Homeಅಂಕಣಗಳುಪತ್ರಿಕಾ ವೃತ್ತಿಧರ್ಮ, `ಉದ್ಯಮ’ವಾದಾಗ.....

ಪತ್ರಿಕಾ ವೃತ್ತಿಧರ್ಮ, `ಉದ್ಯಮ’ವಾದಾಗ…..

- Advertisement -
- Advertisement -

– ಗೌರಿ ಲಂಕೇಶ್
ಆಗಸ್ಟ್ 10, 2005 (`ಕಂಡಹಾಗೆ’ ಸಂಪಾದಕೀಯದಿಂದ) |

ಪತ್ರಕರ್ತೆಯಾಗಿ ನನ್ನ 22 ವರ್ಷದ ಅನುಭವದಲ್ಲಿ ಪತ್ರಿಕೋದ್ಯಮ ಹೊಸ ಆಯಾಮಗಳನ್ನು ಪಡೆಯುತ್ತಿರುವುದನ್ನು ಕಂಡಿದ್ದೇನೆ. ಇಂದು ನನ್ನ ಸಹೋದ್ಯೋಗಿ ಮಿತ್ರರು ಮುಂಬೈ, ದೆಹಲಿ, ಅಮೆರಿಕಾ, ಇಂಗ್ಲೆಂಡ್‍ಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ವಿದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರು ತಿಂಗಳಿಗೆ ಮೂರು ಲಕ್ಷ ರೂಪಾಯಿ ಪಡೆಯುತ್ತಿದ್ದರೆ, ಮುಂಬೈ ಮತ್ತು ದೆಹಲಿಯಲ್ಲಿರುವವರು ಐವತ್ತು ಸಾವಿರದಷ್ಟು ಸಂಬಳ ಪಡೆಯುತ್ತಿದ್ದಾರೆ.
ಪತ್ರಿಕಾ ವೃತ್ತಿ ಎಂಬುದು ಪತ್ರಿಕೋದ್ಯಮವಾಗಿ ಪರಿವರ್ತನೆಗೊಂಡಿರುವುದರ ಪರಿಣಾಮ ಇದು. ಇವತ್ತು ದೊಡ್ಡ ಉದ್ಯಮಪತಿಗಳು, ಶ್ರೀಮಂತ ರಾಜಕಾರಣಿಗಳು ಪತ್ರಿಕಾ ಮಾಲಿಕರಾಗಿದ್ದಾರೆ. ಇದರಿಂದಾಗಿ ಬಹುತೇಕ ಎಲ್ಲಾ ಪತ್ರಿಕೆಗಳೂ ಕಾಪೆರ್ರೇಟ್ ಮತ್ತು ರಾಜಕಾರಣಿಗಳ ಹಂಗಿನಲ್ಲಿರುತ್ತವೆ. ಅಂತಹವರಿಂದ ಸಮಾಜಿಕ ಬದ್ಧತೆ, ಜನಪರ ಕಾಳಜಿಗಳನ್ನು ನಿರೀಕ್ಷಿಸುವುದು ಅಸಾಧ್ಯ. ಇದಕ್ಕೆ ಒಂದು ಉದಾಹರಣೆ ಕೊಡಬಹುದು. ಬೆಂಗಳೂರು ಜಿಲ್ಲೆಯ ದೊಡ್ಡಬಳ್ಳಾಪುರ, ನೆಲಮಂಗಲ ಸುತ್ತಮುತ್ತ ಅರ್ಕಾವತಿ, ದಕ್ಷಿಣ ಪಿನಾಕಿನಿ ನದಿಗಳಿವೆ. ಇವುಗಳ ಅಂತರ್ಜಲ ಬತ್ತಿ ಹೋಗುತ್ತಿರುವಾಗಲೇ ಖಾಸಗಿ ಕಾರ್ಖಾನೆಗಳು ತಮ್ಮtoxic wasteಗಳನ್ನು ಈ ನದಿಗಳಿಗೇ ಹರಿಸಿ ಜಲಮಾಲಿನ್ಯ ಮಾಡುತ್ತಿವೆ. ಇದರ ವಿರುದ್ಧ ಹೋರಾಟ ಪ್ರಾರಂಭಿಸಿರುವ ವಕೀಲ ಜಯರಾಂ ಮತ್ತು ಸ್ನೇಹಿತರು ಪತ್ರಕರ್ತರನ್ನು ಕರೆದು ಕೊಂಡು ಪೆಪ್ಸಿಯ ಘಟಕವೊಂದು ಹೀಗೆ ಜಲಮಾಲಿನ್ಯ ಮಾಡುತ್ತಿರುವುದನ್ನು ತೋರಿಸಿ ದರು. ಆದರೆ ಅದು ಯಾವ ಪತ್ರಿಕೆಗಳಲ್ಲೂ ಪ್ರಕಟವಾಗಲಿಲ್ಲ. ಇದಕ್ಕೆ ಕಾರಣವೇನೆಂದು ಜಯರಾಂರವರು ವಿಚಾರಿಸಿದಾಗ ಪತ್ರಿಕೆಯ ಮಾಲೀಕರು ಪೆಪ್ಸಿಯ ಜಾಹೀರಾತುಗಳು ಸಿಗುವುದಿಲ್ಲವೆಂದು ಹೆದರಿ ಅದನ್ನು ಪ್ರಕಟಿಸದಿರಲು ನಿರ್ಧರಿಸಿದ್ದು ಗೊತ್ತಾಯಿತು. ಅಂದರೆ ಪತ್ರಿಕಾ ಮಾಲೀಕರಿಗೆ ಪೆಪ್ಸಿಯ ಹಣ ಬೇಕೆ ಹೊರತು ಬೆಂಗಳೂರಿಗೆ ಶೇ. 30ರಷ್ಟು ಕುಡಿಯುವ ನೀರನ್ನು ನೀಡುತ್ತಿರುವ ನದಿಗಳ ಸ್ವಚ್ಛತೆ ಅಲ್ಲ!
ಇತ್ತೀಚೆಗೆ ಎಲ್ಲ ಪತ್ರಿಕೆಗಳಲ್ಲಿ ವಾಚಕರು “ಪ್ರತಿಭಟನೆಗಳಿಂದಾಗಿ ಸಾರ್ವಜನಿಕರಾದ ನಮಗೆ ಅನಾನುಕೂಲವಾಗುತ್ತಿದೆ” ಎಂದು ಬರೆದಿರುವ ಪತ್ರಗಳನ್ನೇ ಗಮನಿಸಿ. ಈ ವಾಚಕರಿಗೆ ಬೀದಿಗೆ ಬಿದ್ದು ಪ್ರತಿಭಟಿಸುತ್ತಿರುವವರೂ ಸಾರ್ವಜನಿಕರು ಎಂದು ಯಾಕೆ ಅರ್ಥವಾಗುತ್ತಿಲ್ಲ; ಅಥವಾ ಪತ್ರಿಕೆಗಳು ಯಾಕೆ ಅರ್ಥ ಮಾಡಿಕೊಡುತ್ತಿಲ್ಲ. ಇವತ್ತು ಅಂದರೆ ಭಾನುವಾರದ ಪತ್ರಿಕೆಗಳು ಕೆಎಸ್‍ಆರ್‍ಟಿಸಿ ಹಾಗೂ ಬಿಎಂಟಿಸಿ ಕಾರ್ಮಿಕರಿಂದ ನಡೆದ ರ್ಯಾಲಿಯಿಂದಾಗಿ ಎಲ್ಲೆಡೆ ಸಂಚಾರ ಅಸ್ತವ್ಯಸ್ಥ ಗೊಂಡಿತು ಎಂದೇ ವರದಿ ಮಾಡಿವೆ. ಆದರೆ ಅದೇ ಕೆಎಸ್‍ಆರ್‍ಟಿಸಿ ಮತ್ತು ಬಿಎಂಟಿಸಿಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಹಾಗೂ ಕಾರ್ಮಿಕರ ಶೋಷಣೆ ಬಗ್ಗೆ ಮಾತ್ರ ಯಾರೂ ಬರೆದಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...