Homeಕರ್ನಾಟಕಜನ ಸಾಯುತ್ತಿದ್ದರೂ ವೆಂಟಿಲೇಟರ್ ರಫ್ತು ಮಾಡುವ ಹೃದಯಹೀನ‌ ಸರ್ಕಾರ: ಸಿದ್ದರಾಮಯ್ಯ

ಜನ ಸಾಯುತ್ತಿದ್ದರೂ ವೆಂಟಿಲೇಟರ್ ರಫ್ತು ಮಾಡುವ ಹೃದಯಹೀನ‌ ಸರ್ಕಾರ: ಸಿದ್ದರಾಮಯ್ಯ

24 ಗಂಟೆಯೊಳಗೆ ಸಿದ್ದರಾಮಯ್ಯನವರ ಮನೆ ಬಾಗಿಲಿಗೆ ಮಾಹಿತಿ ಕಳಿಸಿಕೊಡ್ತೇವೆ ಎಂದು ಮುಖ್ಯಮಂತ್ರಿಗಳು ಹೇಳಿ 24 ದಿನ ಕಳೆದು ಹೋಗಿದೆ. ಇಲ್ಲಿಯ ವರೆಗೆ ರಾಜ್ಯ ಸರ್ಕಾರದಿಂದ ಒಂದು ಹಾಳೆ ಮಾಹಿತಿ ನನಗೆ ಬಂದಿಲ್ಲ.

- Advertisement -
- Advertisement -

ಕರ್ನಾಟಕದಲ್ಲಿ ಪ್ರತಿದಿನ 5000ಕ್ಕೂ ಹೆಚ್ಚು ಕೊರೊನಾ ಸೋಂಕು ಪ್ರಕರಣಗಳು ದಾಖಲಾಗುತ್ತಿವೆ, ಸರಾಸರಿ 80-90 ಮಂದಿ ಸಾಯುತ್ತಿದ್ದಾರೆ.‌ ಕೇಂದ್ರ ಸಚಿವ ಡಾ. ಹರ್ಷವರ್ಧನ್ ಪ್ರಕಾರ ಕೊರೊನಾ ಸಾವಿನ ಪ್ರಮಾಣ ಇಳಿಯುತ್ತಿದೆಯಂತೆ. ಅದಕ್ಕಾಗಿ ವೆಂಟಿಲೇಟರ್ ರಫ್ತಿಗೆ ಅವಕಾಶಕ್ಕೆ ಕೊಡ್ತಾರಂತೆ. ಇದು ಹೃದಯಹೀನ‌ ಸರ್ಕಾರ ಎಂದು ವಿರೋಧ ಪಕ್ಷದ ಮುಖಂಡರಾದ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಕೊರೊನಾ ಸಾವು ಹೆಚ್ಚಳಕ್ಕೆ ವೆಂಟಿಲೇಟರ್ ಕೊರತೆಯೂ ಒಂದು ಕಾರಣ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಸಕ್ರಿಯ ಸೋಂಕು ಪ್ರಕರಣಗಳ ಸಂಖ್ಯೆ 57,396. ಲಭ್ಯ ಇರುವ ವೆಂಟಿಲೇಟರ್ ‌ಗಳು ಕೇವಲ 801. ಒಟ್ಟು ರಾಜ್ಯದ ಸ್ಥಿತಿ ಇನ್ನೂ ಚಿಂತಾಜನಕ. ಇಂತಹ ಸಮಯದಲ್ಲಿ ನರೇಂದ್ರ ಮೋದಿ ಸರ್ಕಾರಕ್ಕೆ ರಫ್ತು ಹೆಚ್ಚಿಸುವ ಚಿಂತೆ ಎಂದು ಟೀಕಿಸಿದ್ದಾರೆ.

