರಗಳನ್ನೇ ಗಮನಿಸಿ. ಈ ವಾಚಕರಿಗೆ ಬೀದಿಗೆ ಬಿದ್ದು ಪ್ರತಿಭಟಿಸುತ್ತಿರುವವರೂ ಸಾರ್ವಜನಿಕರು ಎಂದು ಯಾಕೆ ಅರ್ಥವಾಗುತ್ತಿಲ್ಲ; ಅಥವಾ ಪತ್ರಿಕೆಗಳು ಯಾಕೆ ಅರ್ಥ ಮಾಡಿಕೊಡುತ್ತಿಲ್ಲ. ಇವತ್ತು ಅಂದರೆ ಭಾನುವಾರದ ಪತ್ರಿಕೆಗಳು ಕೆಎಸ್‍ಆರ್‍ಟಿಸಿ ಹಾಗೂ ಬಿಎಂಟಿಸಿ ಕಾರ್ಮಿಕರಿಂದ ನಡೆದ ರ್ಯಾಲಿಯಿಂದಾಗಿ ಎಲ್ಲೆಡೆ ಸಂಚಾರ ಅಸ್ತವ್ಯಸ್ಥ ಗೊಂಡಿತು ಎಂದೇ ವರದಿ ಮಾಡಿವೆ. ಆದರೆ ಅದೇ ಕೆಎಸ್‍ಆರ್‍ಟಿಸಿ ಮತ್ತು ಬಿಎಂಟಿಸಿಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಹಾಗೂ ಕಾರ್ಮಿಕರ ಶೋಷಣೆ ಬಗ್ಗೆ ಮಾತ್ರ ಯಾರೂ ಬರೆದಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...