Homeಅಂತರಾಷ್ಟ್ರೀಯಬ್ರೆಜಿಲ್ ಅಧ್ಯಕ್ಷರ ಬೆಂಬಲಿಗರ ಖಾತೆ ಮೇಲೆ ಕ್ರಮ: ಕೋರ್ಟ್ ಆದೇಶ ಪಾಲಿಸುತ್ತೇವೆ ಎಂದ ಫೇಸ್‌ಬುಕ್

ಬ್ರೆಜಿಲ್ ಅಧ್ಯಕ್ಷರ ಬೆಂಬಲಿಗರ ಖಾತೆ ಮೇಲೆ ಕ್ರಮ: ಕೋರ್ಟ್ ಆದೇಶ ಪಾಲಿಸುತ್ತೇವೆ ಎಂದ ಫೇಸ್‌ಬುಕ್

- Advertisement -
- Advertisement -

ನಕಲಿ ಸುದ್ದಿ ಜಾಲ ನಡೆಸುತ್ತಿದ್ದಾರೆ ಎಂಬ ಆರೋಪದಡಿ ತನಿಖೆ ಎದುರಿಸುತ್ತಿರುವ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸೊನಾರೊ ಬೆಂಬಲಿಗರ 12 ಮಂದಿಯ ಖಾತೆಗಳ ಮೇಲೆ ವಿಶ್ವದಾದ್ಯಂತ ನಿರ್ಬಂಧ ಹೇರಬೇಕೆಂಬ ಬ್ರೆಜಿಲ್ ನ್ಯಾಯಾಧೀಶರ ಆದೇಶವನ್ನು ಪಾಲಿಸುವುದಾಗಿ ಫೇಸ್‌ಬುಕ್ ಹೇಳಿದೆ.

ಆ ಖಾತೆಗಳನ್ನು ಮುಚ್ಚುವಂತೆ ಆದೇಶಿಸಿದ್ದ ಹಿಂದಿನ ತೀರ್ಪನ್ನು ಸಂಪೂರ್ಣವಾಗಿ ಪಾಲಿಸುವಲ್ಲಿ ಫೇಸ್‌ಬುಕ್‌ ವಿಫಲವಾಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಲೆಕ್ಸಾಂಡ್ರೆ ಡಿ ಮೊರೇಸ್ ಹೇಳಿದ್ದಾರೆ. ಆ ಖಾತೆಗಳು ಇನ್ನೂ ಸಕ್ರಿಯವಾಗಿದ್ದು ಬ್ರೆಜಿಲ್ ಹೊರಗೆ ತಮ್ಮ ನೋಂದಣಿ ಮತ್ತು ಸ್ಥಳ ಬದಲಿಸುವ ಮೂಲಕ ಕೆಲಸ ಮಾಡುತ್ತಿವೆ ಎಂದು ಹೇಳಿದ್ದಾರೆ.

ಕೋರ್ಟ್‌ನ ಹೊಸ ಆದೇಶವನ್ನು ಫೇಸ್‌ಬುಕ್‌  ಅತಿಯಾದುದ್ದು ಎಂದು ಕರೆದಿದೆ. ಇದು ಬ್ರೆಜಿಲ್ ನ್ಯಾಯವ್ಯಾಪ್ತಿಯ ಹೊರಗೆ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅಪಾಯವನ್ನುಂಟುಮಾಡುತ್ತದೆ. ವಿಶ್ವದ ಇತರ ಕಾನೂನುಗಳೊಂದಿಗೆ ಸಂಘರ್ಷವೇರ್ಪಡುತ್ತದೆ. ಹಾಗಾಗಿ ತೀರ್ಪಿನ ವಿರುದ್ಧ ಮೆಲ್ಮನವಿ ಸಲ್ಲಿಸುವುದಾಗಿ ತಿಳಿಸಿದೆ.

