Homeಮುಖಪುಟಅದು ಗೋಮಾಂಸವಲ್ಲ ಎಂದು ಬೇಡಿಕೊಂಡೆ, ಆದರೂ ಹೊಡೆದರು: ಲುಕ್ಮನ್ ಖಾನ್

ಅದು ಗೋಮಾಂಸವಲ್ಲ ಎಂದು ಬೇಡಿಕೊಂಡೆ, ಆದರೂ ಹೊಡೆದರು: ಲುಕ್ಮನ್ ಖಾನ್

ಪತ್ರಕರ್ತೆ ರಾಣಾ ಅಯ್ಯೂಬ್ ಟ್ವೀಟ್ ಮಾಡಿ "ಮುಸ್ಲಿಂಲೈವ್ಸ್‌ಮ್ಯಾಟರ್" ಎಂದಿದ್ದಾರೆ. ಅದೇ ರೀತಿ "ಈ ಘಟನೆಯ ಸುತ್ತಲಿನ ಮೌನವು ಮತ್ತಷ್ಟು ಭಯಾನಕವಾಗಿದೆ" ಎಂದು ಇನ್ನೊರ್ವ ಪತ್ರಕರ್ತೆ ಫಯೆ ಡಿಸೋಜ ತಿಳಿಸಿದ್ದಾರೆ.

- Advertisement -
- Advertisement -

ಅಕ್ರಮ ಗೋಮಾಂಸ ಸಾಗಾಟದ ಆರೋಪದಲ್ಲಿ ತೀವ್ರ ಹಲ್ಲೆಗೊಳಗಾಗಿದ್ದ ಸಂತ್ರಸ್ತ ಲುಕ್ಮನ್ ಖಾನ್ (25) ಚೇತರಿಸಿಕೊಳ್ಳುತ್ತಿದ್ದು, ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಶುಕ್ರವಾರ ನಡೆದ ಘಟನೆಯನ್ನು ನೆನಪಿಸಿಕೊಂಡಿರುವ ಅವರು ‘ಅದು ಗೋಮಾಂಸವಲ್ಲ ಎಂದು ಬೇಡಿಕೊಂಡೆ, ಆದರೂ ಹೊಡೆದರು’ ಎಂದು ದುಃಖ ವ್ಯಕ್ತಪಡಿಸಿದ್ದಾರೆ.

“ಅದು ಹಸುವಿನ ಮಾಂಸವಲ್ಲ, ಎಮ್ಮೆ ಮಾಂಸ. ಒಂದು ವೇಳೆ ಅದು ಹಸುವಿನ ಮಾಂಸವಾಗಿದ್ದರೆ ನಾನೀಗಲೇ ಪ್ರಾಣ ಕೊಡಲು ಸಿದ್ದನಿದ್ದೇನೆ ಎಂದು ಹೇಳಿದೆ. ಆದರೆ ಅವರು ಜೈ ಶ್ರೀರಾಮ್‌ ಎನ್ನುವಂತೆ ನನ್ನನ್ನು ಒತ್ತಾಯಿಸಿದರು. ಸರಳುಗಳು ಮತ್ತು ಸುತ್ತಿಗೆಯಿಂದ ಬಡಿದರು” ಎಂದು ಲುಕ್ಮನ್ ಖಾನ್ ಹೇಳಿದ್ದಾರೆ.

ನಾನು ಹಲವು ವರ್ಷಗಳಿಂದ ಗುರ್ಗಾವ್‌ ಬಳಿಯ ಸದರ್ ಬಜಾರ್‌ ಮಾರುಕಟ್ಟೆಗೆ ಎಮ್ಮೆ ಮಾಂಸ ಪೂರೈಸುತ್ತಿದ್ದೇನೆ. ಯಥಾ ಪ್ರಕಾರ ಶುಕ್ರವಾರವೂ ಸಹ ಟ್ರಕ್‌ನಲ್ಲಿ ಹೊರಟಿದ್ದಾಗ ಹಲವಾರು ಜನ ನನ್ನನ್ನು ತಡೆದು ಮನಬಂದಂತೆ ಥಳಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ನನ್ನನ್ನು ಟ್ರಕ್‌ನಲ್ಲಿ ಗುರಗಾಂವ್‌ನ ಬಾದ್‌ಶಾಹ್‌ಪುರ ಗ್ರಾಮಕ್ಕೆ ಕರೆದೊಯ್ದು ಅಲ್ಲಿಯೂ ಹಲವಾರು ಜನ ಥಳಿಸಿದರು. ಹಲ್ಲೆ ನಡೆಯುತ್ತಿದ್ದರೂ ಪೊಲೀಸರು ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಘಟನೆಯನ್ನು ಹಲವಾರು ಸಾಮಾಜಿಕ ಕಾರ್ಯಕರ್ತರು ವಿರೋಧಿಸಿದ್ದಾರೆ. ದಲಿತ ಹೋರಾಟಗಾರ ಮತ್ತು ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ “ಮತ್ತೆ ರಾಮನ ಹೆಸರಿನಲ್ಲಿ ಹಲ್ಲೆ” ಎಂದು ಟೀಕಿಸಿದ್ದಾರೆ.

