Homeಅಂಕಣಗಳುಪತ್ರಿಕಾ ವೃತ್ತಿಧರ್ಮ, `ಉದ್ಯಮ’ವಾದಾಗ.....

ಪತ್ರಿಕಾ ವೃತ್ತಿಧರ್ಮ, `ಉದ್ಯಮ’ವಾದಾಗ…..

- Advertisement -
- Advertisement -

– ಗೌರಿ ಲಂಕೇಶ್
ಆಗಸ್ಟ್ 10, 2005 (`ಕಂಡಹಾಗೆ’ ಸಂಪಾದಕೀಯದಿಂದ) |

ಪತ್ರಕರ್ತೆಯಾಗಿ ನನ್ನ 22 ವರ್ಷದ ಅನುಭವದಲ್ಲಿ ಪತ್ರಿಕೋದ್ಯಮ ಹೊಸ ಆಯಾಮಗಳನ್ನು ಪಡೆಯುತ್ತಿರುವುದನ್ನು ಕಂಡಿದ್ದೇನೆ. ಇಂದು ನನ್ನ ಸಹೋದ್ಯೋಗಿ ಮಿತ್ರರು ಮುಂಬೈ, ದೆಹಲಿ, ಅಮೆರಿಕಾ, ಇಂಗ್ಲೆಂಡ್‍ಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ವಿದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರು ತಿಂಗಳಿಗೆ ಮೂರು ಲಕ್ಷ ರೂಪಾಯಿ ಪಡೆಯುತ್ತಿದ್ದರೆ, ಮುಂಬೈ ಮತ್ತು ದೆಹಲಿಯಲ್ಲಿರುವವರು ಐವತ್ತು ಸಾವಿರದಷ್ಟು ಸಂಬಳ ಪಡೆಯುತ್ತಿದ್ದಾರೆ.
ಪತ್ರಿಕಾ ವೃತ್ತಿ ಎಂಬುದು ಪತ್ರಿಕೋದ್ಯಮವಾಗಿ ಪರಿವರ್ತನೆಗೊಂಡಿರುವುದರ ಪರಿಣಾಮ ಇದು. ಇವತ್ತು ದೊಡ್ಡ ಉದ್ಯಮಪತಿಗಳು, ಶ್ರೀಮಂತ ರಾಜಕಾರಣಿಗಳು ಪತ್ರಿಕಾ ಮಾಲಿಕರಾಗಿದ್ದಾರೆ. ಇದರಿಂದಾಗಿ ಬಹುತೇಕ ಎಲ್ಲಾ ಪತ್ರಿಕೆಗಳೂ ಕಾಪೆರ್ರೇಟ್ ಮತ್ತು ರಾಜಕಾರಣಿಗಳ ಹಂಗಿನಲ್ಲಿರುತ್ತವೆ. ಅಂತಹವರಿಂದ ಸಮಾಜಿಕ ಬದ್ಧತೆ, ಜನಪರ ಕಾಳಜಿಗಳನ್ನು ನಿರೀಕ್ಷಿಸುವುದು ಅಸಾಧ್ಯ. ಇದಕ್ಕೆ ಒಂದು ಉದಾಹರಣೆ ಕೊಡಬಹುದು. ಬೆಂಗಳೂರು ಜಿಲ್ಲೆಯ ದೊಡ್ಡಬಳ್ಳಾಪುರ, ನೆಲಮಂಗಲ ಸುತ್ತಮುತ್ತ ಅರ್ಕಾವತಿ, ದಕ್ಷಿಣ ಪಿನಾಕಿನಿ ನದಿಗಳಿವೆ. ಇವುಗಳ ಅಂತರ್ಜಲ ಬತ್ತಿ ಹೋಗುತ್ತಿರುವಾಗಲೇ ಖಾಸಗಿ ಕಾರ್ಖಾನೆಗಳು ತಮ್ಮtoxic wasteಗಳನ್ನು ಈ ನದಿಗಳಿಗೇ ಹರಿಸಿ ಜಲಮಾಲಿನ್ಯ ಮಾಡುತ್ತಿವೆ. ಇದರ ವಿರುದ್ಧ ಹೋರಾಟ ಪ್ರಾರಂಭಿಸಿರುವ ವಕೀಲ ಜಯರಾಂ ಮತ್ತು ಸ್ನೇಹಿತರು ಪತ್ರಕರ್ತರನ್ನು ಕರೆದು ಕೊಂಡು ಪೆಪ್ಸಿಯ ಘಟಕವೊಂದು ಹೀಗೆ ಜಲಮಾಲಿನ್ಯ ಮಾಡುತ್ತಿರುವುದನ್ನು ತೋರಿಸಿ ದರು. ಆದರೆ ಅದು ಯಾವ ಪತ್ರಿಕೆಗಳಲ್ಲೂ ಪ್ರಕಟವಾಗಲಿಲ್ಲ. ಇದಕ್ಕೆ ಕಾರಣವೇನೆಂದು ಜಯರಾಂರವರು ವಿಚಾರಿಸಿದಾಗ ಪತ್ರಿಕೆಯ ಮಾಲೀಕರು ಪೆಪ್ಸಿಯ ಜಾಹೀರಾತುಗಳು ಸಿಗುವುದಿಲ್ಲವೆಂದು ಹೆದರಿ ಅದನ್ನು ಪ್ರಕಟಿಸದಿರಲು ನಿರ್ಧರಿಸಿದ್ದು ಗೊತ್ತಾಯಿತು. ಅಂದರೆ ಪತ್ರಿಕಾ ಮಾಲೀಕರಿಗೆ ಪೆಪ್ಸಿಯ ಹಣ ಬೇಕೆ ಹೊರತು ಬೆಂಗಳೂರಿಗೆ ಶೇ. 30ರಷ್ಟು ಕುಡಿಯುವ ನೀರನ್ನು ನೀಡುತ್ತಿರುವ ನದಿಗಳ ಸ್ವಚ್ಛತೆ ಅಲ್ಲ!
ಇತ್ತೀಚೆಗೆ ಎಲ್ಲ ಪತ್ರಿಕೆಗಳಲ್ಲಿ ವಾಚಕರು “ಪ್ರತಿಭಟನೆಗಳಿಂದಾಗಿ ಸಾರ್ವಜನಿಕರಾದ ನಮಗೆ ಅನಾನುಕೂಲವಾಗುತ್ತಿದೆ” ಎಂದು ಬರೆದಿರುವ ಪತ್ರಗಳನ್ನೇ ಗಮನಿಸಿ. ಈ ವಾಚಕರಿಗೆ ಬೀದಿಗೆ ಬಿದ್ದು ಪ್ರತಿಭಟಿಸುತ್ತಿರುವವರೂ ಸಾರ್ವಜನಿಕರು ಎಂದು ಯಾಕೆ ಅರ್ಥವಾಗುತ್ತಿಲ್ಲ; ಅಥವಾ ಪತ್ರಿಕೆಗಳು ಯಾಕೆ ಅರ್ಥ ಮಾಡಿಕೊಡುತ್ತಿಲ್ಲ. ಇವತ್ತು ಅಂದರೆ ಭಾನುವಾರದ ಪತ್ರಿಕೆಗಳು ಕೆಎಸ್‍ಆರ್‍ಟಿಸಿ ಹಾಗೂ ಬಿಎಂಟಿಸಿ ಕಾರ್ಮಿಕರಿಂದ ನಡೆದ ರ್ಯಾಲಿಯಿಂದಾಗಿ ಎಲ್ಲೆಡೆ ಸಂಚಾರ ಅಸ್ತವ್ಯಸ್ಥ ಗೊಂಡಿತು ಎಂದೇ ವರದಿ ಮಾಡಿವೆ. ಆದರೆ ಅದೇ ಕೆಎಸ್‍ಆರ್‍ಟಿಸಿ ಮತ್ತು ಬಿಎಂಟಿಸಿಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಹಾಗೂ ಕಾರ್ಮಿಕರ ಶೋಷಣೆ ಬಗ್ಗೆ ಮಾತ್ರ ಯಾರೂ ಬರೆದಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...