ಅಧ್ಯಕ್ಷರ ಅನುಯಾಯಿಗಳ ಫೇಸ್‌ಬುಕ್ ಪೇಜ್‌ಗಳು ಮತ್ತು ಪ್ರೊಫೈಲ್‌ಗಳನ್ನು ಬ್ರೆಜಿಲ್‌ನ ಐಪಿ ಸ್ಥಳಗಳಿಂದ ನೋಡುವುದನ್ನು ನಿರ್ಬಂಧಿಸುವ ಮೂಲಕ ಹಿಂದಿನ ಆದೇಶವನ್ನು ಪಾಲಿಸಲಾಗಿದೆ ಎಂದು ಫೇಸ್‌ಬುಕ್ ವಾದಿಸಿದೆ. ಆ ಖಾತೆಗಲು ತಮ್ಮ ನೋಂದಣಿ ಮತ್ತು ಸ್ಥಳ ಬದಲಿಸಿಕೊಂಡರೂ ಸಹ  ಬ್ರೆಜಿಲ್‌ನ ಐಪಿ ಸ್ಥಳಗಳ ಜನರು ಅವುಗಳನ್ನು ನೋಡಲಾಗುವುದಿಲ್ಲ ಎಂದು ಕಂಪನಿ ಹೇಳಿದೆ.

ಕಳೆದ ಎಂಟು ದಿನಗಳಲ್ಲಿ ತನ್ನ ಹಿಂದಿನ ನಿರ್ಧಾರವನ್ನು ಪಾಲಿಸದಿದ್ದಕ್ಕಾಗಿ 3,67,000 ಡಾಲರ್ ದಂಡವನ್ನು ಫೇಸ್‌ಬುಕ್‌ ಪಾವತಿಸಬೇಕಾಗುತ್ತದೆ ಎಂದು ನ್ಯಾಯಾಧೀಶರಾದ ಮೊರೇಸ್ ಹೇಳಿದ್ದಾರೆ.

ಟ್ವಿಟ್ಟರ್ ಖಾತೆಗಳನ್ನು ಸಹ ನಿರ್ಬಂಧಿಸಬೇಕು ಮೊರೆಸ್‌ ತೀರ್ಪು ನೀಡಿದ್ದರು. ಆದರೆ ಈ ನಿರ್ಧಾರವು “ಬ್ರೆಜಿಲ್‌ನ ವಾಕ್ ಸ್ವಾತಂತ್ರ್ಯದ ಅಡಿಯಲ್ಲಿ ಅಸಮಾನವಾಗಿದೆ ಎಂದ ಟ್ವಿಟ್ಟರ್‌, ಮೇಲ್ಮನವಿ ಸಲ್ಲಿಸಲ್ಲಿದೆ. ಇದೇ ಸಮಯದಲ್ಲಿ ಉದ್ದೇಶಿತ ಪ್ರೊಫೈಲ್‌ಗಳನ್ನು ನಿಷ್ಕ್ರಿಯಗೊಳಿಸಲಾಗಿದೆ.

ಸುಪ್ರೀಂ ಕೋರ್ಟ್ ನ್ಯಾಯಾಧೀಶರ ವಿರುದ್ಧ ಬೆದರಿಕೆಗಳು ಮತ್ತು ಸುಳ್ಳು ಸುದ್ದಿಗಳನ್ನು ಹರಡುತ್ತಿರುವ ಬೋಲ್ಸೊನಾರೊ ಬೆಂಬಲಿಗರ ನಕಲಿ ಜಾಲತಾಣಗಳ ಕುರಿತು ವಿವಾದಾತ್ಮಕ ಪ್ರಕರಣವನ್ನು ಮೊರೇಸ್ ವಿಚಾರಣೆ ನಡೆಸುತ್ತಿದ್ದಾರೆ. ಅಧ್ಯಕ್ಷ ಬೋಲ್ಸನಾರೊ ಮತ್ತು ಸುಪ್ರೀಂ ಕೋರ್ಟ್‌ ನಡುವಿನ ಮುಖಾಮುಖಿಯೇ ತನಿಖೆಯ ಪ್ರಮುಖ ಅಂಶವಾಗಿದೆ. ತನ್ನ ಬೆಂಬಲಿಗರ ಖಾತೆಗಳ ಮೇಲಿನ ನಿರ್ಬಂಧವನ್ನು ತೆರವುಗೊಳಸಬೇಕೆಂದು ಬೋಲ್ಸನಾರೋ ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಬಲಪಂಥೀಯ ಧೋರಣೆಯ ಫೇಸ್‌ಬುಕ್ ಸೆನ್ಸಾರ್‌ಶಿಪ್‌ಗೆ ಮತ್ತೊಂದು ಹೆಸರು ‘ತಾಂತ್ರಿಕ ದೋಷ’ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...