ರಾಜ್ಯದಲ್ಲಿ ಕೊರೊನಾ ಅನಿಯಂತ್ರಿತವಾಗಿ ಹರಡುವುದಕ್ಕೂ, ಸರ್ಕಾರದ ಭ್ರಷ್ಟಾಚಾರಕ್ಕೂ ನೇರವಾದ ಸಂಪರ್ಕ ಇದೆ. ಈ ಕಾರಣಕ್ಕಾಗಿ ನಾವು ಅಭಿಯಾನದ ಮೂಲಕ ಜನರ ಬಳಿ ನೇರವಾಗಿ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಜನರ ಕಷ್ಟದ ಕಾಲದಲ್ಲಿ ವಿರೋಧಪಕ್ಷಗಳು ಸಹಕಾರ ನೀಡಬೇಕು, ಆರೋಪ ಮಾಡುವುದು ಸರಿಯೇ ಎಂದು ಮುಖ್ಯಮಂತ್ರಿಗಳು ಕೇಳ್ತಿದ್ದಾರೆ. ಇಂತಹ ಸಾವು-ನೋವಿನ ಕಷ್ಟ ಕಾಲದಲ್ಲಿ ಜನರ ಜೀವ ಉಳಿಸಬೇಕೇ ಹೊರತು ಭ್ರಷ್ಟಾಚಾರ ಮಾಡುವುದು ಸರಿಯೇ? ಎಂದು ನಾವು ಕೇಳುತ್ತಿದ್ದೇವೆ. ನಿಮ್ಮ ಆತ್ಮಸಾಕ್ಷಿಯನ್ನು ಕೇಳಿ ಹೇಳಿ ಎಂದು ಪ್ರಶ್ನಿಸಿದ್ದಾರೆ.

ನಮ್ಮಿಂದ ಸಹಕಾರ ನಿರೀಕ್ಷಿಸುವ ಕೇಂದ್ರ ಬಿಜೆಪಿ ಸರ್ಕಾರ, ಕೊರೊನಾ ಕಾಲದಲ್ಲಿ ಮಧ್ಯಪ್ರದೇಶದ ನಮ್ಮ ಸರ್ಕಾರಕ್ಕೆ ಯಾಕೆ‌ ಸಹಕಾರ ಕೊಡಲಿಲ್ಲ? ಅಲ್ಲಿ ಮತ್ತು ರಾಜಸ್ತಾನದ‌ ನಮ್ಮ ಸರ್ಕಾರವನ್ನು ಉರುಳಿಸಲು ಹೊರಟದ್ದು ಯಾಕೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಉಳಿದ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಕೊರೊನಾ ಸೋಂಕು ನಿಯಂತ್ರಣದಲ್ಲಿತ್ತು ಎನ್ನುವ ಕಾರಣಕ್ಕೆ ಸಹಿಸಿಕೊಂಡು ಸುಮ್ಮನಿದ್ದೆವು. ಈಗ ಕೊರೊನಾ ಸಾವು-ನೋವುಗಳಲ್ಲಿ ಮಹಾರಾಷ್ಟ್ರ-ತಮಿಳುನಾಡುಗಳನ್ನು ಮೀರಿಸಿ ಕರ್ನಾಟಕ ನಂಬರ್ ಒನ್ ಆಗಲು ಹೊರಟಿದೆ. ಈಗಲೂ ಸುಮ್ಮನಿದ್ದರೆ ಜನದ್ರೋಹ‌ ಆಗಲಾರದೇ ಎಂದಿದ್ದಾರೆ.

ಬೆಡ್ ಇಲ್ಲ, ಔಷಧಿ, ಊಟ ಕೊಡ್ತಿಲ್ಲ, ಅಂಬ್ಯುಲೆನ್ಸ್ ಇಲ್ಲ, ವೆಂಟಿಲೇಟರ್ ಇಲ್ಲ. ಬೀದಿಯಲ್ಲಿಯೇ ಹೆಣವಾದರು, ಸತ್ತ ಮೇಲೆಯೂ ದಫನ್ ಮಾಡುವವರಿಲ್ಲ ಎನ್ನುವುದೇ ಮಾಧ್ಯಮಗಳಲ್ಲಿ ನಿತ್ಯ ಸುದ್ದಿ. ರಾಜ್ಯದಲ್ಲಿ ಸೋಂಕಿನ ಸಂಖ್ಯೆ,1,29,287ಕ್ಕೆ ಸಾವಿನ ಸಂಖ್ಯೆ 2412ಕ್ಕೆ ಏರಿದೆ. ಹೇಳಿ ನಾವು ಸುಮ್ಮನಿರಬೇಕಾ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

