Homeಮುಖಪುಟಕೋವಿಡ್ ಸೋಂಕಿತ ಬಹುತೇಕ ರಾಜಕಾರಣಿಗಳು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ! ಏಕೆ?

ಕೋವಿಡ್ ಸೋಂಕಿತ ಬಹುತೇಕ ರಾಜಕಾರಣಿಗಳು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ! ಏಕೆ?

ಭಾರತಕ್ಕೆ ಕೊರೊನಾ ಕಾಲಿಟ್ಟು ಆರು ತಿಂಗಳಾಗಿದೆ. ಆದರೂ ಆಳುವ ಸರ್ಕಾರಗಳು ದಕ್ಷ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಕಟ್ಟುವಲ್ಲಿ ವಿಫಲರಾಗಿದ್ದಾರೆ ಅಥವಾ ಆ ಇಚ್ಛಾಶಕ್ತಿ ಅವರಲಿಲ್ಲ

- Advertisement -
- Advertisement -

ಕೊರೊನಾ ಸೋಂಕು ತೀವ್ರವಾಗಿ ಹರಡುತ್ತಿದೆ. ಇದರ ರಭಸಕ್ಕೆ ತುತ್ತಾಗುತ್ತಿರುವವರಲ್ಲಿ ಸಿನಿಮಾ ತಾರೆಯರು ಸೇರಿಂದಂತೆ ರಾಜಕಾರಣಿಗಳು ಹೊರತಾಗಿಲ್ಲ. ಆದರೆ ನಾವು ಅತ್ಯುತ್ತಮ ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಹೊಂದಿದ್ದೇವೆ ಎಂದು ಹೇಳಿಕೊಳ್ಳುವ ಆಳುವ ಸರ್ಕಾರಗಳ ಸಚಿವರು ಮಾತ್ರ ತಮಗೆ ವೈರಸ್ ತಗುಲಿದಾಗ ಸರ್ಕಾರಿ ಆಸ್ಪತ್ರೆ ಬಿಟ್ಟು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ! ಈ ಕುರಿತು ಸ್ಕ್ರೋಲ್‌.ಇನ್ ವಿಶೇಷ ವರದಿ ಮಾಡಿದೆ.

ನಿನ್ನೆ ಮಧ್ಯಾಹ್ನ ಗೃಹ ಸಚಿವ ಅಮಿತ್‌ ಷಾರವರು ತಮಗೆ ಸೋಂಕು ದೃಢಪಟ್ಟಿರುವುದಾಗಿ ತಿಳಿಸಿದ್ದರು. ತಮಗೆ ಯಾವುದೇ ರೋಗಲಕ್ಷಣಗಳು ಇಲ್ಲಿದಿದ್ದರೂ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ ಎಂದು ಟ್ವೀಟ್‌ ಮಾಡಿ ಕೂಡಲೇ ಗುರ್ಗಾವ್‌ ಬಳಿಯ ಮೇದಂತ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.


ಇದನ್ನೂ ಓದಿ: ಕೊರೊನಾ ಪಾಸಿಟಿವ್: ಆಸ್ಪತ್ರೆಗೆ ದಾಖಲಾದ ಗೃಹಸಚಿವ ಅಮಿತ್ ಷಾ 


ನಂತರ ಸಂಜೆ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಕೊರೊನಾ ಪಾಸಿಟಿವ್ ಆಗಿದ್ದಾರೆ. ಕೂಡಲೇ ಅವರು ಬೆಂಗಳೂರಿನ ಮಣಿಪಾಲ್ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದ್ದು, ಬಹಳ ಹತ್ತಿರದಿಂದ ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ. ಯಡಿಯೂರಪ್ಪನವರ ಮಗಳು ಸಹ ಕೋವಿಡ್ ಪಾಸಿಟಿವ್ ಆಗಿದ್ದಾರೆ.

ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್ ಕೊರೊನಾ ಪಾಸಿಟಿವ್ ಆಗಿದ್ದು, ಅವರು ಭೋಪಾಲ್‌ ಚಿರಾಯು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಅಲ್ಲಿನ ರಾಜ್ಯ ಕಾಂಗ್ರೆಸ್ ಸರ್ಕಾರಿ ಆಸ್ಪತ್ರೆಯಲ್ಲಿ ಏಕೆ ಚಿಕಿತ್ಸೆ ಪಡಯುತ್ತಿಲ್ಲ ಎಂದು ಟೀಕಿಸಿದೆ.

ತಮಿಳುನಾಡಿನ ರಾಜ್ಯಪಾಲರಾದ ಭನ್ವರಿಲಾಲ್ ಪುರೋಹಿತ್ ಸಹ ಕೊರೊನಾ ಪಾಸಿಟಿವ್ ಆಗಿದ್ದಾರೆ. ಇವರಿಗೆ ಯಾವುದೇ ರೋಗಲಕ್ಷಣಗಳಿಲ್ಲದ ಕಾರಣ ಮನೆಯಲ್ಲಿಯೇ ಐಸೋಲೇಷನ್‌ನಲ್ಲಿರಲು ವೈದ್ಯರು ಸೂಚಿಸಿದ್ದಾರೆ. ಇವರಿಗೆ ಟೆಸ್ಟ್ ಸೇರಿದಂತೆ ಇತರ ಮಾರ್ಗದರ್ಶನಗಳನ್ನು ನೀಡುವ ಕೆಲಸವನ್ನು ಕಾವೇರಿ ಎಂಬ ಖಾಸಗಿ ಆಸ್ಪತ್ರೆ ನಿರ್ವಹಿಸುತ್ತಿದೆ.

ತಮಿಳುನಾಡಿನ ಇಂಧನ ಸಚಿವ ಪಿ ತಂಗಮಣಿ ಅಪೋಲೊ ಆಸ್ಪತ್ರೆಯಲ್ಲಿ, ಶಿಕ್ಷಣ ಸಚಿವ ಕೆ.ಪಿ ಅನ್ಬುಗಳಂ ಮತ್ತು ಸಹಕಾರ ಸಚಿವ ಸೆಲ್ಲೂರು ಕೆ.ರಾಜ್ ಮದ್ರಾಸ್ ಇನ್ಸ್ಟಿಟ್ಯೂಟ್ ಆಫ್ ಆರ್ಥೋಪೆಡಿಕ್ ಅಂಡ್ ಟ್ರಾಮಾಲಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಪಂಜಾಬ್‌ನ ಗ್ರಾಮೀಣಾಭಿವೃದ್ದಿ ಸಚಿವ ತ್ರಿಪಾಠ್ ಸಿಂಗ್ ಭಾಜ್ವಾ ಕೊರೊನಾ ಪಾಸಿಟಿವ್ ಆಗಿದ್ದು ಅವರು ಮೊಹಾಲಿಯ ಫೋರ್ಟಿಸ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ದೆಹಲಿಯ ಆರೋಗ್ಯ ಸಚಿವ ಸತ್ಯೆಂದರ್ ಜೈನ್ ಕೊರೊನಾ ಪಾಸಿಟಿವ್ ಆದಾಗ ಜೂನ್ 15 ರಂದು ಸರ್ಕಾರಿ ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಜೂನ್ 16 ರಂದು ಅವರನ್ನು ದೆಹಲಿಯ ಮಾಕ್ಸ್‌ ಆಸ್ಪತ್ರೆಗೆ ವರ್ಗಾಹಿಸಲಾಯಿತು. ಅವರಿಗೆ ಪ್ಲಾಸ್ಲಾ ಚಿಕಿತ್ಸೆ ಅಗತ್ಯವಿದ್ದು, ಅದನ್ನು ಮಾಡಲು ಸರ್ಕಾರಿ ಆಸ್ಪತ್ರೆಗೆ ಅನುಮತಿ ಸಿಗದಿದ್ದ ಕಾರಣಕ್ಕೆ ಮಾತ್ರ ಅವರನ್ನು ವರ್ಗಾಹಿಸಲಾಗಿತ್ತು ಎಂದು ಹೇಳಲಾಗಿದೆ.

