Homeಮುಖಪುಟಯಂಗ್ ಇಂಡಿಯಾ ದೇಶದ ಸಮಸ್ಯೆಗಳಿಗೆ ಪರಿಹಾರ ಒದಗಿಸುತ್ತದೆ: ಪ್ರಧಾನಿ ಮೋದಿ

ಯಂಗ್ ಇಂಡಿಯಾ ದೇಶದ ಸಮಸ್ಯೆಗಳಿಗೆ ಪರಿಹಾರ ಒದಗಿಸುತ್ತದೆ: ಪ್ರಧಾನಿ ಮೋದಿ

ಕೊರೊನಾ ವೈರಸ್ ಕಾಲದಲ್ಲಿ ಹ್ಯಾಕಥಾನ್ ನಡೆಸುವುದು ದೊಡ್ಡ ಸವಾಲಾಗಿತ್ತು. ತೀವ್ರ ಸವಾಲುಗಳ ನಡುವೆಯೂ ಇದು ನಡೆಯುತ್ತಿರುವುದು ಆಶ್ಚರ್ಯಕರವಾಗಿದೆ.

- Advertisement -
- Advertisement -

ಯಂಗ್ ಇಂಡಿಯಾ ದೇಶದ ಸಮಸ್ಯೆಗಳಿಗೆ ನವೀನ ಮತ್ತು ಸೃಜನಶೀಲ ಪರಿಹಾರಗಳನ್ನು ನೀಡುವ ಪ್ರತಿಭೆಯ ಉಗ್ರಾಣವಾಗಿದೆ. ಸಣ್ಣ ಮಾರ್ಗದರ್ಶನ ಸಾಕು ವಿದ್ಯಾರ್ಥಿಗಳು ಕೊರೊನಾ ಸಾಂಕ್ರಾಮಿಕದ ಮಧ್ಯೆಯು ಭಾರತವನ್ನು ಬಹುದೂರ ಕೊಂಡ್ಯೊಯುತ್ತಾರೆ, ಸಾಂಕ್ರಾಮಿಕ ಮುಗಿದ ನಂತರ ಹೊಸ ಜಾಗತಿಕ ಸನ್ನಿವೇಶ ಸೃಷ್ಟಿಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2020 ಗ್ರ್ಯಾಂಡ್ ಫಿನಾಲೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರಧಾನಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಕೊರೊನಾ ವೈರಸ್ ಕಾಲದಲ್ಲಿ ಹ್ಯಾಕಥಾನ್ ನಡೆಸುವುದು ದೊಡ್ಡ ಸವಾಲಾಗಿತ್ತು. ತೀವ್ರ ಸವಾಲುಗಳ ನಡುವೆಯೂ ಇದು ನಡೆಯುತ್ತಿರುವುದು ಆಶ್ಚರ್ಯಕರವಾಗಿದೆ. ಈ ಸಂದರ್ಭಕ್ಕೆ ಕಾರ್ಯಕ್ರಮವನ್ನು ಸಾಧ್ಯವಾಗಿಸಿದ ಸಂಘಟಕರನ್ನು ನಾನು ಅಭಿನಂದಿಸುತ್ತೇನೆ ಎಂದಿದ್ದಾರೆ.

ಫೈನಲ್‌ನಲ್ಲಿ ಮಳೆ ಮುನ್ಸೂಚನೆ ಮಾದರಿಯ ಪರಿಕಲ್ಪನೆಯನ್ನು ಮಂಡಿಸಿದ ವಿದ್ಯಾರ್ಥಿಯನ್ನು ಶ್ಲಾಘಿಸಿದ ಅವರು, ಈ ಆವಿಷ್ಕಾರ ಯಶಸ್ವಿಯಾದರೆ, ದೇಶದಲ್ಲಿನ ರೈತರಿಗೆ ಅಪಾರ ಸಹಾಯವಾಗುತ್ತದೆ ಎಂದು ಹೇಳಿದರು.

ಈ ವರ್ಷ ಸುಮಾರು 10,000 ವಿದ್ಯಾರ್ಥಿಗಳು ಹ್ಯಾಕಥಾನ್‌ನಲ್ಲಿ ಭಾಗವಹಿಸುತ್ತಿದ್ದಾರೆ. ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2020 (ಸಾಫ್ಟ್‌ವೇರ್) ಗ್ರ್ಯಾಂಡ್ ಫಿನಾಲೆ ಆಗಸ್ಟ್ 1 ರಿಂದ 3 ರವರೆಗೆ ನಡೆಯಲಿದೆ.

“ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ ಆದರ್ಶ ಮತ್ತು ಹೊಸತನವನ್ನು ನೀಡುವ ರೋಮಾಂಚಕ ವೇದಿಕೆಯಾಗಿ ಹೊರಹೊಮ್ಮಿದೆ. ಸ್ವಾಭಾವಿಕವಾಗಿ, ಈ ಸಮಯದಲ್ಲಿ ನಮ್ಮ ಯುವಕರು ಕೊರೊನಾದ ನಂತರದ ಪ್ರಪಂಚವನ್ನು ತಮ್ಮ ಆವಿಷ್ಕಾರಗಳಲ್ಲಿ ಕೇಂದ್ರೀಕರಿಸುತ್ತಾರೆ ಎಂದು ಹೇಳಿದ್ದಾರೆ.

ಹ್ಯಾಕಥಾನ್ ಅನ್ನು ಮಾನವ ಸಂಪನ್ಮೂಲ ಸಚಿವಾಲಯದ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ಆಯೋಜಿಸುತ್ತಿದೆ.

ಅಂತಿಮ ಪಂದ್ಯದ ಆರಂಭದಲ್ಲಿ, ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವ ಡಾ.ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರು ವಿಜೇತರಿಗೆ 1 ಲಕ್ಷ ರೂಪಾಯಿ ನಗದು ಬಹುಮಾನವಾಗಿ ನೀಡಲಾಗುವುದು ಎಂದು ಘೋಷಿಸಿದರು.

ದೈನಂದಿನ ಜೀವನದಲ್ಲಿ ಜನರು ಎದುರಿಸುತ್ತಿರುವ ಕೆಲವು ನಿರ್ಣಾಯಕ ಸಮಸ್ಯೆಗಳನ್ನು ಪರಿಹರಿಸಲು ವಿದ್ಯಾರ್ಥಿಗಳಿಗೆ ವೇದಿಕೆಯನ್ನು ಒದಗಿಸುವ ಹ್ಯಾಕಥಾನ್ ರಾಷ್ಟ್ರವ್ಯಾಪಿ ಕಾರ್ಯಕ್ರಮವಾಗಿದೆ ಎಂದು ಪ್ರಧಾನಿ ತಿಳಿಸಿದ್ದಾರೆ.

ಉನ್ನತ ಶಿಕ್ಷಣವನ್ನು ಪಡೆಯುವ ವಿದ್ಯಾರ್ಥಿಗಳಲ್ಲಿ ಸಮಸ್ಯೆ-ಪರಿಹರಿಸುವ ಮನೋಭಾವವನ್ನು ನಿರ್ಮಿಸುವ ಗುರಿಯನ್ನು ಇದು ಹೊಂದಿದೆ ಎಂದಿದ್ದಾರೆ.


ಇದನ್ನೂ ಓದಿ: ಸುಶಾಂತ್ ಸಿಂಗ್ ಪ್ರಕರಣ: ರಿಯಾ ಚಕ್ರವರ್ತಿಯನ್ನು ಪತ್ತೆ ಮಾಡಲಾಗುತ್ತಿಲ್ಲವೆಂದ ಬಿಹಾರ ಪೊಲೀಸರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...