24 ಗಂಟೆಯೊಳಗೆ ಸಿದ್ದರಾಮಯ್ಯನವರ ಮನೆ ಬಾಗಿಲಿಗೆ ಮಾಹಿತಿ ಕಳಿಸಿಕೊಡ್ತೇವೆ ಎಂದು ಮುಖ್ಯಮಂತ್ರಿಗಳು ಹೇಳಿ 24 ದಿನ ಕಳೆದು ಹೋಗಿದೆ. ಇಲ್ಲಿಯ ವರೆಗೆ ರಾಜ್ಯ ಸರ್ಕಾರದಿಂದ ಒಂದು ಹಾಳೆ ಮಾಹಿತಿ ನನಗೆ ಬಂದಿಲ್ಲ. ಸತ್ಯ ಹೇಳಲು ನಿಮಗೆ ಭಯ ಯಾಕೆ ಎಂದು ಪ್ರಶ್ನಿಸಿದ್ದಾರೆ.

ನಾನು ಬಹಿರಂಗವಾಗಿ ಖರೀದಿ ಅಕ್ರಮಗಳನ್ನು ಪ್ರಶ್ನಿಸಿದ ನಂತರ ಲೂಟಿ ಸ್ವಲ್ಪ ನಿಯಂತ್ರಣಕ್ಕೆ ಬಂದಿದೆ. ಕೋಟ್ಯಂತರ ರೂಪಾಯಿಯ ಖರೀದಿ ಆದೇಶಗಳನ್ನು ಸರ್ಕಾರ ತಡೆಹಿಡಿದಿದೆ. ಹೊಟ್ಟೆಗೆ ಕಲ್ಲು ಹಾಕಿದನಲ್ಲಾ ಎಂದು ಇವರಿಗೆಲ್ಲ ನನ್ನ ಮೇಲೆ ಕೋಪ. ಅದಕ್ಕಾಗಿ ನನ್ನ ಮೇಲೆ ದಾಳಿ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಅಕ್ರಮ ಪ್ರಶ್ನಿಸಿದ ನಮಗೆ ವಕೀಲರ ಮೂಲಕ ನೋಟೀಸ್ ಕೊಟ್ಟು ಬಿಜೆಪಿಯು ನಮ್ಮ‌ ಕೆಲಸವನ್ನು ಸುಲಭ‌ ಮಾಡಿದೆ. ನಾವೇ ನ್ಯಾಯಾಲಯದ ಮೆಟ್ಟಿಲು ಹತ್ತಬೇಕೆಂದಿದ್ದೆವು. ನಮಗೆ ನೀಡದ ದಾಖಲೆಗಳನ್ನು ನ್ಯಾಯಾಲಯಕ್ಕೆ ನೀಡಲೇ ಬೇಕಲ್ಲಾ? ಕೋರ್ಟ್ ನಲ್ಲಿಯಾದರೂ ನಮ್ಮನ್ನು ಎದುರಿಸಲೇ ಬೇಕಲ್ಲಾ ಎಂದಿದ್ದಾರೆ.


ಇದನ್ನೂ ಓದಿ: ಅಕ್ಕಿಬೇಳೆಯಿಂದ ಪಿಪಿಇ ಕಿಟ್‌ವರೆಗೂ ಭ್ರಷ್ಟಾಚಾರ ನಡೆಯುತ್ತಿದೆ: ಹೋರಾಟಗಾರ ರವಿಕೃಷ್ಣಾರೆಡ್ಡಿಯವರ ಸಂದರ್ಶನ.

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಿಜೆಪಿಯ ರಾಜಕಾರಣಿಗಳು ಕೊರೊನಾ ನೆಪದಲ್ಲಿ ಹಗಲು ದರೋಡೆ ಮಾಡುತ್ತಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...