ಪತ್ರಕರ್ತೆ ರಾಣಾ ಅಯ್ಯೂಬ್ ಟ್ವೀಟ್ ಮಾಡಿ “ಮುಸ್ಲಿಂಲೈವ್ಸ್‌ಮ್ಯಾಟರ್” ಎಂದಿದ್ದಾರೆ. ಅದೇ ರೀತಿ “ಈ ಘಟನೆಯ ಸುತ್ತಲಿನ ಮೌನವು ಮತ್ತಷ್ಟು ಭಯಾನಕವಾಗಿದೆ” ಎಂದು ಇನ್ನೊರ್ವ ಪತ್ರಕರ್ತೆ ಫಯೆ ಡಿಸೋಜ ತಿಳಿಸಿದ್ದಾರೆ.

ಈ ಘಟನೆ 5 ವರ್ಷಗಳ ಹಿಂದೆ ದಾದ್ರಿಯಲ್ಲಿ ನಡೆದ ಗುಂಪುಹತ್ಯೆ ಪ್ರಕರಣವನ್ನು ನೆನಪಿಸುತ್ತದೆ. ಅಖ್ಲಾಖ್ ಎಂಬ ಅಮಾಯಕನನ್ನು ಗೋರಕ್ಷಕರು ಹೊಡೆದುಕೊಂದಿದ್ದಕ್ಕೂ, ಈ ಘಟನೆಗೂ ಹಲವು ಸಾಮ್ಯತೆಗಳಿವೆ. ಇಲ್ಲಿಯೂ ಅಕ್ರಮ ಗೋಮಾಂಸ ಸಾಗಣೆ ಆರೋಪ ಹೊರಿಸಲಾಗಿದೆ. ಇನ್ನೂ ಮುಖ್ಯವಾಗಿ ದಾದ್ರಿಯಂತೆಯೇ ಇಲ್ಲಿಯೂ ಸಹ ಪೊಲೀಸರು ಆರೋಪಿಗಳನ್ನು ಬಂಧಿಸುವುದು ಬಿಟ್ಟು, ಮಾಂಸವನ್ನು ಪರೀಕ್ಷಿಸಲು ಲ್ಯಾಬ್‌ಗೆ ಕಳಿಸಿದ್ದಾರೆ.

ಲುಕ್ಮನ್ ಚಲಾಯಿಸುತ್ತಿದ್ದ ವಾಹನದ ಮಾಲೀಕರು ”ಅದು ಎಮ್ಮೆ ಮಾಂಸವಾಗಿದೆ ಮತ್ತು ಕಳೆದ 50 ವರ್ಷಗಳಿಂದ ನಾವು ಈ ವ್ಯವಹಾರದಲ್ಲಿದ್ದೇವೆ” ಎಂದು ಹೇಳಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಹೇಳಿಕೆ ನೀಡಲು ಮತ್ತು ವಿವರ ನೀಡಲು ನಿರಾಕರಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.


ಇದನ್ನೂ ಓದಿ: ಸುತ್ತಿಗೆಯಿಂದ ಕ್ರೂರವಾಗಿ ಥಳಿಸಿದ ಗೋರಕ್ಷಕರು: ಕೈಕಟ್ಟಿ ನೋಡುತ್ತಿದ್ದ ಪೊಲೀಸರು..

ಇದನ್ನೂ ಓದಿ: ಪೊಲೀಸರ ಎದುರೇ ದಲಿತರ ಮೇಲೆ ಹಲ್ಲೆ ಆರೋಪ: ಠಾಣೆ ಎದುರು ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...