ಉತ್ತರ ಪ್ರದೇಶದ ವೃತ್ತಿಪರ ಶಿಕ್ಷಣ ಸಚಿವೆ ಕಮಲ್ ರಾಣಿ ವರುಣ್ ಕೊರೊನಾ ಪಾಸಿಟಿವ್ ಆದಾಗ ಲಕ್ನೋದ ಸಂಜಯ್ ಗಾಂಧಿ ಪೋಸ್ಟ್‌ ಗ್ರಾಜುಯೇಟ್ ಇನ್ಸ್ಟಿಟ್ಯೂಟ್‌ ಆಫ್‌ ಮೆಡಿಕಲ್ ಸೈನ್ಸನ್ಸ್‌ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅವರು ಆಗಸ್ಟ್ 2 ರಂದು ನಿಧನ ಹೊಂದಿದ್ದರು.

ಇವಿಷ್ಟು ಉದಾಹರಣೆಗಳಾದರೆ ಇನ್ನು ಹಲವಾರು ರಾಜಕಾರಣಿಗಳು, ಚಿತ್ರನಟರು ಕೊರೊನಾಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಆಳುವ ಸರ್ಕಾರಗಳಿಗೆ ಸರ್ಕಾರಿ ಆಸ್ಪತ್ರೆಗಳ ಮೇಲೆ ನಂಬಿಕೆ ಇಲ್ಲ ಎಂದರೆ ಏನರ್ಥ?

ಈ ಎಲ್ಲರೂ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಾಗಿದ್ದರೆ ಒಂದಷ್ಟು ಮೂಲಸೌಕರ್ಯ ಹೆಚ್ಚುತ್ತಿತ್ತು ಮತ್ತು ವೈದ್ಯರು, ಸಿಬ್ಬಂದಿ ಇನ್ನಷ್ಟು ದಕ್ಷತೆಯಿಂದ ಕೆಲಸ ಮಾಡುತ್ತಿದ್ದರು ಎಂದು ಟ್ವಿಟ್ಟರ್ ಬಳಕೆದಾರರೊಬ್ಬರು ಒತ್ತಾಯಿಸಿದ್ದಾರೆ.

ಭಾರತಕ್ಕೆ ಕೊರೊನಾ ಕಾಲಿಟ್ಟು ಆರು ತಿಂಗಳಾಗಿದೆ. ಆದರೂ ಆಳುವ ಸರ್ಕಾರಗಳು ದಕ್ಷ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಕಟ್ಟುವಲ್ಲಿ ವಿಫಲರಾಗಿದ್ದಾರೆ ಅಥವಾ ಆ ಇಚ್ಛಾಶಕ್ತಿ ಅವರಲಿಲ್ಲ ಎಂಬುದು ತಿಳಿಯುತ್ತದೆ. ಎಲ್ಲಿಯವರೆಗೆ ಅತ್ಯುತ್ತಮ ಸಾರ್ವಜನಿಕ ಆರೋಗ್ಯ ಮತ್ತು ಶಿಕ್ಷಣ ವ್ಯವಸ್ಥೆ ಖಾತ್ರಿಯಾಗುವುದಿಲ್ಲವೋ ಅಲ್ಲಿಯವರೆಗೆ ದೇಶದ ಜನಸಾಮಾನ್ಯರು ನೆಮ್ಮದಿಯಿಂದ ಇರಲು ಸಾಧ್ಯವಾಗುವುದಿಲ್ಲ.


ಇದನ್ನೂ ಓದಿ: ಕೊರೊನಾದಿಂದ ಸಾವನಪ್ಪಿದ ಉತ್ತರಪ್ರದೇಶದ ಸಚಿವೆ ಕಮಲ್ ರಾಣಿ ವರುಣ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...