Homeಮುಖಪುಟಸಂಸತ್ತಿನಲ್ಲಿ ಸಕ್ರಿಯವಾಗಿ, ಜನರಿಗೆ ಹತ್ತಿರವಾಗಬೇಕು; ರಾಹುಲ್ ಗಾಂಧಿಗೆ ದಿಗ್ವಿಜಯ್ ಸಿಂಗ್ ಸಲಹೆ

ಸಂಸತ್ತಿನಲ್ಲಿ ಸಕ್ರಿಯವಾಗಿ, ಜನರಿಗೆ ಹತ್ತಿರವಾಗಬೇಕು; ರಾಹುಲ್ ಗಾಂಧಿಗೆ ದಿಗ್ವಿಜಯ್ ಸಿಂಗ್ ಸಲಹೆ

ಕಾಂಗ್ರೆಸ್ಸಿನ ಹಲವಾರು ನಾಯಕರು ತಮ್ಮದೇ ಆದ ಬೇಡಿಕೆಯೊಂದಿಗೆ ಮನವಿ ಮಾಡಿದರು.

- Advertisement -
- Advertisement -

ರಾಹುಲ್ ಗಾಂಧಿ ಕಾಂಗ್ರೆಸ್ ಮುಖ್ಯಸ್ಥರಾಗಿ ಮರಳಿ ಅಧಿಕಾರ ವಹಿಸಬೇಕು ಎಂಬ ಬೇಡಿಕೆಯನ್ನು ಕಾಂಗ್ರೆಸ್ ಮುಖಂಡರು ಇಂದು, ಅವರ ಕುಟುಂಬ ಹಿನ್ನೆಲೆಯುಳ್ಳ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುವುದರೊಂದಿಗೆ ಮನವಿ ಮಾಡಿದ್ದಾರೆ.

ಕಾಂಗ್ರೆಸ್ಸಿನ ಹಲವಾರು ನಾಯಕರು ತಮ್ಮದೇ ಆದ ಬೇಡಿಕೆಯೊಂದಿಗೆ ಮನವಿ ಮಾಡಿದರು. ಅವರಲ್ಲಿ ಗಾಂಧಿ ಕುಟುಂಬ ನಿಷ್ಠಾವಂತ ಮತ್ತು ಮಧ್ಯಪ್ರದೇಶದ ಹಿರಿಯ ಕಾಂಗ್ರೆಸ್ ಮುಖಂಡ ದಿಗ್ವಿಜಯ ಸಿಂಗ್ 2018 ರಲ್ಲಿ ರಾಹುಲ್ ಗಾಂಧಿ ಅಧಿಕಾರ ವಹಿಸಿಕೊಳ್ಳುವ ಮೊದಲು ಪಕ್ಷದ ಮುಖ್ಯಸ್ಥರ ಹುದ್ದೆಗೆ ಒಂದಕ್ಕಿಂತ ಹೆಚ್ಚು ಬಾರಿ ಅವರನ್ನು ಆಯ್ಕೆ ಮಾಡಿದ್ದರು.

ಸಂಸತ್ತಿನಲ್ಲಿ ಹೆಚ್ಚು ಸಕ್ರಿಯ ವಾಗಿರಬೇಕು ಎಂದು ರಾಹುಲ್ ಗಾಂಧಿಗೆ ಹೇಳಿದರು. ಅವರು ಜನರಿಗೆ ಹೆಚ್ಚು ಹತ್ತಿರವಾಗಬೇಕು ಎಂದು ಹೇಳುವ ಮೂಲಕ ರಾಹುಲ್ ಗಾಂಧಿಯವರ ಸಾಮೂಹಿಕ ಸಂಪರ್ಕದ ಕೊರತೆಯ ಟೀಕೆಗಳನ್ನು ಮೌನವಾಗಿ ಒಪ್ಪಿ, ಸಲಹೆ ನಿಡಿದ್ದಾರೆ.

ಈ ಮೂಲಕ ಶರದ್ ಪವಾರ್ ರಾಹುಲ್ ಗಾಂಧಿಗೆ ನೀಡಿದ ಸಲಹೆಯನ್ನು ಮತ್ತೊಮ್ಮೆ ಒತ್ತಿ ಹೇಳಿದ್ದಾರೆ.

“ರಾಹುಲ್ ರಾಜಕೀಯವನ್ನು ವಿಭಿನ್ನವಾಗಿ ಮಾಡಲು ಬಯಸುತ್ತಾನೆ. ನಾವು ಅವನಿಗೆ ಹಾಗೆ ಮಾಡಲು ಅವಕಾಶ ನೀಡಬೇಕು. ಆದರೆ ನಂತರ ಆತ ಸಂಸತ್ತಿನಲ್ಲಿ ಹೆಚ್ಚು ಸಕ್ರಿಯರಾಗಿರಬೇಕು ಮತ್ತು ಜನರಿಗೆ ಹೆಚ್ಚು ಹತ್ತಿರವಾಬೇಕೆಂದು ನಾವು ಬಯಸುತ್ತೇವೆ. ಶರದ್ ಪವಾರ್ ಅವರ ಸಲಹೆಯಂತೆ ಅವರು ಭಾರತದಾದ್ಯಂತ ಯಾತ್ರೆ ಹೋಗಬೇಕು” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಗುರುವಾರ, ರಾಹುಲ್ ಗಾಂಧಿ ಪಕ್ಷದ ಮುಖ್ಯಸ್ಥರಾಗಿ ಮರಳಬೇಕೆಂದು ಕರೆ ನೀಡಿ, ಕಳೆದ ಯುಪಿಎ ಸರ್ಕಾರದ ಭಾಗವಾಗಿದ್ದವರು ಪಕ್ಷದ ಶೀಘ್ರ ಕುಸಿತಕ್ಕೆ ಕಾರಣವೆಂದು ಕಿರಿಯ ನಾಯಕರು ವಾದಿಸಿದರು.

ಹತ್ತು ವರ್ಷ ಆಡಳಿತ ನಡೆಸಿದ್ದ ಯುಪಿಎ 2014ರಲ್ಲಿ ಅಧಿಕಾರವನ್ನು ಕಳೆದುಕೊಂಡಿತ್ತು. ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿಯೂ ಸಹ ತೀರಾ ಕಡಿಮೆ ಸಂಖ್ಯೆಯ ಸ್ಥಾನಗಳನ್ನು ಗೆದ್ದುಕೊಂಡಿತ್ತು. ರಾಹುಲ್ ಗಾಂಧಿ ಕೂಡ ಅಮೇಠಿಯಲ್ಲಿ ಸ್ಮೃತಿ ಇರಾನಿ ವಿರುದ್ಧ ಸೋತಿದ್ದರು.

ನಂತರ ರಾಹುಲ್ ಗಾಂಧಿ ನೈತಿಕ ಹೊಣೆ ಹೊತ್ತು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು.

ಪಕ್ಷದ ಆಂತರಿಕ ಸಭೆಯಲ್ಲಿ ಹಲವಾರು ಭಿನ್ನ ಅಭಿಪ್ರಾಯಗಳು ಹೊರ ಬಂದವು.

2014ರ ಚುನಾವಣೆಯ ಸೋಲು, 2019ರ ಸೋಲು, ನಾಯಕತ್ವ, ಹಿರಿಯರು-ಕಿರಿಯರ ನಡುವಿನ ಭಿನ್ನಾಭಿಪ್ರಾಯ, ಮನಮೋಹನ್ ಸಿಂಗ್, ಕೊರೊನಾ ಪರಿಸ್ಥಿತಿಯಲ್ಲಿ  ಪಕ್ಷದ ಕೆಲಸ, ಬಿಜೆಪಿ ವಿರುದ್ಧದ ದಾಳಿ ಮುಂತಾದ ಹಲವಾರು ವಿಷಯಗಳ ಬಗ್ಗೆ ಚರ್ಚೆ ನಡೆದಿದೆ.

ಆದರೆ ಈಗ ನಾವು ಬಿಜೆಪಿ, ಆರ್ ಎಸ್ ಎಸ್, ಮೋದಿ-ಶಾ ವಿರುದ್ದ ಹೋರಾಡುವಲ್ಲಿ ಒಂದಾಗಬೇಕು. ಇದಕ್ಕಾಗಿ ಒಮ್ಮತದ ಅಭಿಪ್ರಾಯ ಇರಬೇಕು ಎಂದು ತಮಿಳುನಾಡಿನ ಕಿರಿಯ ಕಾಂಗ್ರೇಸ್ ನಾಯಕ ಮಾಣಿಕ್ಕಂ ಠಾಗೋರ್ ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: BCG ಲಸಿಕೆ ಕೊರೊನಾ ಹರಡುವಿಕೆಯನ್ನು ನಿಧಾನಗೊಳಿಸಬಹುದು: ವಿಜ್ಞಾನಿಗಳ ಸಂಶೋಧನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...